Homeಕ್ರೀಡೆಕ್ರಿಕೆಟ್ಇಂಗ್ಲೆಂಡ್ - ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

ಇಂಗ್ಲೆಂಡ್ – ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

- Advertisement -
- Advertisement -

ಇಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ 2022ರ ಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಪಾಕ್ ನಡುವೆ ನಡೆಯಬೇಕಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಶೇ.90 ರಷ್ಟು ಸಾಧ್ಯತೆ ಜೋರು ಮಳೆ ಬೀಳಲಿದೆ ಎನ್ನಲಾಗಿದೆ. ಹಾಗಾಗಿ ಮಳೆ ನಡುವೆ ನಿಗಧಿತ 40 ಓವರ್‌ಗಳನ್ನು ಮುಗಿಸಲು ಸಾಧ್ಯವೇ? ಹೆಚ್ಚು ಮಳೆ ಬಂದು ಪಂದ್ಯಕ್ಕೆ ಅಡ್ಡಿಯಾದರೆ ಏನು ಮಾಡುವುದು ಎಂಬುದು ಎಲ್ಲರನ್ನು ಯೋಚಿಸುಂತೆ ಮಾಡಿದೆ. ಪಂದ್ಯ ಆರಂಭವಾಗುವ ಸಮಯಕ್ಕೆ (1.30) ಮತ್ತು ಆನಂತರ ಒಂದೊಂದು ಗಂಟೆ ಬಿಟ್ಟು (2.30, 3.30ಕ್ಕೆ) ಮಳೆ ಸುರಿಯಲಿದೆ ಎನ್ನಲಾಗಿದೆ.

ಒಂದು ಹೆಚ್ಚು ಮಳೆ ಬಂದು ಪಂದ್ಯ ನಡೆಯಲು ಸಾಧ್ಯವಾಗದಿದ್ದರೆ ಮೀಸಲು ದಿನವಾದ ನಾಳೆ ಸೋಮವಾರಕ್ಕೆ ಪಂದ್ಯ ಮುಂದೂಡಲಾಗುತ್ತದೆ ಎಂದು ಐಸಿಸಿ ತಿಳಿಸಿದೆ. ಆದರೆ ನಾಳೆಯೂ ಮಳೆ ಬಂದರೆ ಏನು ಮಾಡುವುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕಾಗಿ ಐಸಿಸಿ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತಂದಿದೆ.

ಮಳೆ ಕಾರಣದಿಂದ ಸೋಮವಾರದ ಪಂದ್ಯಕ್ಕಾಗಿ ಈ ಮೊದಲು ನೀಡಲಾಗಿದ್ದ ಎರಡು ಗಂಟೆಗಳ ಹೆಚ್ಚುವರಿ ಸಮಯವನ್ನು ನಾಲ್ಕು ಗಂಟೆಗಳಿಗೆ ಐಸಿಸಿ ಹೆಚ್ಚಿಸಿದೆ. ಹಾಗಾಗಿ ಮಳೆಯಿಂದ ನಾಲ್ಕು ಗಂಟೆಯಷ್ಟು ಆಟ ಸಾಧ್ಯವಾಗದಿದ್ದರೂ ಹೆಚ್ಚುವರಿ ಸಮಯ ಬಳಸಿ ಫೈನಲ್ ಫಲಿತಾಂಶ ಪಡೆಯಬೇಕೆಂದು ನಿರ್ಧಿರಿಸಿದೆ.

ನಾಕೌಟ್ ಹಂತದಲ್ಲಿ ಮಳೆ ಬಂದಾಗ ಪ್ರತಿ ತಂಡಕ್ಕೆ ಕನಿಷ್ಟ 10 ಓವರ್‌ಗಳು ಸಿಗುವಂತೆ ರೂಪಿಸಲಾಗಿತ್ತು. ಆನಂತರ ಮಳೆ ಹೆಚ್ಚಾದಲ್ಲಿ ಓವರ್‌ಗಳನ್ನು ಕಡಿತಗೊಳಿಸಲಾಗುತ್ತಿತ್ತು. ಆದರೆ ಇಂದು ನಡೆಯುವ ಫೈನಲ್ ಪಂದ್ಯದಲ್ಲಿಯೂ ಎರಡು ತಂಡಗಳು ಕನಿಷ್ಟ 10 ಓವರ್ ಆಡಲೇಬೇಕಿದೆ. ಅಲ್ಲದೆ ಇಂದು 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಗಿದೆ. ಆದರೂ ಕನಿಷ್ಠ 10 ಓವರ್‌ಗಳ ಆಟ ನಡೆಯಲು ಸಾಧ್ಯವಾಗದಿದ್ದರೆ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗುತ್ತದೆ ಮತ್ತು ಅಂದು ಭಾರತೀಯ ಕಾಲಮಾನ ಬೆಳಿಗ್ಗೆ 9.30ರಿಂದಲೇ ಪಂದ್ಯ ಎಲ್ಲಿಗೆ ನಿಂತಿತ್ತು ಅಲ್ಲಿಂದ ಮುಂದುವರೆಸಲಾಗುತ್ತದೆ. ಒಂದು ವೇಳೆ ಭಾನುವಾರ ಪಂದ್ಯ ಆರಂಭವಾಗದಿದ್ದರೆ ಸೋಮವಾರ ಹೊಸದಾಗಿ ಆರಂಭಿಸಲಾಗುವುದು. ಅಂದು ಕೂಡ ಮಳೆ ಬಂದರೆ ಕೊನೆಗೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಅಲ್ಲದೆ ಪಂದ್ಯ ನಡೆದು ಎರಡೂ ತಂಡಗಳು ಸಮವಾಗಿ ರನ್ ಗಳಿಸಿ ಪಂದ್ಯ ಟೈ ಆದರೆ ಆಗ ಸೂಪರ್ ಓವರ್ ಆಡಿಸಲಾಗುತ್ತದೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...