Homeಮುಖಪುಟ'ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ': ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

‘ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ’: ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

- Advertisement -
- Advertisement -

ಸಶಸ್ತ್ರ ಪಡೆಗಳ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ (ಒಆರ್‌ಒಪಿ) ಅಡಿಯಲ್ಲಿ ಬಾಕಿ ಮೊತ್ತವನ್ನು ಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ವಿಚಾರಣೆ ನಡೆಸಿದರು. ಈ ವೇಳೆ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಮುಚ್ಚಿದ ಲಕೋಟೆಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುವ ಅಭ್ಯಾಸವನ್ನು ಟೀಕಿಸಿದ್ದಾರೆ.

ಪಿಂಚಣಿ ಪಾವತಿ ಕುರಿತು ರಕ್ಷಣಾ ಸಚಿವಾಲಯದ ನಿರ್ಧಾರವನ್ನು ತಿಳಿಸುವ ಭಾರತದ ಅಟಾರ್ನಿ ಜನರಲ್ ಸಲ್ಲಿಸಿದ ಮುಚ್ಚಿದ ಕವರ್ ಲಕೋಟೆಯನ್ನು ಸ್ವೀಕರಿಸಲು ನ್ಯಾಯಮೂರ್ತಿ ಚಂದ್ರಚೂಡ್ ನಿರಾಕರಿಸಿದರು. ಅದನ್ನು ಬಹಿರಂಗವಾಗಿ ಓದಬೇಕು ಇಲ್ಲವೇ ಮರಳಿ ತಗೆದುಕೊಂಡು ಹೋಗುವಂತೆ ಸರ್ಕಾರದ ಉನ್ನತ ವಕೀಲರಿಗೆ ವಿರುದ್ಧ ಗರಂ ಆದರು.

”ನಾವು ಯಾವುದೇ ಗೌಪ್ಯ ದಾಖಲೆಗಳನ್ನು ಅಥವಾ ಮುಚ್ಚಿದ ಕವರ್‌ಗಳನ್ನು ತೆಗೆದುಕೊಳ್ಳುವುದಿಲ್ಲ. ನಾನು ಇದಕ್ಕೆ ವೈಯಕ್ತಿಕವಾಗಿ ವಿರುದ್ಧವಾಗಿದ್ದೇನೆ. ನ್ಯಾಯಾಲಯದಲ್ಲಿ ಪಾರದರ್ಶಕತೆ ಇರಬೇಕು. ಇದು ಆದೇಶಗಳನ್ನು ಅನುಷ್ಠಾನಗೊಳಿಸುವ ಜಾಗ, ಇಲ್ಲಿ ಗೌಪ್ಯತೆ ಯಾಕೆ? ನಾನು ಮುಚ್ಚಿದ ಕವರ್ ವ್ಯವಹಾರವನ್ನು ಕೊನೆಗೊಳಿಸಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇದನ್ನೂ ಓದಿ: ಒಂದು ಶ್ರೇಣಿ ಒಂದು ಪಿಂಚಣಿ: ನ್ಯಾಯಾಂಗ ನಿಂದನೆ ನೋಟಿಸ್‌ ನೀಡುವುದಾಗಿ ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ಮುಚ್ಚಿದ ಲಕೋಟೆಯನ್ನು ಸ್ವೀಕರಿಸುವ ಪದ್ದತಿಯನ್ನು ಸುಪ್ರೀಂ ಕೋರ್ಟ್ ಅನುಸರಿಸಿದರೆ, ಹೈಕೋರ್ಟ್‌ಗಳು ಸಹ ಅದನ್ನೇ ಅನುಸರಿಸುತ್ತವೆ ಎಂದು ಅವರು ಅಟಾರ್ನಿ ಜನರಲ್‌ಗೆ ತಿಳಿಸಿದರು.

ಮುಚ್ಚಿದ ಲಕೋಟೆ ಸ್ವೀಕರಿಸುವ ಪದ್ದತಿಯು ನ್ಯಾಯಯುತ ನ್ಯಾಯದ ಮೂಲಭೂತ ಪ್ರಕ್ರಿಯೆಗೆ ಮೂಲಭೂತವಾಗಿ ವಿರುದ್ಧವಾಗಿದೆ ಮುಖ್ಯ ನ್ಯಾಯಾಧೀಶರು ಹೇಳಿದರು.

”ಮೂಲಗಳ ಬಗ್ಗೆ ಅಥವಾ ಇನ್ನೊಬ್ಬರ ಜೀವಕ್ಕೆ ಅಪಾಯವನ್ನುಂಟುಮಾಡಿದಾಗ ಮಾತ್ರ ಆ ರೀತಿ ಮುಚ್ಚಿದ ಲಕೋಟೆಯನ್ನು ಬಳಸಬಹುದು” ಎಂದು ಡಿವೈ ಚಂದ್ರಚೂಡ್ ಹೇಳಿದರು.

ಮಾಜಿ ಸೈನಿಕರಿಗೆ ಒಂದು ಶ್ರೇಣಿ ಒಂದು ಪಿಂಚಣಿ ಅಡಿಯಲ್ಲಿ ಬಾಕಿ ಪಾವತಿಯಲ್ಲಿ ಸರ್ಕಾರದ ನಿಧಾನಗತಿಯನ್ನು ನ್ಯಾಯಾಲಯವು ಗಮನಿಸಿದೆ. ಬಾಕಿ ಪಿಂಚಣಿ ಹಣವನ್ನು ಕಂತುಗಳಲ್ಲಿ ಪಾವತಿಸುವುದಾಗಿ ಸರ್ಕಾರ ಹೇಳಿತ್ತು. ಅದು ಯಾವ ಕ್ರಮದಲ್ಲಿ ಪಾವತಿಸುತ್ತಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ನಂತರ ಅಟಾರ್ನಿ ಜನರಲ್ ಅಬರು ಮುಚ್ಚಿದ ಲಕೋಟೆ ತೆರೆದು ವರದಿಯನ್ನು ಓದಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...