Homeಚಳವಳಿಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಚಾಲನೆ ನೀಡಿದರು.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಮೋದಿ ಸರ್ಕಾರ ಹಿಂಪಡೆದಿದ್ದರೂ ಹಿಂಬಾಗಿಲಿನ ಮೂಲಕ ರಾಜ್ಯಗಳಲ್ಲಿ ಜಾರಿ ಮಾಡುತ್ತಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಯೋಗೇಂದ್ರ ಯಾದವ್ ಆಕ್ರೋಶ ವ್ಯಕ್ತಪಡಿಸಿದರು.

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಅವರು ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕದಲ್ಲಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಜಾನುವಾರು ಕಾಯ್ದೆ ಜಾರಿಯಲ್ಲಿರುವುದು ಹಿಂಬಾಗಿಲಿನ ಮೂಲಕ ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದಕ್ಕೆ ಸಾಕ್ಷಿ. ಪ್ರಧಾನಿಯವರು ಕನಿಷ್ಠ ಬೆಂಬಲ ಬೆಲೆ ಘೋಷಿಸುವುದಾಗಿ ಹೇಳಿದ್ದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ. ಏಪ್ರಿಲ್ 11ರಂದು ಉತ್ತರ ಪ್ರದೇಶದಲ್ಲಿ ಈ ಕುರಿತು ರೈತರು ಆಂದೋಲನಕ್ಕೆ ಕರೆ ನೀಡಿದ್ದಾರೆ. ಕರ್ನಾಟಕ ಕೂಡ ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿಕೊಂಡರು.

“ನಮ್ಮ ಹೋರಾಟದ ಹಾದಿಗೆ ಪ್ರೇರಣೆ ನೀಡಿದ ಕರ್ನಾಟಕದ ರೈತ ನಾಯಕ ಪ್ರೊ. ಎಂಡಿ ನಂಜುಂಡಸ್ವಾಮಿ ಹಾಗೂ ಶಾಂತವೇರಿ ಗೋಪಾಲಗೌಡರ ನೆಲದಲ್ಲಿ ಇಂಥ ಐತಿಹಾಸಿಕ ಸಂಘಟನೆ ರೂಪುಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ” ಎಂದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆರಂಭವಾಗಿರುವ ಜನ ಪರ್ಯಾಯ ಬಜೆಟ್‌ನಲ್ಲಿ ಸೇರಿದ್ದ ಜನಸ್ತೋಮ…

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಜನ ಪರ್ಯಾಯ ಅಧಿವೇಶನಕ್ಕೆ ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ಒಂದಾಗಿರುವುದು ಹೆಮ್ಮೆಯ ಸಂಗತಿ. ದೇಶಕ್ಕೆ ಕರ್ನಾಟಕ ನಡೆ ಮಾದರಿಯಾಗಲಿ. ನಂಜುಂಡಸ್ವಾಮಿ ಕಾಲದಲ್ಲೂ ಈ ಒಗ್ಗಟ್ಟೂ ಇರಲಿಲ್ಲ. ಇದು ಹೀಗೆ ಮುಂದುವರಿದಲ್ಲಿ ನಮ್ಮನ್ನು ಯಾರು ಸೋಲಿಸಲಾರರು ಎಂದು ಅಭಿಪ್ರಾಯಪಟ್ಟರು.

ದೆಹಲಿಯ ಹೊರವಲಯದಲ್ಲಿ ವರ್ಷಗಳ ಕಾಲ ನಡೆದ ರೈತ ಪ್ರತಿಭಟನೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಮಂಡಿಯೂರುವಂತೆ ಮಾಡಿರುವುದು ರೈತ ಹೋರಾಟದ ಶಕ್ತಿಯ ದ್ಯೋತಕ ಎಂದು ಅವರು ಬಣ್ಣಿಸಿದರು.

ಎಸ್‌ಕೆಎಂ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ದೆಹಲಿಯ ಚಾರಿತ್ರಿಕ ಹೋರಾಟವನ್ನು ಯಾರು ಮರೆತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದನ್ನು ನಿರ್ಲಕ್ಷಿಸಿದರೆ ಅವರಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕೂಡಲೇ ಸಿಎಂ ಅವರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಕೆಆರ್‌ಎಸ್‌ಎಸ್‌ ಕಾರ್ಯಾಧ್ಯಕ್ಷ ಜೆಎಂ ವೀರಸಂಗಯ್ಯ ಮಾತನಾಡಿ, “ಕಾರ್ಪೋರೆಟ್ ಕಂಪನಿಗಳಿಗೆ ಸರ್ಕಾರ ಅನುಕೂಲ ಮಾಡಿಕೊಡಲು ಶ್ರಮಿಸುತ್ತಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಾಗಿದೆ. ರೈತ ಸಂಘಟನೆಗಳ ಕಾರ್ಯಕರ್ತರು ಕೊಡಗಿಗೆ ನುಗ್ಗಿ ಎಲ್ಲ ಮೀಟರ್‌ಗಳನ್ನು ಕಿತ್ತೊಗೆಯುತ್ತೇವೆ” ಎಂದು ಎಚ್ಚರಿಸಿದರು.

