Homeಚಳವಳಿವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಭಾರತ ನಮಗೆ ಬೇಡ.

- Advertisement -
- Advertisement -

ಕೇಂದ್ರದ ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಹೋರಾಟ ಮುಂದುವರೆದಿದೆ. ಐಕ್ಯ ಹೋರಾಟ ಸಮಿತಿ, AIKSCC, ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಇಂದು ಪ್ರತಿಭಟನಾ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವರವರು ಭಾಗವಹಿಸಿ ಮಾತನಾಡಿದರು. ಅವರ ಭಾಷಣ ಪೂರ್ಣಪಾಠ ಇಲ್ಲಿದೆ.

ರಾಜ್ಯದ ರಾಜಧಾನಿಯಲ್ಲಿ ಕುಳಿತು ನಾವು ಕೂಗಿ ಕೂಗಿ ಹೇಳುತ್ತಿದ್ದೇವೆ. ನಮ್ಮ ಸುತ್ತ ಮುತ್ತಲೂ ಮೂರು ದಾರಿ ಇದೆ. ನಮ್ಮ ಸುತ್ತಲೂ ಚಲಿಸುತ್ತಿರುವ ವಾಹನಗಳೇ ಹೆಚ್ಚು. ವಾಹನಗಳಿಗೆ ತಮ್ಮ ಅಕ್ಕ ಪಕ್ಕ ನೋಡುವ ವ್ಯವಧಾನ ಇರುವುದಿಲ್ಲ. ಈ ಈ ಧಾವಂತ ಮತ್ತು ವೇಗವನ್ನು ನಗರಗಳ ಲಕ್ಷಣ ಎನ್ನುತ್ತಾರೆ. ಇಂಥ ಕಡೆ ನಮ್ಮ ಮಾತು ಕೇಳಿಸುತ್ತಾ?

ಆದರೂ, ವೇಗವಾಗಿ ಓಡುತ್ತಿರುವವರಿಗೆ ಒಂದು ಕಿವಿಮಾತು ಹೇಳುತ್ತಿರುವೆ. ಏನೆಂದರೆ ನೀವು ನಮ್ಮ ಮಾತನ್ನು ಕೇಳುವುದು ಬೇಡ. 78 ಮಾಜಿ ಐಎಎಸ್‌, ಐಪಿಎಸ್ ಅಧಿಕಾರಿಗಳು ಒಂದು ಬಹಿರಂಗ ಪತ್ರ ಬರೆದಿದ್ದಾರೆ. ಅದರಲ್ಲಿ “ಕೃಷಿ ಕ್ಷೇತ್ರ ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇಂಥದರಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ. ಈ (ಮೋದಿ) ಕಾನೂನುಗಳು ಭಾರತದ ಸಂವಿಧಾನದ ಫೆಡರಲ್ ಸ್ವರೂಪದ ಮೇಲಿನ ದಾಳಿ ಎಂದು ಆತಂಕಪಡುತ್ತಾರೆ.

ಮುಂದೆ ಆ ಅನುಭವಸ್ಥ ನಿವೃತ್ತ ಉನ್ನತಾಧಿಕಾರಿಗಳು “ಈ ಕೃಷಿ ಕಾನೂನುಗಳು ನೇರವಾಗಿ ಬಾಧಿಸುವ ರೈತರ ಜತೆ ಸರಕಾರ ಅವುಗಳನ್ನು ಜಾರಿಗೊಳಿಸುವ ಮುನ್ನ ಚರ್ಚಿಸಿಲ್ಲ. ಸಂಸತ್‌ನಲ್ಲಿ ಕಾನೂನುಗಳ ವಿರುದ್ಧ ಕೇಳಿಬಂದ ಆಕ್ಷೇಪಗಳಿಗೆ ಸರ್ಕಾರ ಕಿವಿಗೊಟ್ಟಿಲ್ಲ. ಮಸೂದೆಗಳ ಕುರಿತು ಚರ್ಚೆಗೆ ಸಮಯಾವಕಾಶ ನೀಡಲಾಗಿರಲಿಲ್ಲ. ಹಾಗೂ ಗೊಂದಲಕಾರಿ ವಾತಾವರಣದ ನಡುವೆ ಧ್ವನಿಮತದಿಂದ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಇದು ಅನುಮಾನಾಸ್ಪದ” ಎನ್ನುತ್ತಾರೆ.

