Homeಮುಖಪುಟಹರ್ಷ ಮಂದರ್‌ ಮನೆ, ಸಂಸ್ಥೆ ಮೇಲೆ ಇ.ಡಿ. ದಾಳಿ: ಆರೋಪ ಖಂಡಿಸಿ ಸಹಿ ಸಂಗ್ರಹ ಅಭಿಯಾನ

ಹರ್ಷ ಮಂದರ್‌ ಮನೆ, ಸಂಸ್ಥೆ ಮೇಲೆ ಇ.ಡಿ. ದಾಳಿ: ಆರೋಪ ಖಂಡಿಸಿ ಸಹಿ ಸಂಗ್ರಹ ಅಭಿಯಾನ

ಹರ್ಷ ಮಂದರ್‌ ಅವರ ಮನೆ ಹಾಗೂ ಇಕ್ವಿಟಿ ಸೆಂಟರ್‌ ಮೇಲೆ ಇ.ಡಿ. ದಾಳಿ ಮಾಡಿರುವುದನ್ನು ಅನೇಕರು ಖಂಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ.

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಹರ್ಷ ಮಂದರ್‌ ಅವರ ಸಂಸ್ಥೆ ಹಾಗೂ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ಮಾಡಿದೆ.

ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿದ್ದಾರೆಂದು ದೆಹಲಿಯ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸರು ಹರ್ಷ ಮಂದರ್‌ ಅವರ ಮೇಲೆ ಕಳೆದ ಫೆಬ್ರುವರಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಅದರ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ.

ವಸಂತ್‌ ಕುಂಜ್‌ನಲ್ಲಿನ ಮಂದರ್ ಅವರ ಮನೆ ಹಾಗೂ ಅದ್ಚುನಿಯಲ್ಲಿನ ಸೆಂಟರ್‌ ಫಾರ್‌ ಇಕ್ವಿಟಿ ಸ್ಟಡೀಸ್‌ (ಸಿಇಎಸ್‌) ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಎರಡು ಮಕ್ಕಳ ಗೃಹಗಳು ಮಂದರ್‌ ಅವರ ಎನ್‌ಜಿಒ ವತಿಯಿಂದ ನಡೆಯುತ್ತಿವೆ.

ಜರ್ಮನಿಯ ಬರ್ಲಿನ್‌ನ ರಾಬರ್ಟ್ ಬಾಷ್ ಅಕಾಡೆಮಿಯಲ್ಲಿ ಆರು ತಿಂಗಳ ಫೆಲೋಶಿಪ್ ತೆಗೆದುಕೊಂಡಿರುವ ಮಂದರ್ ಮತ್ತು ಅವರ ಪತ್ನಿ, ಜರ್ಮನಿಗೆ ತೆರಳಿದ ಕೆಲವು ಗಂಟೆಗಳ ನಂತರ ದಾಳಿಗಳನ್ನು ನಡೆಸಲಾಗಿದೆ. ವಸಂತ್‌ ಕುಂಜ್‌ನ ನಿವಾಸದಲ್ಲಿ ಮಂದರ್‌ ಅವರ ಮಗಳು ಮತ್ತು ಅವರ ಅಳಿಯ ಇದ್ದರು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್‌) ಸೂಚನೆಯಂತೆ ದೆಹಲಿ ಪೊಲೀಸರು ಎಫ್‌‌ಐಆರ್‌ ದಾಖಲಿಸಿದ್ದಾರೆ. ಮಂದರ್‌ ಅವರು ನಡೆಸುತ್ತಿರುವ ಎರಡು ಮಕ್ಕಳ ಮನೆಗಳಾದ ‘ಉಮೀದ್‌ ಅಮರ್‌ ಖರ್‌ (ಗುಂಡುಮಕ್ಕಳಿಗೆ), ಖುಷಿ ರೈನ್‌ಬೋ ಮನೆ (ಹೆಣ್ಣುಮಕ್ಕಳಿಗೆ)’ ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿವೆ ಎಂದು ಆರೋಪಿಸಲಾಗಿದೆ.

ಆಯೋಗದ ಆರೋಪವನ್ನು ಮಂದರ್‌ ಅಲ್ಲಗಳೆದಿದ್ದರು. ಜಾರಿ ನಿರ್ದೇಶನಾಲಯದ ದಾಳಿ ಸಂಬಂಧ ಟ್ವೀಟ್ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್‌, “ಹರ್ಷ ಮಂದರ್‌ ಮಧ್ಯಪ್ರದೇಶದಲ್ಲಿ ಐಎಎಸ್‌ ಕೇಡರ್‌ ಅಧಿಕಾರಿಯಾಗಿದ್ದಾಗಿನಿಂದ ಹಿಡಿದು ಸುಮಾರು ನಲವತ್ತು ವರ್ಷಗಳಿಂದ ನಾನು ಅವರು ನೋಡುತ್ತಿದ್ದೇನೆ. ಅವರು ಅತ್ಯಂತ ಸೂಕ್ಷ್ಮ ವ್ಯಕ್ತಿ” ಎಂದಿದ್ದಾರೆ.

ಮಂದರ್‌ ಪರ ಸಹಿ ಅಭಿಯಾನ

ಹರ್ಷ ಮಂದರ್‌ ಅವರ ಮನೆ ಹಾಗೂ ಇಕ್ವಿಟಿ ಸೆಂಟರ್‌ ಮೇಲೆ ಇ.ಡಿ. ದಾಳಿ ಮಾಡಿರುವುದನ್ನು ಅನೇಕರು ಖಂಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ.

“ಹರ್ಷ ಮಂದರ್‌ ಮತ್ತು ಅವರ ಇಕ್ವಿಟಿ ಅಧ್ಯಯನ ಕೇಂದ್ರದ ಮೇಲೆ ಮೊದಲಿನಿಂದಲೂ ಕಿರುಕುಳ ನಡೆಯುತ್ತಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸುಳ್ಳು ಆಪಾದನೆಯನ್ನು ಹೊರಿಸಿದೆ. ಆರ್ಥಿಕ ಅಪರಾಧಗಳ ವಿಭಾಗ, ಐಟಿ ಇಲಾಖೆಯಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ” ಎಂದು ವಿಷಾದಿಸಿದ್ದಾರೆ.

ಎಂಕೆಎಸ್‌ಎಸ್‌ನ ಅರುಣ್‌ ರಾಯ್‌, ಯೋಜನಾ ಆಯೋಗದ ಮಾಜಿ ಸದಸ್ಯರಾದ ಡಾ.ಸೈಹಿದಾ ಅಮೀದ್‌, ಆರ್ಥಶಾಸ್ತ್ರಜ್ಞ ಪ್ರೊ.ಜೀನ್‌ ಡ್ರೋಜ್‌, ಪ್ರೊ.ಅಪೂರ್ವನಂದ್‌, ಹಿರಿಯ ವಕೀಲರಾದ ಇಂದಿರಾ ಜೈಸಿಂಗ್‌, ಪಿಯುಸಿಎಲ್‌ನ ಜನರಲ್ ಸೆಕರೆಟ್ರರಿ ಡಾ.ವಿ.ಸುರೇಶ್‌, ಪಿಯುಸಿಎಲ್‌ ಅಧ್ಯಕ್ಷ ರವಿಕಿರಣ್‌ ಜೈನ್‌ ಸೇರಿದಂತೆ ನೂರಾರು ಮಂದಿ ಸಹಿಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ಮಾತನ್ನು ಈಗ ಕೇಳುವುದಿಲ್ಲ: ಹರ್ಷಮಂದರ್‌ PIL ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...