Homeಮುಖಪುಟಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

ಉತ್ತರ ಪ್ರದೇಶ | ಅತ್ಯಾಚಾರಿಯ ಬಂಧನಕ್ಕೆ ಆಗ್ರಹಿಸಿ ವಿವಸ್ತ್ರಳಾದ ಇಂಜಿನಿಯರಿಂಗ್ ವಿದ್ಯಾರ್ಥಿನಿ: ವರದಿ

- Advertisement -
- Advertisement -

ತನ್ನ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನಕ್ಕೆ ಆಗ್ರಹಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ವಿವಸ್ತ್ರಳಾಗಿ ಪ್ರತಿಭಟಿಸಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆದಿದೆ ಎಂದು indianexpress.com ವರದಿ ಮಾಡಿದೆ.

ಆಗ್ರಾದ ಕೇಂದ್ರೀಯ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಿರುವ ಕಾಲೇಜಿನ 20 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದಳು. ಪೊಲೀಸರು ಪ್ರಕರಣ ದಾಖಲಿಸಿಕೊಂಡರೂ ಆರೋಪಿಯನ್ನು ಬಂಧಿಸಿರಲಿಲ್ಲ. ಇದರಿಂದ ಹತಾಶಳಾದ ಆಕೆ, ವಿವಸ್ತ್ರಳಾಗಿ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಕೊನೆಗೂ 17 ದಿನಗಳ ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ವಿದ್ಯಾರ್ಥಿನಿಯನ್ನು ಮಾನಸಿಕ ಆಸ್ಪತ್ರೆಗೆ ದಾಖಲಿಸಿ, ಮೂರು ದಿನಗಳ ಕಾಲ ನಿಗಾದಲ್ಲಿ ಇರಿಸಲಾಗಿದೆ ಎಂದು ವರದಿ ಹೇಳಿದೆ.

ಬಂಧಿತ ಆರೋಪಿ ಜಮ್ಮುವಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಎಂಟೆಕ್ ಓದುತ್ತಿರುವ 22 ವರ್ಷದ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರಿಗೆ ದೂರು ನೀಡಿರುವ ಲಕ್ನೋ ಮೂಲದ ವಿದ್ಯಾರ್ಥಿನಿ, ಆಗಸ್ಟ್ 10ರಂದು ಸಂಜೆ ಆರೋಪಿ ಚಲಿಸುವ ಕಾರಿನಲ್ಲಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಹೇಳಿದ್ದಳು. ಆಗಸ್ಟ್ 11ರಂದು ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸುವ ಗೋಜಿಗೆ ಹೋಗಿರಲಿಲ್ಲ. ವಿದ್ಯಾರ್ಥಿನಿ ಅತ್ಯಾಚಾರ ನಡೆದಿದೆ ಎಂದು ಆರೋಪಿಸಿದ ಸಮಯದಲ್ಲಿ ಆಕೆ ಹೇಳಿದ ಆರೋಪಿಯ ಮೊಬೈಲ್ ಲೊಕೇಶನ್ ಜಮ್ಮುವಿನಲ್ಲಿ ತೋರಿಸುತಿತ್ತು ಎಂದು ಪೊಲೀಸರೇ ಸಮಜಾಯಿಸಿ ನೀಡಿದ್ದರು.

ಬಳಿಕ, ಸಂತ್ರಸ್ತೆ ಆರೋಪಿಯನ್ನು ಬಂಧಿಸಿ ನ್ಯಾಯ ಕೊಡಿಸುವಂತೆ ಅನೇಕ ಬಾರಿ ಪೊಲೀಸ್ ಠಾಣೆಗೆ ಹೋಗಿದ್ದಳು. ಹಿರಿಯ ಅಧಿಕಾರಿಗಳನ್ನು ಭೇಟಿಯಾಗಿದ್ದಳು. ಆದರೂ, ಆಕೆಗೆ ಯಾವುದೇ ಸಹಕಾರ ಸಿಕ್ಕಿರಲಿಲ್ಲ. ಕೊನೆಗೆ ಹತಾಶಳಾಗಿ ವಿವಸ್ತ್ರಳಾಗುವ ನಿರ್ಧಾರಕ್ಕೆ ಬಂದಳು ಎಂದು ವರದಿ ಹೇಳಿದೆ.

