Homeಚಳವಳಿಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಚಾಲನೆ ನೀಡಿದರು.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಮೋದಿ ಸರ್ಕಾರ ಹಿಂಪಡೆದಿದ್ದರೂ ಹಿಂಬಾಗಿಲಿನ ಮೂಲಕ ರಾಜ್ಯಗಳಲ್ಲಿ ಜಾರಿ ಮಾಡುತ್ತಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಯೋಗೇಂದ್ರ ಯಾದವ್ ಆಕ್ರೋಶ ವ್ಯಕ್ತಪಡಿಸಿದರು.

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಅವರು ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕದಲ್ಲಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಜಾನುವಾರು ಕಾಯ್ದೆ ಜಾರಿಯಲ್ಲಿರುವುದು ಹಿಂಬಾಗಿಲಿನ ಮೂಲಕ ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದಕ್ಕೆ ಸಾಕ್ಷಿ. ಪ್ರಧಾನಿಯವರು ಕನಿಷ್ಠ ಬೆಂಬಲ ಬೆಲೆ ಘೋಷಿಸುವುದಾಗಿ ಹೇಳಿದ್ದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ. ಏಪ್ರಿಲ್ 11ರಂದು ಉತ್ತರ ಪ್ರದೇಶದಲ್ಲಿ ಈ ಕುರಿತು ರೈತರು ಆಂದೋಲನಕ್ಕೆ ಕರೆ ನೀಡಿದ್ದಾರೆ. ಕರ್ನಾಟಕ ಕೂಡ ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿಕೊಂಡರು.

“ನಮ್ಮ ಹೋರಾಟದ ಹಾದಿಗೆ ಪ್ರೇರಣೆ ನೀಡಿದ ಕರ್ನಾಟಕದ ರೈತ ನಾಯಕ ಪ್ರೊ. ಎಂಡಿ ನಂಜುಂಡಸ್ವಾಮಿ ಹಾಗೂ ಶಾಂತವೇರಿ ಗೋಪಾಲಗೌಡರ ನೆಲದಲ್ಲಿ ಇಂಥ ಐತಿಹಾಸಿಕ ಸಂಘಟನೆ ರೂಪುಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ” ಎಂದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆರಂಭವಾಗಿರುವ ಜನ ಪರ್ಯಾಯ ಬಜೆಟ್‌ನಲ್ಲಿ ಸೇರಿದ್ದ ಜನಸ್ತೋಮ…

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಜನ ಪರ್ಯಾಯ ಅಧಿವೇಶನಕ್ಕೆ ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ಒಂದಾಗಿರುವುದು ಹೆಮ್ಮೆಯ ಸಂಗತಿ. ದೇಶಕ್ಕೆ ಕರ್ನಾಟಕ ನಡೆ ಮಾದರಿಯಾಗಲಿ. ನಂಜುಂಡಸ್ವಾಮಿ ಕಾಲದಲ್ಲೂ ಈ ಒಗ್ಗಟ್ಟೂ ಇರಲಿಲ್ಲ. ಇದು ಹೀಗೆ ಮುಂದುವರಿದಲ್ಲಿ ನಮ್ಮನ್ನು ಯಾರು ಸೋಲಿಸಲಾರರು ಎಂದು ಅಭಿಪ್ರಾಯಪಟ್ಟರು.

ದೆಹಲಿಯ ಹೊರವಲಯದಲ್ಲಿ ವರ್ಷಗಳ ಕಾಲ ನಡೆದ ರೈತ ಪ್ರತಿಭಟನೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಮಂಡಿಯೂರುವಂತೆ ಮಾಡಿರುವುದು ರೈತ ಹೋರಾಟದ ಶಕ್ತಿಯ ದ್ಯೋತಕ ಎಂದು ಅವರು ಬಣ್ಣಿಸಿದರು.

ಎಸ್‌ಕೆಎಂ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ದೆಹಲಿಯ ಚಾರಿತ್ರಿಕ ಹೋರಾಟವನ್ನು ಯಾರು ಮರೆತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದನ್ನು ನಿರ್ಲಕ್ಷಿಸಿದರೆ ಅವರಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕೂಡಲೇ ಸಿಎಂ ಅವರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಕೆಆರ್‌ಎಸ್‌ಎಸ್‌ ಕಾರ್ಯಾಧ್ಯಕ್ಷ ಜೆಎಂ ವೀರಸಂಗಯ್ಯ ಮಾತನಾಡಿ, “ಕಾರ್ಪೋರೆಟ್ ಕಂಪನಿಗಳಿಗೆ ಸರ್ಕಾರ ಅನುಕೂಲ ಮಾಡಿಕೊಡಲು ಶ್ರಮಿಸುತ್ತಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಾಗಿದೆ. ರೈತ ಸಂಘಟನೆಗಳ ಕಾರ್ಯಕರ್ತರು ಕೊಡಗಿಗೆ ನುಗ್ಗಿ ಎಲ್ಲ ಮೀಟರ್‌ಗಳನ್ನು ಕಿತ್ತೊಗೆಯುತ್ತೇವೆ” ಎಂದು ಎಚ್ಚರಿಸಿದರು.

