Homeಮುಖಪುಟ‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ': ವಿ.ಎಲ್.ನರಸಿಂಹಮೂರ್ತಿ

‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ’: ವಿ.ಎಲ್.ನರಸಿಂಹಮೂರ್ತಿ

ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ.

- Advertisement -
- Advertisement -

ಯಾವುದೇ ಭಾಷೆಯು ಆ ಭಾಷೆಯನ್ನಾಡುವ ಸಮುದಾಯದ ಅಭಿವೃದ್ಧಿಯ ಸಾಧನವಾಗಬೇಕೇ ಹೊರತು ಕೇವಲ ಸಮುದಾಯದ ಭಾವನಾತ್ಮಕವಾದ ಅಂಗವಾಗಿ ಉಳಿಯಬಾರದು. ನಮ್ಮ ರಾಜ್ಯದಲ್ಲಿ ಕನ್ನಡದ ಬಗೆಗಿನ ಭಾವನಾತ್ಮಕ ಒಲವಿನಿಂದಾಗಿ ಶಾಲಾ ಶಿಕ್ಷಣದಲ್ಲಿ ಇಂಗ್ಲಿಷ್ ಕಲಿಸುವುದರ ಕುರಿತು ಇವತ್ತಿಗೂ ಅಪಾರ ಗೊಂದಲವಿದೆ. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸುವ ಮತ್ತು ಒಂದು ಸಾವಿರ ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಪ್ರಾರಂಭಿಸುವ ನಿರ್ಧಾರಗಳನ್ನು ಸರ್ಕಾರಗಳು ಕೈಗೊಂಡ ತಕ್ಷಣ ಕನ್ನಡಪರ ಸಂಘಟನೆಗಳು ಮತ್ತು ಕನ್ನಡದ ಸಾಹಿತಿಗಳು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದನ್ನು ಶುರುಮಾಡಿದರೆ ಕನ್ನಡವು ಒಂದು ಭಾಷೆಯಾಗಿ ಅಳಿಯುತ್ತದೆ ಎನ್ನುವುದು ಇವರ ವಾದ. ನಮ್ಮ ರಾಜ್ಯದಲ್ಲಿ ಗಣನೀಯ ಮಕ್ಕಳು ವ್ಯಾಸಂಗ ಮಾಡುತ್ತಿರುವ ಖಾಸಗಿ ಶಾಲೆಗಳು ಅಧಿಕೃತವಾಗಿ, ಕೆಲವು ಕಡೆ ಅನಧಿಕೃತವಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದನ್ನು ಇವರು ಗಂಭೀರವಾಗಿ ತೆಗೆದುಕೊಂಡ ಹಾಗೆ ಕಾಣುವುದಿಲ್ಲ.

ಸರ್ಕಾರಿ ಶಾಲೆಗಳನ್ನ ಕಬಳಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ ಹಾಕುವುದಕ್ಕಾಗಲೀ, ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎನ್ನುವ ಕಾರಣ ನೀಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ, ವಿಲೀನಗೊಳಿಸುವ ಪ್ರಕ್ರಿಯೆಯನ್ನು ತಡೆಗಟ್ಟುವುದಕ್ಕಾಗಲೀ, ಅಷ್ಟೇ ಏಕೆ ಇರುವ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿ, ಗುಣಮಟ್ಟ ಸುಧಾರಣೆಯ ಬಗ್ಗೆಯಾಗಲೀ ಯಾವತ್ತೂ ಧ್ವನಿ ಎತ್ತದವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಾರೆ.

ಬಾಲ್ಯದಲ್ಲಿ ಮಕ್ಕಳಲ್ಲಿ ಸಹಜವಾಗಿರುವ ‘ಲಿಂಗ್ವಿಸ್ಟಿಕ್ ಪ್ಲಾಸಿಸಿಟಿ'(ಭಾಷಾ ಕಲಿಕೆಯ ಸಾಮರ್ಥ್ಯ)ದಿಂದಾಗಿ ಮಕ್ಕಳು ನಾಲ್ಕು ಭಾಷೆಗಳನ್ನು ಸುಲಭವಾಗಿ ಕಲಿಯುತ್ತವೆ ಎನ್ನುವ ಅಂಶ ಸಂಶೋಧನೆಗಳಿಂದ ತಿಳಿದುಬಂದಿದ್ದರೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಇವರು ವಿರೋಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ.

