Homeಚಳವಳಿಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ಹಿಂಬಾಗಿಲಿನ ಮೂಲಕ ರೈತ ವಿರೋಧಿ ಕಾಯ್ದೆಗಳ ಜಾರಿ: ಯೋಗೇಂದ್ರ ಯಾದವ್ ಆಕ್ರೋಶ

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಚಾಲನೆ ನೀಡಿದರು.

- Advertisement -
- Advertisement -

ವಿವಾದಿತ ಕೃಷಿ ಕಾಯ್ದೆಗಳನ್ನು ಮೋದಿ ಸರ್ಕಾರ ಹಿಂಪಡೆದಿದ್ದರೂ ಹಿಂಬಾಗಿಲಿನ ಮೂಲಕ ರಾಜ್ಯಗಳಲ್ಲಿ ಜಾರಿ ಮಾಡುತ್ತಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಾಯಕ ಯೋಗೇಂದ್ರ ಯಾದವ್ ಆಕ್ರೋಶ ವ್ಯಕ್ತಪಡಿಸಿದರು.

ರೈತ, ದಲಿತ, ಕಾರ್ಮಿಕ, ಯುವಜನ ಹಾಗೂ ಮಹಿಳಾ ಸಂಘಟನೆಗಳ ಸಮನ್ವಯದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಮೂರು ದಿನಗಳ ಜನ ಪರ್ಯಾಯ ಬಜೆಟ್ ಅಧಿವೇಶನಕ್ಕೆ ಯೋಗೇಂದ್ರ ಯಾದವ್ ಅವರು ಸೋಮವಾರ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕದಲ್ಲಿ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಜಾನುವಾರು ಕಾಯ್ದೆ ಜಾರಿಯಲ್ಲಿರುವುದು ಹಿಂಬಾಗಿಲಿನ ಮೂಲಕ ಕೃಷಿ ವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿರುವುದಕ್ಕೆ ಸಾಕ್ಷಿ. ಪ್ರಧಾನಿಯವರು ಕನಿಷ್ಠ ಬೆಂಬಲ ಬೆಲೆ ಘೋಷಿಸುವುದಾಗಿ ಹೇಳಿದ್ದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ. ಏಪ್ರಿಲ್ 11ರಂದು ಉತ್ತರ ಪ್ರದೇಶದಲ್ಲಿ ಈ ಕುರಿತು ರೈತರು ಆಂದೋಲನಕ್ಕೆ ಕರೆ ನೀಡಿದ್ದಾರೆ. ಕರ್ನಾಟಕ ಕೂಡ ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ವಿನಂತಿಸಿಕೊಂಡರು.

“ನಮ್ಮ ಹೋರಾಟದ ಹಾದಿಗೆ ಪ್ರೇರಣೆ ನೀಡಿದ ಕರ್ನಾಟಕದ ರೈತ ನಾಯಕ ಪ್ರೊ. ಎಂಡಿ ನಂಜುಂಡಸ್ವಾಮಿ ಹಾಗೂ ಶಾಂತವೇರಿ ಗೋಪಾಲಗೌಡರ ನೆಲದಲ್ಲಿ ಇಂಥ ಐತಿಹಾಸಿಕ ಸಂಘಟನೆ ರೂಪುಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ” ಎಂದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆರಂಭವಾಗಿರುವ ಜನ ಪರ್ಯಾಯ ಬಜೆಟ್‌ನಲ್ಲಿ ಸೇರಿದ್ದ ಜನಸ್ತೋಮ…

ಇದನ್ನೂ ಓದಿರಿ: ಲಖಿಂಪುರ್‌ ಖೇರಿ ರೈತರ ಹತ್ಯಾಕಾಂಡ: ಆರೋಪಿ ಆಶಿಶ್‌ ಮಿಶ್ರಾ ಜಾಮೀನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಕೆ

ಜನ ಪರ್ಯಾಯ ಅಧಿವೇಶನಕ್ಕೆ ದಲಿತ ಹಾಗೂ ಕಾರ್ಮಿಕ ಸಂಘಟನೆಗಳು ಒಂದಾಗಿರುವುದು ಹೆಮ್ಮೆಯ ಸಂಗತಿ. ದೇಶಕ್ಕೆ ಕರ್ನಾಟಕ ನಡೆ ಮಾದರಿಯಾಗಲಿ. ನಂಜುಂಡಸ್ವಾಮಿ ಕಾಲದಲ್ಲೂ ಈ ಒಗ್ಗಟ್ಟೂ ಇರಲಿಲ್ಲ. ಇದು ಹೀಗೆ ಮುಂದುವರಿದಲ್ಲಿ ನಮ್ಮನ್ನು ಯಾರು ಸೋಲಿಸಲಾರರು ಎಂದು ಅಭಿಪ್ರಾಯಪಟ್ಟರು.

