Homeಮುಖಪುಟಹರ್ಷ ಮಂದರ್‌ ಮನೆ, ಸಂಸ್ಥೆ ಮೇಲೆ ಇ.ಡಿ. ದಾಳಿ: ಆರೋಪ ಖಂಡಿಸಿ ಸಹಿ ಸಂಗ್ರಹ ಅಭಿಯಾನ

ಹರ್ಷ ಮಂದರ್‌ ಮನೆ, ಸಂಸ್ಥೆ ಮೇಲೆ ಇ.ಡಿ. ದಾಳಿ: ಆರೋಪ ಖಂಡಿಸಿ ಸಹಿ ಸಂಗ್ರಹ ಅಭಿಯಾನ

ಹರ್ಷ ಮಂದರ್‌ ಅವರ ಮನೆ ಹಾಗೂ ಇಕ್ವಿಟಿ ಸೆಂಟರ್‌ ಮೇಲೆ ಇ.ಡಿ. ದಾಳಿ ಮಾಡಿರುವುದನ್ನು ಅನೇಕರು ಖಂಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ.

- Advertisement -
- Advertisement -

ಮಾನವ ಹಕ್ಕುಗಳ ಹೋರಾಟಗಾರ ಹರ್ಷ ಮಂದರ್‌ ಅವರ ಸಂಸ್ಥೆ ಹಾಗೂ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ.) ದಾಳಿ ಮಾಡಿದೆ.

ಕಾನೂನು ಬಾಹಿರವಾಗಿ ಹಣ ಸಂಗ್ರಹಿಸಿದ್ದಾರೆಂದು ದೆಹಲಿಯ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸರು ಹರ್ಷ ಮಂದರ್‌ ಅವರ ಮೇಲೆ ಕಳೆದ ಫೆಬ್ರುವರಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದು, ಅದರ ಭಾಗವಾಗಿ ಇಂದು ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ.

ವಸಂತ್‌ ಕುಂಜ್‌ನಲ್ಲಿನ ಮಂದರ್ ಅವರ ಮನೆ ಹಾಗೂ ಅದ್ಚುನಿಯಲ್ಲಿನ ಸೆಂಟರ್‌ ಫಾರ್‌ ಇಕ್ವಿಟಿ ಸ್ಟಡೀಸ್‌ (ಸಿಇಎಸ್‌) ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಎರಡು ಮಕ್ಕಳ ಗೃಹಗಳು ಮಂದರ್‌ ಅವರ ಎನ್‌ಜಿಒ ವತಿಯಿಂದ ನಡೆಯುತ್ತಿವೆ.

ಜರ್ಮನಿಯ ಬರ್ಲಿನ್‌ನ ರಾಬರ್ಟ್ ಬಾಷ್ ಅಕಾಡೆಮಿಯಲ್ಲಿ ಆರು ತಿಂಗಳ ಫೆಲೋಶಿಪ್ ತೆಗೆದುಕೊಂಡಿರುವ ಮಂದರ್ ಮತ್ತು ಅವರ ಪತ್ನಿ, ಜರ್ಮನಿಗೆ ತೆರಳಿದ ಕೆಲವು ಗಂಟೆಗಳ ನಂತರ ದಾಳಿಗಳನ್ನು ನಡೆಸಲಾಗಿದೆ. ವಸಂತ್‌ ಕುಂಜ್‌ನ ನಿವಾಸದಲ್ಲಿ ಮಂದರ್‌ ಅವರ ಮಗಳು ಮತ್ತು ಅವರ ಅಳಿಯ ಇದ್ದರು.

ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್‌ಸಿಪಿಸಿಆರ್‌) ಸೂಚನೆಯಂತೆ ದೆಹಲಿ ಪೊಲೀಸರು ಎಫ್‌‌ಐಆರ್‌ ದಾಖಲಿಸಿದ್ದಾರೆ. ಮಂದರ್‌ ಅವರು ನಡೆಸುತ್ತಿರುವ ಎರಡು ಮಕ್ಕಳ ಮನೆಗಳಾದ ‘ಉಮೀದ್‌ ಅಮರ್‌ ಖರ್‌ (ಗುಂಡುಮಕ್ಕಳಿಗೆ), ಖುಷಿ ರೈನ್‌ಬೋ ಮನೆ (ಹೆಣ್ಣುಮಕ್ಕಳಿಗೆ)’ ಹಣಕಾಸಿನ ಅಕ್ರಮಗಳಲ್ಲಿ ಭಾಗಿಯಾಗಿವೆ ಎಂದು ಆರೋಪಿಸಲಾಗಿದೆ.

