Homeಚಳವಳಿಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಚಾಲನೆ ನೀಡಿದರು.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಮೋದಿ ಸರ್ಕಾರ ಹಿಂಪಡೆದಿದ್ದರೂ ಹಿಂಬಾಗಿಲಿನ ಮೂಲಕ ರಾಜ್ಯಗಳಲ್ಲಿ ಜಾರಿ ಮಾಡುತ್ತಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಯೋಗೇಂದ್ರ ಯಾದವ್ ಆಕ್ರೋಶ ವ್ಯಕ್ತಪಡಿಸಿದರು.

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಅವರು ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕದಲ್ಲಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಜಾನುವಾರು ಕಾಯ್ದೆ ಜಾರಿಯಲ್ಲಿರುವುದು ಹಿಂಬಾಗಿಲಿನ ಮೂಲಕ ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದಕ್ಕೆ ಸಾಕ್ಷಿ. ಪ್ರಧಾನಿಯವರು ಕನಿಷ್ಠ ಬೆಂಬಲ ಬೆಲೆ ಘೋಷಿಸುವುದಾಗಿ ಹೇಳಿದ್ದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ. ಏಪ್ರಿಲ್ 11ರಂದು ಉತ್ತರ ಪ್ರದೇಶದಲ್ಲಿ ಈ ಕುರಿತು ರೈತರು ಆಂದೋಲನಕ್ಕೆ ಕರೆ ನೀಡಿದ್ದಾರೆ. ಕರ್ನಾಟಕ ಕೂಡ ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿಕೊಂಡರು.

“ನಮ್ಮ ಹೋರಾಟದ ಹಾದಿಗೆ ಪ್ರೇರಣೆ ನೀಡಿದ ಕರ್ನಾಟಕದ ರೈತ ನಾಯಕ ಪ್ರೊ. ಎಂಡಿ ನಂಜುಂಡಸ್ವಾಮಿ ಹಾಗೂ ಶಾಂತವೇರಿ ಗೋಪಾಲಗೌಡರ ನೆಲದಲ್ಲಿ ಇಂಥ ಐತಿಹಾಸಿಕ ಸಂಘಟನೆ ರೂಪುಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ” ಎಂದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆರಂಭವಾಗಿರುವ ಜನ ಪರ್ಯಾಯ ಬಜೆಟ್‌ನಲ್ಲಿ ಸೇರಿದ್ದ ಜನಸ್ತೋಮ…

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಜನ ಪರ್ಯಾಯ ಅಧಿವೇಶನಕ್ಕೆ ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ಒಂದಾಗಿರುವುದು ಹೆಮ್ಮೆಯ ಸಂಗತಿ. ದೇಶಕ್ಕೆ ಕರ್ನಾಟಕ ನಡೆ ಮಾದರಿಯಾಗಲಿ. ನಂಜುಂಡಸ್ವಾಮಿ ಕಾಲದಲ್ಲೂ ಈ ಒಗ್ಗಟ್ಟೂ ಇರಲಿಲ್ಲ. ಇದು ಹೀಗೆ ಮುಂದುವರಿದಲ್ಲಿ ನಮ್ಮನ್ನು ಯಾರು ಸೋಲಿಸಲಾರರು ಎಂದು ಅಭಿಪ್ರಾಯಪಟ್ಟರು.

ದೆಹಲಿಯ ಹೊರವಲಯದಲ್ಲಿ ವರ್ಷಗಳ ಕಾಲ ನಡೆದ ರೈತ ಪ್ರತಿಭಟನೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಮಂಡಿಯೂರುವಂತೆ ಮಾಡಿರುವುದು ರೈತ ಹೋರಾಟದ ಶಕ್ತಿಯ ದ್ಯೋತಕ ಎಂದು ಅವರು ಬಣ್ಣಿಸಿದರು.

ಎಸ್‌ಕೆಎಂ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ದೆಹಲಿಯ ಚಾರಿತ್ರಿಕ ಹೋರಾಟವನ್ನು ಯಾರು ಮರೆತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದನ್ನು ನಿರ್ಲಕ್ಷಿಸಿದರೆ ಅವರಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕೂಡಲೇ ಸಿಎಂ ಅವರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಕೆಆರ್‌ಎಸ್‌ಎಸ್‌ ಕಾರ್ಯಾಧ್ಯಕ್ಷ ಜೆಎಂ ವೀರಸಂಗಯ್ಯ ಮಾತನಾಡಿ, “ಕಾರ್ಪೋರೆಟ್ ಕಂಪನಿಗಳಿಗೆ ಸರ್ಕಾರ ಅನುಕೂಲ ಮಾಡಿಕೊಡಲು ಶ್ರಮಿಸುತ್ತಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಾಗಿದೆ. ರೈತ ಸಂಘಟನೆಗಳ ಕಾರ್ಯಕರ್ತರು ಕೊಡಗಿಗೆ ನುಗ್ಗಿ ಎಲ್ಲ ಮೀಟರ್‌ಗಳನ್ನು ಕಿತ್ತೊಗೆಯುತ್ತೇವೆ” ಎಂದು ಎಚ್ಚರಿಸಿದರು.

