Homeಚಳವಳಿವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಭಾರತ ನಮಗೆ ಬೇಡ.

- Advertisement -
- Advertisement -

ಕೇಂದ್ರದ ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಹೋರಾಟ ಮುಂದುವರೆದಿದೆ. ಐಕ್ಯ ಹೋರಾಟ ಸಮಿತಿ, AIKSCC, ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಇಂದು ಪ್ರತಿಭಟನಾ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವರವರು ಭಾಗವಹಿಸಿ ಮಾತನಾಡಿದರು. ಅವರ ಭಾಷಣ ಪೂರ್ಣಪಾಠ ಇಲ್ಲಿದೆ.

ರಾಜ್ಯದ ರಾಜಧಾನಿಯಲ್ಲಿ ಕುಳಿತು ನಾವು ಕೂಗಿ ಕೂಗಿ ಹೇಳುತ್ತಿದ್ದೇವೆ. ನಮ್ಮ ಸುತ್ತ ಮುತ್ತಲೂ ಮೂರು ದಾರಿ ಇದೆ. ನಮ್ಮ ಸುತ್ತಲೂ ಚಲಿಸುತ್ತಿರುವ ವಾಹನಗಳೇ ಹೆಚ್ಚು. ವಾಹನಗಳಿಗೆ ತಮ್ಮ ಅಕ್ಕ ಪಕ್ಕ ನೋಡುವ ವ್ಯವಧಾನ ಇರುವುದಿಲ್ಲ. ಈ ಈ ಧಾವಂತ ಮತ್ತು ವೇಗವನ್ನು ನಗರಗಳ ಲಕ್ಷಣ ಎನ್ನುತ್ತಾರೆ. ಇಂಥ ಕಡೆ ನಮ್ಮ ಮಾತು ಕೇಳಿಸುತ್ತಾ?

ಆದರೂ, ವೇಗವಾಗಿ ಓಡುತ್ತಿರುವವರಿಗೆ ಒಂದು ಕಿವಿಮಾತು ಹೇಳುತ್ತಿರುವೆ. ಏನೆಂದರೆ ನೀವು ನಮ್ಮ ಮಾತನ್ನು ಕೇಳುವುದು ಬೇಡ. 78 ಮಾಜಿ ಐಎಎಸ್‌, ಐಪಿಎಸ್ ಅಧಿಕಾರಿಗಳು ಒಂದು ಬಹಿರಂಗ ಪತ್ರ ಬರೆದಿದ್ದಾರೆ. ಅದರಲ್ಲಿ “ಕೃಷಿ ಕ್ಷೇತ್ರ ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇಂಥದರಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ. ಈ (ಮೋದಿ) ಕಾನೂನುಗಳು ಭಾರತದ ಸಂವಿಧಾನದ ಫೆಡರಲ್ ಸ್ವರೂಪದ ಮೇಲಿನ ದಾಳಿ ಎಂದು ಆತಂಕಪಡುತ್ತಾರೆ.

ಮುಂದೆ ಆ ಅನುಭವಸ್ಥ ನಿವೃತ್ತ ಉನ್ನತಾಧಿಕಾರಿಗಳು “ಈ ಕೃಷಿ ಕಾನೂನುಗಳು ನೇರವಾಗಿ ಬಾಧಿಸುವ ರೈತರ ಜತೆ ಸರಕಾರ ಅವುಗಳನ್ನು ಜಾರಿಗೊಳಿಸುವ ಮುನ್ನ ಚರ್ಚಿಸಿಲ್ಲ. ಸಂಸತ್‌ನಲ್ಲಿ ಕಾನೂನುಗಳ ವಿರುದ್ಧ ಕೇಳಿಬಂದ ಆಕ್ಷೇಪಗಳಿಗೆ ಸರ್ಕಾರ ಕಿವಿಗೊಟ್ಟಿಲ್ಲ. ಮಸೂದೆಗಳ ಕುರಿತು ಚರ್ಚೆಗೆ ಸಮಯಾವಕಾಶ ನೀಡಲಾಗಿರಲಿಲ್ಲ. ಹಾಗೂ ಗೊಂದಲಕಾರಿ ವಾತಾವರಣದ ನಡುವೆ ಧ್ವನಿಮತದಿಂದ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಇದು ಅನುಮಾನಾಸ್ಪದ” ಎನ್ನುತ್ತಾರೆ.