ಆಯೋಗದ ಆರೋಪವನ್ನು ಮಂದರ್‌ ಅಲ್ಲಗಳೆದಿದ್ದರು. ಜಾರಿ ನಿರ್ದೇಶನಾಲಯದ ದಾಳಿ ಸಂಬಂಧ ಟ್ವೀಟ್ ಮಾಡಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್‌, “ಹರ್ಷ ಮಂದರ್‌ ಮಧ್ಯಪ್ರದೇಶದಲ್ಲಿ ಐಎಎಸ್‌ ಕೇಡರ್‌ ಅಧಿಕಾರಿಯಾಗಿದ್ದಾಗಿನಿಂದ ಹಿಡಿದು ಸುಮಾರು ನಲವತ್ತು ವರ್ಷಗಳಿಂದ ನಾನು ಅವರು ನೋಡುತ್ತಿದ್ದೇನೆ. ಅವರು ಅತ್ಯಂತ ಸೂಕ್ಷ್ಮ ವ್ಯಕ್ತಿ” ಎಂದಿದ್ದಾರೆ.

ಮಂದರ್‌ ಪರ ಸಹಿ ಅಭಿಯಾನ

ಹರ್ಷ ಮಂದರ್‌ ಅವರ ಮನೆ ಹಾಗೂ ಇಕ್ವಿಟಿ ಸೆಂಟರ್‌ ಮೇಲೆ ಇ.ಡಿ. ದಾಳಿ ಮಾಡಿರುವುದನ್ನು ಅನೇಕರು ಖಂಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಸಹಿ ಸಂಗ್ರಹ ಅಭಿಯಾನ ಕೈಗೊಂಡಿದ್ದಾರೆ.

“ಹರ್ಷ ಮಂದರ್‌ ಮತ್ತು ಅವರ ಇಕ್ವಿಟಿ ಅಧ್ಯಯನ ಕೇಂದ್ರದ ಮೇಲೆ ಮೊದಲಿನಿಂದಲೂ ಕಿರುಕುಳ ನಡೆಯುತ್ತಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸುಳ್ಳು ಆಪಾದನೆಯನ್ನು ಹೊರಿಸಿದೆ. ಆರ್ಥಿಕ ಅಪರಾಧಗಳ ವಿಭಾಗ, ಐಟಿ ಇಲಾಖೆಯಿಂದ ನಿರಂತರ ಕಿರುಕುಳ ನೀಡಲಾಗುತ್ತಿದೆ” ಎಂದು ವಿಷಾದಿಸಿದ್ದಾರೆ.

ಎಂಕೆಎಸ್‌ಎಸ್‌ನ ಅರುಣ್‌ ರಾಯ್‌, ಯೋಜನಾ ಆಯೋಗದ ಮಾಜಿ ಸದಸ್ಯರಾದ ಡಾ.ಸೈಹಿದಾ ಅಮೀದ್‌, ಆರ್ಥಶಾಸ್ತ್ರಜ್ಞ ಪ್ರೊ.ಜೀನ್‌ ಡ್ರೋಜ್‌, ಪ್ರೊ.ಅಪೂರ್ವನಂದ್‌, ಹಿರಿಯ ವಕೀಲರಾದ ಇಂದಿರಾ ಜೈಸಿಂಗ್‌, ಪಿಯುಸಿಎಲ್‌ನ ಜನರಲ್ ಸೆಕರೆಟ್ರರಿ ಡಾ.ವಿ.ಸುರೇಶ್‌, ಪಿಯುಸಿಎಲ್‌ ಅಧ್ಯಕ್ಷ ರವಿಕಿರಣ್‌ ಜೈನ್‌ ಸೇರಿದಂತೆ ನೂರಾರು ಮಂದಿ ಸಹಿಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ನಿಮ್ಮ ಮಾತನ್ನು ಈಗ ಕೇಳುವುದಿಲ್ಲ: ಹರ್ಷಮಂದರ್‌ PIL ತಿರಸ್ಕರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...