Homeಚಳವಳಿವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಭಾರತ ನಮಗೆ ಬೇಡ.

- Advertisement -
- Advertisement -

ಕೇಂದ್ರದ ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಹೋರಾಟ ಮುಂದುವರೆದಿದೆ. ಐಕ್ಯ ಹೋರಾಟ ಸಮಿತಿ, AIKSCC, ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಇಂದು ಪ್ರತಿಭಟನಾ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವರವರು ಭಾಗವಹಿಸಿ ಮಾತನಾಡಿದರು. ಅವರ ಭಾಷಣ ಪೂರ್ಣಪಾಠ ಇಲ್ಲಿದೆ.

ರಾಜ್ಯದ ರಾಜಧಾನಿಯಲ್ಲಿ ಕುಳಿತು ನಾವು ಕೂಗಿ ಕೂಗಿ ಹೇಳುತ್ತಿದ್ದೇವೆ. ನಮ್ಮ ಸುತ್ತ ಮುತ್ತಲೂ ಮೂರು ದಾರಿ ಇದೆ. ನಮ್ಮ ಸುತ್ತಲೂ ಚಲಿಸುತ್ತಿರುವ ವಾಹನಗಳೇ ಹೆಚ್ಚು. ವಾಹನಗಳಿಗೆ ತಮ್ಮ ಅಕ್ಕ ಪಕ್ಕ ನೋಡುವ ವ್ಯವಧಾನ ಇರುವುದಿಲ್ಲ. ಈ ಈ ಧಾವಂತ ಮತ್ತು ವೇಗವನ್ನು ನಗರಗಳ ಲಕ್ಷಣ ಎನ್ನುತ್ತಾರೆ. ಇಂಥ ಕಡೆ ನಮ್ಮ ಮಾತು ಕೇಳಿಸುತ್ತಾ?

ಆದರೂ, ವೇಗವಾಗಿ ಓಡುತ್ತಿರುವವರಿಗೆ ಒಂದು ಕಿವಿಮಾತು ಹೇಳುತ್ತಿರುವೆ. ಏನೆಂದರೆ ನೀವು ನಮ್ಮ ಮಾತನ್ನು ಕೇಳುವುದು ಬೇಡ. 78 ಮಾಜಿ ಐಎಎಸ್‌, ಐಪಿಎಸ್ ಅಧಿಕಾರಿಗಳು ಒಂದು ಬಹಿರಂಗ ಪತ್ರ ಬರೆದಿದ್ದಾರೆ. ಅದರಲ್ಲಿ “ಕೃಷಿ ಕ್ಷೇತ್ರ ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇಂಥದರಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ. ಈ (ಮೋದಿ) ಕಾನೂನುಗಳು ಭಾರತದ ಸಂವಿಧಾನದ ಫೆಡರಲ್ ಸ್ವರೂಪದ ಮೇಲಿನ ದಾಳಿ ಎಂದು ಆತಂಕಪಡುತ್ತಾರೆ.

ಮುಂದೆ ಆ ಅನುಭವಸ್ಥ ನಿವೃತ್ತ ಉನ್ನತಾಧಿಕಾರಿಗಳು “ಈ ಕೃಷಿ ಕಾನೂನುಗಳು ನೇರವಾಗಿ ಬಾಧಿಸುವ ರೈತರ ಜತೆ ಸರಕಾರ ಅವುಗಳನ್ನು ಜಾರಿಗೊಳಿಸುವ ಮುನ್ನ ಚರ್ಚಿಸಿಲ್ಲ. ಸಂಸತ್‌ನಲ್ಲಿ ಕಾನೂನುಗಳ ವಿರುದ್ಧ ಕೇಳಿಬಂದ ಆಕ್ಷೇಪಗಳಿಗೆ ಸರ್ಕಾರ ಕಿವಿಗೊಟ್ಟಿಲ್ಲ. ಮಸೂದೆಗಳ ಕುರಿತು ಚರ್ಚೆಗೆ ಸಮಯಾವಕಾಶ ನೀಡಲಾಗಿರಲಿಲ್ಲ. ಹಾಗೂ ಗೊಂದಲಕಾರಿ ವಾತಾವರಣದ ನಡುವೆ ಧ್ವನಿಮತದಿಂದ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಇದು ಅನುಮಾನಾಸ್ಪದ” ಎನ್ನುತ್ತಾರೆ.

