Homeಮುಖಪುಟಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

ಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಸಮನ್ಸ್ ಜಾರಿ ಮಾಡಿದ ನಂತರ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿರುವ ಜಾರಿ ನಿರ್ದೇಶನಾಯಲದ (ಇಡಿ) ಅಧಿಕಾರಿಗಳು, ಸಹೋದರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಜುಲೈ 5, 2023 ರಂದು 72 ವರ್ಷದ ಮತ್ತು 67 ವರ್ಷದ ದಲಿತ ಸಹೋದರರಿಗೆ ಇಡಿ ನೀಡಿದ್ದ ನೋಟಿಸ್ ವಿಚಾರ ಆರು ತಿಂಗಳ ನಂತರ ಬಬೆಳಕಿಗೆ ಬಂದಿದ್ದು, ಬಡ ರೈತರಿಗೆ ನೋಟಿಸ್ ಕೊಟ್ಟಿದ್ದ ತನಿಖಾ ಸಂಸ್ಥೆ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ರಾಜಕೀಯ ಪಕ್ಷಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಇಡಿ ಟೀಕೆಗಳನ್ನು ಎದುರಿಸಬೇಕಾಯಿತು. ಈ ಬಗ್ಗೆ ವಿರೋಧ ಹೆಚ್ಚಾದ ನಂತರ ಎಚ್ಚೆತ್ತಿಕೊಂಡಿರುವ ಇಡಿ, ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ?

ದಲಿತ ಸಮುದಾಯಕ್ಕೆ ಸೇರಿದ ಎಸ್ ಕನ್ನಯ್ಯನ್ ಮತ್ತು ಅವರ ಸಹೋದರ ಎಸ್ ಕೃಷ್ಣನ್ ಅವರು ತಮ್ಮ ಜಮೀನಿನ ಸುತ್ತಲೂ ಅನಧಿಕೃತ ವಿದ್ಯುತ್ ಬೇಲಿಗಳನ್ನು ಸ್ಥಾಪಿಸಿದ್ದರು, ಇದರ ಪರಿಣಾಮವಾಗಿ ಎರಡು ಕಾಡೆಮ್ಮೆಗಳು ವಿದ್ಯುತ್ ಆಘಾತಕ್ಕೆ ಕಾರಣವಾಗಿವೆ. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 2(16), 2(36), ಮತ್ತು ಸೆಕ್ಷನ್ 51(1) ರೊಂದಿಗೆ ಸೆಕ್ಷನ್ 9 ರ ಅಡಿಯಲ್ಲಿ 2017 ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ, ಡಿಸೆಂಬರ್ 28, 2021 ರಂದು ವಿಚಾರಣಾ ನ್ಯಾಯಾಲಯವು ಕೃಷ್ಣನ್ ಮತ್ತು ಕನ್ನಯ್ಯನ್ ಇಬ್ಬರನ್ನೂ ಖುಲಾಸೆಗೊಳಿಸಿತು. ಈ ಪ್ರಕರಣದಲ್ಲಿ ಸಹೋದರರು ಖುಲಾಸೆಗೊಂಡ ನಂತರವೂ, ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಅರಣ್ಯ ಇಲಾಖೆಯಿಂದ ಇಡಿ ಹಳೆಯ ಎಫ್ಐಆರ್ ಪಡೆದುಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅನಾಮಧೇಯ ಪತ್ರವನ್ನು ಆಧರಿಸಿ ಮಾರ್ಚ್ 2022 ರಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರ ವಿರುದ್ದ ತನಿಖೆ ಪ್ರಾರಂಭಿಸಿತ್ತು.

ಜುಲೈ 5, 2023 ರಂದು ನೀಡಲಾದ ಆರು ತಿಂಗಳ ಹಳೆಯ ಸಮನ್ಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡಿದ ನಂತರ ವಿವಾದ ಭುಗಿಲೆದ್ದಿತು. ತಮಿಳುನಾಡಿನ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಸಮನ್ಸ್ ಮತ್ತು ಎಫ್ಐಆರ್‌ಗೆ ಸಮಾನವಾದ ಇಸಿಐಆರ್ (ಜಾರಿ ಪ್ರಕರಣದ ಮಾಹಿತಿ ವರದಿ) ಎರಡರಲ್ಲೂ ಇಬ್ಬರು ರೈತರ ಜಾತಿಯನ್ನು ಉಲ್ಲೇಖಿಸಿರುವ ಇಡಿ, ಅಪರಾಧ ಮಾಡಿದೆ ಎಂದು ಆಕ್ರೋಶ ಹೊರಹಾಕಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇಡಿ ಕ್ರಮಗಳು ಸ್ಥಳೀಯ ಬಿಜೆಪಿ ನಾಯಕ ಜಿ. ಗುಣಶೇಖರ್ ಅವರೊಂದಿಗೆ ರೈತ ಸಹೋದರರು ನಡೆಸುತ್ತಿರುವ ಪ್ರತ್ಯೇಕ ಕಾನೂನು ಹೋರಾಟದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ ಎಂದು ರೈತರ ಪರ ವಕೀಲ ಜಿ ಪ್ರವೀಣಾ ಹೇಳಿದ್ದಾರೆ. ಅತ್ತೂರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಗುಣಶೇಖರ್ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಜಮೀನು ಕಬಳಿಸಲು ರೈತರನ್ನು ಬೆದರಿಸುವ ತಂತ್ರವಾಗಿ ದೂರು ನೀಡಲಾಗಿದೆ ಎನ್ನಲಾಗಿದೆ.

ವಕೀಲ ಪ್ರವೀಣಾ ಅವರು ಇಡಿ ಉದ್ದೇಶಗಳನ್ನು ಪ್ರಶ್ನಿಸಿದ್ದಲ್ಲದೆ, ಇಡಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರೆ ನೀಡಿದರು. ಪ್ರಕರಣವನ್ನು ತನಿಖಾ ಸಂಸ್ಥೆಯ ನಿರ್ವಹಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

‘ತಮಿಳುನಾಡು ಪೊಲೀಸರು ಇಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ನಾವು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಅವರು ಹೇಳಿದರು.

‘ತನಿಖೆಯನ್ನು ಆರಂಭಿಸಿದ ಪೂರ್ವಾಪರ ಅಪರಾಧವನ್ನು ಪೂರ್ಣಗೊಳಿಸಿದ ಮೇಲೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ’ ಎಂದು ಇಡಿ ಸ್ಪಷ್ಟಪಡಿಸಿದೆ.

ಪಿಎಂಎಲ್ಎ ಪ್ರಕರಣಗಳಲ್ಲಿ ಅನುಸರಿಸಲಾದ “ನಿಯಮಿತ ಕಾರ್ಯವಿಧಾನ” ವಾಗಿ ಕನ್ನಯ್ಯನ್ ಮತ್ತು ಮತ್ತು ಕೃಷ್ಣನ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಯೊಬ್ಬರು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ. ‘ಅವರನ್ನು (ರೈತರನ್ನು) ಆ ದಿನ ನಾವು ವಿಚಾರಣೆ ನಡೆಸಿಲ್ಲ. ಬದಲಿಗೆ ಜುಲೈ 5 ರಂದು ರೈತರೊಂದಿಗೆ ಹಾಜರಾದ ವಕೀಲರು ಚೆನ್ನೈನ ಇಡಿ ಕಚೇರಿಯಲ್ಲಿ ಗದ್ದಲವನ್ನು ಸೃಷ್ಟಿಸಿದರು’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...