Homeಚಳವಳಿವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ವಿರೋಧದ ನಡುವೆಯೂ ಕೃಷಿ ಕಾಯ್ದೆಗಳ ಜಾರಿ ಕ್ರೌರ್ಯದ ಪರಮಾವಧಿ: ದೇವನೂರ ಮಹಾದೇವ

ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಭಾರತ ನಮಗೆ ಬೇಡ.

- Advertisement -
- Advertisement -

ಕೇಂದ್ರದ ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಹೋರಾಟ ಮುಂದುವರೆದಿದೆ. ಐಕ್ಯ ಹೋರಾಟ ಸಮಿತಿ, AIKSCC, ಜಂಟಿ ಕಾರ್ಮಿಕ ಸಂಘಟನೆಗಳ ಒಕ್ಕೂಟ ಮತ್ತು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ಇಂದು ಪ್ರತಿಭಟನಾ ಧರಣಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ಸಾಹಿತಿಗಳು ಮತ್ತು ಹೋರಾಟಗಾರರಾದ ದೇವನೂರು ಮಹಾದೇವರವರು ಭಾಗವಹಿಸಿ ಮಾತನಾಡಿದರು. ಅವರ ಭಾಷಣ ಪೂರ್ಣಪಾಠ ಇಲ್ಲಿದೆ.

ರಾಜ್ಯದ ರಾಜಧಾನಿಯಲ್ಲಿ ಕುಳಿತು ನಾವು ಕೂಗಿ ಕೂಗಿ ಹೇಳುತ್ತಿದ್ದೇವೆ. ನಮ್ಮ ಸುತ್ತ ಮುತ್ತಲೂ ಮೂರು ದಾರಿ ಇದೆ. ನಮ್ಮ ಸುತ್ತಲೂ ಚಲಿಸುತ್ತಿರುವ ವಾಹನಗಳೇ ಹೆಚ್ಚು. ವಾಹನಗಳಿಗೆ ತಮ್ಮ ಅಕ್ಕ ಪಕ್ಕ ನೋಡುವ ವ್ಯವಧಾನ ಇರುವುದಿಲ್ಲ. ಈ ಈ ಧಾವಂತ ಮತ್ತು ವೇಗವನ್ನು ನಗರಗಳ ಲಕ್ಷಣ ಎನ್ನುತ್ತಾರೆ. ಇಂಥ ಕಡೆ ನಮ್ಮ ಮಾತು ಕೇಳಿಸುತ್ತಾ?

ಆದರೂ, ವೇಗವಾಗಿ ಓಡುತ್ತಿರುವವರಿಗೆ ಒಂದು ಕಿವಿಮಾತು ಹೇಳುತ್ತಿರುವೆ. ಏನೆಂದರೆ ನೀವು ನಮ್ಮ ಮಾತನ್ನು ಕೇಳುವುದು ಬೇಡ. 78 ಮಾಜಿ ಐಎಎಸ್‌, ಐಪಿಎಸ್ ಅಧಿಕಾರಿಗಳು ಒಂದು ಬಹಿರಂಗ ಪತ್ರ ಬರೆದಿದ್ದಾರೆ. ಅದರಲ್ಲಿ “ಕೃಷಿ ಕ್ಷೇತ್ರ ರಾಜ್ಯಗಳಿಗೆ ಸಂಬಂಧಪಟ್ಟಿದ್ದು, ಇಂಥದರಲ್ಲಿ ಕೇಂದ್ರದ ನರೇಂದ್ರ ಮೋದಿ ಸರ್ಕಾರವು ಕೃಷಿ ಕಾನೂನುಗಳಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದು ಯಾಕೆ?” ಎಂದು ಪ್ರಶ್ನಿಸಿದ್ದಾರೆ. ಈ (ಮೋದಿ) ಕಾನೂನುಗಳು ಭಾರತದ ಸಂವಿಧಾನದ ಫೆಡರಲ್ ಸ್ವರೂಪದ ಮೇಲಿನ ದಾಳಿ ಎಂದು ಆತಂಕಪಡುತ್ತಾರೆ.

