Homeಕರ್ನಾಟಕವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ: ರಾಜ್ಯ ಸರ್ಕಾರ ಭರವಸೆ

- Advertisement -
- Advertisement -

ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲಾ 3614 ಕಂದಾಯ ಗ್ರಾಮಗಳಿಗೂ ಅಂತಿಮ ಅಧಿಸೂಚನೆ ಹೊರಡಿಸಿ, ಡಿಸೆಂಬರ್ ಅಂತ್ಯದೊಳಗೆ ಎಲ್ಲರಿಗೂ ಹಕ್ಕುಪತ್ರ ನೀಡುವ ಮೂಲಕ ಬಡವರ ಕೆಲಸವನ್ನು ಈ ವರ್ಷದೊಳಗೆ ಮುಗಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಶನಿವಾರ ಗಡುವು ನಿಗದಿಗೊಳಿಸಿದ್ದಾರೆ. ಮೇ 20ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ಸರ್ಕಾರ ವಿತರಿಸಲಿದ್ದು, ವರ್ಷಾಂತ್ಯದೊಳಗೆ 2 ಲಕ್ಷ ಜನರಿಗೆ ಹಕ್ಕುಪತ್ರ ವಿತರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.

ಶನಿವಾರ ವಿಕಾಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿದ ಅವರು, “ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಕಡು ಬಡವರಿಗೆ ಕಂದಾಯ ಗ್ರಾಮಗಳನ್ನು ರಚಿಸಿ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ 2017 ರಲ್ಲಿ ಕಾನೂನಿಗೆ ತಿದ್ದುಪಡಿ ತರಲಾಗಿತ್ತು. ಆದರೆ ಅನುಷ್ಠಾನ ಈವರೆಗೆ ಪೂರ್ಣಗೊಳ್ಳದಿರುವುದು ದುರಾದೃಷ್ಟ. ಈ ಹಿಂದೆ ಹಲವರಿಗೆ ಹಕ್ಕುಪತ್ರ ನೀಡಿದ್ದರೂ, ಇನ್ನೂ ಆಗಬೇಕಾದ ಕೆಲಸ ಸಾಕಷ್ಟು ಬಾಕಿ ಇದೆ” ಎಂದು ವಿಷಾದಿಸಿದ್ದಾರೆ.

“ಪ್ರಸ್ತುತ ಅಂಕಿ ಅಂಶಗಳ ಪ್ರಕಾರ ರಾಜ್ಯಾದ್ಯಂತ 3,614 ಕಂದಾಯ ಗ್ರಾಮಗಳಿದ್ದು, ಈವರೆಗೆ 2600 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಕಳೆದ ಸರ್ಕಾರದ ಅವಧಿಯಲ್ಲಿ 1400 ಗ್ರಾಮಗಳ ರಚನೆ ಆಗಿದ್ದರೆ, ಕಳೆದ ಎರಡು ವರ್ಷದ ಅವಧಿಯಲ್ಲಿ 1,200 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಇನ್ನೂ 1014 ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಬಾಕಿ ಇದೆ” ಎಂದು ಹೇಳಿದ್ದಾರೆ.

ಮುಂದುವರೆದು ”ಕೇಂದ್ರ ಸರ್ಕಾರ ದೇಶದಾದ್ಯಂತ ಜನಗಣತಿ ಆರಂಭಿಸುವುದಾಗಿ ಘೋಷಿಸಿದೆ. ಜನಗಣತಿ ಆರಂಭವಾದರೆ ಜುಲೈ ತಿಂಗಳಿನಿಂದ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಲು ಅವಕಾಶ ನೀಡುವುದಿಲ್ಲ. ಪರಿಣಾಮ ಬಡವರ ಅತಿಮುಖ್ಯ ಕೆಲಸಕ್ಕೆ ತೊಡಕುಂಟಾಗುವ ಸಾಧ್ಯತೆ ಇದೆ. ಹೀಗಾಗಿ ಬಾಕಿ ಇರುವ 1014 ಗ್ರಾಮಗಳಿಗೂ ಇದೇ ವರ್ಷದ ಜೂನ್ ಅಂತ್ಯದೊಳಗೆ ಅಂತಿಮ ಅಧಿಸೂಚನೆ ಹೊರಡಿಸಿ ಜುಲೈ ನಂತರ ಹಕ್ಕುಪತ್ರ ವಿತರಿಸಿ. ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ ಮಾತಿನಂತೆ ಈ ಕೆಲಸವನ್ನು ಈ ವರ್ಷಾಂತ್ಯದೊಳಗೆ ಮುಗಿಸಿ” ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಮಯದ ಗಡುವು ನಿಗದಿಪಡಿಸಿದ್ದಾರೆ.

ಬಡವರ ಕೆಲಸವೇ ಸರ್ಕಾರದ ಧ್ಯೇಯ!

ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದೆ. ಎಲ್ಲಾ ಕಾಲದಲ್ಲೂ ಸಮಾಜದ ಅತ್ಯಂತ ಹಿಂದುಳಿದವರು ಹಾಗೂ ಕಡು ಬಡವರ ಪರ ಕೆಲಸ ಮಾಡುವುದೇ ಸರ್ಕಾರದ ಧ್ಯೇಯ. ಆ ನಿಟ್ಟಿನಲ್ಲಿ ಆಡಳಿತ ವರ್ಗವೂ ಸಹಕರಿಸಬೇಕು ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರು ಕಿವಿಮಾತು ಹೇಳಿದ್ದಾರೆ.

