Homeಅಂತರಾಷ್ಟ್ರೀಯಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ - ಬಾಂಗ್ಲಾದೇಶ ಆರೋಪ

ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

- Advertisement -
- Advertisement -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನ್ ಅವರ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆಯಲ್ಲಿ ಭಾರತದ ಪಾತ್ರವಿದೆ ಎಂದು ನಾಪತ್ತೆಗಳ ಕುರಿತು ತನಿಖೆ ನಡೆಸಲು ದೇಶದ ಮಧ್ಯಂತರ ಸರ್ಕಾರ ರಚಿಸಿರುವ ಆಯೋಗವು ಆರೋಪಿಸಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 16 ವರ್ಷಗಳ ಆಡಳಿತದಲ್ಲಿ ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರವು ಆಯೋಗವೊಂದನ್ನು ರಚಿಸಿತ್ತು. ಶೇಖ್ ಹಸೀನಾ ಆಡಳಿತದಲ್ಲಿ

“ಬಾಂಗ್ಲಾದೇಶದ ಬಲವಂತದ ಕಣ್ಮರೆ ವ್ಯವಸ್ಥೆಯಲ್ಲಿ ಭಾರತೀಯರ ಕೈವಾಡವಿರುವುದು ಸಾರ್ವಜನಿಕ ದಾಖಲೆಯ ವಿಷಯವಾಗಿದೆ” ಎಂದು ಬಲವಂತದ ಕಣ್ಮರೆಯ ಕುರಿತ ತನಿಖಾ ಆಯೋಗ ಹೇಳಿದೆ ಎಂದು ಬಾಂಗ್ಲಾದೇಶದ ಸರ್ಕಾರಿ ಸುದ್ದಿ ಸಂಸ್ಥೆ ಹೇಳಿದೆ.

ಆಗಸ್ಟ್ 27 ರಂದು, ಢಾಕಾದ ಮಧ್ಯಂತರ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಮೈನುಲ್ ಇಸ್ಲಾಂ ಚೌಧರಿ ನೇತೃತ್ವದ ಐದು ಸದಸ್ಯರ ಆಯೋಗವನ್ನು ರಚಿಸಿ, ಶೇಖ್ ಹಸೀನಾ ಅವರ ಅಧಿಕಾರಾವಧಿಯಲ್ಲಿ ಭದ್ರತಾ ಪಡೆಗಳಿಂದ ನಡೆದ ಬಲವಂತದ ಕಣ್ಮರೆಗಳ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಗುರುತಿಸಲು ಮತ್ತು ವಿವಿಧ ಗುಪ್ತಚರ ಮತ್ತು ಕಾನೂನು ಜಾರಿ ಏಜೆನ್ಸಿಗಳಿಂದ ಅವರು ಕಣ್ಮರೆಯಾದ ಕಾರಣಗಳನ್ನು ತನಿಖೆ ಮಾಡಲು ಆಯೋಗವನ್ನು ಕೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 14 ರಂದು ಆಯೋಗವು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರಿಗೆ ವರದಿಯನ್ನು ಸಲ್ಲಿಸಿದೆ. ಬಾಂಗ್ಲಾದೇಶ ಮತ್ತು ಭಾರತದ ನಡುವೆ “ಬಂಧಿತರ ವಿನಿಮಯ” ಪ್ರಕ್ರಿಯೆಯ ಬಗ್ಗೆ ಆಯೋಗವು ಗುಪ್ತಚರವನ್ನು ಕಂಡುಕೊಂಡಿದೆ ಎಂದು ಈ ವರದಿ ಹೇಳಿದೆ. ಬಾಂಗ್ಲಾದ ಕಾನೂನು ಜಾರಿ ವಲಯಗಳ ನಿರಂತರ ಸಲಹೆಯ ಮೇರೆಗೆ ಕೆಲವು ಕೈದಿಗಳು ಇನ್ನೂ ಭಾರತೀಯ ಜೈಲುಗಳಲ್ಲಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಶೇಖ್ ಹಸೀನಾ ಆಡಳಿತದಲ್ಲಿ

“ಭಾರತದಲ್ಲಿ ಬಂಧಿಯಾಗಿ ಜೈಲಿನಲ್ಲಿ ಇರಬಹುದಾದ ಯಾವುದೇ ಬಾಂಗ್ಲಾದೇಶದ ನಾಗರಿಕರನ್ನು ಗುರುತಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಇದನ್ನು ತನಿಖೆ ನಡೆಸಲು ಆಯೋಗಕ್ಕೆ ಅಧಿಕಾರವಿಲ್ಲ” ಎಂದು ತನಿಖಾ ಆಯೋಗದ ವರದಿ ಹೇಳಿದೆ.

