Homeಅಂತರಾಷ್ಟ್ರೀಯಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

- Advertisement -
- Advertisement -

ಶನಿವಾರ ಇಂಗ್ಲೆಂಡ್‌‌ನ ಲೀಸೆಸ್ಟರ್‌‌ನಲ್ಲಿ ಯುವಕರ ಗುಂಪೊಂದು ನಡೆಸಿದ ಮೆರವಣಿಗೆಯು ಕೋಮು ‘ಘರ್ಷಣೆ’ಗಳನ್ನು ಹುಟ್ಟುಹಾಕಿದೆ. ಹಿಂದುತ್ವದ ಬೆಂಬಲಿಗರು ಎಂದು ಆರೋಪಿಸಲಾಗಿರುವ ಮೆರವಣಿಯಲ್ಲಿದ್ದ ಯುವಕರೆಲ್ಲರೂ ಮಾಸ್ಕ್‌ ಧರಿಸಿದ್ದು, ಕೈಗಳಲ್ಲಿ ಚಾಕು ಮತ್ತು ಇತರ ಅಸ್ತ್ರಗಳನ್ನು ಇಟ್ಟುಕೊಂಡಿದ್ದರು. ಮೆರವಣಿಗೆಯ ಉದ್ದಕ್ಕೂ ಜೈಶ್ರೀರಾಮ್ ಸೇರಿದಂತೆ ಮುಸ್ಲಿಂ ವಿರೂಧಿ ಘೋಷಣೆಗಳು ಕೂಗಿ ಬಾಟಲಿಗಳನ್ನು ಎಸೆದು ಕಿಟಕಿ ಗಾಜುಗಳನ್ನು ಒಡೆದಿದ್ದಾರಲ್ಲದೆ ಬದಿಯಲ್ಲಿ ಇದ್ದ ವ್ಯಕ್ತಿಯೊಬ್ಬರಿಗೆ ಥಳಿಸುತ್ತಿರುವ ವಿಡಿಯೊಗಳು ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಘರ್ಷಣೆಯ ಹಿನ್ನಲೆಯಲ್ಲಿ ಪೊಲೀಸರು ಮತ್ತು ಸಮುದಾಯದ ಮುಖಂಡರು ನಾಗರಿಕರಿಗೆ ಶಾಂತವಾಗಿರಲು ಕರೆ ನೀಡಿದ್ದಾರೆ. ಶನಿವಾರ ಇಬ್ಬರನ್ನು ಬಂಧಿಸಲಾಗಿದ್ದು, ಸೆಕ್ಷನ್ ‘60 ಸ್ಟಾಪ್ ಆಂಡ್‌ ಸರ್ಚ್’ ಅಧಿಕಾರದ ಅಡಿಯಲ್ಲಿ ಹೆಚ್ಚಿನ ಸಂಖ್ಯೆ ಜನರನ್ನು ಜನರನ್ನು ಹುಡುಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ 15 ಜನರನ್ನು ಬಂಧಿಸಲಾಗಿದೆ ಎಂದು ಬಿಬಿಸಿ ವರದಿ ಹೇಳಿದೆ. ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆದ ನಂತರ ಲೀಸೆಸ್ಟರ್‌‌ನ ಪೂರ್ವದಲ್ಲಿ ಕೆಲವು ಗೊಂದಲಕಾರಿ ಘಟನೆಗಳು ನಡೆದಿದ್ದು, ಈ ಸರಣಿಗೆ ಹೊಸದಾಗಿ ಶನಿವಾರದ ಘರ್ಷಣೆಯು ಸೇರಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ ಗ್ರೀನ್ ಲೇನ್ ರಸ್ತೆಯಲ್ಲಿ, ಹಲವಾರು ಮುಸ್ಲಿಂ ಒಡೆತನದ ವ್ಯಾಪಾರಿ ಮಳಿಗೆಗಳು ಮತ್ತು ಹಿಂದೂ ದೇವಾಲಯ ಇದ್ದು, ಹಿಂದೂ ಯುವಕರ ಗುಂಪು ಶನಿವಾರ ಆ ಪ್ರದೇಶದ ಮೂಲಕ ಮೆರವಣಿಗೆ ನಡೆಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಕಾರ್ಯಕರ್ತ ಮಜಿದ್ ಫ್ರೀಮನ್ ಶನಿವಾರ ಸಂಜೆ ಬೆಲ್‌ಗ್ರೇವ್ ರಸ್ತೆಯಲ್ಲಿ ನಡೆದ ಘಟನೆಗಳನ್ನು ಚಿತ್ರೀಕರಿಸಿದ್ದು, ಅವರುಗಳನ್ನು ಟ್ವಿಟರ್‌ನಲ್ಲಿ ಅಫ್‌ಲೋಡ್‌ ಮಾಡಿದ್ದಾರೆ. ಅವರು ಪೋಸ್ಟ್‌ ಮಾಡಿರುವ ವೀಡಿಯೋವೊಂದರಲ್ಲಿ, ಗಾಜಿನ ಬಾಟಲಿಗಳನ್ನು ಒಡೆದು ಹಾಕುವ ಶಬ್ದ ಕೇಳಿಸುತ್ತಿದ್ದು, ಪೊಲೀಸರು ಅವರನ್ನು ದೂರ ಹೋಗುವಂತೆ ಕೂಗುತ್ತಾರೆ.