ಈ ತಿಂಗಳಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸುತ್ತಿದೆ. ನಾಗರೀಕ ಸಮಾಜದಲ್ಲಿ ಮೂಲಭೂತ ಸೌಲಭ್ಯಗಳಿಂದ ವಂಚಿತರಾದ ಹಾಗೂ ಹಿಂದುಳಿದ ಜನ ಸಮೂಹಕ್ಕೆ ಸಹಾಯವಾಗುವ ಕೆಲಸ ಮಾಡಿ ಆ ಮೂಲಕ ಎರಡು ವರ್ಷ ಪೂರೈಸಿದ ಹರ್ಷಾಚರಣೆ ನಡೆಸಿದರೆ ಮಾತ್ರ ಆ ಕಾರ್ಯಕ್ರಮ ಅರ್ಥಪೂರ್ಣ. ಆ ನಿಟ್ಟಿನಲ್ಲಿ ಮೇ. 20ಕ್ಕೆ ಹೊಸಪೇಟೆಯಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಮೂಲಕ ದಶಕಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.

“ಕಾರ್ಯಕ್ರಮದ ಭಾಗವಾಗಿ ಈಗಾಗಲೇ ಅಂತಿಮ ಅಧಿಸೂಚನೆ ಆಗಿರುವ 2600 ಕಂದಾಯ ಗ್ರಾಮಗಳ 1.41 ಲಕ್ಷ ಫಲಾನುಭವಿಗಳ ಪೈಕಿ 92,719 ಜನ ಹಕ್ಕುಪತ್ರ ಸಿದ್ದವಾಗಿದೆ. ಇನ್ನೂ 50 ಸಾವಿರ ಹಕ್ಕುಪತ್ರಗಳು ಬಾಕಿ ಇದ್ದು, ಬಾಕಿ ಹಕ್ಕುಪತ್ರಗಳನ್ನೂ ಶೀಘ್ರ ಸಿದ್ದಪಡಿಸಿ. ತುಮಕೂರು, ಚಿತ್ರದುರ್ಗ, ಬೆಳಗಾವಿ, ಹಾವೇರಿ, ರಾಯಚೂರು, ಬಾಗಲಕೋಟೆ, ವಿಜಯನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಬಾಕಿ ಇರುವ ಅಥವಾ ಬಿಟ್ಟುಹೋಗಿರುವ ಗ್ರಾಮಗಳನ್ನು ಗುರುತಿಸಿದರೆ ಇನ್ನೂ 30 ರಿಂದ 35 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ಸಿದ್ದಪಡಿಸಬೇಕಾಗಬಹುದು. ಆ ಕೆಲಸವನ್ನೂ ಸಹ ಶೀಘ್ರ ಪೂರ್ಣಗೊಳಿಸಿ” ಎಂದು ಅವರು ಹೇಳಿದ್ದಾರೆ.

“ಹಾಡಿ, ಹಟ್ಟಿ, ತಾಂಡಾಗಳಲ್ಲಿ ವಾಸಿಸುತ್ತಿರುವವರು ಸಾಮಾಜಿಕವಾಗಿ ಹಾಗೂ ಆರ್ಥಿವಾಗಿ ಸಾಕಷ್ಟು ಹಿಂದುಳಿದವರು. ಆದರೆ, ಈ ಗ್ರಾಮಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸದ ಕಾರಣ ದಶಕಗಳಿಂದಲೂ ಇವರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇತ್ತೀಚೆಗೆ ಕಳೆದೊಂದು ದಶಕಗಳಿಂದ ರಾಜ್ಯ ಸರ್ಕಾರ ಗ್ರಾಮಠಾಣಾ ಗಡಿಗಳನ್ನೂ ಮೀರಿ ಹಾಡಿ, ಹಟ್ಟಿ, ತಾಂಡಾಗಳಿಗೆ ರಸ್ತೆ ಹಾಗೂ ನೀರಿನ ಸೌಲಭ್ಯ ನೀಡಿದ್ದೇವೆ. ಈ ಹಿಂದೆ ಶಾಲೆ, ನೀರು ಸರಬರಾಜು ಸಹ ನೀಡುತ್ತಿರಲಿಲ್ಲ ಎಂಬುದೇ ಕಟು ವಾಸ್ತವ. ಇಂತಹ ಜನರಿಗೆ ಶಾಶ್ವತ ಪರಿಹಾರ ನೀಡಿದರೆ ಮಾತ್ರ ಸರ್ಕಾರ ಎರಡು ವರ್ಷ ಪೂರೈಸಿದ್ದೂ ಅರ್ಥಪೂರ್ಣವಾಗುತ್ತದೆ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳೂ ಬಡವರ ಕೆಲಸಗಳನ್ನು ಆದ್ಯತೆ ಮೇಲೆ ಮಾಡಬೇಕು” ಎಂದು ಸೂಚಿಸಿದ್ದಾರೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ಯತ್ನಾಳ್ ಸವಾಲು ಸ್ವೀಕರಿಸಿ ನೀಡಿದ್ದ ಸಚಿವ ಶಿವಾನಂದ್ ರಾಜೀನಾಮೆ ತಿರಸ್ಕರಿಸಿದ ಸ್ಪೀಕರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...