ಹೌದು, ಇದು ದಾಳಿ ಮತ್ತು ಅನುಮಾನಾಸ್ಪದ. ಕೋವಿಡ್ ಸಾಂಕ್ರಾಮಿಕದ ಈ ದಯಾನೀಯ, ಧಾರುಣ ಕಾಲಮಾನದಲ್ಲಿ ಯಾರೂ ಉಸಿರೆತ್ತುವುದಿಲ್ಲ, ಇದೇ ಸರಿಯಾದ ಕಾಲ ಅಂದುಕೊಂಡು ಈ ಹಿಂದೆ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದ್ದ ಕೃಷಿ ಕಾನೂನುಗಳನ್ನು ಈಗ ಜಾರಿಗೊಳಿಸಲು ಹೊರಟಿದೆ. ಇದು ಕ್ರೌರ್ಯದ ಪರಮಾವಧಿ.

ಹೌದು, ಇದು ಸಂವಿಧಾನ, ಪ್ರಜಾಪ್ರಭುತ್ವ, ಭಾರತದ ಒಕ್ಕೂಟದ ಸ್ವರೂಪದ ಮೇಲೆ ಅಂದರೆ ಭಾರತ ಸ್ವಾತಂತ್ರ್ಯ ಪಡೆದ ಕನಸಿನ ಮೇಲೆ ನಡೆದ ದಾಳಿಯಾಗಿದೆ. ಅಂದರೆ ಇದು ಎಲ್ಲಾ ಪ್ರಜೆಗಳ ಮೇಲೆ ನಡೆಸಿದ ದಾಳಿಯಾಗಿದೆ.

ಹಾಗೆ ಇನ್ನೊಂದು ಕಿತಿಮಾತು. ಯಾವ ಕಡೆಗೂ ನೋಡದೆ ವೇಗವಾಗಿ ಚಲಿಸುತ್ತಿರುವವರಿಗೆ ಆಲಿಸಿ ಎಂದು ವಿನಂತಿಸುವೆ. 107 ದೇಶಗಳಲ್ಲಿ ನಡೆಸಲಾದ ಜಾಗತಿಕ ಹಸಿವಿನ ಸೂಚ್ಯಂಕ ಅಧ್ಯಯನದ ಪ್ರಕಾರ 2015- 2020ರ ಅವಧಿಯಲ್ಲಿ ಭಾರತ 94ನೇ ಸ್ಥಾನದಲ್ಲಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದು ಮೋದಿ ಸಾಹೇಬರ ಜಮಾನದಲ್ಲೆ ಆಗಿದೆ. ಆಫ್ರಿಕಾದ ಕಡುಬಡರಾಷ್ಟ್ರ ಸುಡಾನ್ ಜತೆ ಇದೆ. ಅಷ್ಟು ಮಾತ್ರವಲ್ಲ ಭಾರತದ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳ ಪರಿಸ್ಥಿತಿ ಭಾರತಕ್ಕಿಂತ ಉತ್ತಮವಾಗಿದೆ ಎಂದು ಆ ಅಧ್ಯಯನ ವರದಿ ಹೇಳುತ್ತದೆ. ಇಷ್ಟು ಸಾಕೇ? ಅಥವಾ ಮೋದಿ ಶಾ ಉಣಬಡಿಸುತ್ತಿರುವ ಮಾತಿನ ಮೃಷ್ಠಾನ್ನ ಭೋಜನ ಇನ್ನೂ ಬೇಕೆ? ಇಂಥ ದಯಾನೀಯ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಭಾರತದ ಆಹಾರ ಭದ್ರತೆ ಮೇಲೂ ದಾಳಿ ನಡೆಸುತ್ತಿದೆ. ಕೇಂದ್ರ ಸರ್ಕಾರ ನೇಮಿಸಿದ್ದ ಶಾಂತರಾಂ ಕಮಿಟಿಯು ಈಗ ಆಹಾರ ಭದ್ರತೆಯ ಕಾನೂನು ಮುಖಾಂತರ ಶೇಕಡಾ 67 ರಷ್ಟು ನೀಡಲಾಗುತ್ತಿದ್ದ ಆಹಾರ ಪಡಿತರವನ್ನು ಶೇಕಡ 40ಕ್ಕೆ ಇಳಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಹಾಗಾಗಿಯೇ ಕೃಷಿಯ ಕತ್ತು ಹಿಸುಕುವ ಈ ಕಾನೂನುಗಳು ಬಂದಂತಿವೆ. ಪರಿಣಾಮ ಏನಾಗಬಹುದು?