ಮುಂದುವರಿದು, “ರೈತರಿಗೆ ಕೇವಲ ಸಾವಿರ ಅಂಕಿಯಲ್ಲಿ ಅನುದಾನ ನೀಡಲಾಗುತ್ತಿದೆ. ಕರ್ನಾಟಕದಲ್ಲೇ ಶೇ. 65 ರಷ್ಟು ರೈತರು ಇದ್ದಾರೆ. ವಾಸ್ತವ ಹೀಗಿರುವಾಗ 1.35 ಲಕ್ಷ ಕೋಟಿ ರೈತರಿಗೆ ಅನುದಾನ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಆರ್‌ಎಸ್‌ಎಸ್‌ ರಾಜ್ಯಾಧ್ಯಕ್ಷ ಬಡಗಲಪುರದ ನಾಗೇಂದ್ರ ಮಾತನಾಡಿ, “ಬರುವ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪಕ್ಷಾತೀತವಾಗಿ ಎಲ್ಲರೂ ಒಂದುಗೂಡಿ ರಾಜಕೀಯ ನಾಯಕರಿಗೆ ತಕ್ಕ ಉತ್ತರ ನೀಡುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಕರ್ನಾಟಕ ರಾಜ್ಯ ರೈತಸಂಘ ಮತ್ತು ನಂಜುಂಡಸ್ವಾಮಿ ಎಂಬ ಫೆನಾಮೆನನ್

ಸ್ವಾತಂತ್ರ್ಯ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ: ಎಸ್.ಆರ್‌.ಹಿರೇಮಠ

ಜನಾಂದೋಲನ ಮಹಾಮೈತ್ರಿ (ಜೆಎಂಎಂ) ರಾಜ್ಯಾಧ್ಯಕ್ಷರಾದ ಎಸ್‌ಆರ್ ಹಿರೇಮಠ ಮಾತನಾಡಿ, “ಪ್ರಜಾಪ್ರಭುತ್ವದ ನೈಜ ಮಾಲೀಕರು ನಾವು. ಶ್ರಮಜೀವಿಗಳನ್ನು ಸರ್ಕಾರ ಗೌರವಯುತವಾಗಿ ನಡೆಸಿಕೊಳ್ಳಬೇಕು. ಮೂರು ವಿವಾದಿತ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯದೇ ಇದ್ದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟಕ್ಕೆ ನಾವು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಕನಿಷ್ಠ ಬೆಂಬಲ ಬೆಲೆ ಜಾರಿಯಾಗಬೇಕಿದೆ. ನಾವು ಮುಂಬರುವ ಚುನಾವಣೆಗಳಿಗೆ ಕಾಯದೆ ನಾವು ಹಾರಿಸಿ ಕಳಿಸಿರುವ ನಮ್ಮ ಶಾಸಕರ ವಿರುದ್ಧ ಹೋರಾಟ ಮಾಡಬೇಕಿದೆ. ಜನ ವಿರೋಧಿ ಕಾಯಿದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಒತ್ತಡ ಹಾಕಿ ಸದನದಲ್ಲಿ ಹೋರಾಡುವಂತೆ ಪ್ರೇರೇಪಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲೂ ಈ ಕಾಯಿದೆಗಳ ಕುರಿತು ಜನಜಾಗೃತಿ ಆಗಬೇಕಿದೆ ಎಂದರು.

ವಿಭಜನೆಯ ರಾಜಕೀಯ: ಮಾವಳ್ಳಿ ಶಂಕರ್‌ ಆತಂಕ

ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಮಾತನಾಡಿ, “ಇವತ್ತಿನ ರಾಜಕಾರಣಿಗಳು ಹಳ್ಳಿಗಳನ್ನು ಮತ್ತು ರೈತರನ್ನು ಜಾತಿ ಧರ್ಮದ ಮೇಲೆ ವಿಭಜನೆ ಮಾಡಿದ್ದಾರೆ. ಸರ್ಕಾರಕ್ಕೆ ರೈತರ ಮೇಲೆ ಯಾವುದೇ ರೀತಿಯ ಕನಿಕರವಿಲ್ಲ. ಇದ್ದರೆ ಈ ಕೂಡಲೇ ಎಂಎಸ್‌ಪಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ದಸಂಸ ನಾಯಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಸರ್ವಾಧಿಕಾರವನ್ನು ಸ್ಥಾಪಿಸುವ ಸಲುವಾಗಿ ರೈತರ, ಶೋಷಿತರ ಹಾಗೂ ಕಾರ್ಮಿಕರ ವಿರುದ್ಧ ಇಂತಹ ಕಾಯಿದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇಡೀ ಸಮಾಜದಲ್ಲಿ ಎಲ್ಲರೂ ಘನತೆಯಿಂದ ಬದುಕುವುದಕ್ಕೆ ಅವಕಾಶ ನೀಡಿರುವ ಭೂಮಿಯನ್ನು ಕಿತ್ತುಕೊಂಡು ಗುಲಾಮರನ್ನಾಗಿ ಮಾಡಲು ಸರ್ಕಾರ ಹೊರಟಿದೆ” ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಕೆಎಸ್ ರಾಜ್ಯಾಧ್ಯಕ್ಷ ಸಿದ್ದನಗೌಡ ಮೋದಗಿ, ಕೆಪಿಆರ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯು ಬಸವರಾಜು, ಜೆಎಂಎಸ್ ರಾಜ್ಯ ಅಧ್ಯಕ್ಷೆ ದೇವಿ ಇದ್ದರು. ಕರ್ನಾಟಕ ಹಲವಾರು ಜಿಲ್ಲೆಗಳಿಂದ ಸಾವಿರಾರು ರೈತರು, ಕಾರ್ಮಿಕರು, ಮಹಿಳೆಯರು ‌ಆಗಮಿಸಿದ್ದರು.


ಇದನ್ನೂ ಓದಿರಿ: ಆಳುವವರ ತಲೆಕೆಳಗು ನೀತಿಗಳು ಹಾಗೂ ಕಂಗೆಟ್ಟ ರೈತರ ಬದುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...