Homeಮುಖಪುಟಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

ಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

- Advertisement -
- Advertisement -

ತನ್ನ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿವಸ್ತ್ರಳಾಗಿ ಪ್ರತಿಭಟಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ ಎಂದು indianexpress.com ವರದಿ ಮಾಡಿದೆ.

ಆಗ್ರಾದ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಿರುವ ಕಾಲೇಜಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದಳು. ಪೊಲೀಸರು ಪ್ರಕರಣ ದಾಖಲಿಸಿಕೊಂಡರೂ ಆರೋಪಿಯನ್ನು ಬಂಧಿಸಿರಲಿಲ್ಲ. ಇದರಿಂದ ಹತಾಶಳಾದ ಆಕೆ, ವಿವಸ್ತ್ರಳಾಗಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಕೊನೆಗೂ 17 ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಿ, ಮೂರು ದಿನಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ವರದಿ ಹೇಳಿದೆ.

ಬಂಧಿತ ಆರೋಪಿ ಜಮ್ಮುವಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಟೆಕ್ ಓದುತ್ತಿರುವ 22 ವರ್ಷದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿರುವ ಲಕ್ನೋ ಮೂಲದ ವಿದ್ಯಾರ್ಥಿನಿ, ಆಗಸ್ಟ್ 10ರಂದು ಸಂಜೆ ಆರೋಪಿ ಚಲಿಸುವ ಕಾರಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಿದ್ದಳು. ಆಗಸ್ಟ್ 11ರಂದು ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವ ಗೋಜಿಗೆ ಹೋಗಿರಲಿಲ್ಲ. ವಿದ್ಯಾರ್ಥಿನಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ ಸಮಯದಲ್ಲಿ ಆಕೆ ಹೇಳಿದ ಆರೋಪಿಯ ಮೊಬೈಲ್ ಲೊಕೇಶನ್ ಜಮ್ಮುವಿನಲ್ಲಿ ತೋರಿಸುತಿತ್ತು ಎಂದು ಪೊಲೀಸರೇ ಸಮಜಾಯಿಸಿ ನೀಡಿದ್ದರು.

ಬಳಿಕ, ಸಂತ್ರಸ್ತೆ ಆರೋಪಿಯನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ಅನೇಕ ಬಾರಿ ಪೊಲೀಸ್ ಠಾಣೆಗೆ ಹೋಗಿದ್ದಳು. ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದಳು. ಆದರೂ, ಆಕೆಗೆ ಯಾವುದೇ ಸಹಕಾರ ಸಿಕ್ಕಿರಲಿಲ್ಲ. ಕೊನೆಗೆ ಹತಾಶಳಾಗಿ ವಿವಸ್ತ್ರಳಾಗುವ ನಿರ್ಧಾರಕ್ಕೆ ಬಂದಳು ಎಂದು ವರದಿ ಹೇಳಿದೆ.

“ನಾವು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಆಗ್ರಾಕ್ಕೆ ಕರೆ ತಂದಿದ್ದೇವೆ. ಆತ ಕಳೆದ ಕೆಲ ತಿಂಗಳುಗಳಿಂದ ವಿದ್ಯಾರ್ಥಿನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದುದು ನಮಗೆ ಗೊತ್ತಾಗಿದೆ. ಆತನನ್ನು ಬಂಧಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಉತ್ತರ ಪ್ರದೇಶದ ಗಾಝಿಪುರ ಜಿಲ್ಲೆಯವನಾಗಿದ್ದು, ಜಮ್ಮು ಐಐಟಿಗೆ ಪ್ರವೇಶ ಪಡೆಯುವ ಮುನ್ನ ಆಗ್ರಾ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಮುಗಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಭಾನುವಾರ ಮಧ್ಯಾಹ್ನ ಸಂತ್ರಸ್ತ ವಿದ್ಯಾರ್ಥಿನಿ ವಿವಸ್ತ್ರಳಾಗಿ ರಸ್ತೆಯಲ್ಲಿ ನಿಂತುಕೊಂಡು ಪೊಲೀಸರ ವಿರುದ್ದ ಘೋಷಣೆಗಳನ್ನು ಕೂಗುತ್ತಿದ್ದಳು. ಅದನ್ನು ಕಂಡ ಇಬ್ಬರು ಮಹಿಳೆಯರು ಓಡಿ ಬಂದು ಆಕೆಗೆ ಬಟ್ಟೆ ಹೊದಿಸಿ ಹತ್ತಿರದ ಕ್ಲಿನಿಕ್‌ಗೆ ಕರೆದೊಯ್ದರು. ಆಕೆ ಮಾನಸಿಕವಾಗಿ ನೊಂದಿದ್ದಾಳೆ ಎಂದು ನಾವು ಭಾವಿಸಿದ್ದೇವೆ ಮತ್ತು ಆ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದೇವೆ. ಪೊಲೀಸರು ಆಕೆಯನ್ನು ಮಾನಸಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ indianexpress.com ವಿವರಿಸಿದೆ.

“ಭಾನುವಾರ ಸಂಜೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾವು ಮೂರು ದಿನಗಳ ಕಾಲ ಆಕೆಯ ಮೇಲೆ ನಿಗಾ ಇರಿಸಿದ್ದೆವು. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಆಕೆಯ ಚಟುವಟಿಕೆಗಳನ್ನು ಎಚ್ಚರಿಕೆಯಿಂದ ಗಮನಿಸಿದ್ದೇವೆ. ಅಸಹಜವಾಗಿ ಆಕೆಯಲ್ಲಿ ಏನೂ ಕಂಡು ಬಂದಿಲ್ಲ. ಹಾಗಾಗಿ, ಮಂಗಳವಾರ, ಲಕ್ನೋದಿಂದ ಆಗಮಿಸಿದ್ದ ಆಕೆಯ ತಾಯಿಗೆ ಆಕೆಯನ್ನು ಹಸ್ತಾತರಿಸಿದ್ದೇವೆ” ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.

ಅತ್ಯಾಚಾರದ ದೂರು ದಾಖಲಿಸುವ ಮುನ್ನ, ಜುಲೈ 29ರಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಂದ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದಳು. ನಾವು ಆ ಬಗ್ಗೆ ನಾವು ಪರಿಶೀಲನೆ ನಡೆಸಿದ್ದೆವು. ಆಕೆಯ ಆರೋಪ ಬೆಂಬಲಿಸುವ ಯಾವುದೇ ಪುರಾವೆ ನಮಗೆ ಕಂಡು ಬಂದಿರಲಿಲ್ಲ ಎಂದು ಠಾಣಾಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...