ಇದನ್ನೂ ಓದಿ: ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

“ಅವರು ಬಾಟಲಿಗಳು ಸೇರಿದಂತೆ ಎಲ್ಲವನ್ನೂ ಎಸೆಯುತ್ತಿದ್ದರು. ಮಸೀದಿಯ ಹಿಂದೆ ಬರುತ್ತಿದ್ದು ಸಮುದಾಯವನ್ನು ನಿಂದಿಸುತ್ತಿದ್ದರು. ಅಷ್ಟೆ ಅಲ್ಲದೆ ದೈಹಿಕವಾಗಿ ಜನರನ್ನು ಹೊಡೆಯುತ್ತಿದ್ದರು” ಎಂದು ಫ್ರೀಮನ್ ಹೇಳಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಹಿಂದುತ್ವ ಯುವಕರ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ನಗರದಲ್ಲಿ ಮುಸ್ಲಿಂ ಯುವಕರು ಕೂಡಾ ಪೂರ್ವಸಿದ್ಧತೆಯಿಲ್ಲದೆ ಸಭೆ ನಡೆಸಿದ್ದಾರೆ ಎಂದು ಗಾರ್ಡಿಯನ್ ವರದಿ ಹೇಳಿದೆ. “ನಾವು ಪೊಲೀಸರನ್ನು ನಂಬಲು ಸಾಧ್ಯವಿಲ್ಲ, ನಮ್ಮ ಸಮುದಾಯವನ್ನು ನಾವೇ ರಕ್ಷಿಸಿಕೊಳ್ಳುತ್ತೇವೆ” ಎಂದು ಯುವಕರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಸರಣಿ ಘರ್ಷಣೆಗಳಿಂದ ಲೀಸೆಸ್ಟರ್‌ನ ಹಿಂದೂ ಸಮುದಾಯದಲ್ಲೂ ಭೀತಿ ಎದುರಾಗಿದೆ. ರಾಷ್ಟ್ರೀಯ ಹಿಂದೂ ಸಂಘಟನೆಯ ಅಧ್ಯಕ್ಷರಾಗಿರುವ ಲೀಸೆಸ್ಟರ್ ನಿವಾಸಿ ‘ದೃಷ್ಟಿ ಮಾ’ ಅವರು,“ಕಳೆದ ಮೂರು ದಶಕಗಳಲ್ಲೆ ಇತ್ತೀಚೆಗಿನ ಅಶಾಂತಿಯು ಅತಿಕೆಟ್ಟದಾಗಿದೆ. ಮೊದಲ ತಲೆಮಾರಿನ ವಲಸಿಗ ಸಮುದಾಯವು ಹಿಂದೂ ಸಮುದಾಯವನ್ನು ಗುರಿಯಾಗಿಸುತ್ತಿದೆ. ನಗರದ ಕೆಲವು ಮುಸ್ಲಿಮರು ಹಿಂದೂ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

