Homeಮುಖಪುಟಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

ಜನಾಕ್ರೋಶಕ್ಕೆ ಮಣಿದ ಜಾರಿ ನಿರ್ದೇಶನಾಲಯ; ದಲಿತ ರೈತರ ವಿರುದ್ಧದ ಕೇಸ್ ವಾಪಸ್!

- Advertisement -
- Advertisement -

ತಮಿಳುನಾಡಿನ ಇಬ್ಬರು ದಲಿತ ರೈತರಿಗೆ ಸಮನ್ಸ್ ಜಾರಿ ಮಾಡಿದ ನಂತರ ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿರುವ ಜಾರಿ ನಿರ್ದೇಶನಾಯಲದ (ಇಡಿ) ಅಧಿಕಾರಿಗಳು, ಸಹೋದರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಕ್ತಾಯಗೊಳಿಸಲು ನಿರ್ಧರಿಸಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಜುಲೈ 5, 2023 ರಂದು 72 ವರ್ಷದ ಮತ್ತು 67 ವರ್ಷದ ದಲಿತ ಸಹೋದರರಿಗೆ ಇಡಿ ನೀಡಿದ್ದ ನೋಟಿಸ್ ವಿಚಾರ ಆರು ತಿಂಗಳ ನಂತರ ಬಬೆಳಕಿಗೆ ಬಂದಿದ್ದು, ಬಡ ರೈತರಿಗೆ ನೋಟಿಸ್ ಕೊಟ್ಟಿದ್ದ ತನಿಖಾ ಸಂಸ್ಥೆ ವಿರುದ್ದ ಆಕ್ರೋಶ ವ್ಯಕ್ತವಾಗಿತ್ತು. ರಾಜಕೀಯ ಪಕ್ಷಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರಿಂದ ಇಡಿ ಟೀಕೆಗಳನ್ನು ಎದುರಿಸಬೇಕಾಯಿತು. ಈ ಬಗ್ಗೆ ವಿರೋಧ ಹೆಚ್ಚಾದ ನಂತರ ಎಚ್ಚೆತ್ತಿಕೊಂಡಿರುವ ಇಡಿ, ಪ್ರಕರಣ ವಾಪಸ್ ಪಡೆಯಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆ?

ದಲಿತ ಸಮುದಾಯಕ್ಕೆ ಸೇರಿದ ಎಸ್ ಕನ್ನಯ್ಯನ್ ಮತ್ತು ಅವರ ಸಹೋದರ ಎಸ್ ಕೃಷ್ಣನ್ ಅವರು ತಮ್ಮ ಜಮೀನಿನ ಸುತ್ತಲೂ ಅನಧಿಕೃತ ವಿದ್ಯುತ್ ಬೇಲಿಗಳನ್ನು ಸ್ಥಾಪಿಸಿದ್ದರು, ಇದರ ಪರಿಣಾಮವಾಗಿ ಎರಡು ಕಾಡೆಮ್ಮೆಗಳು ವಿದ್ಯುತ್ ಆಘಾತಕ್ಕೆ ಕಾರಣವಾಗಿವೆ. ವನ್ಯಜೀವಿ (ರಕ್ಷಣೆ) ಕಾಯಿದೆ, 1972 ರ ಸೆಕ್ಷನ್ 2(16), 2(36), ಮತ್ತು ಸೆಕ್ಷನ್ 51(1) ರೊಂದಿಗೆ ಸೆಕ್ಷನ್ 9 ರ ಅಡಿಯಲ್ಲಿ 2017 ರಲ್ಲಿ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಪ್ರಕರಣದಲ್ಲಿ, ಡಿಸೆಂಬರ್ 28, 2021 ರಂದು ವಿಚಾರಣಾ ನ್ಯಾಯಾಲಯವು ಕೃಷ್ಣನ್ ಮತ್ತು ಕನ್ನಯ್ಯನ್ ಇಬ್ಬರನ್ನೂ ಖುಲಾಸೆಗೊಳಿಸಿತು. ಈ ಪ್ರಕರಣದಲ್ಲಿ ಸಹೋದರರು ಖುಲಾಸೆಗೊಂಡ ನಂತರವೂ, ಘಟನೆಗೆ ಸಂಬಂಧಿಸಿದಂತೆ ತಮಿಳುನಾಡು ಅರಣ್ಯ ಇಲಾಖೆಯಿಂದ ಇಡಿ ಹಳೆಯ ಎಫ್ಐಆರ್ ಪಡೆದುಕೊಂಡಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ಅನಾಮಧೇಯ ಪತ್ರವನ್ನು ಆಧರಿಸಿ ಮಾರ್ಚ್ 2022 ರಲ್ಲಿ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಇಬ್ಬರ ವಿರುದ್ದ ತನಿಖೆ ಪ್ರಾರಂಭಿಸಿತ್ತು.

