Homeಅಂತರಾಷ್ಟ್ರೀಯಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ - ಬಾಂಗ್ಲಾದೇಶ ಆರೋಪ

ಶೇಖ್ ಹಸೀನಾ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾರತದ ಕೈವಾಡ – ಬಾಂಗ್ಲಾದೇಶ ಆರೋಪ

- Advertisement -
- Advertisement -

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನ್ ಅವರ ಆಡಳಿತದಲ್ಲಿ ನಡೆದ ಬಲವಂತದ ಕಣ್ಮರೆಯಲ್ಲಿ ಭಾರತದ ಪಾತ್ರವಿದೆ ಎಂದು ನಾಪತ್ತೆಗಳ ಕುರಿತು ತನಿಖೆ ನಡೆಸಲು ದೇಶದ ಮಧ್ಯಂತರ ಸರ್ಕಾರ ರಚಿಸಿರುವ ಆಯೋಗವು ಆರೋಪಿಸಿದೆ. ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 16 ವರ್ಷಗಳ ಆಡಳಿತದಲ್ಲಿ ಇಂತಹ ಪ್ರಕರಣಗಳ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರವು ಆಯೋಗವೊಂದನ್ನು ರಚಿಸಿತ್ತು. ಶೇಖ್ ಹಸೀನಾ ಆಡಳಿತದಲ್ಲಿ

“ಬಾಂಗ್ಲಾದೇಶದ ಬಲವಂತದ ಕಣ್ಮರೆ ವ್ಯವಸ್ಥೆಯಲ್ಲಿ ಭಾರತೀಯರ ಕೈವಾಡವಿರುವುದು ಸಾರ್ವಜನಿಕ ದಾಖಲೆಯ ವಿಷಯವಾಗಿದೆ” ಎಂದು ಬಲವಂತದ ಕಣ್ಮರೆಯ ಕುರಿತ ತನಿಖಾ ಆಯೋಗ ಹೇಳಿದೆ ಎಂದು ಬಾಂಗ್ಲಾದೇಶದ ಸರ್ಕಾರಿ ಸುದ್ದಿ ಸಂಸ್ಥೆ ಹೇಳಿದೆ.

ಆಗಸ್ಟ್ 27 ರಂದು, ಢಾಕಾದ ಮಧ್ಯಂತರ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಮೈನುಲ್ ಇಸ್ಲಾಂ ಚೌಧರಿ ನೇತೃತ್ವದ ಐದು ಸದಸ್ಯರ ಆಯೋಗವನ್ನು ರಚಿಸಿ, ಶೇಖ್ ಹಸೀನಾ ಅವರ ಅಧಿಕಾರಾವಧಿಯಲ್ಲಿ ಭದ್ರತಾ ಪಡೆಗಳಿಂದ ನಡೆದ ಬಲವಂತದ ಕಣ್ಮರೆಗಳ ಬಗ್ಗೆ ತನಿಖೆ ನಡೆಸುವಂತೆ ಆದೇಶಿಸಿತ್ತು. ಕಾಣೆಯಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಗುರುತಿಸಲು ಮತ್ತು ವಿವಿಧ ಗುಪ್ತಚರ ಮತ್ತು ಕಾನೂನು ಜಾರಿ ಏಜೆನ್ಸಿಗಳಿಂದ ಅವರು ಕಣ್ಮರೆಯಾದ ಕಾರಣಗಳನ್ನು ತನಿಖೆ ಮಾಡಲು ಆಯೋಗವನ್ನು ಕೇಳಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಡಿಸೆಂಬರ್ 14 ರಂದು ಆಯೋಗವು ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನಸ್ ಅವರಿಗೆ ವರದಿಯನ್ನು ಸಲ್ಲಿಸಿದೆ. ಬಾಂಗ್ಲಾದೇಶ ಮತ್ತು ಭಾರತದ ನಡುವೆ “ಬಂಧಿತರ ವಿನಿಮಯ” ಪ್ರಕ್ರಿಯೆಯ ಬಗ್ಗೆ ಆಯೋಗವು ಗುಪ್ತಚರವನ್ನು ಕಂಡುಕೊಂಡಿದೆ ಎಂದು ಈ ವರದಿ ಹೇಳಿದೆ. ಬಾಂಗ್ಲಾದ ಕಾನೂನು ಜಾರಿ ವಲಯಗಳ ನಿರಂತರ ಸಲಹೆಯ ಮೇರೆಗೆ ಕೆಲವು ಕೈದಿಗಳು ಇನ್ನೂ ಭಾರತೀಯ ಜೈಲುಗಳಲ್ಲಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಶೇಖ್ ಹಸೀನಾ ಆಡಳಿತದಲ್ಲಿ