ಮುಂದುವರಿದು, “ರೈತರಿಗೆ ಕೇವಲ ಸಾವಿರ ಅಂಕಿಯಲ್ಲಿ ಅನುದಾನ ನೀಡಲಾಗುತ್ತಿದೆ. ಕರ್ನಾಟಕದಲ್ಲೇ ಶೇ. 65 ರಷ್ಟು ರೈತರು ಇದ್ದಾರೆ. ವಾಸ್ತವ ಹೀಗಿರುವಾಗ 1.35 ಲಕ್ಷ ಕೋಟಿ ರೈತರಿಗೆ ಅನುದಾನ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಆರ್‌ಎಸ್‌ಎಸ್‌ ರಾಜ್ಯಾಧ್ಯಕ್ಷ ಬಡಗಲಪುರದ ನಾಗೇಂದ್ರ ಮಾತನಾಡಿ, “ಬರುವ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪಕ್ಷಾತೀತವಾಗಿ ಎಲ್ಲರೂ ಒಂದುಗೂಡಿ ರಾಜಕೀಯ ನಾಯಕರಿಗೆ ತಕ್ಕ ಉತ್ತರ ನೀಡುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಕರ್ನಾಟಕ ರಾಜ್ಯ ರೈತಸಂಘ ಮತ್ತು ನಂಜುಂಡಸ್ವಾಮಿ ಎಂಬ ಫೆನಾಮೆನನ್

ಸ್ವಾತಂತ್ರ್ಯ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ: ಎಸ್.ಆರ್‌.ಹಿರೇಮಠ

ಜನಾಂದೋಲನ ಮಹಾಮೈತ್ರಿ (ಜೆಎಂಎಂ) ರಾಜ್ಯಾಧ್ಯಕ್ಷರಾದ ಎಸ್‌ಆರ್ ಹಿರೇಮಠ ಮಾತನಾಡಿ, “ಪ್ರಜಾಪ್ರಭುತ್ವದ ನೈಜ ಮಾಲೀಕರು ನಾವು. ಶ್ರಮಜೀವಿಗಳನ್ನು ಸರ್ಕಾರ ಗೌರವಯುತವಾಗಿ ನಡೆಸಿಕೊಳ್ಳಬೇಕು. ಮೂರು ವಿವಾದಿತ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯದೇ ಇದ್ದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟಕ್ಕೆ ನಾವು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಕನಿಷ್ಠ ಬೆಂಬಲ ಬೆಲೆ ಜಾರಿಯಾಗಬೇಕಿದೆ. ನಾವು ಮುಂಬರುವ ಚುನಾವಣೆಗಳಿಗೆ ಕಾಯದೆ ನಾವು ಹಾರಿಸಿ ಕಳಿಸಿರುವ ನಮ್ಮ ಶಾಸಕರ ವಿರುದ್ಧ ಹೋರಾಟ ಮಾಡಬೇಕಿದೆ. ಜನ ವಿರೋಧಿ ಕಾಯಿದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಒತ್ತಡ ಹಾಕಿ ಸದನದಲ್ಲಿ ಹೋರಾಡುವಂತೆ ಪ್ರೇರೇಪಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲೂ ಈ ಕಾಯಿದೆಗಳ ಕುರಿತು ಜನಜಾಗೃತಿ ಆಗಬೇಕಿದೆ ಎಂದರು.

ವಿಭಜನೆಯ ರಾಜಕೀಯ: ಮಾವಳ್ಳಿ ಶಂಕರ್‌ ಆತಂಕ

ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಮಾತನಾಡಿ, “ಇವತ್ತಿನ ರಾಜಕಾರಣಿಗಳು ಹಳ್ಳಿಗಳನ್ನು ಮತ್ತು ರೈತರನ್ನು ಜಾತಿ ಧರ್ಮದ ಮೇಲೆ ವಿಭಜನೆ ಮಾಡಿದ್ದಾರೆ. ಸರ್ಕಾರಕ್ಕೆ ರೈತರ ಮೇಲೆ ಯಾವುದೇ ರೀತಿಯ ಕನಿಕರವಿಲ್ಲ. ಇದ್ದರೆ ಈ ಕೂಡಲೇ ಎಂಎಸ್‌ಪಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ದಸಂಸ ನಾಯಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಸರ್ವಾಧಿಕಾರವನ್ನು ಸ್ಥಾಪಿಸುವ ಸಲುವಾಗಿ ರೈತರ, ಶೋಷಿತರ ಹಾಗೂ ಕಾರ್ಮಿಕರ ವಿರುದ್ಧ ಇಂತಹ ಕಾಯಿದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇಡೀ ಸಮಾಜದಲ್ಲಿ ಎಲ್ಲರೂ ಘನತೆಯಿಂದ ಬದುಕುವುದಕ್ಕೆ ಅವಕಾಶ ನೀಡಿರುವ ಭೂಮಿಯನ್ನು ಕಿತ್ತುಕೊಂಡು ಗುಲಾಮರನ್ನಾಗಿ ಮಾಡಲು ಸರ್ಕಾರ ಹೊರಟಿದೆ” ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಕೆಎಸ್ ರಾಜ್ಯಾಧ್ಯಕ್ಷ ಸಿದ್ದನಗೌಡ ಮೋದಗಿ, ಕೆಪಿಆರ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯು ಬಸವರಾಜು, ಜೆಎಂಎಸ್ ರಾಜ್ಯ ಅಧ್ಯಕ್ಷೆ ದೇವಿ ಇದ್ದರು. ಕರ್ನಾಟಕ ಹಲವಾರು ಜಿಲ್ಲೆಗಳಿಂದ ಸಾವಿರಾರು ರೈತರು, ಕಾರ್ಮಿಕರು, ಮಹಿಳೆಯರು ‌ಆಗಮಿಸಿದ್ದರು.


ಇದನ್ನೂ ಓದಿರಿ: ಆಳುವವರ ತಲೆಕೆಳಗು ನೀತಿಗಳು ಹಾಗೂ ಕಂಗೆಟ್ಟ ರೈತರ ಬದುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...