ಹೌದು, ಇದು ದಾಳಿ ಮತ್ತು ಅನುಮಾನಾಸ್ಪದ. ಕೋವಿಡ್ ಸಾಂಕ್ರಾಮಿಕದ ಈ ದಯಾನೀಯ, ಧಾರುಣ ಕಾಲಮಾನದಲ್ಲಿ ಯಾರೂ ಉಸಿರೆತ್ತುವುದಿಲ್ಲ, ಇದೇ ಸರಿಯಾದ ಕಾಲ ಅಂದುಕೊಂಡು ಈ ಹಿಂದೆ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದ್ದ ಕೃಷಿ ಕಾನೂನುಗಳನ್ನು ಈಗ ಜಾರಿಗೊಳಿಸಲು ಹೊರಟಿದೆ. ಇದು ಕ್ರೌರ್ಯದ ಪರಮಾವಧಿ.

ಹೌದು, ಇದು ಸಂವಿಧಾನ, ಪ್ರಜಾಪ್ರಭುತ್ವ, ಭಾರತದ ಒಕ್ಕೂಟದ ಸ್ವರೂಪದ ಮೇಲೆ ಅಂದರೆ ಭಾರತ ಸ್ವಾತಂತ್ರ್ಯ ಪಡೆದ ಕನಸಿನ ಮೇಲೆ ನಡೆದ ದಾಳಿಯಾಗಿದೆ. ಅಂದರೆ ಇದು ಎಲ್ಲಾ ಪ್ರಜೆಗಳ ಮೇಲೆ ನಡೆಸಿದ ದಾಳಿಯಾಗಿದೆ.

ಹಾಗೆ ಇನ್ನೊಂದು ಕಿತಿಮಾತು. ಯಾವ ಕಡೆಗೂ ನೋಡದೆ ವೇಗವಾಗಿ ಚಲಿಸುತ್ತಿರುವವರಿಗೆ ಆಲಿಸಿ ಎಂದು ವಿನಂತಿಸುವೆ. 107 ದೇಶಗಳಲ್ಲಿ ನಡೆಸಲಾದ ಜಾಗತಿಕ ಹಸಿವಿನ ಸೂಚ್ಯಂಕ ಅಧ್ಯಯನದ ಪ್ರಕಾರ 2015- 2020ರ ಅವಧಿಯಲ್ಲಿ ಭಾರತ 94ನೇ ಸ್ಥಾನದಲ್ಲಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದು ಮೋದಿ ಸಾಹೇಬರ ಜಮಾನದಲ್ಲೆ ಆಗಿದೆ. ಆಫ್ರಿಕಾದ ಕಡುಬಡರಾಷ್ಟ್ರ ಸುಡಾನ್ ಜತೆ ಇದೆ. ಅಷ್ಟು ಮಾತ್ರವಲ್ಲ ಭಾರತದ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳ ಪರಿಸ್ಥಿತಿ ಭಾರತಕ್ಕಿಂತ ಉತ್ತಮವಾಗಿದೆ ಎಂದು ಆ ಅಧ್ಯಯನ ವರದಿ ಹೇಳುತ್ತದೆ. ಇಷ್ಟು ಸಾಕೇ? ಅಥವಾ ಮೋದಿ ಶಾ ಉಣಬಡಿಸುತ್ತಿರುವ ಮಾತಿನ ಮೃಷ್ಠಾನ್ನ ಭೋಜನ ಇನ್ನೂ ಬೇಕೆ? ಇಂಥ ದಯಾನೀಯ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಭಾರತದ ಆಹಾರ ಭದ್ರತೆ ಮೇಲೂ ದಾಳಿ ನಡೆಸುತ್ತಿದೆ. ಕೇಂದ್ರ ಸರ್ಕಾರ ನೇಮಿಸಿದ್ದ ಶಾಂತರಾಂ ಕಮಿಟಿಯು ಈಗ ಆಹಾರ ಭದ್ರತೆಯ ಕಾನೂನು ಮುಖಾಂತರ ಶೇಕಡಾ 67 ರಷ್ಟು ನೀಡಲಾಗುತ್ತಿದ್ದ ಆಹಾರ ಪಡಿತರವನ್ನು ಶೇಕಡ 40ಕ್ಕೆ ಇಳಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಹಾಗಾಗಿಯೇ ಕೃಷಿಯ ಕತ್ತು ಹಿಸುಕುವ ಈ ಕಾನೂನುಗಳು ಬಂದಂತಿವೆ. ಪರಿಣಾಮ ಏನಾಗಬಹುದು?