ದೆಹಲಿಯ ಹೊರವಲಯದಲ್ಲಿ ವರ್ಷಗಳ ಕಾಲ ನಡೆದ ರೈತ ಪ್ರತಿಭಟನೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಮಂಡಿಯೂರುವಂತೆ ಮಾಡಿರುವುದು ರೈತ ಹೋರಾಟದ ಶಕ್ತಿಯ ದ್ಯೋತಕ ಎಂದು ಅವರು ಬಣ್ಣಿಸಿದರು.

ಎಸ್‌ಕೆಎಂ ನಾಯಕಿ ಕವಿತಾ ಕುರುಗಂಟಿ ಮಾತನಾಡಿ, “ದೆಹಲಿಯ ಚಾರಿತ್ರಿಕ ಹೋರಾಟವನ್ನು ಯಾರು ಮರೆತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದನ್ನು ನಿರ್ಲಕ್ಷಿಸಿದರೆ ಅವರಿಗೂ ತಕ್ಕ ಪಾಠ ಕಲಿಸಬೇಕಾಗುತ್ತದೆ. ಕೂಡಲೇ ಸಿಎಂ ಅವರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಕೆಆರ್‌ಎಸ್‌ಎಸ್‌ ಕಾರ್ಯಾಧ್ಯಕ್ಷ ಜೆಎಂ ವೀರಸಂಗಯ್ಯ ಮಾತನಾಡಿ, “ಕಾರ್ಪೋರೆಟ್ ಕಂಪನಿಗಳಿಗೆ ಸರ್ಕಾರ ಅನುಕೂಲ ಮಾಡಿಕೊಡಲು ಶ್ರಮಿಸುತ್ತಿದೆ. ಈಗಾಗಲೇ ಕೊಡಗು ಜಿಲ್ಲೆಯಲ್ಲಿ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಮೀಟರ್ ಅಳವಡಿಸಲಾಗಿದೆ. ರೈತ ಸಂಘಟನೆಗಳ ಕಾರ್ಯಕರ್ತರು ಕೊಡಗಿಗೆ ನುಗ್ಗಿ ಎಲ್ಲ ಮೀಟರ್‌ಗಳನ್ನು ಕಿತ್ತೊಗೆಯುತ್ತೇವೆ” ಎಂದು ಎಚ್ಚರಿಸಿದರು.

ಮುಂದುವರಿದು, “ರೈತರಿಗೆ ಕೇವಲ ಸಾವಿರ ಅಂಕಿಯಲ್ಲಿ ಅನುದಾನ ನೀಡಲಾಗುತ್ತಿದೆ. ಕರ್ನಾಟಕದಲ್ಲೇ ಶೇ. 65 ರಷ್ಟು ರೈತರು ಇದ್ದಾರೆ. ವಾಸ್ತವ ಹೀಗಿರುವಾಗ 1.35 ಲಕ್ಷ ಕೋಟಿ ರೈತರಿಗೆ ಅನುದಾನ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೆಆರ್‌ಎಸ್‌ಎಸ್‌ ರಾಜ್ಯಾಧ್ಯಕ್ಷ ಬಡಗಲಪುರದ ನಾಗೇಂದ್ರ ಮಾತನಾಡಿ, “ಬರುವ ದಿನಗಳಲ್ಲಿ ಹಳ್ಳಿ ಹಳ್ಳಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪಕ್ಷಾತೀತವಾಗಿ ಎಲ್ಲರೂ ಒಂದುಗೂಡಿ ರಾಜಕೀಯ ನಾಯಕರಿಗೆ ತಕ್ಕ ಉತ್ತರ ನೀಡುತ್ತೇವೆ” ಎಂದು ಎಚ್ಚರಿಸಿದರು.

ಇದನ್ನೂ ಓದಿರಿ: ಕರ್ನಾಟಕ ರಾಜ್ಯ ರೈತಸಂಘ ಮತ್ತು ನಂಜುಂಡಸ್ವಾಮಿ ಎಂಬ ಫೆನಾಮೆನನ್

ಸ್ವಾತಂತ್ರ್ಯ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ: ಎಸ್.ಆರ್‌.ಹಿರೇಮಠ

ಜನಾಂದೋಲನ ಮಹಾಮೈತ್ರಿ (ಜೆಎಂಎಂ) ರಾಜ್ಯಾಧ್ಯಕ್ಷರಾದ ಎಸ್‌ಆರ್ ಹಿರೇಮಠ ಮಾತನಾಡಿ, “ಪ್ರಜಾಪ್ರಭುತ್ವದ ನೈಜ ಮಾಲೀಕರು ನಾವು. ಶ್ರಮಜೀವಿಗಳನ್ನು ಸರ್ಕಾರ ಗೌರವಯುತವಾಗಿ ನಡೆಸಿಕೊಳ್ಳಬೇಕು. ಮೂರು ವಿವಾದಿತ ಕಾಯ್ದೆಗಳನ್ನು ರಾಜ್ಯ ಸರ್ಕಾರ ಹಿಂಪಡೆಯದೇ ಇದ್ದಲ್ಲಿ ಎರಡನೇ ಸ್ವಾತಂತ್ರ್ಯ ಹೋರಾಟಕ್ಕೆ ನಾವು ಮುಂದಾಗಬೇಕಾಗುತ್ತದೆ” ಎಂದು ಎಚ್ಚರಿಸಿದರು.

