Homeಮುಖಪುಟಯುಸಿಸಿ ಸಂಹಿತ ಜಾರಿ ಅಗತ್ಯವಿಲ್ಲ; ಕಾಂಗ್ರೆಸ್ ನಿಲುವಿನಲ್ಲಿ ಬದಲಾವಣೆ ಇಲ್ಲ: ಜೈರಾಮ್ ರಮೇಶ್

ಯುಸಿಸಿ ಸಂಹಿತ ಜಾರಿ ಅಗತ್ಯವಿಲ್ಲ; ಕಾಂಗ್ರೆಸ್ ನಿಲುವಿನಲ್ಲಿ ಬದಲಾವಣೆ ಇಲ್ಲ: ಜೈರಾಮ್ ರಮೇಶ್

- Advertisement -
- Advertisement -

ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಈ ಬಗ್ಗೆ ಕಾಂಗ್ರೆಸ್‌ ತಾನು ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ. ಯುಸಿಸಿ ಸಂಹಿತ ಜಾರಿಗೊಳಿಸುವುದರ ಅಗತ್ಯವಿಲ್ಲ ಇದು ಅನಪೇಕ್ಷಿತವಾಗಿದೆ ಮತ್ತು ಕರಡು ಮಸೂದೆ ಅಥವಾ ಈ ವಿಷಯದ ಕುರಿತು ವರದಿ ಬಂದರೆ ಮತ್ತಷ್ಟು ಪ್ರತಿಕ್ರಿಯಿಸುವುದಾಗಿ ಹೇಳಿದೆ.

ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಅದರ ಸಂಸದೀಯ ಕಾರ್ಯತಂತ್ರದ ಗುಂಪಿನ ಸಭೆಯನ್ನು ನಡೆಸಿತು. ಸಭೆಯಲ್ಲಿ ಅವರು ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪ್ರಸ್ತಾಪಿಸಬೇಕಾದ ವಿವಿಧ ವಿಷಯಗಳನ್ನು ಚರ್ಚಿಸಿದರು.

ಮಣಿಪುರ ಹಿಂಸಾಚಾರ, ಕುಸ್ತಿಪಟುಗಳ ಪ್ರತಿಭಟನೆ, ಹಣದುಬ್ಬರ, ಹೆಚ್ಚುತ್ತಿರುವ ನಿರುದ್ಯೋಗ ಮತ್ತು ವಿವಿಧ ರಾಜ್ಯಪಾಲರು ನಡೆದುಕೊಳ್ಳುತ್ತಿರುವ ರೀತಿ ವಿಷಯಗಳ ಬಗ್ಗೆ ಚರ್ಚಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಕಾಂಗ್ರೆಸ್‌ ಸಿದ್ದತೆ ನಡೆಸಿದೆ.

ಪಕ್ಷದ ಸಭೆ ಬಳಿಕ ಮಾತನಾಡಿದ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್  ಅವರು, ”ಯುಸಿಸಿ ಬಗ್ಗೆ ಪಕ್ಷವು ಈಗಾಗಲೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಯುಸಿಸಿ ಸಂಹಿತ ಜಾರಿಗೊಳಿಸುವುದರ ಅಗತ್ಯವಿಲ್ಲ ಎಂಬ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಹೇಳಿದ್ದಾರೆ.

”ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಎಲ್ಲ ರಂಗಗಳಲ್ಲಿ ವಿಫಲವಾಗಿದೆ. ಆದರೆ, ಧ್ರುವೀಕರಣ ಮತ್ತು ಜ್ವಲಂತ ವಿಷಯಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯುವ ತನ್ನ ಕಾರ್ಯಸೂಚಿಯನ್ನು ಕೇಂದ್ರ ಸರ್ಕಾರ ಮುಂದುವರಿಸಿದೆ. ಇದರ ಭಾಗವಾಗಿಯೇ ಯುಸಿಸಿ ಕುರಿತು ಜನಾಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದೆ” ಎಂದು ಕಾಂಗ್ರೆಸ್‌ ಇತ್ತೀಚಿಗೆ ಟೀಕಿಸಿತ್ತು.

”ರಾಷ್ಟ್ರೀಯ ಮಹತ್ವ ಇರುವಂತಹ ಅನೇಕ ವಿಷಯಗಳ ಕುರಿತು ಕಾನೂನು ಆಯೋಗ ಅದ್ಭುತ ಕಾರ್ಯ ಮಾಡಿದೆ. ಆದರೆ, ಬಿಜೆಪಿಯ ರಾಜಕೀಯ ಮಹತ್ವಾಕಾಂಕ್ಷೆಗಳಿಗಿಂತ ರಾಷ್ಟ್ರದ ಹಿತಾಸಕ್ತಿ ಭಿನ್ನ ಎಂಬುದನ್ನು ಆಯೋಗ ನೆನಪಿನಲ್ಲಿಟ್ಟುಕೊಳ್ಳಬೇಕು” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

”ಈ ಹಂತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸುವುದರ ಅಗತ್ಯವಿಲ್ಲ ಹಾಗೂ ಅಪೇಕ್ಷಣೀಯವೂ ಅಲ್ಲ ಎಂದು 21ನೇ ಕಾನೂನು ಆಯೋಗ ತನ್ನ ವರದಿಯಲ್ಲಿ ಹೇಳಿದೆ. ಆದರೆ, ತನ್ನ ಕಾರ್ಯಸೂಚಿಯನ್ನು ಮುಂದುವರಿಸುವ ಪ್ರಯತ್ನದ ಭಾಗವಾಗಿ ಮೋದಿ ನೇತೃತ್ವದ ಸರ್ಕಾರ ಯುಸಿಸಿ ಜಾರಿಗೆ ಯತ್ನಿಸುತ್ತಿದೆ” ಎಂದು ಕಿಡಿಕಾರಿದರು.

ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆ ಭಾರತದ ಕಲ್ಪನೆಗೆ ವಿರುದ್ಧವಾಗಿದೆ: ಬಿಜೆಪಿ ಮಿತ್ರ ಪಕ್ಷದಿಂದಲೂ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....