ಈಗಾಗಲೇ ಜಾಗತಿಕ ಹಸಿವಿನ ಸೂಚ್ಯಂಕದ ಪ್ರಕಾರ ಅಪೌಷ್ಠಿಕ ಮಕ್ಕಳಲ್ಲಿ ವಿಶ್ವದಲ್ಲಿನ ಮೂರನೇ ಒಂದು ಭಾಗ ಮಕ್ಕಳು ಭಾರತದಲ್ಲಿದ್ದಾರೆ. ಆಫ್ರಿಕಾಗಿಂತ ದುಪ್ಪಟ್ಟು. ವಿಶ್ವಸಂಸ್ಥೆಯ ಆಹಾರ ಮತ್ತು ವ್ಯವಸಾಯ ಸಂಘಟನೆಯ ರಕ್ತಹೀನತೆಯ ಬಳಲುವಿಕೆಯ ಸರ್ವೇ ವರದಿ ಪ್ರಕಾರ 180 ದೇಶಗಳ ಪೈಕಿ ಭಾರತದ ಸ್ಥಾನ 170. ಹಾಗೇ ಮಕ್ಕಳ ಬೆಳವಣಿಗೆ ಕುಂಠಿತ ಸರ್ವೆಯಲ್ಲಿ 132 ದೇಶಗಳಲ್ಲಿ ಭಾರತದ ಸ್ಥಾನ 114. ಅಷ್ಟೇ ಯಾಕೆ ನಮ್ಮ ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇ 2015-2020ರ ಅವಧಿಯಲ್ಲಿ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದೇ ವರದಿ ಮಾಡಿದೆ. ಹೀಗಿರುವಾಗ ಮುಂದೇನು?

ಇನ್ನಾದರೂ ನಾವು ಕೇಳಬೇಕು – ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಸ್ಲಂ ಭಾರತ ನಮಗೆ ಬೇಡ ಎಂದು ಹೇಳಬೇಕು.

ಆದರೆ ಮೋದಿ-ಶಾರು ಕೇಳಿಸಿಕೊಳ್ಳುತ್ತಿಲ್ಲ. ತಮ್ಮ ಭ್ರಮೆ ಮತ್ತು ಸುಳ್ಳುಗಳಲ್ಲಿ ತಾವೇ ಹೂತು ಹೋಗಿದ್ದಾರೆ. ಇವರು ವಿಥ್ಯಾವತಾರ ಪುರುಷರು. ಇವರಿಗೆ ಕಣ್ಣೂ ಕಾಣಿಸುತ್ತಿಲ್ಲ. ಕಿವಿಯೂ ಕೇಳಿಸುತ್ತಿಲ್ಲ. ಏನು ಮಾಡಬೇಕು? ‘ಗೊತ್ತು.. ಹೇಗೆ ಗೆಲ್ಲೋದು ಅಂತ ಗೊತ್ತು’ ಎಂಬ ಅಹಂಭಾವದಲ್ಲಿ ಅವರು ಇದ್ದಿರುವಂತಿದೆ. ಇಂತಹ ರಾಜಕಾರಣದ ಹಿಮ್ಮಡಿ ನರ ಕತ್ತರಿಸಿ ಇವರ ಅಧಿಕಾರದ ಚಲನೆ ನಿಲ್ಲುಸುವಂತಾದರೆ ಇವರಿಗೆ ಕಣ್ಣು ಕಾಣಿಸಬಹುದು, ಕಿವಿಯೂ ಕೇಳಿಸಬಹುದು. ಸಂವೇದನಾಶೀಲತೆ ಉಂಟಾಗಲೂಬಹುದು. ಇಂಥವರ ಒಳಗೂ ಮಾನವೀಯತೆ ಉಸಿರಾಡಬಹುದು. ಇದಕ್ಕಾಗಿ ಎಲ್ಲರ ಚಿತ್ತ ಮತದಾರರತ್ತ ನಡೆಯಬೇಕಾಗಿದೆ.

  • ದೇವನೂರ ಮಹಾದೇವ

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಶಿವಸುಂದರ್, ಅರಳಾಳು ಅನುಸೂಯಮ್ಮ, ನೂರ್ ಶ್ರೀಧರ್, ಬಿ.ಶ್ರೀಪಾದ್ ಭಟ್, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ವರದರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ಇತಿಹಾಸದ ಕೆಲವು ಘಟ್ಟಗಳಲ್ಲಂತೂ ಮಧ್ಯದ ದಾರಿ ಇರುವುದಿಲ್ಲ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...