Homeಮುಖಪುಟಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

ಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಸಮನ್ಸ್ ಜಾರಿ ಮಾಡಿದ ನಂತರ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿರುವ ಜಾರಿ ನಿರ್ದೇಶನಾಯಲದ (ಇಡಿ) ಅಧಿಕಾರಿಗಳು, ಸಹೋದರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಜುಲೈ 5, 2023 ರಂದು 72 ವರ್ಷದ ಮತ್ತು 67 ವರ್ಷದ ದಲಿತ ಸಹೋದರರಿಗೆ ಇಡಿ ನೀಡಿದ್ದ ನೋಟಿಸ್ ವಿಚಾರ ಆರು ತಿಂಗಳ ನಂತರ ಬಬೆಳಕಿಗೆ ಬಂದಿದ್ದು, ಬಡ ರೈತರಿಗೆ ನೋಟಿಸ್ ಕೊಟ್ಟಿದ್ದ ತನಿಖಾ ಸಂಸ್ಥೆ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ರಾಜಕೀಯ ಪಕ್ಷಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಇಡಿ ಟೀಕೆಗಳನ್ನು ಎದುರಿಸಬೇಕಾಯಿತು. ಈ ಬಗ್ಗೆ ವಿರೋಧ ಹೆಚ್ಚಾದ ನಂತರ ಎಚ್ಚೆತ್ತಿಕೊಂಡಿರುವ ಇಡಿ, ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ?

ದಲಿತ ಸಮುದಾಯಕ್ಕೆ ಸೇರಿದ ಎಸ್ ಕನ್ನಯ್ಯನ್ ಮತ್ತು ಅವರ ಸಹೋದರ ಎಸ್ ಕೃಷ್ಣನ್ ಅವರು ತಮ್ಮ ಜಮೀನಿನ ಸುತ್ತಲೂ ಅನಧಿಕೃತ ವಿದ್ಯುತ್ ಬೇಲಿಗಳನ್ನು ಸ್ಥಾಪಿಸಿದ್ದರು, ಇದರ ಪರಿಣಾಮವಾಗಿ ಎರಡು ಕಾಡೆಮ್ಮೆಗಳು ವಿದ್ಯುತ್ ಆಘಾತಕ್ಕೆ ಕಾರಣವಾಗಿವೆ. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 2(16), 2(36), ಮತ್ತು ಸೆಕ್ಷನ್ 51(1) ರೊಂದಿಗೆ ಸೆಕ್ಷನ್ 9 ರ ಅಡಿಯಲ್ಲಿ 2017 ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ, ಡಿಸೆಂಬರ್ 28, 2021 ರಂದು ವಿಚಾರಣಾ ನ್ಯಾಯಾಲಯವು ಕೃಷ್ಣನ್ ಮತ್ತು ಕನ್ನಯ್ಯನ್ ಇಬ್ಬರನ್ನೂ ಖುಲಾಸೆಗೊಳಿಸಿತು. ಈ ಪ್ರಕರಣದಲ್ಲಿ ಸಹೋದರರು ಖುಲಾಸೆಗೊಂಡ ನಂತರವೂ, ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಅರಣ್ಯ ಇಲಾಖೆಯಿಂದ ಇಡಿ ಹಳೆಯ ಎಫ್ಐಆರ್ ಪಡೆದುಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅನಾಮಧೇಯ ಪತ್ರವನ್ನು ಆಧರಿಸಿ ಮಾರ್ಚ್ 2022 ರಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರ ವಿರುದ್ದ ತನಿಖೆ ಪ್ರಾರಂಭಿಸಿತ್ತು.

ಜುಲೈ 5, 2023 ರಂದು ನೀಡಲಾದ ಆರು ತಿಂಗಳ ಹಳೆಯ ಸಮನ್ಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡಿದ ನಂತರ ವಿವಾದ ಭುಗಿಲೆದ್ದಿತು. ತಮಿಳುನಾಡಿನ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಸಮನ್ಸ್ ಮತ್ತು ಎಫ್ಐಆರ್‌ಗೆ ಸಮಾನವಾದ ಇಸಿಐಆರ್ (ಜಾರಿ ಪ್ರಕರಣದ ಮಾಹಿತಿ ವರದಿ) ಎರಡರಲ್ಲೂ ಇಬ್ಬರು ರೈತರ ಜಾತಿಯನ್ನು ಉಲ್ಲೇಖಿಸಿರುವ ಇಡಿ, ಅಪರಾಧ ಮಾಡಿದೆ ಎಂದು ಆಕ್ರೋಶ ಹೊರಹಾಕಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇಡಿ ಕ್ರಮಗಳು ಸ್ಥಳೀಯ ಬಿಜೆಪಿ ನಾಯಕ ಜಿ. ಗುಣಶೇಖರ್ ಅವರೊಂದಿಗೆ ರೈತ ಸಹೋದರರು ನಡೆಸುತ್ತಿರುವ ಪ್ರತ್ಯೇಕ ಕಾನೂನು ಹೋರಾಟದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ ಎಂದು ರೈತರ ಪರ ವಕೀಲ ಜಿ ಪ್ರವೀಣಾ ಹೇಳಿದ್ದಾರೆ. ಅತ್ತೂರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಗುಣಶೇಖರ್ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಜಮೀನು ಕಬಳಿಸಲು ರೈತರನ್ನು ಬೆದರಿಸುವ ತಂತ್ರವಾಗಿ ದೂರು ನೀಡಲಾಗಿದೆ ಎನ್ನಲಾಗಿದೆ.

ವಕೀಲ ಪ್ರವೀಣಾ ಅವರು ಇಡಿ ಉದ್ದೇಶಗಳನ್ನು ಪ್ರಶ್ನಿಸಿದ್ದಲ್ಲದೆ, ಇಡಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರೆ ನೀಡಿದರು. ಪ್ರಕರಣವನ್ನು ತನಿಖಾ ಸಂಸ್ಥೆಯ ನಿರ್ವಹಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

‘ತಮಿಳುನಾಡು ಪೊಲೀಸರು ಇಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ನಾವು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಅವರು ಹೇಳಿದರು.

‘ತನಿಖೆಯನ್ನು ಆರಂಭಿಸಿದ ಪೂರ್ವಾಪರ ಅಪರಾಧವನ್ನು ಪೂರ್ಣಗೊಳಿಸಿದ ಮೇಲೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ’ ಎಂದು ಇಡಿ ಸ್ಪಷ್ಟಪಡಿಸಿದೆ.

ಪಿಎಂಎಲ್ಎ ಪ್ರಕರಣಗಳಲ್ಲಿ ಅನುಸರಿಸಲಾದ “ನಿಯಮಿತ ಕಾರ್ಯವಿಧಾನ” ವಾಗಿ ಕನ್ನಯ್ಯನ್ ಮತ್ತು ಮತ್ತು ಕೃಷ್ಣನ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಯೊಬ್ಬರು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ. ‘ಅವರನ್ನು (ರೈತರನ್ನು) ಆ ದಿನ ನಾವು ವಿಚಾರಣೆ ನಡೆಸಿಲ್ಲ. ಬದಲಿಗೆ ಜುಲೈ 5 ರಂದು ರೈತರೊಂದಿಗೆ ಹಾಜರಾದ ವಕೀಲರು ಚೆನ್ನೈನ ಇಡಿ ಕಚೇರಿಯಲ್ಲಿ ಗದ್ದಲವನ್ನು ಸೃಷ್ಟಿಸಿದರು’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...