Homeಅಂತರಾಷ್ಟ್ರೀಯಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

ಇಂಗ್ಲೆಂಡ್‌: ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮೆರವಣಿಗೆ ನಡೆಸಿದ ಹಿಂದುತ್ವ ಪ್ರೇರಿತ ಯುವಕರು; ಭುಗಿಲೆದ್ದ ಘರ್ಷಣೆ

- Advertisement -
- Advertisement -

ಶನಿವಾರ ಇಂಗ್ಲೆಂಡ್‌‌ನ ಲೀಸೆಸ್ಟರ್‌‌ನಲ್ಲಿ ಯುವಕರ ಗುಂಪೊಂದು ನಡೆಸಿದ ಮೆರವಣಿಗೆಯು ಕೋಮು ‘ಘರ್ಷಣೆ’ಗಳನ್ನು ಹುಟ್ಟುಹಾಕಿದೆ. ಹಿಂದುತ್ವದ ಬೆಂಬಲಿಗರು ಎಂದು ಆರೋಪಿಸಲಾಗಿರುವ ಮೆರವಣಿಯಲ್ಲಿದ್ದ ಯುವಕರೆಲ್ಲರೂ ಮಾಸ್ಕ್‌ ಧರಿಸಿದ್ದು, ಕೈಗಳಲ್ಲಿ ಚಾಕು ಮತ್ತು ಇತರ ಅಸ್ತ್ರಗಳನ್ನು ಇಟ್ಟುಕೊಂಡಿದ್ದರು. ಮೆರವಣಿಗೆಯ ಉದ್ದಕ್ಕೂ ಜೈಶ್ರೀರಾಮ್ ಸೇರಿದಂತೆ ಮುಸ್ಲಿಂ ವಿರೂಧಿ ಘೋಷಣೆಗಳು ಕೂಗಿ ಬಾಟಲಿಗಳನ್ನು ಎಸೆದು ಕಿಟಕಿ ಗಾಜುಗಳನ್ನು ಒಡೆದಿದ್ದಾರಲ್ಲದೆ ಬದಿಯಲ್ಲಿ ಇದ್ದ ವ್ಯಕ್ತಿಯೊಬ್ಬರಿಗೆ ಥಳಿಸುತ್ತಿರುವ ವಿಡಿಯೊಗಳು ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಘರ್ಷಣೆಯ ಹಿನ್ನಲೆಯಲ್ಲಿ ಪೊಲೀಸರು ಮತ್ತು ಸಮುದಾಯದ ಮುಖಂಡರು ನಾಗರಿಕರಿಗೆ ಶಾಂತವಾಗಿರಲು ಕರೆ ನೀಡಿದ್ದಾರೆ. ಶನಿವಾರ ಇಬ್ಬರನ್ನು ಬಂಧಿಸಲಾಗಿದ್ದು, ಸೆಕ್ಷನ್ ‘60 ಸ್ಟಾಪ್ ಆಂಡ್‌ ಸರ್ಚ್’ ಅಧಿಕಾರದ ಅಡಿಯಲ್ಲಿ ಹೆಚ್ಚಿನ ಸಂಖ್ಯೆ ಜನರನ್ನು ಜನರನ್ನು ಹುಡುಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ 15 ಜನರನ್ನು ಬಂಧಿಸಲಾಗಿದೆ ಎಂದು ಬಿಬಿಸಿ ವರದಿ ಹೇಳಿದೆ. ಆಗಸ್ಟ್ 28 ರಂದು ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯ ನಡೆದ ನಂತರ ಲೀಸೆಸ್ಟರ್‌‌ನ ಪೂರ್ವದಲ್ಲಿ ಕೆಲವು ಗೊಂದಲಕಾರಿ ಘಟನೆಗಳು ನಡೆದಿದ್ದು, ಈ ಸರಣಿಗೆ ಹೊಸದಾಗಿ ಶನಿವಾರದ ಘರ್ಷಣೆಯು ಸೇರಿಕೊಂಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರದ ಗ್ರೀನ್ ಲೇನ್ ರಸ್ತೆಯಲ್ಲಿ, ಹಲವಾರು ಮುಸ್ಲಿಂ ಒಡೆತನದ ವ್ಯಾಪಾರಿ ಮಳಿಗೆಗಳು ಮತ್ತು ಹಿಂದೂ ದೇವಾಲಯ ಇದ್ದು, ಹಿಂದೂ ಯುವಕರ ಗುಂಪು ಶನಿವಾರ ಆ ಪ್ರದೇಶದ ಮೂಲಕ ಮೆರವಣಿಗೆ ನಡೆಸುತ್ತಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಸಾಮಾಜಿಕ ಕಾರ್ಯಕರ್ತ ಮಜಿದ್ ಫ್ರೀಮನ್ ಶನಿವಾರ ಸಂಜೆ ಬೆಲ್‌ಗ್ರೇವ್ ರಸ್ತೆಯಲ್ಲಿ ನಡೆದ ಘಟನೆಗಳನ್ನು ಚಿತ್ರೀಕರಿಸಿದ್ದು, ಅವರುಗಳನ್ನು ಟ್ವಿಟರ್‌ನಲ್ಲಿ ಅಫ್‌ಲೋಡ್‌ ಮಾಡಿದ್ದಾರೆ. ಅವರು ಪೋಸ್ಟ್‌ ಮಾಡಿರುವ ವೀಡಿಯೋವೊಂದರಲ್ಲಿ, ಗಾಜಿನ ಬಾಟಲಿಗಳನ್ನು ಒಡೆದು ಹಾಕುವ ಶಬ್ದ ಕೇಳಿಸುತ್ತಿದ್ದು, ಪೊಲೀಸರು ಅವರನ್ನು ದೂರ ಹೋಗುವಂತೆ ಕೂಗುತ್ತಾರೆ.