“ಭಾರತದಲ್ಲಿ ಬಂಧಿಯಾಗಿ ಜೈಲಿನಲ್ಲಿ ಇರಬಹುದಾದ ಯಾವುದೇ ಬಾಂಗ್ಲಾದೇಶದ ನಾಗರಿಕರನ್ನು ಗುರುತಿಸಲು ವಿದೇಶಾಂಗ ಮತ್ತು ಗೃಹ ಸಚಿವಾಲಯಗಳು ತಮ್ಮ ಅತ್ಯುತ್ತಮ ಪ್ರಯತ್ನ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಬಾಂಗ್ಲಾದೇಶದ ಹೊರಗೆ ಇದನ್ನು ತನಿಖೆ ನಡೆಸಲು ಆಯೋಗಕ್ಕೆ ಅಧಿಕಾರವಿಲ್ಲ” ಎಂದು ತನಿಖಾ ಆಯೋಗದ ವರದಿ ಹೇಳಿದೆ.

ಅಷ್ಟೆ ಅಲ್ಲದೆ, ಆಯೋಗವು ಬಲವಂತದ ಕಣ್ಮರೆಯ ಎರಡು ಪ್ರಕರಣಗಳನ್ನು ವರದಿಯಲ್ಲಿ ಉಲ್ಲೇಖಿಸಿದೆ. ಬಾಂಗ್ಲಾದೇಶದ ಸುಪ್ರೀಂ ಕೋರ್ಟ್ ಆವರಣದಿಂದ ಅಪಹರಣಕ್ಕೊಳಗಾಗಿ ನಂತರ ಭಾರತೀಯ ಜೈಲಿನಲ್ಲಿ ಸಿಕ್ಕಿದ್ದ ಶುಖ್ರಂಜನ್ ಬಾಲಿ ಹಾಗೂ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಕ್ಷದ ನಾಯಕ ಸಲಾವುದ್ದೀನ್ ಅಹ್ಮದ್ ಅವರ ನಾಪತ್ತೆ ಘಟನೆಯನ್ನು ಅದು ಉಲ್ಲೇಖಿಸಿದೆ. 2015 ರಲ್ಲಿ ಢಾಕಾದ ಉತ್ತರಾದಲ್ಲಿ ತಲೆಮರೆಸಿಕೊಂಡಿದ್ದ ಸಲಾವುದ್ದೀನ್ ಅಹ್ಮದ್ ಅವರನ್ನು ಭಾರತ-ಬಾಂಗ್ಲಾದೇಶ ಗಡಿಗೆ ಸಾಗಿಸಲಾಯಿತು ಮತ್ತು ಅಲ್ಲಿ ಅವರನ್ನು ಭಾರತದ ಕಡೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು ಎಂದು ವರದಿ ಉಲ್ಲೇಖಿಸಿದೆ.

ಔಪಚಾರಿಕ ಹಸ್ತಾಂತರ, ಮಾರುವೇಷದಲ್ಲಿ ಬಾಂಗ್ಲಾದೇಶದ ಭದ್ರತಾ ಸಿಬ್ಬಂದಿಯೊಂದಿಗೆ ಭಾರತದ ಭೂಪ್ರದೇಶದೊಳಗಿನ ಕಾರ್ಯಾಚರಣೆಗಳು ಎರಡು ಸರ್ಕಾರಗಳು ಮತ್ತು ಅವರ ಭದ್ರತಾ ಪಡೆಗಳ ನಡುವಿನ ಉನ್ನತ ಮಟ್ಟದ ಸಮನ್ವಯವನ್ನು ಸೂಚಿಸುತ್ತದೆ ಎಂದು ವರದಿ ಆರೋಪಿಸಿದೆ.

