Homeಮುಖಪುಟಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

ಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಸಮನ್ಸ್ ಜಾರಿ ಮಾಡಿದ ನಂತರ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿರುವ ಜಾರಿ ನಿರ್ದೇಶನಾಯಲದ (ಇಡಿ) ಅಧಿಕಾರಿಗಳು, ಸಹೋದರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಜುಲೈ 5, 2023 ರಂದು 72 ವರ್ಷದ ಮತ್ತು 67 ವರ್ಷದ ದಲಿತ ಸಹೋದರರಿಗೆ ಇಡಿ ನೀಡಿದ್ದ ನೋಟಿಸ್ ವಿಚಾರ ಆರು ತಿಂಗಳ ನಂತರ ಬಬೆಳಕಿಗೆ ಬಂದಿದ್ದು, ಬಡ ರೈತರಿಗೆ ನೋಟಿಸ್ ಕೊಟ್ಟಿದ್ದ ತನಿಖಾ ಸಂಸ್ಥೆ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ರಾಜಕೀಯ ಪಕ್ಷಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಇಡಿ ಟೀಕೆಗಳನ್ನು ಎದುರಿಸಬೇಕಾಯಿತು. ಈ ಬಗ್ಗೆ ವಿರೋಧ ಹೆಚ್ಚಾದ ನಂತರ ಎಚ್ಚೆತ್ತಿಕೊಂಡಿರುವ ಇಡಿ, ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ?

ದಲಿತ ಸಮುದಾಯಕ್ಕೆ ಸೇರಿದ ಎಸ್ ಕನ್ನಯ್ಯನ್ ಮತ್ತು ಅವರ ಸಹೋದರ ಎಸ್ ಕೃಷ್ಣನ್ ಅವರು ತಮ್ಮ ಜಮೀನಿನ ಸುತ್ತಲೂ ಅನಧಿಕೃತ ವಿದ್ಯುತ್ ಬೇಲಿಗಳನ್ನು ಸ್ಥಾಪಿಸಿದ್ದರು, ಇದರ ಪರಿಣಾಮವಾಗಿ ಎರಡು ಕಾಡೆಮ್ಮೆಗಳು ವಿದ್ಯುತ್ ಆಘಾತಕ್ಕೆ ಕಾರಣವಾಗಿವೆ. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 2(16), 2(36), ಮತ್ತು ಸೆಕ್ಷನ್ 51(1) ರೊಂದಿಗೆ ಸೆಕ್ಷನ್ 9 ರ ಅಡಿಯಲ್ಲಿ 2017 ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ, ಡಿಸೆಂಬರ್ 28, 2021 ರಂದು ವಿಚಾರಣಾ ನ್ಯಾಯಾಲಯವು ಕೃಷ್ಣನ್ ಮತ್ತು ಕನ್ನಯ್ಯನ್ ಇಬ್ಬರನ್ನೂ ಖುಲಾಸೆಗೊಳಿಸಿತು. ಈ ಪ್ರಕರಣದಲ್ಲಿ ಸಹೋದರರು ಖುಲಾಸೆಗೊಂಡ ನಂತರವೂ, ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಅರಣ್ಯ ಇಲಾಖೆಯಿಂದ ಇಡಿ ಹಳೆಯ ಎಫ್ಐಆರ್ ಪಡೆದುಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅನಾಮಧೇಯ ಪತ್ರವನ್ನು ಆಧರಿಸಿ ಮಾರ್ಚ್ 2022 ರಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರ ವಿರುದ್ದ ತನಿಖೆ ಪ್ರಾರಂಭಿಸಿತ್ತು.

ಜುಲೈ 5, 2023 ರಂದು ನೀಡಲಾದ ಆರು ತಿಂಗಳ ಹಳೆಯ ಸಮನ್ಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡಿದ ನಂತರ ವಿವಾದ ಭುಗಿಲೆದ್ದಿತು. ತಮಿಳುನಾಡಿನ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಸಮನ್ಸ್ ಮತ್ತು ಎಫ್ಐಆರ್‌ಗೆ ಸಮಾನವಾದ ಇಸಿಐಆರ್ (ಜಾರಿ ಪ್ರಕರಣದ ಮಾಹಿತಿ ವರದಿ) ಎರಡರಲ್ಲೂ ಇಬ್ಬರು ರೈತರ ಜಾತಿಯನ್ನು ಉಲ್ಲೇಖಿಸಿರುವ ಇಡಿ, ಅಪರಾಧ ಮಾಡಿದೆ ಎಂದು ಆಕ್ರೋಶ ಹೊರಹಾಕಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇಡಿ ಕ್ರಮಗಳು ಸ್ಥಳೀಯ ಬಿಜೆಪಿ ನಾಯಕ ಜಿ. ಗುಣಶೇಖರ್ ಅವರೊಂದಿಗೆ ರೈತ ಸಹೋದರರು ನಡೆಸುತ್ತಿರುವ ಪ್ರತ್ಯೇಕ ಕಾನೂನು ಹೋರಾಟದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ ಎಂದು ರೈತರ ಪರ ವಕೀಲ ಜಿ ಪ್ರವೀಣಾ ಹೇಳಿದ್ದಾರೆ. ಅತ್ತೂರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಗುಣಶೇಖರ್ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಜಮೀನು ಕಬಳಿಸಲು ರೈತರನ್ನು ಬೆದರಿಸುವ ತಂತ್ರವಾಗಿ ದೂರು ನೀಡಲಾಗಿದೆ ಎನ್ನಲಾಗಿದೆ.

ವಕೀಲ ಪ್ರವೀಣಾ ಅವರು ಇಡಿ ಉದ್ದೇಶಗಳನ್ನು ಪ್ರಶ್ನಿಸಿದ್ದಲ್ಲದೆ, ಇಡಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರೆ ನೀಡಿದರು. ಪ್ರಕರಣವನ್ನು ತನಿಖಾ ಸಂಸ್ಥೆಯ ನಿರ್ವಹಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

‘ತಮಿಳುನಾಡು ಪೊಲೀಸರು ಇಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ನಾವು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಅವರು ಹೇಳಿದರು.

‘ತನಿಖೆಯನ್ನು ಆರಂಭಿಸಿದ ಪೂರ್ವಾಪರ ಅಪರಾಧವನ್ನು ಪೂರ್ಣಗೊಳಿಸಿದ ಮೇಲೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ’ ಎಂದು ಇಡಿ ಸ್ಪಷ್ಟಪಡಿಸಿದೆ.

ಪಿಎಂಎಲ್ಎ ಪ್ರಕರಣಗಳಲ್ಲಿ ಅನುಸರಿಸಲಾದ “ನಿಯಮಿತ ಕಾರ್ಯವಿಧಾನ” ವಾಗಿ ಕನ್ನಯ್ಯನ್ ಮತ್ತು ಮತ್ತು ಕೃಷ್ಣನ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಯೊಬ್ಬರು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ. ‘ಅವರನ್ನು (ರೈತರನ್ನು) ಆ ದಿನ ನಾವು ವಿಚಾರಣೆ ನಡೆಸಿಲ್ಲ. ಬದಲಿಗೆ ಜುಲೈ 5 ರಂದು ರೈತರೊಂದಿಗೆ ಹಾಜರಾದ ವಕೀಲರು ಚೆನ್ನೈನ ಇಡಿ ಕಚೇರಿಯಲ್ಲಿ ಗದ್ದಲವನ್ನು ಸೃಷ್ಟಿಸಿದರು’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...