“ಅವರು ಬೆದರಿಕೆ ಮತ್ತು ದಾಳಿಗೆ ಒಳಗಾಗಿದ್ದಾರೆ. ಪೊಲೀಸರು ಆಸ್ತಿ, ಜನರು ಮತ್ತು ಪೂಜಾ ಸ್ಥಳಗಳನ್ನು ರಕ್ಷಿಸಲು ವಿಫಲರಾಗಿದ್ದಾರೆ. ನಮ್ಮನ್ನು ರಕ್ಷಿಸಿಕೊಳ್ಳಲು ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ. ಈ ನಡುವೆ ಯುವಕರ ಗುಂಪೊಂದು ದೇವಾಲಯದ ಹೊರ ಹಾಕಿದ್ದ ಕೇಸರಿ ಧ್ವಜವನ್ನು ಕಿತ್ತು ಹಾಕಿರುವ ವಿಡಿಯೊ ಕೂಡಾ ವೈರಲ್ ಆಗಿದೆ.

“ಪೂರ್ವ ಲೀಸೆಸ್ಟರ್‌ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುವ ಹಲವಾರು ವರದಿಗಳಿವೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಶನಿವಾರ ಸಂಜೆ ಲೀಸೆಸ್ಟರ್‌ಶೈರ್ ಪೊಲೀಸ್‌ ಫೋರ್ಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್ ಅವರು ಸಾಮಾಜಿಕ ಮಾಧ್ಯಮದ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಭಾನುವಾರ ಯುವಕರ ಗುಂಪುಗಳು ಯೋಜಿತವಲ್ಲದ ಪ್ರತಿಭಟನೆಯನ್ನು ಪ್ರಾರಂಭಿಸಿದ ನಂತರ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. “ಹಲವಾರು ಹಿಂಸಾಚಾರ ಮತ್ತು ಹಾನಿಯ ಘಟನೆಗಳನ್ನು ಪೊಲೀಸರಿಗೆ ವರದಿ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

“ಲೀಸೆಸ್ಟರ್‌ನ ಮೆಲ್ಟನ್ ರಸ್ತೆಯಲ್ಲಿರುವ ಧಾರ್ಮಿಕ ಕಟ್ಟಡದ ಹೊರಗೆ ವ್ಯಕ್ತಿಯೊಬ್ಬ ಧ್ವಜವನ್ನು ಕೆಳಗೆ ಎಳೆಯುತ್ತಿರುವ ವೀಡಿಯೊ ಪ್ರಸಾರವಾಗುತ್ತಿದ್ದು, ಈ ಬಗ್ಗೆ ನಮಗೆ ತಿಳಿದಿದೆ. ಪೊಲೀಸ್ ಅಧಿಕಾರಿಗಳು ಈ ಪ್ರದೇಶದಲ್ಲಿ ಸಾರ್ವಜನಿಕ ಸುವ್ಯವಸ್ಥೆಯೊಂದಿಗೆ ವ್ಯವಹರಿಸುವಾಗ ಇದು ಸಂಭವಿಸಿದೆ ಎಂದು ತೋರುತ್ತದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಶನಿವಾರ ಇಬ್ಬರನ್ನು ಬಂಧಿಸಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರಲ್ಲಿ ಒಬ್ಬನನ್ನು ಹಿಂಸೆಗೆ ಸಂಚು ರೂಪಿಸಿದ ಶಂಕೆಯ ಮೇಲೆ ಬಂಧಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯನ್ನು ಬ್ಲೇಡ್‌ ರೀತಿಯ ವಸ್ತುವನ್ನು ಹೊಂದಿರುವ ಶಂಕೆಯ ಮೇಲೆ ಬಂಧಿಸಲಾಗಿದೆ. ಇಬ್ಬರೂ ಭಾನುವಾರವೂ ಪೊಲೀಸ್ ಕಸ್ಟಡಿಯಲ್ಲಿದ್ದರು ದಿ ಗಾರ್ಡಿಯನ್ ವರದಿ ಹೇಳಿದೆ.

“ನಾವು ಸ್ಥಳೀಯ ಸಮುದಾಯದ ಮುಖಂಡರ ಬೆಂಬಲದೊಂದಿಗೆ ಸಂವಾದ ಮತ್ತು ಶಾಂತಿಗೆ ಕರೆ ನೀಡುವುದನ್ನು ಮುಂದುವರಿಸುತ್ತಿದ್ದೇವೆ. ನಗರದಲ್ಲಿ ಹಿಂಸೆ ಅಥವಾ ಅವ್ಯವಸ್ಥೆಯನ್ನು ನಾವು ಸಹಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಮಹತ್ವದ ಪೊಲೀಸ್ ಕಾರ್ಯಾಚರಣೆಯು ಪ್ರದೇಶದಲ್ಲಿ ಉಳಿಯುತ್ತದೆ” ಎಂದು ಪೊಲೀಸರು ಹೇಳಿದ್ದಾರೆ.

