ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರಿಗೆ ಜಾರಿ ನಿರ್ದೇಶನಾಲಯ ನೋಟೀಸ್ ಜಾರಿ ಮಾಡಿ ಶಾಕ್ ನೀಡಿದೆ. ಸೆಪ್ಟೆಂಬರ್ 24ರಂದೇ ನೋಟೀಸ್ ಬಂದಿದ್ದರೂ ಈ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.
ಅಪೆಕ್ಸ್ ಬ್ಯಾಂಕ್ನಿಂದ ಶಾಸಕಿ ಲಕ್ಷ್ಮೀಹೆಬ್ಬಾಳ್ಕರ್ ಅವರ ಒಡೆತನದ ಸಕ್ಕರೆ ಕಾರ್ಖಾನೆಗೆ 300 ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದಕ್ಕೆ ಈ ನೋಟಿಸ್ ಜಾರಿ ಮಾಡಿದೆ ಎಂದು ಹೇಳಲಾಗುತ್ತಿದ್ದರೂ ಒಳಗಿನ ಮರ್ಮ ಏನು ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಕೆ.ಎನ್. ರಾಜಣ್ಣ ಅವರಿಗೆ ಇಡಿ ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.
ಈಗಾಗಲೇ ಕಾಂಗ್ರೆಸ್ನ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ರನ್ನು ವಶಕ್ಕೆ ಪಡೆದಿರುವ ಇ.ಡಿ ಅಧಿಕಾರಿಗಳು ಜಾಮೀನು ನೀಡಲು ನಿರಾಕರಿಸುತ್ತಿದ್ದಾರೆ. ಹಾಗಾಗಿ ಕರ್ನಾಟಕದ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಜಾರಿ ನಿರ್ದೇಶನಾಲಯದ ಮೂಲಕ ನೋಟಿಸ್ ಜಾರಿ ಮಾಡಿಸುತ್ತಿರುವ ಕೇಂದ್ರ ಸರ್ಕಾರ ಸೇಡು ತೀರಿಸಿಕೊಳ್ಳುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಇದೇ ರೀತಿಯಲ್ಲಿ ಮಹಾರಾಷ್ಟ್ರದಲ್ಲಿಯೂ ಕೂಡ ಎನ್.ಸಿ.ಪಿ ಮುಖಂಡರ ಮೇಲೆ ಇಡಿ ಬಿದ್ದಿದ್ದು ಸತತ ವಿಚಾರಣೆಗೆ ಮುಂದಾಗಿದೆ.