Homeಮುಖಪುಟಹರ್ಷ ಮಂದರ್‌ ಮನೆ, ಸಂಸ್ಥೆ ಮೇಲೆ ಇ.ಡಿ. ದಾಳಿ: ಆರೋಪ ಖಂಡಿಸಿ ಸಹಿ ಸಂಗ್ರಹ ಅಭಿಯಾನ

ಹರ್ಷ ಮಂದರ್‌ ಮನೆ, ಸಂಸ್ಥೆ ಮೇಲೆ ಇ.ಡಿ. ದಾಳಿ: ಆರೋಪ ಖಂಡಿಸಿ ಸಹಿ ಸಂಗ್ರಹ ಅಭಿಯಾನ

ಹರ್ಷ ಮಂದರ್‌ ಅವರ ಮನೆ ಹಾಗೂ ಇಕ್ವಿಟಿ ಸೆಂಟರ್‌ ಮೇಲೆ ಇ.ಡಿ. ದಾಳಿ ಮಾಡಿರುವುದನ್ನು ಅನೇಕರು ಖಂಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ.

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಹರ್ಷ ಮಂದರ್‌ ಅವರ ಸಂಸ್ಥೆ ಹಾಗೂ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ಮಾಡಿದೆ.

ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿದ್ದಾರೆಂದು ದೆಹಲಿಯ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸರು ಹರ್ಷ ಮಂದರ್‌ ಅವರ ಮೇಲೆ ಕಳೆದ ಫೆಬ್ರುವರಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಅದರ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ.

ವಸಂತ್‌ ಕುಂಜ್‌ನಲ್ಲಿನ ಮಂದರ್ ಅವರ ಮನೆ ಹಾಗೂ ಅದ್ಚುನಿಯಲ್ಲಿನ ಸೆಂಟರ್‌ ಫಾರ್‌ ಇಕ್ವಿಟಿ ಸ್ಟಡೀಸ್‌ (ಸಿಇಎಸ್‌) ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಎರಡು ಮಕ್ಕಳ ಗೃಹಗಳು ಮಂದರ್‌ ಅವರ ಎನ್‌ಜಿಒ ವತಿಯಿಂದ ನಡೆಯುತ್ತಿವೆ.

ಜರ್ಮನಿಯ ಬರ್ಲಿನ್‌ನ ರಾಬರ್ಟ್ ಬಾಷ್ ಅಕಾಡೆಮಿಯಲ್ಲಿ ಆರು ತಿಂಗಳ ಫೆಲೋಶಿಪ್ ತೆಗೆದುಕೊಂಡಿರುವ ಮಂದರ್ ಮತ್ತು ಅವರ ಪತ್ನಿ, ಜರ್ಮನಿಗೆ ತೆರಳಿದ ಕೆಲವು ಗಂಟೆಗಳ ನಂತರ ದಾಳಿಗಳನ್ನು ನಡೆಸಲಾಗಿದೆ. ವಸಂತ್‌ ಕುಂಜ್‌ನ ನಿವಾಸದಲ್ಲಿ ಮಂದರ್‌ ಅವರ ಮಗಳು ಮತ್ತು ಅವರ ಅಳಿಯ ಇದ್ದರು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್‌) ಸೂಚನೆಯಂತೆ ದೆಹಲಿ ಪೊಲೀಸರು ಎಫ್‌‌ಐಆರ್‌ ದಾಖಲಿಸಿದ್ದಾರೆ. ಮಂದರ್‌ ಅವರು ನಡೆಸುತ್ತಿರುವ ಎರಡು ಮಕ್ಕಳ ಮನೆಗಳಾದ ‘ಉಮೀದ್‌ ಅಮರ್‌ ಖರ್‌ (ಗುಂಡುಮಕ್ಕಳಿಗೆ), ಖುಷಿ ರೈನ್‌ಬೋ ಮನೆ (ಹೆಣ್ಣುಮಕ್ಕಳಿಗೆ)’ ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿವೆ ಎಂದು ಆರೋಪಿಸಲಾಗಿದೆ.

ಆಯೋಗದ ಆರೋಪವನ್ನು ಮಂದರ್‌ ಅಲ್ಲಗಳೆದಿದ್ದರು. ಜಾರಿ ನಿರ್ದೇಶನಾಲಯದ ದಾಳಿ ಸಂಬಂಧ ಟ್ವೀಟ್ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್‌, “ಹರ್ಷ ಮಂದರ್‌ ಮಧ್ಯಪ್ರದೇಶದಲ್ಲಿ ಐಎಎಸ್‌ ಕೇಡರ್‌ ಅಧಿಕಾರಿಯಾಗಿದ್ದಾಗಿನಿಂದ ಹಿಡಿದು ಸುಮಾರು ನಲವತ್ತು ವರ್ಷಗಳಿಂದ ನಾನು ಅವರು ನೋಡುತ್ತಿದ್ದೇನೆ. ಅವರು ಅತ್ಯಂತ ಸೂಕ್ಷ್ಮ ವ್ಯಕ್ತಿ” ಎಂದಿದ್ದಾರೆ.

ಮಂದರ್‌ ಪರ ಸಹಿ ಅಭಿಯಾನ

ಹರ್ಷ ಮಂದರ್‌ ಅವರ ಮನೆ ಹಾಗೂ ಇಕ್ವಿಟಿ ಸೆಂಟರ್‌ ಮೇಲೆ ಇ.ಡಿ. ದಾಳಿ ಮಾಡಿರುವುದನ್ನು ಅನೇಕರು ಖಂಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ.

“ಹರ್ಷ ಮಂದರ್‌ ಮತ್ತು ಅವರ ಇಕ್ವಿಟಿ ಅಧ್ಯಯನ ಕೇಂದ್ರದ ಮೇಲೆ ಮೊದಲಿನಿಂದಲೂ ಕಿರುಕುಳ ನಡೆಯುತ್ತಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸುಳ್ಳು ಆಪಾದನೆಯನ್ನು ಹೊರಿಸಿದೆ. ಆರ್ಥಿಕ ಅಪರಾಧಗಳ ವಿಭಾಗ, ಐಟಿ ಇಲಾಖೆಯಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ” ಎಂದು ವಿಷಾದಿಸಿದ್ದಾರೆ.

ಎಂಕೆಎಸ್‌ಎಸ್‌ನ ಅರುಣ್‌ ರಾಯ್‌, ಯೋಜನಾ ಆಯೋಗದ ಮಾಜಿ ಸದಸ್ಯರಾದ ಡಾ.ಸೈಹಿದಾ ಅಮೀದ್‌, ಆರ್ಥಶಾಸ್ತ್ರಜ್ಞ ಪ್ರೊ.ಜೀನ್‌ ಡ್ರೋಜ್‌, ಪ್ರೊ.ಅಪೂರ್ವನಂದ್‌, ಹಿರಿಯ ವಕೀಲರಾದ ಇಂದಿರಾ ಜೈಸಿಂಗ್‌, ಪಿಯುಸಿಎಲ್‌ನ ಜನರಲ್ ಸೆಕರೆಟ್ರರಿ ಡಾ.ವಿ.ಸುರೇಶ್‌, ಪಿಯುಸಿಎಲ್‌ ಅಧ್ಯಕ್ಷ ರವಿಕಿರಣ್‌ ಜೈನ್‌ ಸೇರಿದಂತೆ ನೂರಾರು ಮಂದಿ ಸಹಿಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ಮಾತನ್ನು ಈಗ ಕೇಳುವುದಿಲ್ಲ: ಹರ್ಷಮಂದರ್‌ PIL ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...