Homeಮುಖಪುಟಯುಸಿಸಿ ಸಂಹಿತ ಜಾರಿ ಅಗತ್ಯವಿಲ್ಲ; ಕಾಂಗ್ರೆಸ್ ನಿಲುವಿನಲ್ಲಿ ಬದಲಾವಣೆ ಇಲ್ಲ: ಜೈರಾಮ್ ರಮೇಶ್

ಯುಸಿಸಿ ಸಂಹಿತ ಜಾರಿ ಅಗತ್ಯವಿಲ್ಲ; ಕಾಂಗ್ರೆಸ್ ನಿಲುವಿನಲ್ಲಿ ಬದಲಾವಣೆ ಇಲ್ಲ: ಜೈರಾಮ್ ರಮೇಶ್

- Advertisement -
- Advertisement -

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಈ ಬಗ್ಗೆ ಕಾಂಗ್ರೆಸ್‌ ತಾನು ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ಯುಸಿಸಿ ಸಂಹಿತ ಜಾರಿಗೊಳಿಸುವುದರ ಅಗತ್ಯವಿಲ್ಲ ಇದು ಅನಪೇಕ್ಷಿತವಾಗಿದೆ ಮತ್ತು ಕರಡು ಮಸೂದೆ ಅಥವಾ ಈ ವಿಷಯದ ಕುರಿತು ವರದಿ ಬಂದರೆ ಮತ್ತಷ್ಟು ಪ್ರತಿಕ್ರಿಯಿಸುವುದಾಗಿ ಹೇಳಿದೆ.

ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಅದರ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆಯನ್ನು ನಡೆಸಿತು. ಸಭೆಯಲ್ಲಿ ಅವರು ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿವಿಧ ವಿಷಯಗಳನ್ನು ಚರ್ಚಿಸಿದರು.

ಮಣಿಪುರ ಹಿಂಸಾಚಾರ, ಕುಸ್ತಿಪಟುಗಳ ಪ್ರತಿಭಟನೆ, ಹಣದುಬ್ಬರ, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ವಿವಿಧ ರಾಜ್ಯಪಾಲರು ನಡೆದುಕೊಳ್ಳುತ್ತಿರುವ ರೀತಿ ವಿಷಯಗಳ ಬಗ್ಗೆ ಚರ್ಚಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸಿದ್ದತೆ ನಡೆಸಿದೆ.

ಪಕ್ಷದ ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್  ಅವರು, ”ಯುಸಿಸಿ ಬಗ್ಗೆ ಪಕ್ಷವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಯುಸಿಸಿ ಸಂಹಿತ ಜಾರಿಗೊಳಿಸುವುದರ ಅಗತ್ಯವಿಲ್ಲ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಹೇಳಿದ್ದಾರೆ.

”ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಆದರೆ, ಧ್ರುವೀಕರಣ ಮತ್ತು ಜ್ವಲಂತ ವಿಷಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತನ್ನ ಕಾರ್ಯಸೂಚಿಯನ್ನು ಕೇಂದ್ರ ಸರ್ಕಾರ ಮುಂದುವರಿಸಿದೆ. ಇದರ ಭಾಗವಾಗಿಯೇ ಯುಸಿಸಿ ಕುರಿತು ಜನಾಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ” ಎಂದು ಕಾಂಗ್ರೆಸ್‌ ಇತ್ತೀಚಿಗೆ ಟೀಕಿಸಿತ್ತು.

”ರಾಷ್ಟ್ರೀಯ ಮಹತ್ವ ಇರುವಂತಹ ಅನೇಕ ವಿಷಯಗಳ ಕುರಿತು ಕಾನೂನು ಆಯೋಗ ಅದ್ಭುತ ಕಾರ್ಯ ಮಾಡಿದೆ. ಆದರೆ, ಬಿಜೆಪಿಯ ರಾಜಕೀಯ ಮಹತ್ವಾಕಾಂಕ್ಷೆಗಳಿಗಿಂತ ರಾಷ್ಟ್ರದ ಹಿತಾಸಕ್ತಿ ಭಿನ್ನ ಎಂಬುದನ್ನು ಆಯೋಗ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

”ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದರ ಅಗತ್ಯವಿಲ್ಲ ಹಾಗೂ ಅಪೇಕ್ಷಣೀಯವೂ ಅಲ್ಲ ಎಂದು 21ನೇ ಕಾನೂನು ಆಯೋಗ ತನ್ನ ವರದಿಯಲ್ಲಿ ಹೇಳಿದೆ. ಆದರೆ, ತನ್ನ ಕಾರ್ಯಸೂಚಿಯನ್ನು ಮುಂದುವರಿಸುವ ಪ್ರಯತ್ನದ ಭಾಗವಾಗಿ ಮೋದಿ ನೇತೃತ್ವದ ಸರ್ಕಾರ ಯುಸಿಸಿ ಜಾರಿಗೆ ಯತ್ನಿಸುತ್ತಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...