ಇದನ್ನೂ ಓದಿ: ಗುಜರಾತ್ ಗಲಭೆ: ಪ್ರಧಾನಿಗೆ ಕ್ಲೀನ್ ಚಿಟ್ ದೃಢಪಡಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿ ವಜಾ

“ಅವರು ಬಾಟಲಿಗಳು ಸೇರಿದಂತೆ ಎಲ್ಲವನ್ನೂ ಎಸೆಯುತ್ತಿದ್ದರು. ಮಸೀದಿಯ ಹಿಂದೆ ಬರುತ್ತಿದ್ದು ಸಮುದಾಯವನ್ನು ನಿಂದಿಸುತ್ತಿದ್ದರು. ಅಷ್ಟೆ ಅಲ್ಲದೆ ದೈಹಿಕವಾಗಿ ಜನರನ್ನು ಹೊಡೆಯುತ್ತಿದ್ದರು” ಎಂದು ಫ್ರೀಮನ್ ಹೇಳಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ.

ಹಿಂದುತ್ವ ಯುವಕರ ಮೆರವಣಿಗೆಗೆ ಪ್ರತಿಕ್ರಿಯೆಯಾಗಿ ನಗರದಲ್ಲಿ ಮುಸ್ಲಿಂ ಯುವಕರು ಕೂಡಾ ಪೂರ್ವಸಿದ್ಧತೆಯಿಲ್ಲದೆ ಸಭೆ ನಡೆಸಿದ್ದಾರೆ ಎಂದು ಗಾರ್ಡಿಯನ್ ವರದಿ ಹೇಳಿದೆ. “ನಾವು ಪೊಲೀಸರನ್ನು ನಂಬಲು ಸಾಧ್ಯವಿಲ್ಲ, ನಮ್ಮ ಸಮುದಾಯವನ್ನು ನಾವೇ ರಕ್ಷಿಸಿಕೊಳ್ಳುತ್ತೇವೆ” ಎಂದು ಯುವಕರು ಹೇಳಿದ್ದಾಗಿ ವರದಿ ಉಲ್ಲೇಖಿಸಿದೆ.

