Homeಮುಖಪುಟ'ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ': ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

‘ನ್ಯಾಯಾಲಯಗಳಲ್ಲಿ ಮುಚ್ಚಿದ ಲಕೋಟೆ ವ್ಯವಹಾರ ಕೊನೆಗೊಳಿಸಿ’: ಸರ್ಕಾರದ ಉನ್ನತ ವಕೀಲರಿಗೆ ಸಿಜೆಐ ಚಾಟಿ

- Advertisement -
- Advertisement -

ಸಶಸ್ತ್ರ ಪಡೆಗಳ ಅರ್ಹ ಪಿಂಚಣಿದಾರರಿಗೆ ಒಂದು ಶ್ರೇಣಿ ಒಂದು ಪಿಂಚಣಿ (ಒಆರ್‌ಒಪಿ) ಅಡಿಯಲ್ಲಿ ಬಾಕಿ ಮೊತ್ತವನ್ನು ಪಾವತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ವಿಚಾರಣೆ ನಡೆಸಿದರು. ಈ ವೇಳೆ ನ್ಯಾಯಮೂರ್ತಿ ಚಂದ್ರಚೂಡ್ ಅವರು, ಮುಚ್ಚಿದ ಲಕೋಟೆಗಳನ್ನು ನ್ಯಾಯಾಲಯಗಳಿಗೆ ಸಲ್ಲಿಸುವ ಅಭ್ಯಾಸವನ್ನು ಟೀಕಿಸಿದ್ದಾರೆ.

ಪಿಂಚಣಿ ಪಾವತಿ ಕುರಿತು ರಕ್ಷಣಾ ಸಚಿವಾಲಯದ ನಿರ್ಧಾರವನ್ನು ತಿಳಿಸುವ ಭಾರತದ ಅಟಾರ್ನಿ ಜನರಲ್ ಸಲ್ಲಿಸಿದ ಮುಚ್ಚಿದ ಕವರ್ ಲಕೋಟೆಯನ್ನು ಸ್ವೀಕರಿಸಲು ನ್ಯಾಯಮೂರ್ತಿ ಚಂದ್ರಚೂಡ್ ನಿರಾಕರಿಸಿದರು. ಅದನ್ನು ಬಹಿರಂಗವಾಗಿ ಓದಬೇಕು ಇಲ್ಲವೇ ಮರಳಿ ತಗೆದುಕೊಂಡು ಹೋಗುವಂತೆ ಸರ್ಕಾರದ ಉನ್ನತ ವಕೀಲರಿಗೆ ವಿರುದ್ಧ ಗರಂ ಆದರು.

”ನಾವು ಯಾವುದೇ ಗೌಪ್ಯ ದಾಖಲೆಗಳನ್ನು ಅಥವಾ ಮುಚ್ಚಿದ ಕವರ್‌ಗಳನ್ನು ತೆಗೆದುಕೊಳ್ಳುವುದಿಲ್ಲ. ನಾನು ಇದಕ್ಕೆ ವೈಯಕ್ತಿಕವಾಗಿ ವಿರುದ್ಧವಾಗಿದ್ದೇನೆ. ನ್ಯಾಯಾಲಯದಲ್ಲಿ ಪಾರದರ್ಶಕತೆ ಇರಬೇಕು. ಇದು ಆದೇಶಗಳನ್ನು ಅನುಷ್ಠಾನಗೊಳಿಸುವ ಜಾಗ, ಇಲ್ಲಿ ಗೌಪ್ಯತೆ ಯಾಕೆ? ನಾನು ಮುಚ್ಚಿದ ಕವರ್ ವ್ಯವಹಾರವನ್ನು ಕೊನೆಗೊಳಿಸಲು ಬಯಸುತ್ತೇನೆ” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದ್ದಾರೆ.

ಇದನ್ನೂ ಓದಿ: ಒಂದು ಶ್ರೇಣಿ ಒಂದು ಪಿಂಚಣಿ: ನ್ಯಾಯಾಂಗ ನಿಂದನೆ ನೋಟಿಸ್‌ ನೀಡುವುದಾಗಿ ಕೇಂದ್ರಕ್ಕೆ ಸುಪ್ರೀಂ ಎಚ್ಚರಿಕೆ

ಮುಚ್ಚಿದ ಲಕೋಟೆಯನ್ನು ಸ್ವೀಕರಿಸುವ ಪದ್ದತಿಯನ್ನು ಸುಪ್ರೀಂ ಕೋರ್ಟ್ ಅನುಸರಿಸಿದರೆ, ಹೈಕೋರ್ಟ್‌ಗಳು ಸಹ ಅದನ್ನೇ ಅನುಸರಿಸುತ್ತವೆ ಎಂದು ಅವರು ಅಟಾರ್ನಿ ಜನರಲ್‌ಗೆ ತಿಳಿಸಿದರು.

ಮುಚ್ಚಿದ ಲಕೋಟೆ ಸ್ವೀಕರಿಸುವ ಪದ್ದತಿಯು ನ್ಯಾಯಯುತ ನ್ಯಾಯದ ಮೂಲಭೂತ ಪ್ರಕ್ರಿಯೆಗೆ ಮೂಲಭೂತವಾಗಿ ವಿರುದ್ಧವಾಗಿದೆ ಮುಖ್ಯ ನ್ಯಾಯಾಧೀಶರು ಹೇಳಿದರು.

”ಮೂಲಗಳ ಬಗ್ಗೆ ಅಥವಾ ಇನ್ನೊಬ್ಬರ ಜೀವಕ್ಕೆ ಅಪಾಯವನ್ನುಂಟುಮಾಡಿದಾಗ ಮಾತ್ರ ಆ ರೀತಿ ಮುಚ್ಚಿದ ಲಕೋಟೆಯನ್ನು ಬಳಸಬಹುದು” ಎಂದು ಡಿವೈ ಚಂದ್ರಚೂಡ್ ಹೇಳಿದರು.

ಮಾಜಿ ಸೈನಿಕರಿಗೆ ಒಂದು ಶ್ರೇಣಿ ಒಂದು ಪಿಂಚಣಿ ಅಡಿಯಲ್ಲಿ ಬಾಕಿ ಪಾವತಿಯಲ್ಲಿ ಸರ್ಕಾರದ ನಿಧಾನಗತಿಯನ್ನು ನ್ಯಾಯಾಲಯವು ಗಮನಿಸಿದೆ. ಬಾಕಿ ಪಿಂಚಣಿ ಹಣವನ್ನು ಕಂತುಗಳಲ್ಲಿ ಪಾವತಿಸುವುದಾಗಿ ಸರ್ಕಾರ ಹೇಳಿತ್ತು. ಅದು ಯಾವ ಕ್ರಮದಲ್ಲಿ ಪಾವತಿಸುತ್ತಿದೆ ಎನ್ನುವುದನ್ನು ತಿಳಿದುಕೊಳ್ಳಬೇಕು ಎಂದು ಅವರು ಹೇಳಿದರು.

ನಂತರ ಅಟಾರ್ನಿ ಜನರಲ್ ಅಬರು ಮುಚ್ಚಿದ ಲಕೋಟೆ ತೆರೆದು ವರದಿಯನ್ನು ಓದಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...