ಮುಂದೆ ಆ ಅನುಭವಸ್ಥ ನಿವೃತ್ತ ಉನ್ನತಾಧಿಕಾರಿಗಳು “ಈ ಕೃಷಿ ಕಾನೂನುಗಳು ನೇರವಾಗಿ ಬಾಧಿಸುವ ರೈತರ ಜತೆ ಸರಕಾರ ಅವುಗಳನ್ನು ಜಾರಿಗೊಳಿಸುವ ಮುನ್ನ ಚರ್ಚಿಸಿಲ್ಲ. ಸಂಸತ್‌ನಲ್ಲಿ ಕಾನೂನುಗಳ ವಿರುದ್ಧ ಕೇಳಿಬಂದ ಆಕ್ಷೇಪಗಳಿಗೆ ಸರ್ಕಾರ ಕಿವಿಗೊಟ್ಟಿಲ್ಲ. ಮಸೂದೆಗಳ ಕುರಿತು ಚರ್ಚೆಗೆ ಸಮಯಾವಕಾಶ ನೀಡಲಾಗಿರಲಿಲ್ಲ. ಹಾಗೂ ಗೊಂದಲಕಾರಿ ವಾತಾವರಣದ ನಡುವೆ ಧ್ವನಿಮತದಿಂದ ರಾಜ್ಯಸಭೆಯಲ್ಲಿ ಅಂಗೀಕರಿಸಲಾಯಿತು. ಇದು ಅನುಮಾನಾಸ್ಪದ” ಎನ್ನುತ್ತಾರೆ.

ಹೌದು, ಇದು ದಾಳಿ ಮತ್ತು ಅನುಮಾನಾಸ್ಪದ. ಕೋವಿಡ್ ಸಾಂಕ್ರಾಮಿಕದ ಈ ದಯಾನೀಯ, ಧಾರುಣ ಕಾಲಮಾನದಲ್ಲಿ ಯಾರೂ ಉಸಿರೆತ್ತುವುದಿಲ್ಲ, ಇದೇ ಸರಿಯಾದ ಕಾಲ ಅಂದುಕೊಂಡು ಈ ಹಿಂದೆ ಬಿಜೆಪಿ ಸರ್ಕಾರ ಹಿಂತೆಗೆದುಕೊಂಡಿದ್ದ ಕೃಷಿ ಕಾನೂನುಗಳನ್ನು ಈಗ ಜಾರಿಗೊಳಿಸಲು ಹೊರಟಿದೆ. ಇದು ಕ್ರೌರ್ಯದ ಪರಮಾವಧಿ.

ಹೌದು, ಇದು ಸಂವಿಧಾನ, ಪ್ರಜಾಪ್ರಭುತ್ವ, ಭಾರತದ ಒಕ್ಕೂಟದ ಸ್ವರೂಪದ ಮೇಲೆ ಅಂದರೆ ಭಾರತ ಸ್ವಾತಂತ್ರ್ಯ ಪಡೆದ ಕನಸಿನ ಮೇಲೆ ನಡೆದ ದಾಳಿಯಾಗಿದೆ. ಅಂದರೆ ಇದು ಎಲ್ಲಾ ಪ್ರಜೆಗಳ ಮೇಲೆ ನಡೆಸಿದ ದಾಳಿಯಾಗಿದೆ.