ಸರಣಿ ಘರ್ಷಣೆಗಳಿಂದ ಲೀಸೆಸ್ಟರ್‌ನ ಹಿಂದೂ ಸಮುದಾಯದಲ್ಲೂ ಭೀತಿ ಎದುರಾಗಿದೆ. ರಾಷ್ಟ್ರೀಯ ಹಿಂದೂ ಸಂಘಟನೆಯ ಅಧ್ಯಕ್ಷರಾಗಿರುವ ಲೀಸೆಸ್ಟರ್ ನಿವಾಸಿ ‘ದೃಷ್ಟಿ ಮಾ’ ಅವರು,“ಕಳೆದ ಮೂರು ದಶಕಗಳಲ್ಲೆ ಇತ್ತೀಚೆಗಿನ ಅಶಾಂತಿಯು ಅತಿಕೆಟ್ಟದಾಗಿದೆ. ಮೊದಲ ತಲೆಮಾರಿನ ವಲಸಿಗ ಸಮುದಾಯವು ಹಿಂದೂ ಸಮುದಾಯವನ್ನು ಗುರಿಯಾಗಿಸುತ್ತಿದೆ. ನಗರದ ಕೆಲವು ಮುಸ್ಲಿಮರು ಹಿಂದೂ ಕುಟುಂಬಗಳಿಗೆ ಕಿರುಕುಳ ನೀಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಲಭೆ: ಅನುಮತಿಯಿಲ್ಲದ ಮೆರವಣಿಗೆ ತಡೆಯದೆ ಇದ್ದಿದ್ದು ‘ಸಂಪೂರ್ಣ ವಿಫಲತೆ’; ದೆಹಲಿ ಪೊಲೀಸರಿಗೆ ಕೋರ್ಟ್ ಛೀಮಾರಿ

“ಅವರು ಬೆದರಿಕೆ ಮತ್ತು ದಾಳಿಗೆ ಒಳಗಾಗಿದ್ದಾರೆ. ಪೊಲೀಸರು ಆಸ್ತಿ, ಜನರು ಮತ್ತು ಪೂಜಾ ಸ್ಥಳಗಳನ್ನು ರಕ್ಷಿಸಲು ವಿಫಲರಾಗಿದ್ದಾರೆ. ನಮ್ಮನ್ನು ರಕ್ಷಿಸಿಕೊಳ್ಳಲು ನಮಗೆ ಹಕ್ಕಿದೆ” ಎಂದು ಅವರು ಹೇಳಿದ್ದಾರೆ. ಈ ನಡುವೆ ಯುವಕರ ಗುಂಪೊಂದು ದೇವಾಲಯದ ಹೊರ ಹಾಕಿದ್ದ ಕೇಸರಿ ಧ್ವಜವನ್ನು ಕಿತ್ತು ಹಾಕಿರುವ ವಿಡಿಯೊ ಕೂಡಾ ವೈರಲ್ ಆಗಿದೆ.

“ಪೂರ್ವ ಲೀಸೆಸ್ಟರ್‌ನಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗಿರುವ ಹಲವಾರು ವರದಿಗಳಿವೆ. ಅಧಿಕಾರಿಗಳು ಪರಿಸ್ಥಿತಿಯನ್ನು ನಿಯಂತ್ರಿಸುತ್ತಿದ್ದಾರೆ” ಎಂದು ಶನಿವಾರ ಸಂಜೆ ಲೀಸೆಸ್ಟರ್‌ಶೈರ್ ಪೊಲೀಸ್‌ ಫೋರ್ಸ್‌ನ ತಾತ್ಕಾಲಿಕ ಮುಖ್ಯ ಕಾನ್ಸ್‌ಟೇಬಲ್ ರಾಬ್ ನಿಕ್ಸನ್ ಅವರು ಸಾಮಾಜಿಕ ಮಾಧ್ಯಮದ ವೀಡಿಯೊ ಸಂದೇಶದಲ್ಲಿ ಹೇಳಿದ್ದಾರೆ.

