Homeಮುಖಪುಟಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

ಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

- Advertisement -
- Advertisement -

ತನ್ನ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿವಸ್ತ್ರಳಾಗಿ ಪ್ರತಿಭಟಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ ಎಂದು indianexpress.com ವರದಿ ಮಾಡಿದೆ.

ಆಗ್ರಾದ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಿರುವ ಕಾಲೇಜಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದಳು. ಪೊಲೀಸರು ಪ್ರಕರಣ ದಾಖಲಿಸಿಕೊಂಡರೂ ಆರೋಪಿಯನ್ನು ಬಂಧಿಸಿರಲಿಲ್ಲ. ಇದರಿಂದ ಹತಾಶಳಾದ ಆಕೆ, ವಿವಸ್ತ್ರಳಾಗಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಕೊನೆಗೂ 17 ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಿ, ಮೂರು ದಿನಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ವರದಿ ಹೇಳಿದೆ.

ಬಂಧಿತ ಆರೋಪಿ ಜಮ್ಮುವಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಟೆಕ್ ಓದುತ್ತಿರುವ 22 ವರ್ಷದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿರುವ ಲಕ್ನೋ ಮೂಲದ ವಿದ್ಯಾರ್ಥಿನಿ, ಆಗಸ್ಟ್ 10ರಂದು ಸಂಜೆ ಆರೋಪಿ ಚಲಿಸುವ ಕಾರಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಿದ್ದಳು. ಆಗಸ್ಟ್ 11ರಂದು ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವ ಗೋಜಿಗೆ ಹೋಗಿರಲಿಲ್ಲ. ವಿದ್ಯಾರ್ಥಿನಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ ಸಮಯದಲ್ಲಿ ಆಕೆ ಹೇಳಿದ ಆರೋಪಿಯ ಮೊಬೈಲ್ ಲೊಕೇಶನ್ ಜಮ್ಮುವಿನಲ್ಲಿ ತೋರಿಸುತಿತ್ತು ಎಂದು ಪೊಲೀಸರೇ ಸಮಜಾಯಿಸಿ ನೀಡಿದ್ದರು.

ಬಳಿಕ, ಸಂತ್ರಸ್ತೆ ಆರೋಪಿಯನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ಅನೇಕ ಬಾರಿ ಪೊಲೀಸ್ ಠಾಣೆಗೆ ಹೋಗಿದ್ದಳು. ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದಳು. ಆದರೂ, ಆಕೆಗೆ ಯಾವುದೇ ಸಹಕಾರ ಸಿಕ್ಕಿರಲಿಲ್ಲ. ಕೊನೆಗೆ ಹತಾಶಳಾಗಿ ವಿವಸ್ತ್ರಳಾಗುವ ನಿರ್ಧಾರಕ್ಕೆ ಬಂದಳು ಎಂದು ವರದಿ ಹೇಳಿದೆ.

“ನಾವು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಆಗ್ರಾಕ್ಕೆ ಕರೆ ತಂದಿದ್ದೇವೆ. ಆತ ಕಳೆದ ಕೆಲ ತಿಂಗಳುಗಳಿಂದ ವಿದ್ಯಾರ್ಥಿನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದುದು ನಮಗೆ ಗೊತ್ತಾಗಿದೆ. ಆತನನ್ನು ಬಂಧಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಉತ್ತರ ಪ್ರದೇಶದ ಗಾಝಿಪುರ ಜಿಲ್ಲೆಯವನಾಗಿದ್ದು, ಜಮ್ಮು ಐಐಟಿಗೆ ಪ್ರವೇಶ ಪಡೆಯುವ ಮುನ್ನ ಆಗ್ರಾ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಮುಗಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಭಾನುವಾರ ಮಧ್ಯಾಹ್ನ ಸಂತ್ರಸ್ತ ವಿದ್ಯಾರ್ಥಿನಿ ವಿವಸ್ತ್ರಳಾಗಿ ರಸ್ತೆಯಲ್ಲಿ ನಿಂತುಕೊಂಡು ಪೊಲೀಸರ ವಿರುದ್ದ ಘೋಷಣೆಗಳನ್ನು ಕೂಗುತ್ತಿದ್ದಳು. ಅದನ್ನು ಕಂಡ ಇಬ್ಬರು ಮಹಿಳೆಯರು ಓಡಿ ಬಂದು ಆಕೆಗೆ ಬಟ್ಟೆ ಹೊದಿಸಿ ಹತ್ತಿರದ ಕ್ಲಿನಿಕ್‌ಗೆ ಕರೆದೊಯ್ದರು. ಆಕೆ ಮಾನಸಿಕವಾಗಿ ನೊಂದಿದ್ದಾಳೆ ಎಂದು ನಾವು ಭಾವಿಸಿದ್ದೇವೆ ಮತ್ತು ಆ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದೇವೆ. ಪೊಲೀಸರು ಆಕೆಯನ್ನು ಮಾನಸಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ indianexpress.com ವಿವರಿಸಿದೆ.

“ಭಾನುವಾರ ಸಂಜೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾವು ಮೂರು ದಿನಗಳ ಕಾಲ ಆಕೆಯ ಮೇಲೆ ನಿಗಾ ಇರಿಸಿದ್ದೆವು. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಆಕೆಯ ಚಟುವಟಿಕೆಗಳನ್ನು ಎಚ್ಚರಿಕೆಯಿಂದ ಗಮನಿಸಿದ್ದೇವೆ. ಅಸಹಜವಾಗಿ ಆಕೆಯಲ್ಲಿ ಏನೂ ಕಂಡು ಬಂದಿಲ್ಲ. ಹಾಗಾಗಿ, ಮಂಗಳವಾರ, ಲಕ್ನೋದಿಂದ ಆಗಮಿಸಿದ್ದ ಆಕೆಯ ತಾಯಿಗೆ ಆಕೆಯನ್ನು ಹಸ್ತಾತರಿಸಿದ್ದೇವೆ” ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.

ಅತ್ಯಾಚಾರದ ದೂರು ದಾಖಲಿಸುವ ಮುನ್ನ, ಜುಲೈ 29ರಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಂದ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದಳು. ನಾವು ಆ ಬಗ್ಗೆ ನಾವು ಪರಿಶೀಲನೆ ನಡೆಸಿದ್ದೆವು. ಆಕೆಯ ಆರೋಪ ಬೆಂಬಲಿಸುವ ಯಾವುದೇ ಪುರಾವೆ ನಮಗೆ ಕಂಡು ಬಂದಿರಲಿಲ್ಲ ಎಂದು ಠಾಣಾಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...