“ನಾವು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಆಗ್ರಾಕ್ಕೆ ಕರೆ ತಂದಿದ್ದೇವೆ. ಆತ ಕಳೆದ ಕೆಲ ತಿಂಗಳುಗಳಿಂದ ವಿದ್ಯಾರ್ಥಿನಿಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದುದು ನಮಗೆ ಗೊತ್ತಾಗಿದೆ. ಆತನನ್ನು ಬಂಧಿಸಿದ್ದೇವೆ” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಉತ್ತರ ಪ್ರದೇಶದ ಗಾಝಿಪುರ ಜಿಲ್ಲೆಯವನಾಗಿದ್ದು, ಜಮ್ಮು ಐಐಟಿಗೆ ಪ್ರವೇಶ ಪಡೆಯುವ ಮುನ್ನ ಆಗ್ರಾ ವಿಶ್ವವಿದ್ಯಾಲಯದಲ್ಲಿ ಬಿಟೆಕ್ ಮುಗಿಸಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

“ಭಾನುವಾರ ಮಧ್ಯಾಹ್ನ ಸಂತ್ರಸ್ತ ವಿದ್ಯಾರ್ಥಿನಿ ವಿವಸ್ತ್ರಳಾಗಿ ರಸ್ತೆಯಲ್ಲಿ ನಿಂತುಕೊಂಡು ಪೊಲೀಸರ ವಿರುದ್ದ ಘೋಷಣೆಗಳನ್ನು ಕೂಗುತ್ತಿದ್ದಳು. ಅದನ್ನು ಕಂಡ ಇಬ್ಬರು ಮಹಿಳೆಯರು ಓಡಿ ಬಂದು ಆಕೆಗೆ ಬಟ್ಟೆ ಹೊದಿಸಿ ಹತ್ತಿರದ ಕ್ಲಿನಿಕ್‌ಗೆ ಕರೆದೊಯ್ದರು. ಆಕೆ ಮಾನಸಿಕವಾಗಿ ನೊಂದಿದ್ದಾಳೆ ಎಂದು ನಾವು ಭಾವಿಸಿದ್ದೇವೆ ಮತ್ತು ಆ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದೇವೆ. ಪೊಲೀಸರು ಆಕೆಯನ್ನು ಮಾನಸಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ” ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿರುವುದಾಗಿ indianexpress.com ವಿವರಿಸಿದೆ.

“ಭಾನುವಾರ ಸಂಜೆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾವು ಮೂರು ದಿನಗಳ ಕಾಲ ಆಕೆಯ ಮೇಲೆ ನಿಗಾ ಇರಿಸಿದ್ದೆವು. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ ಮಲಗುವವರೆಗೆ ಆಕೆಯ ಚಟುವಟಿಕೆಗಳನ್ನು ಎಚ್ಚರಿಕೆಯಿಂದ ಗಮನಿಸಿದ್ದೇವೆ. ಅಸಹಜವಾಗಿ ಆಕೆಯಲ್ಲಿ ಏನೂ ಕಂಡು ಬಂದಿಲ್ಲ. ಹಾಗಾಗಿ, ಮಂಗಳವಾರ, ಲಕ್ನೋದಿಂದ ಆಗಮಿಸಿದ್ದ ಆಕೆಯ ತಾಯಿಗೆ ಆಕೆಯನ್ನು ಹಸ್ತಾತರಿಸಿದ್ದೇವೆ” ಎಂದು ಆಸ್ಪತ್ರೆಯ ನಿರ್ದೇಶಕರು ತಿಳಿಸಿದ್ದಾರೆ.

ಅತ್ಯಾಚಾರದ ದೂರು ದಾಖಲಿಸುವ ಮುನ್ನ, ಜುಲೈ 29ರಂದು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಆರೋಪಿಗಳಿಂದ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ದೂರು ನೀಡಿದ್ದಳು. ನಾವು ಆ ಬಗ್ಗೆ ನಾವು ಪರಿಶೀಲನೆ ನಡೆಸಿದ್ದೆವು. ಆಕೆಯ ಆರೋಪ ಬೆಂಬಲಿಸುವ ಯಾವುದೇ ಪುರಾವೆ ನಮಗೆ ಕಂಡು ಬಂದಿರಲಿಲ್ಲ ಎಂದು ಠಾಣಾಧಿಕಾರಿ ಹೇಳಿದ್ದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ : ಮಲಯಾಳಂ ನಟ ಸಿದ್ದೀಕ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...