ಭಾನುವಾರ ಯುವಕರ ಗುಂಪುಗಳು ಯೋಜಿತವಲ್ಲದ ಪ್ರತಿಭಟನೆಯನ್ನು ಪ್ರಾರಂಭಿಸಿದ ನಂತರ ಜನರು ದೊಡ್ಡ ಸಂಖ್ಯೆಯಲ್ಲಿ ಸೇರಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. “ಹಲವಾರು ಹಿಂಸಾಚಾರ ಮತ್ತು ಹಾನಿಯ ಘಟನೆಗಳನ್ನು ಪೊಲೀಸರಿಗೆ ವರದಿ ಮಾಡಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಯೋಧ್ಯೆ: ಮಸೀದಿಗಳ ಮೇಲೆ ಆಕ್ಷೇಪಾರ್ಹ ಪೋಸ್ಟರ್‌ ಅಂಟಿಸಿ ಗಲಭೆಗೆ ಪ್ರಚೋದನೆ; 7 ದುಷ್ಕರ್ಮಿಗಳ ಬಂಧನ

“ಲೀಸೆಸ್ಟರ್‌ನ ಮೆಲ್ಟನ್ ರಸ್ತೆಯಲ್ಲಿರುವ ಧಾರ್ಮಿಕ ಕಟ್ಟಡದ ಹೊರಗೆ ವ್ಯಕ್ತಿಯೊಬ್ಬ ಧ್ವಜವನ್ನು ಕೆಳಗೆ ಎಳೆಯುತ್ತಿರುವ ವೀಡಿಯೊ ಪ್ರಸಾರವಾಗುತ್ತಿದ್ದು, ಈ ಬಗ್ಗೆ ನಮಗೆ ತಿಳಿದಿದೆ. ಪೊಲೀಸ್ ಅಧಿಕಾರಿಗಳು ಈ ಪ್ರದೇಶದಲ್ಲಿ ಸಾರ್ವಜನಿಕ ಸುವ್ಯವಸ್ಥೆಯೊಂದಿಗೆ ವ್ಯವಹರಿಸುವಾಗ ಇದು ಸಂಭವಿಸಿದೆ ಎಂದು ತೋರುತ್ತದೆ. ಈ ಘಟನೆಯ ಕುರಿತು ತನಿಖೆ ನಡೆಸಲಾಗುವುದು” ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಶನಿವಾರ ಇಬ್ಬರನ್ನು ಬಂಧಿಸಿಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತರಲ್ಲಿ ಒಬ್ಬನನ್ನು ಹಿಂಸೆಗೆ ಸಂಚು ರೂಪಿಸಿದ ಶಂಕೆಯ ಮೇಲೆ ಬಂಧಿಸಲಾಗಿದ್ದು, ಮತ್ತೊಬ್ಬ ವ್ಯಕ್ತಿಯನ್ನು ಬ್ಲೇಡ್‌ ರೀತಿಯ ವಸ್ತುವನ್ನು ಹೊಂದಿರುವ ಶಂಕೆಯ ಮೇಲೆ ಬಂಧಿಸಲಾಗಿದೆ. ಇಬ್ಬರೂ ಭಾನುವಾರವೂ ಪೊಲೀಸ್ ಕಸ್ಟಡಿಯಲ್ಲಿದ್ದರು ದಿ ಗಾರ್ಡಿಯನ್ ವರದಿ ಹೇಳಿದೆ.

“ನಾವು ಸ್ಥಳೀಯ ಸಮುದಾಯದ ಮುಖಂಡರ ಬೆಂಬಲದೊಂದಿಗೆ ಸಂವಾದ ಮತ್ತು ಶಾಂತಿಗೆ ಕರೆ ನೀಡುವುದನ್ನು ಮುಂದುವರಿಸುತ್ತಿದ್ದೇವೆ. ನಗರದಲ್ಲಿ ಹಿಂಸೆ ಅಥವಾ ಅವ್ಯವಸ್ಥೆಯನ್ನು ನಾವು ಸಹಿಸುವುದಿಲ್ಲ. ಮುಂಬರುವ ದಿನಗಳಲ್ಲಿ ಮಹತ್ವದ ಪೊಲೀಸ್ ಕಾರ್ಯಾಚರಣೆಯು ಪ್ರದೇಶದಲ್ಲಿ ಉಳಿಯುತ್ತದೆ” ಎಂದು ಪೊಲೀಸರು ಹೇಳಿದ್ದಾರೆ.

