Homeಕರ್ನಾಟಕಸೆ. 26ಕ್ಕೆ ವಿಧಾನಸಭಾ ಅಧಿವೇಶನ ಅಂತ್ಯ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ಸೆ. 26ಕ್ಕೆ ವಿಧಾನಸಭಾ ಅಧಿವೇಶನ ಅಂತ್ಯ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ

ರಾಜ್ಯ ಸರ್ಕಾರ ನಮ್ಮ ಶಾಸಕರ 1600 ಪ್ರಶ್ನೆಗಳಿಗೂ ಉತ್ತರ ನೀಡಿಲ್ಲ. ಜನಪರ ಚರ್ಚೆಗೂ ಇಲ್ಲಿ ಅವಕಾಶವಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ- ಡಿ.ಕೆ.ಶಿವಕುಮಾರ್

- Advertisement -
- Advertisement -

ಕರ್ನಾಟಕ ವಿಧಾನಸಭೆ ಅಧಿವೇಶನವು ಸೆ.26 ರಂದು ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಆ ದಿನದಂದು, ಎಲ್ಲಾ ಇಲಾಖೆಗಳ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿಗಳು ಹಾಜರಿದ್ದು ಸಚಿವರುಗಳ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಉತ್ತರಗಳು ಮತ್ತು ಅಗತ್ಯ ಮಾಹಿತಿಯನ್ನು ನೀಡುವಂತೆ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಮೊಹಮ್ಮದ್ ನಯೀಮ್ ಮೊಮಿನ್ ಇಂದು ಸುತ್ತೋಲೆ ಹೊರಡಿಸಿದ್ದಾರೆ.

ಸೆ.21 ರಿಂದ ವಿಧಾನಸಭಾ ಅಧಿವೇಶನವು ಆರಂಭವಾಗಿದ್ದು, ಹಲವು ದಿನಗಳು ನಡೆಯಬೇಕಿದ್ದ ಸದನವನ್ನು ಕೊರೊನಾ ಕಾರಣದಿಂದ ಕೇವಲ 6 ದಿನಗಳಿಗೆ ಸೀಮಿತಗೊಳಿಸಲಾಗಿದೆ. ಹಾಗಾಗಿ ಸೆ. 26ರಂದು ಅಧಿವೇಶನದ ಕಾರ್ಯಕಲಾಪಗಳು ಕೊನೆಗೊಳ್ಳಲಿವೆ.

ಈ ಹಿಂದೆ ಕೇವಲ 3 ದಿನಗಳಿಗೆ ಸೀಮಿತಗೊಳಿಸುತ್ತೇವೆ ಎಂದು ಯಡಿಯೂರಪ್ಪನವರು ಹೇಳಿದ್ದರು. ಇದಕ್ಕೆ ವಿರೋಧ ಪಕ್ಷ ತೀವ್ರವಾದ ವಿರೋಧ ವ್ಯಕ್ತಪಡಿಸಿದ್ದರಿಂದ 6 ದಿನಗಳಿಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ: ಅಂಬೇಡ್ಕರ್ ಕನಸಿನ ಭೂ ಹಂಚಿಕೆ ಜಾರಿಯಾಗಲಿ: ನೂರ್ ಶ್ರೀಧರ್

ವಿಧಾನಸಭೆ ಅಧಿವೇಶನ ಆರಂಭಾವಾದಂದಿನಿಂದ, ಕೃಷಿಗೆ ಸಂಬಂಧಿಸಿದ ಸರ್ಕಾರದ ಸುಗ್ರೀವಾಜ್ಞೆಗಳನ್ನು ವಿರೋಧಿಸಿ ರಾಜ್ಯದ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಒಟ್ಟಾಗಿ ಐಕ್ಯ ಹೋರಾಟ ಮತ್ತು ಪರ್ಯಾಯ ಅಧಿವೇಶನವನ್ನು ನಡೆಸುತ್ತಿವೆ. ಇಷ್ಟೇ ಅಲ್ಲದೇ ಇನ್ನೂ ಹಲವಾರು ಸಂಘಟನೆಗಳು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿವೆ.

ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ, “ರಾಜ್ಯ ಸರ್ಕಾರ ನಮ್ಮ ಶಾಸಕರ 1600 ಪ್ರಶ್ನೆಗಳಿಗೂ ಉತ್ತರ ನೀಡಿಲ್ಲ. ಜನಪರ ಚರ್ಚೆಗೂ ಇಲ್ಲಿ ಅವಕಾಶವಿಲ್ಲ. ಈ ಸರ್ಕಾರ ಸಂಪೂರ್ಣವಾಗಿ ಜನರ ವಿಶ್ವಾಸ ಕಳೆದುಕೊಂಡಿದೆ, ಇದನ್ನು ನಮ್ಮ ಪಕ್ಷ ಸದನದಲ್ಲಿ ಮಂಡನೆ ಮಾಡಲಿದೆ. ಅದಕ್ಕೆ ಇವತ್ತೇ ಅವಕಾಶ ಕೊಡಬೇಕು. ಈ ಸರ್ಕಾರ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಗ ಉಳುವವನೆ ಭೂಮಿಯ ಒಡೆಯ, ಈಗ ದುಡ್ಡಿದ್ದವನೇ ಭೂಮಿಯ ಒಡೆಯ: ಸಿದ್ದರಾಮಯ್ಯ ಆತಂಕ

ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ, ಸೆ.25 ರಂದು ಭಾರತ್ ಬಂದ್ ಮಾಡಲಾಗುತ್ತಿದೆ. ಇದಕ್ಕೆ ಈಗಾಗಲೇ ದೇಶದಾದ್ಯಂತ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ. ಕರ್ನಾಟಕದಲ್ಲಿಯೂ ಐಕ್ಯ ಹೋರಾಟದ ಸಂಘಟನೆಗಳ ವತಿಯಿಂದ ನಾಳೆ (ಸೆ.5) ರಸ್ತೆ ತಡೆ ಚಳುವಳಿಯನ್ನು ಮಾಡಲಾಗುತ್ತಿದೆ. ಇದಕ್ಕೆ ಮಣಿದು ರಾಜ್ಯ ಸರ್ಕಾರ ಸುಗ್ರೀವಾಜ್ಞೆಗಳನ್ನು ಹಿಂಪಡೆಯದಿದ್ದರೆ, ಸೆ.28 ರಂದು ರಾಜ್ಯದಾದ್ಯಂತ ಬಂದ್ ಆಚರಿಸಲಾಗುವುದು ಎಂದು ಐಕ್ಯ ಹೋರಾಟ ಸಮಿತಿ ತಿಳಿಸಿದೆ.


ಇದನ್ನೂ ಓದಿ: ಇಡೀ ಕುಟುಂಬವನ್ನೇ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿರುವ ಯಡಿಯೂರಪ್ಪ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...