Homeಮುಖಪುಟಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

ಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಸಮನ್ಸ್ ಜಾರಿ ಮಾಡಿದ ನಂತರ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿರುವ ಜಾರಿ ನಿರ್ದೇಶನಾಯಲದ (ಇಡಿ) ಅಧಿಕಾರಿಗಳು, ಸಹೋದರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಜುಲೈ 5, 2023 ರಂದು 72 ವರ್ಷದ ಮತ್ತು 67 ವರ್ಷದ ದಲಿತ ಸಹೋದರರಿಗೆ ಇಡಿ ನೀಡಿದ್ದ ನೋಟಿಸ್ ವಿಚಾರ ಆರು ತಿಂಗಳ ನಂತರ ಬಬೆಳಕಿಗೆ ಬಂದಿದ್ದು, ಬಡ ರೈತರಿಗೆ ನೋಟಿಸ್ ಕೊಟ್ಟಿದ್ದ ತನಿಖಾ ಸಂಸ್ಥೆ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ರಾಜಕೀಯ ಪಕ್ಷಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಇಡಿ ಟೀಕೆಗಳನ್ನು ಎದುರಿಸಬೇಕಾಯಿತು. ಈ ಬಗ್ಗೆ ವಿರೋಧ ಹೆಚ್ಚಾದ ನಂತರ ಎಚ್ಚೆತ್ತಿಕೊಂಡಿರುವ ಇಡಿ, ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ?

ದಲಿತ ಸಮುದಾಯಕ್ಕೆ ಸೇರಿದ ಎಸ್ ಕನ್ನಯ್ಯನ್ ಮತ್ತು ಅವರ ಸಹೋದರ ಎಸ್ ಕೃಷ್ಣನ್ ಅವರು ತಮ್ಮ ಜಮೀನಿನ ಸುತ್ತಲೂ ಅನಧಿಕೃತ ವಿದ್ಯುತ್ ಬೇಲಿಗಳನ್ನು ಸ್ಥಾಪಿಸಿದ್ದರು, ಇದರ ಪರಿಣಾಮವಾಗಿ ಎರಡು ಕಾಡೆಮ್ಮೆಗಳು ವಿದ್ಯುತ್ ಆಘಾತಕ್ಕೆ ಕಾರಣವಾಗಿವೆ. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 2(16), 2(36), ಮತ್ತು ಸೆಕ್ಷನ್ 51(1) ರೊಂದಿಗೆ ಸೆಕ್ಷನ್ 9 ರ ಅಡಿಯಲ್ಲಿ 2017 ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ, ಡಿಸೆಂಬರ್ 28, 2021 ರಂದು ವಿಚಾರಣಾ ನ್ಯಾಯಾಲಯವು ಕೃಷ್ಣನ್ ಮತ್ತು ಕನ್ನಯ್ಯನ್ ಇಬ್ಬರನ್ನೂ ಖುಲಾಸೆಗೊಳಿಸಿತು. ಈ ಪ್ರಕರಣದಲ್ಲಿ ಸಹೋದರರು ಖುಲಾಸೆಗೊಂಡ ನಂತರವೂ, ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಅರಣ್ಯ ಇಲಾಖೆಯಿಂದ ಇಡಿ ಹಳೆಯ ಎಫ್ಐಆರ್ ಪಡೆದುಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅನಾಮಧೇಯ ಪತ್ರವನ್ನು ಆಧರಿಸಿ ಮಾರ್ಚ್ 2022 ರಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರ ವಿರುದ್ದ ತನಿಖೆ ಪ್ರಾರಂಭಿಸಿತ್ತು.

ಜುಲೈ 5, 2023 ರಂದು ನೀಡಲಾದ ಆರು ತಿಂಗಳ ಹಳೆಯ ಸಮನ್ಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡಿದ ನಂತರ ವಿವಾದ ಭುಗಿಲೆದ್ದಿತು. ತಮಿಳುನಾಡಿನ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಸಮನ್ಸ್ ಮತ್ತು ಎಫ್ಐಆರ್‌ಗೆ ಸಮಾನವಾದ ಇಸಿಐಆರ್ (ಜಾರಿ ಪ್ರಕರಣದ ಮಾಹಿತಿ ವರದಿ) ಎರಡರಲ್ಲೂ ಇಬ್ಬರು ರೈತರ ಜಾತಿಯನ್ನು ಉಲ್ಲೇಖಿಸಿರುವ ಇಡಿ, ಅಪರಾಧ ಮಾಡಿದೆ ಎಂದು ಆಕ್ರೋಶ ಹೊರಹಾಕಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇಡಿ ಕ್ರಮಗಳು ಸ್ಥಳೀಯ ಬಿಜೆಪಿ ನಾಯಕ ಜಿ. ಗುಣಶೇಖರ್ ಅವರೊಂದಿಗೆ ರೈತ ಸಹೋದರರು ನಡೆಸುತ್ತಿರುವ ಪ್ರತ್ಯೇಕ ಕಾನೂನು ಹೋರಾಟದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ ಎಂದು ರೈತರ ಪರ ವಕೀಲ ಜಿ ಪ್ರವೀಣಾ ಹೇಳಿದ್ದಾರೆ. ಅತ್ತೂರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಗುಣಶೇಖರ್ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಜಮೀನು ಕಬಳಿಸಲು ರೈತರನ್ನು ಬೆದರಿಸುವ ತಂತ್ರವಾಗಿ ದೂರು ನೀಡಲಾಗಿದೆ ಎನ್ನಲಾಗಿದೆ.

ವಕೀಲ ಪ್ರವೀಣಾ ಅವರು ಇಡಿ ಉದ್ದೇಶಗಳನ್ನು ಪ್ರಶ್ನಿಸಿದ್ದಲ್ಲದೆ, ಇಡಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರೆ ನೀಡಿದರು. ಪ್ರಕರಣವನ್ನು ತನಿಖಾ ಸಂಸ್ಥೆಯ ನಿರ್ವಹಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

‘ತಮಿಳುನಾಡು ಪೊಲೀಸರು ಇಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ನಾವು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಅವರು ಹೇಳಿದರು.

‘ತನಿಖೆಯನ್ನು ಆರಂಭಿಸಿದ ಪೂರ್ವಾಪರ ಅಪರಾಧವನ್ನು ಪೂರ್ಣಗೊಳಿಸಿದ ಮೇಲೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ’ ಎಂದು ಇಡಿ ಸ್ಪಷ್ಟಪಡಿಸಿದೆ.

ಪಿಎಂಎಲ್ಎ ಪ್ರಕರಣಗಳಲ್ಲಿ ಅನುಸರಿಸಲಾದ “ನಿಯಮಿತ ಕಾರ್ಯವಿಧಾನ” ವಾಗಿ ಕನ್ನಯ್ಯನ್ ಮತ್ತು ಮತ್ತು ಕೃಷ್ಣನ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಯೊಬ್ಬರು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ. ‘ಅವರನ್ನು (ರೈತರನ್ನು) ಆ ದಿನ ನಾವು ವಿಚಾರಣೆ ನಡೆಸಿಲ್ಲ. ಬದಲಿಗೆ ಜುಲೈ 5 ರಂದು ರೈತರೊಂದಿಗೆ ಹಾಜರಾದ ವಕೀಲರು ಚೆನ್ನೈನ ಇಡಿ ಕಚೇರಿಯಲ್ಲಿ ಗದ್ದಲವನ್ನು ಸೃಷ್ಟಿಸಿದರು’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...