ಬಲವಂತದ ಕಣ್ಮರೆಗಳ ಬಗ್ಗೆ 1,676 ದೂರುಗಳನ್ನು ದಾಖಲಿಸಲಾಗಿದೆ ಎಂದು ಆಯೋಗವು ಹೇಳಿದ್ದು, ಈ ಪೈಕಿ 758 ಪ್ರಕರಣಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಅದು ತಿಳಿಸಿದೆ. ಅದಾಗ್ಯೂ, ಬಾಂಗ್ಲಾದೇಶದಲ್ಲಿ ಬಲವಂತದ ಕಣ್ಮರೆಗಳ ಸಂಖ್ಯೆ 3,500 ದಾಟಿರಬಹುದು ಎಂದು ಅದು ಹೇಳಿದ್ದು, ಮಾನವ ಹಕ್ಕುಗಳ ದುರುಪಯೋಗದ ಆರೋಪ ಹೊತ್ತಿರುವ ಭಯೋತ್ಪಾದನಾ ವಿರೋಧಿ ಸಂಘಟನೆ ರಾಪಿಡ್ ಆಕ್ಷನ್ ಬೆಟಾಲಿಯನ್ ಅನ್ನು ವಿಸರ್ಜಿಸುವಂತೆ ವರದಿ ಶಿಫಾರಸು ಮಾಡಿದೆ.

ವರದಿ ಕುರಿತ ಹೇಳಿಕೆಯಲ್ಲಿ ಆಯೋಗದ ಅಧ್ಯಕ್ಷ ಚೌಧರಿ ಅವರು, “ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ರಕ್ಷಣಾ ಸಲಹೆಗಾರ, ಮೇಜರ್ ಜನರಲ್ (ನಿವೃತ್ತ) ತಾರಿಕ್ ಅಹ್ಮದ್ ಸಿದ್ದಿಕ್ ಸೇರಿದಂತೆ ಭದ್ರತಾ ಪಡೆಗಳ ಮತ್ತು ಅವರ ಸರ್ಕಾರದ ಕೆಲವು ಉನ್ನತ ಮಟ್ಟದ ಅಧಿಕಾರಿಗಳು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಪ್ರಾಥಮಿಕವಾಗಿ ತೊಡಗಿಸಿಕೊಂಡಿದ್ದಾರೆ” ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಅದಾಗ್ಯೂ, ಅವಾಮಿ ಲೀಗ್ ಸರ್ಕಾರವು ಬಲವಂತದ ಕಣ್ಮರೆ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂಬ ಆರೋಪವನ್ನು ಶೇಖ್ ಹಸೀನಾ ಈ ಹಿಂದೆ ಸತತವಾಗಿ ನಿರಾಕರಿಸಿದ್ದಾರೆ. ಹಸೀನಾ ರಾಜೀನಾಮೆ ನೀಡಿ ಆಗಸ್ಟ್ 5 ರಂದು ಭಾರತಕ್ಕೆ ಬಂದಿಳಿದ ನಂತರ ಆಗಸ್ಟ್ 8 ರಂದು ಬಾಂಗ್ಲಾದೇಶದಲ್ಲಿ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಯೂನಸ್ ಅಧಿಕಾರ ವಹಿಸಿಕೊಂಡರು.

ಇದನ್ನೂ ಓದಿ: ‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

‘ಪುಷ್ಪ-2’ ಕಾಲ್ತುಳಿತ ಪ್ರಕರಣ : ಸಿಎಂ ರೇವಂತ್ ರೆಡ್ಡಿ- ನಟ ಅಲ್ಲು ಅರ್ಜುನ್‌ ನಡುವೆ ತಾರಕಕ್ಕೇರಿದ ವಾಗ್ಯುದ್ಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...