ಮುಂದುವರಿದು, “ರೈತರಿಗೆ ಕೇವಲ ಸಾವಿರ ಅಂಕಿಯಲ್ಲಿ ಅನುದಾನ ನೀಡಲಾಗುತ್ತಿದೆ. ಕರ್ನಾಟಕದಲ್ಲೇ ಶೇ. 65 ರಷ್ಟು ರೈತರು ಇದ್ದಾರೆ. ವಾಸ್ತವ ಹೀಗಿರುವಾಗ 1.35 ಲಕ್ಷ ಕೋಟಿ ರೈತರಿಗೆ ಅನುದಾನ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಆರ್‌ಎಸ್‌ಎಸ್‌ ರಾಜ್ಯಾಧ್ಯಕ್ಷ ಬಡಗಲಪುರದ ನಾಗೇಂದ್ರ ಮಾತನಾಡಿ, “ಬರುವ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪಕ್ಷಾತೀತವಾಗಿ ಎಲ್ಲರೂ ಒಂದುಗೂಡಿ ರಾಜಕೀಯ ನಾಯಕರಿಗೆ ತಕ್ಕ ಉತ್ತರ ನೀಡುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಕರ್ನಾಟಕ ರಾಜ್ಯ ರೈತಸಂಘ ಮತ್ತು ನಂಜುಂಡಸ್ವಾಮಿ ಎಂಬ ಫೆನಾಮೆನನ್

ಸ್ವಾತಂತ್ರ್ಯ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ: ಎಸ್.ಆರ್‌.ಹಿರೇಮಠ

ಜನಾಂದೋಲನ ಮಹಾಮೈತ್ರಿ (ಜೆಎಂಎಂ) ರಾಜ್ಯಾಧ್ಯಕ್ಷರಾದ ಎಸ್‌ಆರ್ ಹಿರೇಮಠ ಮಾತನಾಡಿ, “ಪ್ರಜಾಪ್ರಭುತ್ವದ ನೈಜ ಮಾಲೀಕರು ನಾವು. ಶ್ರಮಜೀವಿಗಳನ್ನು ಸರ್ಕಾರ ಗೌರವಯುತವಾಗಿ ನಡೆಸಿಕೊಳ್ಳಬೇಕು. ಮೂರು ವಿವಾದಿತ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯದೇ ಇದ್ದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟಕ್ಕೆ ನಾವು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಕನಿಷ್ಠ ಬೆಂಬಲ ಬೆಲೆ ಜಾರಿಯಾಗಬೇಕಿದೆ. ನಾವು ಮುಂಬರುವ ಚುನಾವಣೆಗಳಿಗೆ ಕಾಯದೆ ನಾವು ಹಾರಿಸಿ ಕಳಿಸಿರುವ ನಮ್ಮ ಶಾಸಕರ ವಿರುದ್ಧ ಹೋರಾಟ ಮಾಡಬೇಕಿದೆ. ಜನ ವಿರೋಧಿ ಕಾಯಿದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಒತ್ತಡ ಹಾಕಿ ಸದನದಲ್ಲಿ ಹೋರಾಡುವಂತೆ ಪ್ರೇರೇಪಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲೂ ಈ ಕಾಯಿದೆಗಳ ಕುರಿತು ಜನಜಾಗೃತಿ ಆಗಬೇಕಿದೆ ಎಂದರು.

ವಿಭಜನೆಯ ರಾಜಕೀಯ: ಮಾವಳ್ಳಿ ಶಂಕರ್‌ ಆತಂಕ

ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಮಾತನಾಡಿ, “ಇವತ್ತಿನ ರಾಜಕಾರಣಿಗಳು ಹಳ್ಳಿಗಳನ್ನು ಮತ್ತು ರೈತರನ್ನು ಜಾತಿ ಧರ್ಮದ ಮೇಲೆ ವಿಭಜನೆ ಮಾಡಿದ್ದಾರೆ. ಸರ್ಕಾರಕ್ಕೆ ರೈತರ ಮೇಲೆ ಯಾವುದೇ ರೀತಿಯ ಕನಿಕರವಿಲ್ಲ. ಇದ್ದರೆ ಈ ಕೂಡಲೇ ಎಂಎಸ್‌ಪಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ದಸಂಸ ನಾಯಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಸರ್ವಾಧಿಕಾರವನ್ನು ಸ್ಥಾಪಿಸುವ ಸಲುವಾಗಿ ರೈತರ, ಶೋಷಿತರ ಹಾಗೂ ಕಾರ್ಮಿಕರ ವಿರುದ್ಧ ಇಂತಹ ಕಾಯಿದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇಡೀ ಸಮಾಜದಲ್ಲಿ ಎಲ್ಲರೂ ಘನತೆಯಿಂದ ಬದುಕುವುದಕ್ಕೆ ಅವಕಾಶ ನೀಡಿರುವ ಭೂಮಿಯನ್ನು ಕಿತ್ತುಕೊಂಡು ಗುಲಾಮರನ್ನಾಗಿ ಮಾಡಲು ಸರ್ಕಾರ ಹೊರಟಿದೆ” ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಕೆಎಸ್ ರಾಜ್ಯಾಧ್ಯಕ್ಷ ಸಿದ್ದನಗೌಡ ಮೋದಗಿ, ಕೆಪಿಆರ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯು ಬಸವರಾಜು, ಜೆಎಂಎಸ್ ರಾಜ್ಯ ಅಧ್ಯಕ್ಷೆ ದೇವಿ ಇದ್ದರು. ಕರ್ನಾಟಕ ಹಲವಾರು ಜಿಲ್ಲೆಗಳಿಂದ ಸಾವಿರಾರು ರೈತರು, ಕಾರ್ಮಿಕರು, ಮಹಿಳೆಯರು ‌ಆಗಮಿಸಿದ್ದರು.


ಇದನ್ನೂ ಓದಿರಿ: ಆಳುವವರ ತಲೆಕೆಳಗು ನೀತಿಗಳು ಹಾಗೂ ಕಂಗೆಟ್ಟ ರೈತರ ಬದುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...