Homeಕ್ರೀಡೆಕ್ರಿಕೆಟ್ಇಂಗ್ಲೆಂಡ್ - ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

ಇಂಗ್ಲೆಂಡ್ – ಪಾಕ್ ಟಿ20 ವಿಶ್ವಕಪ್ ಫೈನಲ್ ಪಂದ್ಯ ಇಂದು: ಮಳೆ ಬಂದರೆ ಇರುವ ಆಯ್ಕೆಗಳೇನು?

- Advertisement -
- Advertisement -

ಇಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಟಿ20 ವಿಶ್ವಕಪ್ 2022ರ ಫೈನಲ್ ಪಂದ್ಯ ಇಂಗ್ಲೆಂಡ್ ಮತ್ತು ಪಾಕ್ ನಡುವೆ ನಡೆಯಬೇಕಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭವಾಗಲಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಶೇ.90 ರಷ್ಟು ಸಾಧ್ಯತೆ ಜೋರು ಮಳೆ ಬೀಳಲಿದೆ ಎನ್ನಲಾಗಿದೆ. ಹಾಗಾಗಿ ಮಳೆ ನಡುವೆ ನಿಗಧಿತ 40 ಓವರ್‌ಗಳನ್ನು ಮುಗಿಸಲು ಸಾಧ್ಯವೇ? ಹೆಚ್ಚು ಮಳೆ ಬಂದು ಪಂದ್ಯಕ್ಕೆ ಅಡ್ಡಿಯಾದರೆ ಏನು ಮಾಡುವುದು ಎಂಬುದು ಎಲ್ಲರನ್ನು ಯೋಚಿಸುಂತೆ ಮಾಡಿದೆ. ಪಂದ್ಯ ಆರಂಭವಾಗುವ ಸಮಯಕ್ಕೆ (1.30) ಮತ್ತು ಆನಂತರ ಒಂದೊಂದು ಗಂಟೆ ಬಿಟ್ಟು (2.30, 3.30ಕ್ಕೆ) ಮಳೆ ಸುರಿಯಲಿದೆ ಎನ್ನಲಾಗಿದೆ.

ಒಂದು ಹೆಚ್ಚು ಮಳೆ ಬಂದು ಪಂದ್ಯ ನಡೆಯಲು ಸಾಧ್ಯವಾಗದಿದ್ದರೆ ಮೀಸಲು ದಿನವಾದ ನಾಳೆ ಸೋಮವಾರಕ್ಕೆ ಪಂದ್ಯ ಮುಂದೂಡಲಾಗುತ್ತದೆ ಎಂದು ಐಸಿಸಿ ತಿಳಿಸಿದೆ. ಆದರೆ ನಾಳೆಯೂ ಮಳೆ ಬಂದರೆ ಏನು ಮಾಡುವುದು ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಇದಕ್ಕಾಗಿ ಐಸಿಸಿ ನಿಯಮಗಳಲ್ಲಿ ಕೆಲ ಬದಲಾವಣೆಗಳನ್ನು ತಂದಿದೆ.

ಮಳೆ ಕಾರಣದಿಂದ ಸೋಮವಾರದ ಪಂದ್ಯಕ್ಕಾಗಿ ಈ ಮೊದಲು ನೀಡಲಾಗಿದ್ದ ಎರಡು ಗಂಟೆಗಳ ಹೆಚ್ಚುವರಿ ಸಮಯವನ್ನು ನಾಲ್ಕು ಗಂಟೆಗಳಿಗೆ ಐಸಿಸಿ ಹೆಚ್ಚಿಸಿದೆ. ಹಾಗಾಗಿ ಮಳೆಯಿಂದ ನಾಲ್ಕು ಗಂಟೆಯಷ್ಟು ಆಟ ಸಾಧ್ಯವಾಗದಿದ್ದರೂ ಹೆಚ್ಚುವರಿ ಸಮಯ ಬಳಸಿ ಫೈನಲ್ ಫಲಿತಾಂಶ ಪಡೆಯಬೇಕೆಂದು ನಿರ್ಧಿರಿಸಿದೆ.

ನಾಕೌಟ್ ಹಂತದಲ್ಲಿ ಮಳೆ ಬಂದಾಗ ಪ್ರತಿ ತಂಡಕ್ಕೆ ಕನಿಷ್ಟ 10 ಓವರ್‌ಗಳು ಸಿಗುವಂತೆ ರೂಪಿಸಲಾಗಿತ್ತು. ಆನಂತರ ಮಳೆ ಹೆಚ್ಚಾದಲ್ಲಿ ಓವರ್‌ಗಳನ್ನು ಕಡಿತಗೊಳಿಸಲಾಗುತ್ತಿತ್ತು. ಆದರೆ ಇಂದು ನಡೆಯುವ ಫೈನಲ್ ಪಂದ್ಯದಲ್ಲಿಯೂ ಎರಡು ತಂಡಗಳು ಕನಿಷ್ಟ 10 ಓವರ್ ಆಡಲೇಬೇಕಿದೆ. ಅಲ್ಲದೆ ಇಂದು 30 ನಿಮಿಷಗಳ ಹೆಚ್ಚುವರಿ ಸಮಯ ನೀಡಲಾಗಿದೆ. ಆದರೂ ಕನಿಷ್ಠ 10 ಓವರ್‌ಗಳ ಆಟ ನಡೆಯಲು ಸಾಧ್ಯವಾಗದಿದ್ದರೆ ಪಂದ್ಯವನ್ನು ಸೋಮವಾರಕ್ಕೆ ಮುಂದೂಡಲಾಗುತ್ತದೆ ಮತ್ತು ಅಂದು ಭಾರತೀಯ ಕಾಲಮಾನ ಬೆಳಿಗ್ಗೆ 9.30ರಿಂದಲೇ ಪಂದ್ಯ ಎಲ್ಲಿಗೆ ನಿಂತಿತ್ತು ಅಲ್ಲಿಂದ ಮುಂದುವರೆಸಲಾಗುತ್ತದೆ. ಒಂದು ವೇಳೆ ಭಾನುವಾರ ಪಂದ್ಯ ಆರಂಭವಾಗದಿದ್ದರೆ ಸೋಮವಾರ ಹೊಸದಾಗಿ ಆರಂಭಿಸಲಾಗುವುದು. ಅಂದು ಕೂಡ ಮಳೆ ಬಂದರೆ ಕೊನೆಗೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.

ಅಲ್ಲದೆ ಪಂದ್ಯ ನಡೆದು ಎರಡೂ ತಂಡಗಳು ಸಮವಾಗಿ ರನ್ ಗಳಿಸಿ ಪಂದ್ಯ ಟೈ ಆದರೆ ಆಗ ಸೂಪರ್ ಓವರ್ ಆಡಿಸಲಾಗುತ್ತದೆ.

ಇದನ್ನೂ ಓದಿ; ಟಿ20 ವಿಶ್ವಕಪ್: ಭಾರತದ ಸೋಲಿಗೆ 3 ಕಾರಣಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...