ಜುಲೈ 5, 2023 ರಂದು ನೀಡಲಾದ ಆರು ತಿಂಗಳ ಹಳೆಯ ಸಮನ್ಸ್ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹರಿದಾಡಿದ ನಂತರ ವಿವಾದ ಭುಗಿಲೆದ್ದಿತು. ತಮಿಳುನಾಡಿನ ರಾಜಕೀಯ ಪಕ್ಷಗಳು ಮತ್ತು ಕಾರ್ಯಕರ್ತರು ಸಮನ್ಸ್ ಮತ್ತು ಎಫ್ಐಆರ್‌ಗೆ ಸಮಾನವಾದ ಇಸಿಐಆರ್ (ಜಾರಿ ಪ್ರಕರಣದ ಮಾಹಿತಿ ವರದಿ) ಎರಡರಲ್ಲೂ ಇಬ್ಬರು ರೈತರ ಜಾತಿಯನ್ನು ಉಲ್ಲೇಖಿಸಿರುವ ಇಡಿ, ಅಪರಾಧ ಮಾಡಿದೆ ಎಂದು ಆಕ್ರೋಶ ಹೊರಹಾಕಿ, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು.

ಇಡಿ ಕ್ರಮಗಳು ಸ್ಥಳೀಯ ಬಿಜೆಪಿ ನಾಯಕ ಜಿ. ಗುಣಶೇಖರ್ ಅವರೊಂದಿಗೆ ರೈತ ಸಹೋದರರು ನಡೆಸುತ್ತಿರುವ ಪ್ರತ್ಯೇಕ ಕಾನೂನು ಹೋರಾಟದ ಮೇಲೆ ಒತ್ತಡ ಹೇರುವ ಪ್ರಯತ್ನವಾಗಿದೆ ಎಂದು ರೈತರ ಪರ ವಕೀಲ ಜಿ ಪ್ರವೀಣಾ ಹೇಳಿದ್ದಾರೆ. ಅತ್ತೂರಿನಲ್ಲಿ ರೈತರ ಭೂಮಿಯನ್ನು ವಶಪಡಿಸಿಕೊಳ್ಳಲು ಗುಣಶೇಖರ್ ಪ್ರಯತ್ನಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಜಮೀನು ಕಬಳಿಸಲು ರೈತರನ್ನು ಬೆದರಿಸುವ ತಂತ್ರವಾಗಿ ದೂರು ನೀಡಲಾಗಿದೆ ಎನ್ನಲಾಗಿದೆ.

ವಕೀಲ ಪ್ರವೀಣಾ ಅವರು ಇಡಿ ಉದ್ದೇಶಗಳನ್ನು ಪ್ರಶ್ನಿಸಿದ್ದಲ್ಲದೆ, ಇಡಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರೆ ನೀಡಿದರು. ಪ್ರಕರಣವನ್ನು ತನಿಖಾ ಸಂಸ್ಥೆಯ ನಿರ್ವಹಿಸುತ್ತಿರುವ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದರು.

‘ತಮಿಳುನಾಡು ಪೊಲೀಸರು ಇಡಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು. ಅವರನ್ನು ಬಂಧಿಸಬೇಕು ಎಂದು ನಾವು ಬಯಸುತ್ತೇವೆ. ನಾವು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ’ ಎಂದು ಅವರು ಹೇಳಿದರು.

‘ತನಿಖೆಯನ್ನು ಆರಂಭಿಸಿದ ಪೂರ್ವಾಪರ ಅಪರಾಧವನ್ನು ಪೂರ್ಣಗೊಳಿಸಿದ ಮೇಲೆ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ’ ಎಂದು ಇಡಿ ಸ್ಪಷ್ಟಪಡಿಸಿದೆ.

ಪಿಎಂಎಲ್ಎ ಪ್ರಕರಣಗಳಲ್ಲಿ ಅನುಸರಿಸಲಾದ “ನಿಯಮಿತ ಕಾರ್ಯವಿಧಾನ” ವಾಗಿ ಕನ್ನಯ್ಯನ್ ಮತ್ತು ಮತ್ತು ಕೃಷ್ಣನ್ ಅವರಿಗೆ ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಯೊಬ್ಬರು ತಮ್ಮ ನಡೆ ಸಮರ್ಥಿಸಿಕೊಂಡಿದ್ದಾರೆ. ‘ಅವರನ್ನು (ರೈತರನ್ನು) ಆ ದಿನ ನಾವು ವಿಚಾರಣೆ ನಡೆಸಿಲ್ಲ. ಬದಲಿಗೆ ಜುಲೈ 5 ರಂದು ರೈತರೊಂದಿಗೆ ಹಾಜರಾದ ವಕೀಲರು ಚೆನ್ನೈನ ಇಡಿ ಕಚೇರಿಯಲ್ಲಿ ಗದ್ದಲವನ್ನು ಸೃಷ್ಟಿಸಿದರು’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಲೋಕಸಭೆ ಚುನಾವಣೆಗೂ ಮುನ್ನ ನನ್ನನ್ನು ಕಂಬಿ ಹಿಂದೆ ತಳ್ಳುವುದು ಬಿಜೆಪಿ ಉದ್ದೇಶ: ಕೇಜ್ರಿವಾಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...