Homeಚಳವಳಿವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಭಾರತ ನಮಗೆ ಬೇಡ.

- Advertisement -
- Advertisement -

ಕೇಂದ್ರದ ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಹೋರಾಟ ಮುಂದುವರೆದಿದೆ. ಐಕ್ಯ ಹೋರಾಟ ಸಮಿತಿ, AIKSCC, ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಇಂದು ಪ್ರತಿಭಟನಾ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವರವರು ಭಾಗವಹಿಸಿ ಮಾತನಾಡಿದರು. ಅವರ ಭಾಷಣ ಪೂರ್ಣಪಾಠ ಇಲ್ಲಿದೆ.

ರಾಜ್ಯದ ರಾಜಧಾನಿಯಲ್ಲಿ ಕುಳಿತು ನಾವು ಕೂಗಿ ಕೂಗಿ ಹೇಳುತ್ತಿದ್ದೇವೆ. ನಮ್ಮ ಸುತ್ತ ಮುತ್ತಲೂ ಮೂರು ದಾರಿ ಇದೆ. ನಮ್ಮ ಸುತ್ತಲೂ ಚಲಿಸುತ್ತಿರುವ ವಾಹನಗಳೇ ಹೆಚ್ಚು. ವಾಹನಗಳಿಗೆ ತಮ್ಮ ಅಕ್ಕ ಪಕ್ಕ ನೋಡುವ ವ್ಯವಧಾನ ಇರುವುದಿಲ್ಲ. ಈ ಈ ಧಾವಂತ ಮತ್ತು ವೇಗವನ್ನು ನಗರಗಳ ಲಕ್ಷಣ ಎನ್ನುತ್ತಾರೆ. ಇಂಥ ಕಡೆ ನಮ್ಮ ಮಾತು ಕೇಳಿಸುತ್ತಾ?

ಆದರೂ, ವೇಗವಾಗಿ ಓಡುತ್ತಿರುವವರಿಗೆ ಒಂದು ಕಿವಿಮಾತು ಹೇಳುತ್ತಿರುವೆ. ಏನೆಂದರೆ ನೀವು ನಮ್ಮ ಮಾತನ್ನು ಕೇಳುವುದು ಬೇಡ. 78 ಮಾಜಿ ಐಎಎಸ್‌, ಐಪಿಎಸ್ ಅಧಿಕಾರಿಗಳು ಒಂದು ಬಹಿರಂಗ ಪತ್ರ ಬರೆದಿದ್ದಾರೆ. ಅದರಲ್ಲಿ “ಕೃಷಿ ಕ್ಷೇತ್ರ ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇಂಥದರಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ. ಈ (ಮೋದಿ) ಕಾನೂನುಗಳು ಭಾರತದ ಸಂವಿಧಾನದ ಫೆಡರಲ್ ಸ್ವರೂಪದ ಮೇಲಿನ ದಾಳಿ ಎಂದು ಆತಂಕಪಡುತ್ತಾರೆ.

ಮುಂದೆ ಆ ಅನುಭವಸ್ಥ ನಿವೃತ್ತ ಉನ್ನತಾಧಿಕಾರಿಗಳು “ಈ ಕೃಷಿ ಕಾನೂನುಗಳು ನೇರವಾಗಿ ಬಾಧಿಸುವ ರೈತರ ಜತೆ ಸರಕಾರ ಅವುಗಳನ್ನು ಜಾರಿಗೊಳಿಸುವ ಮುನ್ನ ಚರ್ಚಿಸಿಲ್ಲ. ಸಂಸತ್‌ನಲ್ಲಿ ಕಾನೂನುಗಳ ವಿರುದ್ಧ ಕೇಳಿಬಂದ ಆಕ್ಷೇಪಗಳಿಗೆ ಸರ್ಕಾರ ಕಿವಿಗೊಟ್ಟಿಲ್ಲ. ಮಸೂದೆಗಳ ಕುರಿತು ಚರ್ಚೆಗೆ ಸಮಯಾವಕಾಶ ನೀಡಲಾಗಿರಲಿಲ್ಲ. ಹಾಗೂ ಗೊಂದಲಕಾರಿ ವಾತಾವರಣದ ನಡುವೆ ಧ್ವನಿಮತದಿಂದ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಇದು ಅನುಮಾನಾಸ್ಪದ” ಎನ್ನುತ್ತಾರೆ.