ಹೌದು, ಇದು ದಾಳಿ ಮತ್ತು ಅನುಮಾನಾಸ್ಪದ. ಕೋವಿಡ್ ಸಾಂಕ್ರಾಮಿಕದ ಈ ದಯಾನೀಯ, ಧಾರುಣ ಕಾಲಮಾನದಲ್ಲಿ ಯಾರೂ ಉಸಿರೆತ್ತುವುದಿಲ್ಲ, ಇದೇ ಸರಿಯಾದ ಕಾಲ ಅಂದುಕೊಂಡು ಈ ಹಿಂದೆ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದ್ದ ಕೃಷಿ ಕಾನೂನುಗಳನ್ನು ಈಗ ಜಾರಿಗೊಳಿಸಲು ಹೊರಟಿದೆ. ಇದು ಕ್ರೌರ್ಯದ ಪರಮಾವಧಿ.

ಹೌದು, ಇದು ಸಂವಿಧಾನ, ಪ್ರಜಾಪ್ರಭುತ್ವ, ಭಾರತದ ಒಕ್ಕೂಟದ ಸ್ವರೂಪದ ಮೇಲೆ ಅಂದರೆ ಭಾರತ ಸ್ವಾತಂತ್ರ್ಯ ಪಡೆದ ಕನಸಿನ ಮೇಲೆ ನಡೆದ ದಾಳಿಯಾಗಿದೆ. ಅಂದರೆ ಇದು ಎಲ್ಲಾ ಪ್ರಜೆಗಳ ಮೇಲೆ ನಡೆಸಿದ ದಾಳಿಯಾಗಿದೆ.

ಹಾಗೆ ಇನ್ನೊಂದು ಕಿತಿಮಾತು. ಯಾವ ಕಡೆಗೂ ನೋಡದೆ ವೇಗವಾಗಿ ಚಲಿಸುತ್ತಿರುವವರಿಗೆ ಆಲಿಸಿ ಎಂದು ವಿನಂತಿಸುವೆ. 107 ದೇಶಗಳಲ್ಲಿ ನಡೆಸಲಾದ ಜಾಗತಿಕ ಹಸಿವಿನ ಸೂಚ್ಯಂಕ ಅಧ್ಯಯನದ ಪ್ರಕಾರ 2015- 2020ರ ಅವಧಿಯಲ್ಲಿ ಭಾರತ 94ನೇ ಸ್ಥಾನದಲ್ಲಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದು ಮೋದಿ ಸಾಹೇಬರ ಜಮಾನದಲ್ಲೆ ಆಗಿದೆ. ಆಫ್ರಿಕಾದ ಕಡುಬಡರಾಷ್ಟ್ರ ಸುಡಾನ್ ಜತೆ ಇದೆ. ಅಷ್ಟು ಮಾತ್ರವಲ್ಲ ಭಾರತದ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳ ಪರಿಸ್ಥಿತಿ ಭಾರತಕ್ಕಿಂತ ಉತ್ತಮವಾಗಿದೆ ಎಂದು ಆ ಅಧ್ಯಯನ ವರದಿ ಹೇಳುತ್ತದೆ. ಇಷ್ಟು ಸಾಕೇ? ಅಥವಾ ಮೋದಿ ಶಾ ಉಣಬಡಿಸುತ್ತಿರುವ ಮಾತಿನ ಮೃಷ್ಠಾನ್ನ ಭೋಜನ ಇನ್ನೂ ಬೇಕೆ? ಇಂಥ ದಯಾನೀಯ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಭಾರತದ ಆಹಾರ ಭದ್ರತೆ ಮೇಲೂ ದಾಳಿ ನಡೆಸುತ್ತಿದೆ. ಕೇಂದ್ರ ಸರ್ಕಾರ ನೇಮಿಸಿದ್ದ ಶಾಂತರಾಂ ಕಮಿಟಿಯು ಈಗ ಆಹಾರ ಭದ್ರತೆಯ ಕಾನೂನು ಮುಖಾಂತರ ಶೇಕಡಾ 67 ರಷ್ಟು ನೀಡಲಾಗುತ್ತಿದ್ದ ಆಹಾರ ಪಡಿತರವನ್ನು ಶೇಕಡ 40ಕ್ಕೆ ಇಳಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಹಾಗಾಗಿಯೇ ಕೃಷಿಯ ಕತ್ತು ಹಿಸುಕುವ ಈ ಕಾನೂನುಗಳು ಬಂದಂತಿವೆ. ಪರಿಣಾಮ ಏನಾಗಬಹುದು?

