Homeಅಂತರಾಷ್ಟ್ರೀಯಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ - ಬಾಂಗ್ಲಾದೇಶ ಆರೋಪ

ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

- Advertisement -
- Advertisement -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನ್ ಅವರ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆಯಲ್ಲಿ ಭಾರತದ ಪಾತ್ರವಿದೆ ಎಂದು ನಾಪತ್ತೆಗಳ ಕುರಿತು ತನಿಖೆ ನಡೆಸಲು ದೇಶದ ಮಧ್ಯಂತರ ಸರ್ಕಾರ ರಚಿಸಿರುವ ಆಯೋಗವು ಆರೋಪಿಸಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 16 ವರ್ಷಗಳ ಆಡಳಿತದಲ್ಲಿ ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರವು ಆಯೋಗವೊಂದನ್ನು ರಚಿಸಿತ್ತು. ಶೇಖ್ ಹಸೀನಾ ಆಡಳಿತದಲ್ಲಿ

“ಬಾಂಗ್ಲಾದೇಶದ ಬಲವಂತದ ಕಣ್ಮರೆ ವ್ಯವಸ್ಥೆಯಲ್ಲಿ ಭಾರತೀಯರ ಕೈವಾಡವಿರುವುದು ಸಾರ್ವಜನಿಕ ದಾಖಲೆಯ ವಿಷಯವಾಗಿದೆ” ಎಂದು ಬಲವಂತದ ಕಣ್ಮರೆಯ ಕುರಿತ ತನಿಖಾ ಆಯೋಗ ಹೇಳಿದೆ ಎಂದು ಬಾಂಗ್ಲಾದೇಶದ ಸರ್ಕಾರಿ ಸುದ್ದಿ ಸಂಸ್ಥೆ ಹೇಳಿದೆ.

ಆಗಸ್ಟ್ 27 ರಂದು, ಢಾಕಾದ ಮಧ್ಯಂತರ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಮೈನುಲ್ ಇಸ್ಲಾಂ ಚೌಧರಿ ನೇತೃತ್ವದ ಐದು ಸದಸ್ಯರ ಆಯೋಗವನ್ನು ರಚಿಸಿ, ಶೇಖ್ ಹಸೀನಾ ಅವರ ಅಧಿಕಾರಾವಧಿಯಲ್ಲಿ ಭದ್ರತಾ ಪಡೆಗಳಿಂದ ನಡೆದ ಬಲವಂತದ ಕಣ್ಮರೆಗಳ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಗುರುತಿಸಲು ಮತ್ತು ವಿವಿಧ ಗುಪ್ತಚರ ಮತ್ತು ಕಾನೂನು ಜಾರಿ ಏಜೆನ್ಸಿಗಳಿಂದ ಅವರು ಕಣ್ಮರೆಯಾದ ಕಾರಣಗಳನ್ನು ತನಿಖೆ ಮಾಡಲು ಆಯೋಗವನ್ನು ಕೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 14 ರಂದು ಆಯೋಗವು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರಿಗೆ ವರದಿಯನ್ನು ಸಲ್ಲಿಸಿದೆ. ಬಾಂಗ್ಲಾದೇಶ ಮತ್ತು ಭಾರತದ ನಡುವೆ “ಬಂಧಿತರ ವಿನಿಮಯ” ಪ್ರಕ್ರಿಯೆಯ ಬಗ್ಗೆ ಆಯೋಗವು ಗುಪ್ತಚರವನ್ನು ಕಂಡುಕೊಂಡಿದೆ ಎಂದು ಈ ವರದಿ ಹೇಳಿದೆ. ಬಾಂಗ್ಲಾದ ಕಾನೂನು ಜಾರಿ ವಲಯಗಳ ನಿರಂತರ ಸಲಹೆಯ ಮೇರೆಗೆ ಕೆಲವು ಕೈದಿಗಳು ಇನ್ನೂ ಭಾರತೀಯ ಜೈಲುಗಳಲ್ಲಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಶೇಖ್ ಹಸೀನಾ ಆಡಳಿತದಲ್ಲಿ

“ಭಾರತದಲ್ಲಿ ಬಂಧಿಯಾಗಿ ಜೈಲಿನಲ್ಲಿ ಇರಬಹುದಾದ ಯಾವುದೇ ಬಾಂಗ್ಲಾದೇಶದ ನಾಗರಿಕರನ್ನು ಗುರುತಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಇದನ್ನು ತನಿಖೆ ನಡೆಸಲು ಆಯೋಗಕ್ಕೆ ಅಧಿಕಾರವಿಲ್ಲ” ಎಂದು ತನಿಖಾ ಆಯೋಗದ ವರದಿ ಹೇಳಿದೆ.