ಹೌದು, ಇದು ದಾಳಿ ಮತ್ತು ಅನುಮಾನಾಸ್ಪದ. ಕೋವಿಡ್ ಸಾಂಕ್ರಾಮಿಕದ ಈ ದಯಾನೀಯ, ಧಾರುಣ ಕಾಲಮಾನದಲ್ಲಿ ಯಾರೂ ಉಸಿರೆತ್ತುವುದಿಲ್ಲ, ಇದೇ ಸರಿಯಾದ ಕಾಲ ಅಂದುಕೊಂಡು ಈ ಹಿಂದೆ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದ್ದ ಕೃಷಿ ಕಾನೂನುಗಳನ್ನು ಈಗ ಜಾರಿಗೊಳಿಸಲು ಹೊರಟಿದೆ. ಇದು ಕ್ರೌರ್ಯದ ಪರಮಾವಧಿ.

ಹೌದು, ಇದು ಸಂವಿಧಾನ, ಪ್ರಜಾಪ್ರಭುತ್ವ, ಭಾರತದ ಒಕ್ಕೂಟದ ಸ್ವರೂಪದ ಮೇಲೆ ಅಂದರೆ ಭಾರತ ಸ್ವಾತಂತ್ರ್ಯ ಪಡೆದ ಕನಸಿನ ಮೇಲೆ ನಡೆದ ದಾಳಿಯಾಗಿದೆ. ಅಂದರೆ ಇದು ಎಲ್ಲಾ ಪ್ರಜೆಗಳ ಮೇಲೆ ನಡೆಸಿದ ದಾಳಿಯಾಗಿದೆ.

ಹಾಗೆ ಇನ್ನೊಂದು ಕಿತಿಮಾತು. ಯಾವ ಕಡೆಗೂ ನೋಡದೆ ವೇಗವಾಗಿ ಚಲಿಸುತ್ತಿರುವವರಿಗೆ ಆಲಿಸಿ ಎಂದು ವಿನಂತಿಸುವೆ. 107 ದೇಶಗಳಲ್ಲಿ ನಡೆಸಲಾದ ಜಾಗತಿಕ ಹಸಿವಿನ ಸೂಚ್ಯಂಕ ಅಧ್ಯಯನದ ಪ್ರಕಾರ 2015- 2020ರ ಅವಧಿಯಲ್ಲಿ ಭಾರತ 94ನೇ ಸ್ಥಾನದಲ್ಲಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದು ಮೋದಿ ಸಾಹೇಬರ ಜಮಾನದಲ್ಲೆ ಆಗಿದೆ. ಆಫ್ರಿಕಾದ ಕಡುಬಡರಾಷ್ಟ್ರ ಸುಡಾನ್ ಜತೆ ಇದೆ. ಅಷ್ಟು ಮಾತ್ರವಲ್ಲ ಭಾರತದ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳ ಪರಿಸ್ಥಿತಿ ಭಾರತಕ್ಕಿಂತ ಉತ್ತಮವಾಗಿದೆ ಎಂದು ಆ ಅಧ್ಯಯನ ವರದಿ ಹೇಳುತ್ತದೆ. ಇಷ್ಟು ಸಾಕೇ? ಅಥವಾ ಮೋದಿ ಶಾ ಉಣಬಡಿಸುತ್ತಿರುವ ಮಾತಿನ ಮೃಷ್ಠಾನ್ನ ಭೋಜನ ಇನ್ನೂ ಬೇಕೆ? ಇಂಥ ದಯಾನೀಯ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಭಾರತದ ಆಹಾರ ಭದ್ರತೆ ಮೇಲೂ ದಾಳಿ ನಡೆಸುತ್ತಿದೆ. ಕೇಂದ್ರ ಸರ್ಕಾರ ನೇಮಿಸಿದ್ದ ಶಾಂತರಾಂ ಕಮಿಟಿಯು ಈಗ ಆಹಾರ ಭದ್ರತೆಯ ಕಾನೂನು ಮುಖಾಂತರ ಶೇಕಡಾ 67 ರಷ್ಟು ನೀಡಲಾಗುತ್ತಿದ್ದ ಆಹಾರ ಪಡಿತರವನ್ನು ಶೇಕಡ 40ಕ್ಕೆ ಇಳಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಹಾಗಾಗಿಯೇ ಕೃಷಿಯ ಕತ್ತು ಹಿಸುಕುವ ಈ ಕಾನೂನುಗಳು ಬಂದಂತಿವೆ. ಪರಿಣಾಮ ಏನಾಗಬಹುದು?