ಲೀಸೆಸ್ಟರ್ ಮೂಲದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಸುಲೇಮಾನ್ ನಗ್ಡಿ,“ನಾವು ಬೀದಿಗಳಲ್ಲಿ ನೋಡಿರುವುದು ತುಂಬಾ ಆತಂಕಕಾರಿಯಾಗಿದೆ. ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಪಂದ್ಯದ ನಂತರ ಸಮುದಾಯಗಳ ಎಡೆಯಲ್ಲಿ ಈ ರೀತಿಯ ಸಮಸ್ಯೆ ನಡೆಯುತ್ತಿತ್ತು. ಆದರೆ ಅದು ಇಷ್ಟೊಂದು ಕೆಟ್ಟದಾಗಿ ಈ ವರೆಗೆ ಭುಗಿಲೆದ್ದಿಲ್ಲ. ನಮಗೆ ಶಾಂತಿ ಬೇಕಿದ್ದು, ಹಿಂಸಾಚಾರ ನಿಲ್ಲಬೇಕು. ಕೆಲವು ಅತೃಪ್ತ ಯುವಕರು ವಿನಾಶವನ್ನು ಉಂಟುಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉಕ್ರೇನ್‌ ಸಂಘರ್ಷ & ದೆಹಲಿ ಗಲಭೆಗಳ ಪ್ರಸಾರದ ಕುರಿತು ಟಿವಿ ಚಾನೆಲ್‌ಗಳಿಗೆ ‘ಸಲಹೆ’ ನೀಡಿದ ಒಕ್ಕೂಟ ಸರ್ಕಾರ!

ಲೀಸೆಸ್ಟರ್‌ನಲ್ಲಿರುವ ಹಿಂದೂ ಮತ್ತು ಜೈನ ದೇವಾಲಯಗಳು ಮತ್ತು ಸಮುದಾಯ ಸಂಘಟನೆಗಳ ಮುಖಂಡರು ನೀಡಿದ ಹೇಳಿಕೆಯಲ್ಲಿ, “ಶನಿವಾರದ ಪೂರ್ವಸಿದ್ಧತೆಯಿಲ್ಲದ ಮೆರವಣಿಗೆಯ ಬಗ್ಗೆ ತಿಳಿಯಲು ಪೊಲೀಸರೊಂದಿಗೆ ಕೆಲಸ ಮಾಡುತ್ತಿದ್ದೇವೆ. ಬೆಲ್‌ಗ್ರೇವ್ ಮತ್ತು ನಾರ್ತ್ ಎವಿಂಗ್‌ಟನ್‌ನ ಬೀದಿಗಳಲ್ಲಿ ಸಂವೇದನಾಶೀಲವಲ್ಲದ ಮತ್ತು ಸಂಪೂರ್ಣವಾಗಿ ಅವಮಾನಕರ ಕೃತ್ಯಗಳನ್ನು ನಾವು ಖಂಡಿಸುತ್ತೇವೆ. ಲೀಸೆಸ್ಟರ್ ನಗರದೊಳಗಿನ ಸಂಬಂಧಗಳು ಮತ್ತು ಏಕತೆಯನ್ನು ಹಾಳುಮಾಡುವ ಇಂತಹ ಆಕ್ರಮಣಕಾರಿ ಕೃತ್ಯಗಳನ್ನು ಹಿಂದೂ ಸಮುದಾಯದ ನಾಯಕರು ಸಹಿಸುವುದಿಲ್ಲ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...