ಕನಿಷ್ಠ ಬೆಂಬಲ ಬೆಲೆ ಜಾರಿಯಾಗಬೇಕಿದೆ. ನಾವು ಮುಂಬರುವ ಚುನಾವಣೆಗಳಿಗೆ ಕಾಯದೆ ನಾವು ಹಾರಿಸಿ ಕಳಿಸಿರುವ ನಮ್ಮ ಶಾಸಕರ ವಿರುದ್ಧ ಹೋರಾಟ ಮಾಡಬೇಕಿದೆ. ಜನ ವಿರೋಧಿ ಕಾಯಿದೆಗಳನ್ನು ವಾಪಸ್ ತೆಗೆದುಕೊಳ್ಳುವಂತೆ ಒತ್ತಡ ಹಾಕಿ ಸದನದಲ್ಲಿ ಹೋರಾಡುವಂತೆ ಪ್ರೇರೇಪಿಸಬೇಕು. ಗ್ರಾಮ ಪಂಚಾಯತಿ ಮಟ್ಟದಲ್ಲೂ ಈ ಕಾಯಿದೆಗಳ ಕುರಿತು ಜನಜಾಗೃತಿ ಆಗಬೇಕಿದೆ ಎಂದರು.

ವಿಭಜನೆಯ ರಾಜಕೀಯ: ಮಾವಳ್ಳಿ ಶಂಕರ್‌ ಆತಂಕ

ಹಿರಿಯ ದಲಿತ ನಾಯಕ ಮಾವಳ್ಳಿ ಶಂಕರ್ ಮಾತನಾಡಿ, “ಇವತ್ತಿನ ರಾಜಕಾರಣಿಗಳು ಹಳ್ಳಿಗಳನ್ನು ಮತ್ತು ರೈತರನ್ನು ಜಾತಿ ಧರ್ಮದ ಮೇಲೆ ವಿಭಜನೆ ಮಾಡಿದ್ದಾರೆ. ಸರ್ಕಾರಕ್ಕೆ ರೈತರ ಮೇಲೆ ಯಾವುದೇ ರೀತಿಯ ಕನಿಕರವಿಲ್ಲ. ಇದ್ದರೆ ಈ ಕೂಡಲೇ ಎಂಎಸ್‌ಪಿ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

ದಸಂಸ ನಾಯಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ಸರ್ವಾಧಿಕಾರವನ್ನು ಸ್ಥಾಪಿಸುವ ಸಲುವಾಗಿ ರೈತರ, ಶೋಷಿತರ ಹಾಗೂ ಕಾರ್ಮಿಕರ ವಿರುದ್ಧ ಇಂತಹ ಕಾಯಿದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಇಡೀ ಸಮಾಜದಲ್ಲಿ ಎಲ್ಲರೂ ಘನತೆಯಿಂದ ಬದುಕುವುದಕ್ಕೆ ಅವಕಾಶ ನೀಡಿರುವ ಭೂಮಿಯನ್ನು ಕಿತ್ತುಕೊಂಡು ಗುಲಾಮರನ್ನಾಗಿ ಮಾಡಲು ಸರ್ಕಾರ ಹೊರಟಿದೆ” ಎಂದು ಟೀಕಿಸಿದರು.

ಕಾರ್ಯಕ್ರಮದಲ್ಲಿ ಬಿಕೆಎಸ್ ರಾಜ್ಯಾಧ್ಯಕ್ಷ ಸಿದ್ದನಗೌಡ ಮೋದಗಿ, ಕೆಪಿಆರ್‌ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯು ಬಸವರಾಜು, ಜೆಎಂಎಸ್ ರಾಜ್ಯ ಅಧ್ಯಕ್ಷೆ ದೇವಿ ಇದ್ದರು. ಕರ್ನಾಟಕ ಹಲವಾರು ಜಿಲ್ಲೆಗಳಿಂದ ಸಾವಿರಾರು ರೈತರು, ಕಾರ್ಮಿಕರು, ಮಹಿಳೆಯರು ‌ಆಗಮಿಸಿದ್ದರು.


ಇದನ್ನೂ ಓದಿರಿ: ಆಳುವವರ ತಲೆಕೆಳಗು ನೀತಿಗಳು ಹಾಗೂ ಕಂಗೆಟ್ಟ ರೈತರ ಬದುಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...