ಈಗಾಗಲೇ ಜಾಗತಿಕ ಹಸಿವಿನ ಸೂಚ್ಯಂಕದ ಪ್ರಕಾರ ಅಪೌಷ್ಠಿಕ ಮಕ್ಕಳಲ್ಲಿ ವಿಶ್ವದಲ್ಲಿನ ಮೂರನೇ ಒಂದು ಭಾಗ ಮಕ್ಕಳು ಭಾರತದಲ್ಲಿದ್ದಾರೆ. ಆಫ್ರಿಕಾಗಿಂತ ದುಪ್ಪಟ್ಟು. ವಿಶ್ವಸಂಸ್ಥೆಯ ಆಹಾರ ಮತ್ತು ವ್ಯವಸಾಯ ಸಂಘಟನೆಯ ರಕ್ತಹೀನತೆಯ ಬಳಲುವಿಕೆಯ ಸರ್ವೇ ವರದಿ ಪ್ರಕಾರ 180 ದೇಶಗಳ ಪೈಕಿ ಭಾರತದ ಸ್ಥಾನ 170. ಹಾಗೇ ಮಕ್ಕಳ ಬೆಳವಣಿಗೆ ಕುಂಠಿತ ಸರ್ವೆಯಲ್ಲಿ 132 ದೇಶಗಳಲ್ಲಿ ಭಾರತದ ಸ್ಥಾನ 114. ಅಷ್ಟೇ ಯಾಕೆ ನಮ್ಮ ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇ 2015-2020ರ ಅವಧಿಯಲ್ಲಿ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದೇ ವರದಿ ಮಾಡಿದೆ. ಹೀಗಿರುವಾಗ ಮುಂದೇನು?

ಇನ್ನಾದರೂ ನಾವು ಕೇಳಬೇಕು – ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಸ್ಲಂ ಭಾರತ ನಮಗೆ ಬೇಡ ಎಂದು ಹೇಳಬೇಕು.

ಆದರೆ ಮೋದಿ-ಶಾರು ಕೇಳಿಸಿಕೊಳ್ಳುತ್ತಿಲ್ಲ. ತಮ್ಮ ಭ್ರಮೆ ಮತ್ತು ಸುಳ್ಳುಗಳಲ್ಲಿ ತಾವೇ ಹೂತು ಹೋಗಿದ್ದಾರೆ. ಇವರು ವಿಥ್ಯಾವತಾರ ಪುರುಷರು. ಇವರಿಗೆ ಕಣ್ಣೂ ಕಾಣಿಸುತ್ತಿಲ್ಲ. ಕಿವಿಯೂ ಕೇಳಿಸುತ್ತಿಲ್ಲ. ಏನು ಮಾಡಬೇಕು? ‘ಗೊತ್ತು.. ಹೇಗೆ ಗೆಲ್ಲೋದು ಅಂತ ಗೊತ್ತು’ ಎಂಬ ಅಹಂಭಾವದಲ್ಲಿ ಅವರು ಇದ್ದಿರುವಂತಿದೆ. ಇಂತಹ ರಾಜಕಾರಣದ ಹಿಮ್ಮಡಿ ನರ ಕತ್ತರಿಸಿ ಇವರ ಅಧಿಕಾರದ ಚಲನೆ ನಿಲ್ಲುಸುವಂತಾದರೆ ಇವರಿಗೆ ಕಣ್ಣು ಕಾಣಿಸಬಹುದು, ಕಿವಿಯೂ ಕೇಳಿಸಬಹುದು. ಸಂವೇದನಾಶೀಲತೆ ಉಂಟಾಗಲೂಬಹುದು. ಇಂಥವರ ಒಳಗೂ ಮಾನವೀಯತೆ ಉಸಿರಾಡಬಹುದು. ಇದಕ್ಕಾಗಿ ಎಲ್ಲರ ಚಿತ್ತ ಮತದಾರರತ್ತ ನಡೆಯಬೇಕಾಗಿದೆ.

  • ದೇವನೂರ ಮಹಾದೇವ

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಶಿವಸುಂದರ್, ಅರಳಾಳು ಅನುಸೂಯಮ್ಮ, ನೂರ್ ಶ್ರೀಧರ್, ಬಿ.ಶ್ರೀಪಾದ್ ಭಟ್, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ವರದರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ಇತಿಹಾಸದ ಕೆಲವು ಘಟ್ಟಗಳಲ್ಲಂತೂ ಮಧ್ಯದ ದಾರಿ ಇರುವುದಿಲ್ಲ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...