ಈಗಾಗಲೇ ಜಾಗತಿಕ ಹಸಿವಿನ ಸೂಚ್ಯಂಕದ ಪ್ರಕಾರ ಅಪೌಷ್ಠಿಕ ಮಕ್ಕಳಲ್ಲಿ ವಿಶ್ವದಲ್ಲಿನ ಮೂರನೇ ಒಂದು ಭಾಗ ಮಕ್ಕಳು ಭಾರತದಲ್ಲಿದ್ದಾರೆ. ಆಫ್ರಿಕಾಗಿಂತ ದುಪ್ಪಟ್ಟು. ವಿಶ್ವಸಂಸ್ಥೆಯ ಆಹಾರ ಮತ್ತು ವ್ಯವಸಾಯ ಸಂಘಟನೆಯ ರಕ್ತಹೀನತೆಯ ಬಳಲುವಿಕೆಯ ಸರ್ವೇ ವರದಿ ಪ್ರಕಾರ 180 ದೇಶಗಳ ಪೈಕಿ ಭಾರತದ ಸ್ಥಾನ 170. ಹಾಗೇ ಮಕ್ಕಳ ಬೆಳವಣಿಗೆ ಕುಂಠಿತ ಸರ್ವೆಯಲ್ಲಿ 132 ದೇಶಗಳಲ್ಲಿ ಭಾರತದ ಸ್ಥಾನ 114. ಅಷ್ಟೇ ಯಾಕೆ ನಮ್ಮ ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇ 2015-2020ರ ಅವಧಿಯಲ್ಲಿ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದೇ ವರದಿ ಮಾಡಿದೆ. ಹೀಗಿರುವಾಗ ಮುಂದೇನು?

ಇನ್ನಾದರೂ ನಾವು ಕೇಳಬೇಕು – ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಸ್ಲಂ ಭಾರತ ನಮಗೆ ಬೇಡ ಎಂದು ಹೇಳಬೇಕು.

ಆದರೆ ಮೋದಿ-ಶಾರು ಕೇಳಿಸಿಕೊಳ್ಳುತ್ತಿಲ್ಲ. ತಮ್ಮ ಭ್ರಮೆ ಮತ್ತು ಸುಳ್ಳುಗಳಲ್ಲಿ ತಾವೇ ಹೂತು ಹೋಗಿದ್ದಾರೆ. ಇವರು ವಿಥ್ಯಾವತಾರ ಪುರುಷರು. ಇವರಿಗೆ ಕಣ್ಣೂ ಕಾಣಿಸುತ್ತಿಲ್ಲ. ಕಿವಿಯೂ ಕೇಳಿಸುತ್ತಿಲ್ಲ. ಏನು ಮಾಡಬೇಕು? ‘ಗೊತ್ತು.. ಹೇಗೆ ಗೆಲ್ಲೋದು ಅಂತ ಗೊತ್ತು’ ಎಂಬ ಅಹಂಭಾವದಲ್ಲಿ ಅವರು ಇದ್ದಿರುವಂತಿದೆ. ಇಂತಹ ರಾಜಕಾರಣದ ಹಿಮ್ಮಡಿ ನರ ಕತ್ತರಿಸಿ ಇವರ ಅಧಿಕಾರದ ಚಲನೆ ನಿಲ್ಲುಸುವಂತಾದರೆ ಇವರಿಗೆ ಕಣ್ಣು ಕಾಣಿಸಬಹುದು, ಕಿವಿಯೂ ಕೇಳಿಸಬಹುದು. ಸಂವೇದನಾಶೀಲತೆ ಉಂಟಾಗಲೂಬಹುದು. ಇಂಥವರ ಒಳಗೂ ಮಾನವೀಯತೆ ಉಸಿರಾಡಬಹುದು. ಇದಕ್ಕಾಗಿ ಎಲ್ಲರ ಚಿತ್ತ ಮತದಾರರತ್ತ ನಡೆಯಬೇಕಾಗಿದೆ.

  • ದೇವನೂರ ಮಹಾದೇವ

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಶಿವಸುಂದರ್, ಅರಳಾಳು ಅನುಸೂಯಮ್ಮ, ನೂರ್ ಶ್ರೀಧರ್, ಬಿ.ಶ್ರೀಪಾದ್ ಭಟ್, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ವರದರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ಇತಿಹಾಸದ ಕೆಲವು ಘಟ್ಟಗಳಲ್ಲಂತೂ ಮಧ್ಯದ ದಾರಿ ಇರುವುದಿಲ್ಲ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...