ಹಾಗೆ ಇನ್ನೊಂದು ಕಿತಿಮಾತು. ಯಾವ ಕಡೆಗೂ ನೋಡದೆ ವೇಗವಾಗಿ ಚಲಿಸುತ್ತಿರುವವರಿಗೆ ಆಲಿಸಿ ಎಂದು ವಿನಂತಿಸುವೆ. 107 ದೇಶಗಳಲ್ಲಿ ನಡೆಸಲಾದ ಜಾಗತಿಕ ಹಸಿವಿನ ಸೂಚ್ಯಂಕ ಅಧ್ಯಯನದ ಪ್ರಕಾರ 2015- 2020ರ ಅವಧಿಯಲ್ಲಿ ಭಾರತ 94ನೇ ಸ್ಥಾನದಲ್ಲಿದ್ದು, ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಇದು ಮೋದಿ ಸಾಹೇಬರ ಜಮಾನದಲ್ಲೆ ಆಗಿದೆ. ಆಫ್ರಿಕಾದ ಕಡುಬಡರಾಷ್ಟ್ರ ಸುಡಾನ್ ಜತೆ ಇದೆ. ಅಷ್ಟು ಮಾತ್ರವಲ್ಲ ಭಾರತದ ಅಕ್ಕಪಕ್ಕದ ದೇಶಗಳಾದ ಪಾಕಿಸ್ತಾನ, ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳ ಪರಿಸ್ಥಿತಿ ಭಾರತಕ್ಕಿಂತ ಉತ್ತಮವಾಗಿದೆ ಎಂದು ಆ ಅಧ್ಯಯನ ವರದಿ ಹೇಳುತ್ತದೆ. ಇಷ್ಟು ಸಾಕೇ? ಅಥವಾ ಮೋದಿ ಶಾ ಉಣಬಡಿಸುತ್ತಿರುವ ಮಾತಿನ ಮೃಷ್ಠಾನ್ನ ಭೋಜನ ಇನ್ನೂ ಬೇಕೆ? ಇಂಥ ದಯಾನೀಯ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಭಾರತದ ಆಹಾರ ಭದ್ರತೆ ಮೇಲೂ ದಾಳಿ ನಡೆಸುತ್ತಿದೆ. ಕೇಂದ್ರ ಸರ್ಕಾರ ನೇಮಿಸಿದ್ದ ಶಾಂತರಾಂ ಕಮಿಟಿಯು ಈಗ ಆಹಾರ ಭದ್ರತೆಯ ಕಾನೂನು ಮುಖಾಂತರ ಶೇಕಡಾ 67 ರಷ್ಟು ನೀಡಲಾಗುತ್ತಿದ್ದ ಆಹಾರ ಪಡಿತರವನ್ನು ಶೇಕಡ 40ಕ್ಕೆ ಇಳಿಸಬೇಕು ಎಂದು ಶಿಫಾರಸ್ಸು ಮಾಡಿದೆ. ಹಾಗಾಗಿಯೇ ಕೃಷಿಯ ಕತ್ತು ಹಿಸುಕುವ ಈ ಕಾನೂನುಗಳು ಬಂದಂತಿವೆ. ಪರಿಣಾಮ ಏನಾಗಬಹುದು?

ಈಗಾಗಲೇ ಜಾಗತಿಕ ಹಸಿವಿನ ಸೂಚ್ಯಂಕದ ಪ್ರಕಾರ ಅಪೌಷ್ಠಿಕ ಮಕ್ಕಳಲ್ಲಿ ವಿಶ್ವದಲ್ಲಿನ ಮೂರನೇ ಒಂದು ಭಾಗ ಮಕ್ಕಳು ಭಾರತದಲ್ಲಿದ್ದಾರೆ. ಆಫ್ರಿಕಾಗಿಂತ ದುಪ್ಪಟ್ಟು. ವಿಶ್ವಸಂಸ್ಥೆಯ ಆಹಾರ ಮತ್ತು ವ್ಯವಸಾಯ ಸಂಘಟನೆಯ ರಕ್ತಹೀನತೆಯ ಬಳಲುವಿಕೆಯ ಸರ್ವೇ ವರದಿ ಪ್ರಕಾರ 180 ದೇಶಗಳ ಪೈಕಿ ಭಾರತದ ಸ್ಥಾನ 170. ಹಾಗೇ ಮಕ್ಕಳ ಬೆಳವಣಿಗೆ ಕುಂಠಿತ ಸರ್ವೆಯಲ್ಲಿ 132 ದೇಶಗಳಲ್ಲಿ ಭಾರತದ ಸ್ಥಾನ 114. ಅಷ್ಟೇ ಯಾಕೆ ನಮ್ಮ ರಾಷ್ಟ್ರೀಯ ಕುಟುಂಬ ಆರೋಗ್ಯ ಸರ್ವೇ 2015-2020ರ ಅವಧಿಯಲ್ಲಿ ಅಪೌಷ್ಠಿಕ ಮಕ್ಕಳ ಸಂಖ್ಯೆ ಹೆಚ್ಚಾಗಿದೆ ಎಂದೇ ವರದಿ ಮಾಡಿದೆ. ಹೀಗಿರುವಾಗ ಮುಂದೇನು?

