Homeಮುಖಪುಟಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

ಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಸಮನ್ಸ್ ಜಾರಿ ಮಾಡಿದ ನಂತರ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿರುವ ಜಾರಿ ನಿರ್ದೇಶನಾಯಲದ (ಇಡಿ) ಅಧಿಕಾರಿಗಳು, ಸಹೋದರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಜುಲೈ 5, 2023 ರಂದು 72 ವರ್ಷದ ಮತ್ತು 67 ವರ್ಷದ ದಲಿತ ಸಹೋದರರಿಗೆ ಇಡಿ ನೀಡಿದ್ದ ನೋಟಿಸ್ ವಿಚಾರ ಆರು ತಿಂಗಳ ನಂತರ ಬಬೆಳಕಿಗೆ ಬಂದಿದ್ದು, ಬಡ ರೈತರಿಗೆ ನೋಟಿಸ್ ಕೊಟ್ಟಿದ್ದ ತನಿಖಾ ಸಂಸ್ಥೆ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ರಾಜಕೀಯ ಪಕ್ಷಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಇಡಿ ಟೀಕೆಗಳನ್ನು ಎದುರಿಸಬೇಕಾಯಿತು. ಈ ಬಗ್ಗೆ ವಿರೋಧ ಹೆಚ್ಚಾದ ನಂತರ ಎಚ್ಚೆತ್ತಿಕೊಂಡಿರುವ ಇಡಿ, ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ?

ದಲಿತ ಸಮುದಾಯಕ್ಕೆ ಸೇರಿದ ಎಸ್ ಕನ್ನಯ್ಯನ್ ಮತ್ತು ಅವರ ಸಹೋದರ ಎಸ್ ಕೃಷ್ಣನ್ ಅವರು ತಮ್ಮ ಜಮೀನಿನ ಸುತ್ತಲೂ ಅನಧಿಕೃತ ವಿದ್ಯುತ್ ಬೇಲಿಗಳನ್ನು ಸ್ಥಾಪಿಸಿದ್ದರು, ಇದರ ಪರಿಣಾಮವಾಗಿ ಎರಡು ಕಾಡೆಮ್ಮೆಗಳು ವಿದ್ಯುತ್ ಆಘಾತಕ್ಕೆ ಕಾರಣವಾಗಿವೆ. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 2(16), 2(36), ಮತ್ತು ಸೆಕ್ಷನ್ 51(1) ರೊಂದಿಗೆ ಸೆಕ್ಷನ್ 9 ರ ಅಡಿಯಲ್ಲಿ 2017 ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ, ಡಿಸೆಂಬರ್ 28, 2021 ರಂದು ವಿಚಾರಣಾ ನ್ಯಾಯಾಲಯವು ಕೃಷ್ಣನ್ ಮತ್ತು ಕನ್ನಯ್ಯನ್ ಇಬ್ಬರನ್ನೂ ಖುಲಾಸೆಗೊಳಿಸಿತು. ಈ ಪ್ರಕರಣದಲ್ಲಿ ಸಹೋದರರು ಖುಲಾಸೆಗೊಂಡ ನಂತರವೂ, ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಅರಣ್ಯ ಇಲಾಖೆಯಿಂದ ಇಡಿ ಹಳೆಯ ಎಫ್ಐಆರ್ ಪಡೆದುಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅನಾಮಧೇಯ ಪತ್ರವನ್ನು ಆಧರಿಸಿ ಮಾರ್ಚ್ 2022 ರಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರ ವಿರುದ್ದ ತನಿಖೆ ಪ್ರಾರಂಭಿಸಿತ್ತು.

ಜುಲೈ 5, 2023 ರಂದು ನೀಡಲಾದ ಆರು ತಿಂಗಳ ಹಳೆಯ ಸಮನ್ಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡಿದ ನಂತರ ವಿವಾದ ಭುಗಿಲೆದ್ದಿತು. ತಮಿಳುನಾಡಿನ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಸಮನ್ಸ್ ಮತ್ತು ಎಫ್ಐಆರ್‌ಗೆ ಸಮಾನವಾದ ಇಸಿಐಆರ್ (ಜಾರಿ ಪ್ರಕರಣದ ಮಾಹಿತಿ ವರದಿ) ಎರಡರಲ್ಲೂ ಇಬ್ಬರು ರೈತರ ಜಾತಿಯನ್ನು ಉಲ್ಲೇಖಿಸಿರುವ ಇಡಿ, ಅಪರಾಧ ಮಾಡಿದೆ ಎಂದು ಆಕ್ರೋಶ ಹೊರಹಾಕಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇಡಿ ಕ್ರಮಗಳು ಸ್ಥಳೀಯ ಬಿಜೆಪಿ ನಾಯಕ ಜಿ. ಗುಣಶೇಖರ್ ಅವರೊಂದಿಗೆ ರೈತ ಸಹೋದರರು ನಡೆಸುತ್ತಿರುವ ಪ್ರತ್ಯೇಕ ಕಾನೂನು ಹೋರಾಟದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ ಎಂದು ರೈತರ ಪರ ವಕೀಲ ಜಿ ಪ್ರವೀಣಾ ಹೇಳಿದ್ದಾರೆ. ಅತ್ತೂರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಗುಣಶೇಖರ್ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಜಮೀನು ಕಬಳಿಸಲು ರೈತರನ್ನು ಬೆದರಿಸುವ ತಂತ್ರವಾಗಿ ದೂರು ನೀಡಲಾಗಿದೆ ಎನ್ನಲಾಗಿದೆ.

ವಕೀಲ ಪ್ರವೀಣಾ ಅವರು ಇಡಿ ಉದ್ದೇಶಗಳನ್ನು ಪ್ರಶ್ನಿಸಿದ್ದಲ್ಲದೆ, ಇಡಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರೆ ನೀಡಿದರು. ಪ್ರಕರಣವನ್ನು ತನಿಖಾ ಸಂಸ್ಥೆಯ ನಿರ್ವಹಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

‘ತಮಿಳುನಾಡು ಪೊಲೀಸರು ಇಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ನಾವು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಅವರು ಹೇಳಿದರು.

‘ತನಿಖೆಯನ್ನು ಆರಂಭಿಸಿದ ಪೂರ್ವಾಪರ ಅಪರಾಧವನ್ನು ಪೂರ್ಣಗೊಳಿಸಿದ ಮೇಲೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ’ ಎಂದು ಇಡಿ ಸ್ಪಷ್ಟಪಡಿಸಿದೆ.

ಪಿಎಂಎಲ್ಎ ಪ್ರಕರಣಗಳಲ್ಲಿ ಅನುಸರಿಸಲಾದ “ನಿಯಮಿತ ಕಾರ್ಯವಿಧಾನ” ವಾಗಿ ಕನ್ನಯ್ಯನ್ ಮತ್ತು ಮತ್ತು ಕೃಷ್ಣನ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಯೊಬ್ಬರು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ. ‘ಅವರನ್ನು (ರೈತರನ್ನು) ಆ ದಿನ ನಾವು ವಿಚಾರಣೆ ನಡೆಸಿಲ್ಲ. ಬದಲಿಗೆ ಜುಲೈ 5 ರಂದು ರೈತರೊಂದಿಗೆ ಹಾಜರಾದ ವಕೀಲರು ಚೆನ್ನೈನ ಇಡಿ ಕಚೇರಿಯಲ್ಲಿ ಗದ್ದಲವನ್ನು ಸೃಷ್ಟಿಸಿದರು’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...