ಅಷ್ಟೆ ಅಲ್ಲದೆ, ಆಯೋಗವು ಬಲವಂತದ ಕಣ್ಮರೆಯ ಎರಡು ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ. ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಆವರಣದಿಂದ ಅಪಹರಣಕ್ಕೊಳಗಾಗಿ ನಂತರ ಭಾರತೀಯ ಜೈಲಿನಲ್ಲಿ ಸಿಕ್ಕಿದ್ದ ಶುಖ್ರಂಜನ್ ಬಾಲಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಕ್ಷದ ನಾಯಕ ಸಲಾವುದ್ದೀನ್ ಅಹ್ಮದ್ ಅವರ ನಾಪತ್ತೆ ಘಟನೆಯನ್ನು ಅದು ಉಲ್ಲೇಖಿಸಿದೆ. 2015 ರಲ್ಲಿ ಢಾಕಾದ ಉತ್ತರಾದಲ್ಲಿ ತಲೆಮರೆಸಿಕೊಂಡಿದ್ದ ಸಲಾವುದ್ದೀನ್ ಅಹ್ಮದ್ ಅವರನ್ನು ಭಾರತ-ಬಾಂಗ್ಲಾದೇಶ ಗಡಿಗೆ ಸಾಗಿಸಲಾಯಿತು ಮತ್ತು ಅಲ್ಲಿ ಅವರನ್ನು ಭಾರತದ ಕಡೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು ಎಂದು ವರದಿ ಉಲ್ಲೇಖಿಸಿದೆ.

ಔಪಚಾರಿಕ ಹಸ್ತಾಂತರ, ಮಾರುವೇಷದಲ್ಲಿ ಬಾಂಗ್ಲಾದೇಶದ ಭದ್ರತಾ ಸಿಬ್ಬಂದಿಯೊಂದಿಗೆ ಭಾರತದ ಭೂಪ್ರದೇಶದೊಳಗಿನ ಕಾರ್ಯಾಚರಣೆಗಳು ಎರಡು ಸರ್ಕಾರಗಳು ಮತ್ತು ಅವರ ಭದ್ರತಾ ಪಡೆಗಳ ನಡುವಿನ ಉನ್ನತ ಮಟ್ಟದ ಸಮನ್ವಯವನ್ನು ಸೂಚಿಸುತ್ತದೆ ಎಂದು ವರದಿ ಆರೋಪಿಸಿದೆ.

ಬಲವಂತದ ಕಣ್ಮರೆಗಳ ಬಗ್ಗೆ 1,676 ದೂರುಗಳನ್ನು ದಾಖಲಿಸಲಾಗಿದೆ ಎಂದು ಆಯೋಗವು ಹೇಳಿದ್ದು, ಈ ಪೈಕಿ 758 ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಅದು ತಿಳಿಸಿದೆ. ಅದಾಗ್ಯೂ, ಬಾಂಗ್ಲಾದೇಶದಲ್ಲಿ ಬಲವಂತದ ಕಣ್ಮರೆಗಳ ಸಂಖ್ಯೆ 3,500 ದಾಟಿರಬಹುದು ಎಂದು ಅದು ಹೇಳಿದ್ದು, ಮಾನವ ಹಕ್ಕುಗಳ ದುರುಪಯೋಗದ ಆರೋಪ ಹೊತ್ತಿರುವ ಭಯೋತ್ಪಾದನಾ ವಿರೋಧಿ ಸಂಘಟನೆ ರಾಪಿಡ್ ಆಕ್ಷನ್ ಬೆಟಾಲಿಯನ್ ಅನ್ನು ವಿಸರ್ಜಿಸುವಂತೆ ವರದಿ ಶಿಫಾರಸು ಮಾಡಿದೆ.

ವರದಿ ಕುರಿತ ಹೇಳಿಕೆಯಲ್ಲಿ ಆಯೋಗದ ಅಧ್ಯಕ್ಷ ಚೌಧರಿ ಅವರು, “ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ರಕ್ಷಣಾ ಸಲಹೆಗಾರ, ಮೇಜರ್ ಜನರಲ್ (ನಿವೃತ್ತ) ತಾರಿಕ್ ಅಹ್ಮದ್ ಸಿದ್ದಿಕ್ ಸೇರಿದಂತೆ ಭದ್ರತಾ ಪಡೆಗಳ ಮತ್ತು ಅವರ ಸರ್ಕಾರದ ಕೆಲವು ಉನ್ನತ ಮಟ್ಟದ ಅಧಿಕಾರಿಗಳು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಪ್ರಾಥಮಿಕವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅದಾಗ್ಯೂ, ಅವಾಮಿ ಲೀಗ್ ಸರ್ಕಾರವು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂಬ ಆರೋಪವನ್ನು ಶೇಖ್ ಹಸೀನಾ ಈ ಹಿಂದೆ ಸತತವಾಗಿ ನಿರಾಕರಿಸಿದ್ದಾರೆ. ಹಸೀನಾ ರಾಜೀನಾಮೆ ನೀಡಿ ಆಗಸ್ಟ್ 5 ರಂದು ಭಾರತಕ್ಕೆ ಬಂದಿಳಿದ ನಂತರ ಆಗಸ್ಟ್ 8 ರಂದು ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಯೂನಸ್ ಅಧಿಕಾರ ವಹಿಸಿಕೊಂಡರು.

ಇದನ್ನೂ ಓದಿ: ‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...