ಅಷ್ಟೆ ಅಲ್ಲದೆ, ಆಯೋಗವು ಬಲವಂತದ ಕಣ್ಮರೆಯ ಎರಡು ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ. ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಆವರಣದಿಂದ ಅಪಹರಣಕ್ಕೊಳಗಾಗಿ ನಂತರ ಭಾರತೀಯ ಜೈಲಿನಲ್ಲಿ ಸಿಕ್ಕಿದ್ದ ಶುಖ್ರಂಜನ್ ಬಾಲಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಕ್ಷದ ನಾಯಕ ಸಲಾವುದ್ದೀನ್ ಅಹ್ಮದ್ ಅವರ ನಾಪತ್ತೆ ಘಟನೆಯನ್ನು ಅದು ಉಲ್ಲೇಖಿಸಿದೆ. 2015 ರಲ್ಲಿ ಢಾಕಾದ ಉತ್ತರಾದಲ್ಲಿ ತಲೆಮರೆಸಿಕೊಂಡಿದ್ದ ಸಲಾವುದ್ದೀನ್ ಅಹ್ಮದ್ ಅವರನ್ನು ಭಾರತ-ಬಾಂಗ್ಲಾದೇಶ ಗಡಿಗೆ ಸಾಗಿಸಲಾಯಿತು ಮತ್ತು ಅಲ್ಲಿ ಅವರನ್ನು ಭಾರತದ ಕಡೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು ಎಂದು ವರದಿ ಉಲ್ಲೇಖಿಸಿದೆ.

ಔಪಚಾರಿಕ ಹಸ್ತಾಂತರ, ಮಾರುವೇಷದಲ್ಲಿ ಬಾಂಗ್ಲಾದೇಶದ ಭದ್ರತಾ ಸಿಬ್ಬಂದಿಯೊಂದಿಗೆ ಭಾರತದ ಭೂಪ್ರದೇಶದೊಳಗಿನ ಕಾರ್ಯಾಚರಣೆಗಳು ಎರಡು ಸರ್ಕಾರಗಳು ಮತ್ತು ಅವರ ಭದ್ರತಾ ಪಡೆಗಳ ನಡುವಿನ ಉನ್ನತ ಮಟ್ಟದ ಸಮನ್ವಯವನ್ನು ಸೂಚಿಸುತ್ತದೆ ಎಂದು ವರದಿ ಆರೋಪಿಸಿದೆ.

ಬಲವಂತದ ಕಣ್ಮರೆಗಳ ಬಗ್ಗೆ 1,676 ದೂರುಗಳನ್ನು ದಾಖಲಿಸಲಾಗಿದೆ ಎಂದು ಆಯೋಗವು ಹೇಳಿದ್ದು, ಈ ಪೈಕಿ 758 ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಅದು ತಿಳಿಸಿದೆ. ಅದಾಗ್ಯೂ, ಬಾಂಗ್ಲಾದೇಶದಲ್ಲಿ ಬಲವಂತದ ಕಣ್ಮರೆಗಳ ಸಂಖ್ಯೆ 3,500 ದಾಟಿರಬಹುದು ಎಂದು ಅದು ಹೇಳಿದ್ದು, ಮಾನವ ಹಕ್ಕುಗಳ ದುರುಪಯೋಗದ ಆರೋಪ ಹೊತ್ತಿರುವ ಭಯೋತ್ಪಾದನಾ ವಿರೋಧಿ ಸಂಘಟನೆ ರಾಪಿಡ್ ಆಕ್ಷನ್ ಬೆಟಾಲಿಯನ್ ಅನ್ನು ವಿಸರ್ಜಿಸುವಂತೆ ವರದಿ ಶಿಫಾರಸು ಮಾಡಿದೆ.

ವರದಿ ಕುರಿತ ಹೇಳಿಕೆಯಲ್ಲಿ ಆಯೋಗದ ಅಧ್ಯಕ್ಷ ಚೌಧರಿ ಅವರು, “ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ರಕ್ಷಣಾ ಸಲಹೆಗಾರ, ಮೇಜರ್ ಜನರಲ್ (ನಿವೃತ್ತ) ತಾರಿಕ್ ಅಹ್ಮದ್ ಸಿದ್ದಿಕ್ ಸೇರಿದಂತೆ ಭದ್ರತಾ ಪಡೆಗಳ ಮತ್ತು ಅವರ ಸರ್ಕಾರದ ಕೆಲವು ಉನ್ನತ ಮಟ್ಟದ ಅಧಿಕಾರಿಗಳು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಪ್ರಾಥಮಿಕವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅದಾಗ್ಯೂ, ಅವಾಮಿ ಲೀಗ್ ಸರ್ಕಾರವು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂಬ ಆರೋಪವನ್ನು ಶೇಖ್ ಹಸೀನಾ ಈ ಹಿಂದೆ ಸತತವಾಗಿ ನಿರಾಕರಿಸಿದ್ದಾರೆ. ಹಸೀನಾ ರಾಜೀನಾಮೆ ನೀಡಿ ಆಗಸ್ಟ್ 5 ರಂದು ಭಾರತಕ್ಕೆ ಬಂದಿಳಿದ ನಂತರ ಆಗಸ್ಟ್ 8 ರಂದು ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಯೂನಸ್ ಅಧಿಕಾರ ವಹಿಸಿಕೊಂಡರು.

ಇದನ್ನೂ ಓದಿ: ‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...