ಈಗಾಗಲೇ ಜಾಗತಿಕ ಹಸಿವಿನ ಸೂಚ್ಯಂಕದ ಪ್ರಕಾರ ಅಪೌಷ್ಠಿಕ ಮಕ್ಕಳಲ್ಲಿ ವಿಶ್ವದಲ್ಲಿನ ಮೂರನೇ ಒಂದು ಭಾಗ ಮಕ್ಕಳು ಭಾರತದಲ್ಲಿದ್ದಾರೆ. ಆಫ್ರಿಕಾಗಿಂತ ದುಪ್ಪಟ್ಟು. ವಿಶ್ವಸಂಸ್ಥೆಯ ಆಹಾರ ಮತ್ತು ವ್ಯವಸಾಯ ಸಂಘಟನೆಯ ರಕ್ತಹೀನತೆಯ ಬಳಲುವಿಕೆಯ ಸರ್ವೇ ವರದಿ ಪ್ರಕಾರ 180 ದೇಶಗಳ ಪೈಕಿ ಭಾರತದ ಸ್ಥಾನ 170. ಹಾಗೇ ಮಕ್ಕಳ ಬೆಳವಣಿಗೆ ಕುಂಠಿತ ಸರ್ವೆಯಲ್ಲಿ 132 ದೇಶಗಳಲ್ಲಿ ಭಾರತದ ಸ್ಥಾನ 114. ಅಷ್ಟೇ ಯಾಕೆ ನಮ್ಮ ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇ 2015-2020ರ ಅವಧಿಯಲ್ಲಿ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದೇ ವರದಿ ಮಾಡಿದೆ. ಹೀಗಿರುವಾಗ ಮುಂದೇನು?

ಇನ್ನಾದರೂ ನಾವು ಕೇಳಬೇಕು – ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಸ್ಲಂ ಭಾರತ ನಮಗೆ ಬೇಡ ಎಂದು ಹೇಳಬೇಕು.

ಆದರೆ ಮೋದಿ-ಶಾರು ಕೇಳಿಸಿಕೊಳ್ಳುತ್ತಿಲ್ಲ. ತಮ್ಮ ಭ್ರಮೆ ಮತ್ತು ಸುಳ್ಳುಗಳಲ್ಲಿ ತಾವೇ ಹೂತು ಹೋಗಿದ್ದಾರೆ. ಇವರು ವಿಥ್ಯಾವತಾರ ಪುರುಷರು. ಇವರಿಗೆ ಕಣ್ಣೂ ಕಾಣಿಸುತ್ತಿಲ್ಲ. ಕಿವಿಯೂ ಕೇಳಿಸುತ್ತಿಲ್ಲ. ಏನು ಮಾಡಬೇಕು? ‘ಗೊತ್ತು.. ಹೇಗೆ ಗೆಲ್ಲೋದು ಅಂತ ಗೊತ್ತು’ ಎಂಬ ಅಹಂಭಾವದಲ್ಲಿ ಅವರು ಇದ್ದಿರುವಂತಿದೆ. ಇಂತಹ ರಾಜಕಾರಣದ ಹಿಮ್ಮಡಿ ನರ ಕತ್ತರಿಸಿ ಇವರ ಅಧಿಕಾರದ ಚಲನೆ ನಿಲ್ಲುಸುವಂತಾದರೆ ಇವರಿಗೆ ಕಣ್ಣು ಕಾಣಿಸಬಹುದು, ಕಿವಿಯೂ ಕೇಳಿಸಬಹುದು. ಸಂವೇದನಾಶೀಲತೆ ಉಂಟಾಗಲೂಬಹುದು. ಇಂಥವರ ಒಳಗೂ ಮಾನವೀಯತೆ ಉಸಿರಾಡಬಹುದು. ಇದಕ್ಕಾಗಿ ಎಲ್ಲರ ಚಿತ್ತ ಮತದಾರರತ್ತ ನಡೆಯಬೇಕಾಗಿದೆ.

  • ದೇವನೂರ ಮಹಾದೇವ

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಶಿವಸುಂದರ್, ಅರಳಾಳು ಅನುಸೂಯಮ್ಮ, ನೂರ್ ಶ್ರೀಧರ್, ಬಿ.ಶ್ರೀಪಾದ್ ಭಟ್, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ವರದರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ಇತಿಹಾಸದ ಕೆಲವು ಘಟ್ಟಗಳಲ್ಲಂತೂ ಮಧ್ಯದ ದಾರಿ ಇರುವುದಿಲ್ಲ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...