ಲೀಸೆಸ್ಟರ್ ಮೂಲದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಸುಲೇಮಾನ್ ನಗ್ಡಿ,“ನಾವು ಬೀದಿಗಳಲ್ಲಿ ನೋಡಿರುವುದು ತುಂಬಾ ಆತಂಕಕಾರಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ಸಮುದಾಯಗಳ ಎಡೆಯಲ್ಲಿ ಈ ರೀತಿಯ ಸಮಸ್ಯೆ ನಡೆಯುತ್ತಿತ್ತು. ಆದರೆ ಅದು ಇಷ್ಟೊಂದು ಕೆಟ್ಟದಾಗಿ ಈ ವರೆಗೆ ಭುಗಿಲೆದ್ದಿಲ್ಲ. ನಮಗೆ ಶಾಂತಿ ಬೇಕಿದ್ದು, ಹಿಂಸಾಚಾರ ನಿಲ್ಲಬೇಕು. ಕೆಲವು ಅತೃಪ್ತ ಯುವಕರು ವಿನಾಶವನ್ನು ಉಂಟುಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

ಲೀಸೆಸ್ಟರ್‌ನಲ್ಲಿರುವ ಹಿಂದೂ ಮತ್ತು ಜೈನ ದೇವಾಲಯಗಳು ಮತ್ತು ಸಮುದಾಯ ಸಂಘಟನೆಗಳ ಮುಖಂಡರು ನೀಡಿದ ಹೇಳಿಕೆಯಲ್ಲಿ, “ಶನಿವಾರದ ಪೂರ್ವಸಿದ್ಧತೆಯಿಲ್ಲದ ಮೆರವಣಿಗೆಯ ಬಗ್ಗೆ ತಿಳಿಯಲು ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದೇವೆ. ಬೆಲ್‌ಗ್ರೇವ್ ಮತ್ತು ನಾರ್ತ್ ಎವಿಂಗ್‌ಟನ್‌ನ ಬೀದಿಗಳಲ್ಲಿ ಸಂವೇದನಾಶೀಲವಲ್ಲದ ಮತ್ತು ಸಂಪೂರ್ಣವಾಗಿ ಅವಮಾನಕರ ಕೃತ್ಯಗಳನ್ನು ನಾವು ಖಂಡಿಸುತ್ತೇವೆ. ಲೀಸೆಸ್ಟರ್ ನಗರದೊಳಗಿನ ಸಂಬಂಧಗಳು ಮತ್ತು ಏಕತೆಯನ್ನು ಹಾಳುಮಾಡುವ ಇಂತಹ ಆಕ್ರಮಣಕಾರಿ ಕೃತ್ಯಗಳನ್ನು ಹಿಂದೂ ಸಮುದಾಯದ ನಾಯಕರು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇದು ಇರಾಕ್ ಅಲ್ಲ, ಇರಾನ್ ಜೊತೆಗಿನ ಸಂಘರ್ಷ ‘ಅಂತ್ಯವಿಲ್ಲದ ಯುದ್ಧವಲ್ಲ’ : ಅಮೆರಿಕ ರಕ್ಷಣಾ ಕಾರ್ಯದರ್ಶಿ

ಇಸ್ರೇಲ್ ಜೊತೆಗೂಡಿ ಇರಾನ್ ಮೇಲೆ ಅಮೆರಿಕ ನಡೆಸುತ್ತಿರುವ ಜಂಟಿ ದಾಳಿಯು 'ಅಂತ್ಯವಿಲ್ಲದ್ದು' ಅಥವಾ ಸುದೀರ್ಘವಾದುದ್ದಲ್ಲ ಎಂದು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಸೋಮವಾರ (ಮಾ.2) ತಿಳಿಸಿದ್ದಾರೆ. ಈ ಸಂಘರ್ಷವು ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯುವುದಿಲ್ಲ...

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...