Homeಕ್ರೀಡೆಕ್ರಿಕೆಟ್ಇಂಗ್ಲೆಂಡ್ - ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

ಇಂಗ್ಲೆಂಡ್ – ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

- Advertisement -
- Advertisement -

ಇಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ 2022ರ ಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಪಾಕ್ ನಡುವೆ ನಡೆಯಬೇಕಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಶೇ.90 ರಷ್ಟು ಸಾಧ್ಯತೆ ಜೋರು ಮಳೆ ಬೀಳಲಿದೆ ಎನ್ನಲಾಗಿದೆ. ಹಾಗಾಗಿ ಮಳೆ ನಡುವೆ ನಿಗಧಿತ 40 ಓವರ್‌ಗಳನ್ನು ಮುಗಿಸಲು ಸಾಧ್ಯವೇ? ಹೆಚ್ಚು ಮಳೆ ಬಂದು ಪಂದ್ಯಕ್ಕೆ ಅಡ್ಡಿಯಾದರೆ ಏನು ಮಾಡುವುದು ಎಂಬುದು ಎಲ್ಲರನ್ನು ಯೋಚಿಸುಂತೆ ಮಾಡಿದೆ. ಪಂದ್ಯ ಆರಂಭವಾಗುವ ಸಮಯಕ್ಕೆ (1.30) ಮತ್ತು ಆನಂತರ ಒಂದೊಂದು ಗಂಟೆ ಬಿಟ್ಟು (2.30, 3.30ಕ್ಕೆ) ಮಳೆ ಸುರಿಯಲಿದೆ ಎನ್ನಲಾಗಿದೆ.

ಒಂದು ಹೆಚ್ಚು ಮಳೆ ಬಂದು ಪಂದ್ಯ ನಡೆಯಲು ಸಾಧ್ಯವಾಗದಿದ್ದರೆ ಮೀಸಲು ದಿನವಾದ ನಾಳೆ ಸೋಮವಾರಕ್ಕೆ ಪಂದ್ಯ ಮುಂದೂಡಲಾಗುತ್ತದೆ ಎಂದು ಐಸಿಸಿ ತಿಳಿಸಿದೆ. ಆದರೆ ನಾಳೆಯೂ ಮಳೆ ಬಂದರೆ ಏನು ಮಾಡುವುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕಾಗಿ ಐಸಿಸಿ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತಂದಿದೆ.

ಮಳೆ ಕಾರಣದಿಂದ ಸೋಮವಾರದ ಪಂದ್ಯಕ್ಕಾಗಿ ಈ ಮೊದಲು ನೀಡಲಾಗಿದ್ದ ಎರಡು ಗಂಟೆಗಳ ಹೆಚ್ಚುವರಿ ಸಮಯವನ್ನು ನಾಲ್ಕು ಗಂಟೆಗಳಿಗೆ ಐಸಿಸಿ ಹೆಚ್ಚಿಸಿದೆ. ಹಾಗಾಗಿ ಮಳೆಯಿಂದ ನಾಲ್ಕು ಗಂಟೆಯಷ್ಟು ಆಟ ಸಾಧ್ಯವಾಗದಿದ್ದರೂ ಹೆಚ್ಚುವರಿ ಸಮಯ ಬಳಸಿ ಫೈನಲ್ ಫಲಿತಾಂಶ ಪಡೆಯಬೇಕೆಂದು ನಿರ್ಧಿರಿಸಿದೆ.

ನಾಕೌಟ್ ಹಂತದಲ್ಲಿ ಮಳೆ ಬಂದಾಗ ಪ್ರತಿ ತಂಡಕ್ಕೆ ಕನಿಷ್ಟ 10 ಓವರ್‌ಗಳು ಸಿಗುವಂತೆ ರೂಪಿಸಲಾಗಿತ್ತು. ಆನಂತರ ಮಳೆ ಹೆಚ್ಚಾದಲ್ಲಿ ಓವರ್‌ಗಳನ್ನು ಕಡಿತಗೊಳಿಸಲಾಗುತ್ತಿತ್ತು. ಆದರೆ ಇಂದು ನಡೆಯುವ ಫೈನಲ್ ಪಂದ್ಯದಲ್ಲಿಯೂ ಎರಡು ತಂಡಗಳು ಕನಿಷ್ಟ 10 ಓವರ್ ಆಡಲೇಬೇಕಿದೆ. ಅಲ್ಲದೆ ಇಂದು 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಗಿದೆ. ಆದರೂ ಕನಿಷ್ಠ 10 ಓವರ್‌ಗಳ ಆಟ ನಡೆಯಲು ಸಾಧ್ಯವಾಗದಿದ್ದರೆ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗುತ್ತದೆ ಮತ್ತು ಅಂದು ಭಾರತೀಯ ಕಾಲಮಾನ ಬೆಳಿಗ್ಗೆ 9.30ರಿಂದಲೇ ಪಂದ್ಯ ಎಲ್ಲಿಗೆ ನಿಂತಿತ್ತು ಅಲ್ಲಿಂದ ಮುಂದುವರೆಸಲಾಗುತ್ತದೆ. ಒಂದು ವೇಳೆ ಭಾನುವಾರ ಪಂದ್ಯ ಆರಂಭವಾಗದಿದ್ದರೆ ಸೋಮವಾರ ಹೊಸದಾಗಿ ಆರಂಭಿಸಲಾಗುವುದು. ಅಂದು ಕೂಡ ಮಳೆ ಬಂದರೆ ಕೊನೆಗೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಅಲ್ಲದೆ ಪಂದ್ಯ ನಡೆದು ಎರಡೂ ತಂಡಗಳು ಸಮವಾಗಿ ರನ್ ಗಳಿಸಿ ಪಂದ್ಯ ಟೈ ಆದರೆ ಆಗ ಸೂಪರ್ ಓವರ್ ಆಡಿಸಲಾಗುತ್ತದೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...