Homeಮುಖಪುಟ'ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ': ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

‘ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ’: ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

- Advertisement -
- Advertisement -

ಸಶಸ್ತ್ರ ಪಡೆಗಳ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ (ಒಆರ್‌ಒಪಿ) ಅಡಿಯಲ್ಲಿ ಬಾಕಿ ಮೊತ್ತವನ್ನು ಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ವಿಚಾರಣೆ ನಡೆಸಿದರು. ಈ ವೇಳೆ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಮುಚ್ಚಿದ ಲಕೋಟೆಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುವ ಅಭ್ಯಾಸವನ್ನು ಟೀಕಿಸಿದ್ದಾರೆ.

ಪಿಂಚಣಿ ಪಾವತಿ ಕುರಿತು ರಕ್ಷಣಾ ಸಚಿವಾಲಯದ ನಿರ್ಧಾರವನ್ನು ತಿಳಿಸುವ ಭಾರತದ ಅಟಾರ್ನಿ ಜನರಲ್ ಸಲ್ಲಿಸಿದ ಮುಚ್ಚಿದ ಕವರ್ ಲಕೋಟೆಯನ್ನು ಸ್ವೀಕರಿಸಲು ನ್ಯಾಯಮೂರ್ತಿ ಚಂದ್ರಚೂಡ್ ನಿರಾಕರಿಸಿದರು. ಅದನ್ನು ಬಹಿರಂಗವಾಗಿ ಓದಬೇಕು ಇಲ್ಲವೇ ಮರಳಿ ತಗೆದುಕೊಂಡು ಹೋಗುವಂತೆ ಸರ್ಕಾರದ ಉನ್ನತ ವಕೀಲರಿಗೆ ವಿರುದ್ಧ ಗರಂ ಆದರು.

”ನಾವು ಯಾವುದೇ ಗೌಪ್ಯ ದಾಖಲೆಗಳನ್ನು ಅಥವಾ ಮುಚ್ಚಿದ ಕವರ್‌ಗಳನ್ನು ತೆಗೆದುಕೊಳ್ಳುವುದಿಲ್ಲ. ನಾನು ಇದಕ್ಕೆ ವೈಯಕ್ತಿಕವಾಗಿ ವಿರುದ್ಧವಾಗಿದ್ದೇನೆ. ನ್ಯಾಯಾಲಯದಲ್ಲಿ ಪಾರದರ್ಶಕತೆ ಇರಬೇಕು. ಇದು ಆದೇಶಗಳನ್ನು ಅನುಷ್ಠಾನಗೊಳಿಸುವ ಜಾಗ, ಇಲ್ಲಿ ಗೌಪ್ಯತೆ ಯಾಕೆ? ನಾನು ಮುಚ್ಚಿದ ಕವರ್ ವ್ಯವಹಾರವನ್ನು ಕೊನೆಗೊಳಿಸಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇದನ್ನೂ ಓದಿ: ಒಂದು ಶ್ರೇಣಿ ಒಂದು ಪಿಂಚಣಿ: ನ್ಯಾಯಾಂಗ ನಿಂದನೆ ನೋಟಿಸ್‌ ನೀಡುವುದಾಗಿ ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ಮುಚ್ಚಿದ ಲಕೋಟೆಯನ್ನು ಸ್ವೀಕರಿಸುವ ಪದ್ದತಿಯನ್ನು ಸುಪ್ರೀಂ ಕೋರ್ಟ್ ಅನುಸರಿಸಿದರೆ, ಹೈಕೋರ್ಟ್‌ಗಳು ಸಹ ಅದನ್ನೇ ಅನುಸರಿಸುತ್ತವೆ ಎಂದು ಅವರು ಅಟಾರ್ನಿ ಜನರಲ್‌ಗೆ ತಿಳಿಸಿದರು.

ಮುಚ್ಚಿದ ಲಕೋಟೆ ಸ್ವೀಕರಿಸುವ ಪದ್ದತಿಯು ನ್ಯಾಯಯುತ ನ್ಯಾಯದ ಮೂಲಭೂತ ಪ್ರಕ್ರಿಯೆಗೆ ಮೂಲಭೂತವಾಗಿ ವಿರುದ್ಧವಾಗಿದೆ ಮುಖ್ಯ ನ್ಯಾಯಾಧೀಶರು ಹೇಳಿದರು.

”ಮೂಲಗಳ ಬಗ್ಗೆ ಅಥವಾ ಇನ್ನೊಬ್ಬರ ಜೀವಕ್ಕೆ ಅಪಾಯವನ್ನುಂಟುಮಾಡಿದಾಗ ಮಾತ್ರ ಆ ರೀತಿ ಮುಚ್ಚಿದ ಲಕೋಟೆಯನ್ನು ಬಳಸಬಹುದು” ಎಂದು ಡಿವೈ ಚಂದ್ರಚೂಡ್ ಹೇಳಿದರು.

ಮಾಜಿ ಸೈನಿಕರಿಗೆ ಒಂದು ಶ್ರೇಣಿ ಒಂದು ಪಿಂಚಣಿ ಅಡಿಯಲ್ಲಿ ಬಾಕಿ ಪಾವತಿಯಲ್ಲಿ ಸರ್ಕಾರದ ನಿಧಾನಗತಿಯನ್ನು ನ್ಯಾಯಾಲಯವು ಗಮನಿಸಿದೆ. ಬಾಕಿ ಪಿಂಚಣಿ ಹಣವನ್ನು ಕಂತುಗಳಲ್ಲಿ ಪಾವತಿಸುವುದಾಗಿ ಸರ್ಕಾರ ಹೇಳಿತ್ತು. ಅದು ಯಾವ ಕ್ರಮದಲ್ಲಿ ಪಾವತಿಸುತ್ತಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ನಂತರ ಅಟಾರ್ನಿ ಜನರಲ್ ಅಬರು ಮುಚ್ಚಿದ ಲಕೋಟೆ ತೆರೆದು ವರದಿಯನ್ನು ಓದಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...