ಇನ್ನಾದರೂ ನಾವು ಕೇಳಬೇಕು – ಬಡತನದ, ಹಸಿವಿನ, ಅಪೌಷ್ಠಿಕತೆಯ, ರಕ್ತಹೀನತೆಯ ಅಭಿವೃದ್ದಿ ಮಾಡಿದ್ದು ಸಾಕು, ನಿಲ್ಲಿಸಿ ಎಂದು ಹೇಳಬೇಕು. ಬೆಲೆ ಏರಿಕೆಗೆ ಕಾರಣವಾಗುವ, ಕೃಷಿ ಆಧಾರ ಕಿತ್ತು ಗ್ರಾಮೀಣ ಸಮುದಾಯ ಬೇರುಕಿತ್ತುಕೊಂಡು ನಗರಕ್ಕೆ ಜೋತು ಬೀಳುವ, ಸ್ಲಂ ಹೆಚ್ಚು ಮಾಡುವ ಸ್ಲಂ ಭಾರತ ನಮಗೆ ಬೇಡ ಎಂದು ಹೇಳಬೇಕು.

ಆದರೆ ಮೋದಿ-ಶಾರು ಕೇಳಿಸಿಕೊಳ್ಳುತ್ತಿಲ್ಲ. ತಮ್ಮ ಭ್ರಮೆ ಮತ್ತು ಸುಳ್ಳುಗಳಲ್ಲಿ ತಾವೇ ಹೂತು ಹೋಗಿದ್ದಾರೆ. ಇವರು ವಿಥ್ಯಾವತಾರ ಪುರುಷರು. ಇವರಿಗೆ ಕಣ್ಣೂ ಕಾಣಿಸುತ್ತಿಲ್ಲ. ಕಿವಿಯೂ ಕೇಳಿಸುತ್ತಿಲ್ಲ. ಏನು ಮಾಡಬೇಕು? ‘ಗೊತ್ತು.. ಹೇಗೆ ಗೆಲ್ಲೋದು ಅಂತ ಗೊತ್ತು’ ಎಂಬ ಅಹಂಭಾವದಲ್ಲಿ ಅವರು ಇದ್ದಿರುವಂತಿದೆ. ಇಂತಹ ರಾಜಕಾರಣದ ಹಿಮ್ಮಡಿ ನರ ಕತ್ತರಿಸಿ ಇವರ ಅಧಿಕಾರದ ಚಲನೆ ನಿಲ್ಲುಸುವಂತಾದರೆ ಇವರಿಗೆ ಕಣ್ಣು ಕಾಣಿಸಬಹುದು, ಕಿವಿಯೂ ಕೇಳಿಸಬಹುದು. ಸಂವೇದನಾಶೀಲತೆ ಉಂಟಾಗಲೂಬಹುದು. ಇಂಥವರ ಒಳಗೂ ಮಾನವೀಯತೆ ಉಸಿರಾಡಬಹುದು. ಇದಕ್ಕಾಗಿ ಎಲ್ಲರ ಚಿತ್ತ ಮತದಾರರತ್ತ ನಡೆಯಬೇಕಾಗಿದೆ.

  • ದೇವನೂರ ಮಹಾದೇವ

ಪ್ರತಿಭಟನೆಯಲ್ಲಿ ಹಿರಿಯ ಹೋರಾಟಗಾರರಾದ ಶಿವಸುಂದರ್, ಅರಳಾಳು ಅನುಸೂಯಮ್ಮ, ನೂರ್ ಶ್ರೀಧರ್, ಬಿ.ಶ್ರೀಪಾದ್ ಭಟ್, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ವರದರಾಜೇಂದ್ರ ಸೇರಿದಂತೆ ಹಲವರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ಇತಿಹಾಸದ ಕೆಲವು ಘಟ್ಟಗಳಲ್ಲಂತೂ ಮಧ್ಯದ ದಾರಿ ಇರುವುದಿಲ್ಲ – ಯೋಗೇಂದ್ರ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...