Homeಕ್ರೀಡೆಕ್ರಿಕೆಟ್ಇಂಗ್ಲೆಂಡ್ - ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

ಇಂಗ್ಲೆಂಡ್ – ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

- Advertisement -
- Advertisement -

ಇಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ 2022ರ ಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಪಾಕ್ ನಡುವೆ ನಡೆಯಬೇಕಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಶೇ.90 ರಷ್ಟು ಸಾಧ್ಯತೆ ಜೋರು ಮಳೆ ಬೀಳಲಿದೆ ಎನ್ನಲಾಗಿದೆ. ಹಾಗಾಗಿ ಮಳೆ ನಡುವೆ ನಿಗಧಿತ 40 ಓವರ್‌ಗಳನ್ನು ಮುಗಿಸಲು ಸಾಧ್ಯವೇ? ಹೆಚ್ಚು ಮಳೆ ಬಂದು ಪಂದ್ಯಕ್ಕೆ ಅಡ್ಡಿಯಾದರೆ ಏನು ಮಾಡುವುದು ಎಂಬುದು ಎಲ್ಲರನ್ನು ಯೋಚಿಸುಂತೆ ಮಾಡಿದೆ. ಪಂದ್ಯ ಆರಂಭವಾಗುವ ಸಮಯಕ್ಕೆ (1.30) ಮತ್ತು ಆನಂತರ ಒಂದೊಂದು ಗಂಟೆ ಬಿಟ್ಟು (2.30, 3.30ಕ್ಕೆ) ಮಳೆ ಸುರಿಯಲಿದೆ ಎನ್ನಲಾಗಿದೆ.

ಒಂದು ಹೆಚ್ಚು ಮಳೆ ಬಂದು ಪಂದ್ಯ ನಡೆಯಲು ಸಾಧ್ಯವಾಗದಿದ್ದರೆ ಮೀಸಲು ದಿನವಾದ ನಾಳೆ ಸೋಮವಾರಕ್ಕೆ ಪಂದ್ಯ ಮುಂದೂಡಲಾಗುತ್ತದೆ ಎಂದು ಐಸಿಸಿ ತಿಳಿಸಿದೆ. ಆದರೆ ನಾಳೆಯೂ ಮಳೆ ಬಂದರೆ ಏನು ಮಾಡುವುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕಾಗಿ ಐಸಿಸಿ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತಂದಿದೆ.

ಮಳೆ ಕಾರಣದಿಂದ ಸೋಮವಾರದ ಪಂದ್ಯಕ್ಕಾಗಿ ಈ ಮೊದಲು ನೀಡಲಾಗಿದ್ದ ಎರಡು ಗಂಟೆಗಳ ಹೆಚ್ಚುವರಿ ಸಮಯವನ್ನು ನಾಲ್ಕು ಗಂಟೆಗಳಿಗೆ ಐಸಿಸಿ ಹೆಚ್ಚಿಸಿದೆ. ಹಾಗಾಗಿ ಮಳೆಯಿಂದ ನಾಲ್ಕು ಗಂಟೆಯಷ್ಟು ಆಟ ಸಾಧ್ಯವಾಗದಿದ್ದರೂ ಹೆಚ್ಚುವರಿ ಸಮಯ ಬಳಸಿ ಫೈನಲ್ ಫಲಿತಾಂಶ ಪಡೆಯಬೇಕೆಂದು ನಿರ್ಧಿರಿಸಿದೆ.

ನಾಕೌಟ್ ಹಂತದಲ್ಲಿ ಮಳೆ ಬಂದಾಗ ಪ್ರತಿ ತಂಡಕ್ಕೆ ಕನಿಷ್ಟ 10 ಓವರ್‌ಗಳು ಸಿಗುವಂತೆ ರೂಪಿಸಲಾಗಿತ್ತು. ಆನಂತರ ಮಳೆ ಹೆಚ್ಚಾದಲ್ಲಿ ಓವರ್‌ಗಳನ್ನು ಕಡಿತಗೊಳಿಸಲಾಗುತ್ತಿತ್ತು. ಆದರೆ ಇಂದು ನಡೆಯುವ ಫೈನಲ್ ಪಂದ್ಯದಲ್ಲಿಯೂ ಎರಡು ತಂಡಗಳು ಕನಿಷ್ಟ 10 ಓವರ್ ಆಡಲೇಬೇಕಿದೆ. ಅಲ್ಲದೆ ಇಂದು 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಗಿದೆ. ಆದರೂ ಕನಿಷ್ಠ 10 ಓವರ್‌ಗಳ ಆಟ ನಡೆಯಲು ಸಾಧ್ಯವಾಗದಿದ್ದರೆ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗುತ್ತದೆ ಮತ್ತು ಅಂದು ಭಾರತೀಯ ಕಾಲಮಾನ ಬೆಳಿಗ್ಗೆ 9.30ರಿಂದಲೇ ಪಂದ್ಯ ಎಲ್ಲಿಗೆ ನಿಂತಿತ್ತು ಅಲ್ಲಿಂದ ಮುಂದುವರೆಸಲಾಗುತ್ತದೆ. ಒಂದು ವೇಳೆ ಭಾನುವಾರ ಪಂದ್ಯ ಆರಂಭವಾಗದಿದ್ದರೆ ಸೋಮವಾರ ಹೊಸದಾಗಿ ಆರಂಭಿಸಲಾಗುವುದು. ಅಂದು ಕೂಡ ಮಳೆ ಬಂದರೆ ಕೊನೆಗೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಅಲ್ಲದೆ ಪಂದ್ಯ ನಡೆದು ಎರಡೂ ತಂಡಗಳು ಸಮವಾಗಿ ರನ್ ಗಳಿಸಿ ಪಂದ್ಯ ಟೈ ಆದರೆ ಆಗ ಸೂಪರ್ ಓವರ್ ಆಡಿಸಲಾಗುತ್ತದೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...