ಇವತ್ತು ಇಂಗ್ಲಿಷ್ ಕಲಿಕೆಯನ್ನು ಕೇವಲ ನಮ್ಮ ಭಾಷೆಯ ಅಳಿವು ಉಳಿವಿನ ಪ್ರಶ್ನೆಯಾಗಿ ಮಾತ್ರ ನೋಡದೆ ಅದಕ್ಕಿರುವ ಸಾಮಾಜಿಕ ಮುಖವನ್ನು ಗಮನಿಸಿದರೆ ಇಂಗ್ಲಿಷ್ ಕಲಿಕೆಯನ್ನು ವಿರೋಧಿಸುವವರ ಹಿಫೊಕ್ರಸಿಯನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಏಕೆಂದರೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಬಹುತೇಕ ಮಕ್ಕಳು ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಮತ್ತು ಆದಿವಾಸಿ ಸಮುದಾಯಗಳ ಬಡ ಮಕ್ಕಳು. ಬಹುತೇಕ ಬಡತನ ರೇಖೆಗಿಂತ ಕೆಳಗಿರುವ ಈ ಜನ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುವಷ್ಟು ಆರ್ಥಿಕವಾಗಿ ಶಕ್ತರಾಗಿರುವುದಿಲ್ಲ ಮತ್ತು ಮುಕ್ಕಾಲು ಭಾಗ ಖಾಸಗಿ ಶಾಲೆಗಳು ಕಳಪೆಯಾಗಿರುವುದರಿಂದ ಅಂತಹ ಶಾಲೆಗಳಗೆ ಅಪಾರ ಶುಲ್ಕ ತೆತ್ತು ಓದುವುದು ಕೂಡ ನಿರರ್ಥಕ. ಹಾಗಾಗಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲೆ ಇಂಗ್ಲಿಷ್ ಕಲಿಸುವುದು ಸೂಕ್ತ. ರಾಜ್ಯದ ಖಾಸಗಿ ಶಾಲೆಗಳಲ್ಲಿ ಓದುವ ಉಳ್ಳವರ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೆ ನಾಶವಾಗದ ಕನ್ನಡ ಈ ಬಡವರ ಮಕ್ಕಳು ಇಂಗ್ಲಿಷ್ ಓದಿದರೆ ಅದು ಹೇಗೆ ನಾಶವಾಗುತ್ತದೆ ಎನ್ನುವುದನ್ನ ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳಿಗೆ ಸೇರಿಸಿ ತಾವು ಕನ್ನಡ ಶಾಲೆಗಳ ಉಳಿವಿಗೆ ಹೋರಾಡುವ ಹೋರಾಟಗಾರರು, ಸಾಹಿತಿಗಳನ್ನು ಕೇಳಬೇಕು! ಅಥವಾ ನಾಡು, ನುಡಿಯನ್ನು ಉಳಿಸುವ ಜವಾಬ್ದಾರಿಯನ್ನು ಸಮಾಜದ ದುರ್ಬಲ ವರ್ಗಗಳು ಮಾತ್ರ ಹೊರಬೇಕು ಎನ್ನುವುದು ಇವರ ವಾದವಿರಬಹುದೇ?

ಇನ್ನು ನಮ್ಮ ಇತಿಹಾಸವನ್ನು ನೋಡಿದರೆ ಶತಮಾನಗಳ ಕಾಲ ಈ ದೇಶದ ತಳ ಸಮುದಾಯಗಳು ಅಕ್ಷರ ಕಲಿಯುವಿಕೆಯಿಂದಲೇ ವಂಚಿತವಾಗಿದ್ದವು. ಇತಿಹಾಸದುದ್ದಕ್ಕೂ ತಾವು ಮಾತ್ರ ಅಕ್ಷರ ಕಲಿತು ದಲಿತರು, ಹಿಂದುಳಿದವರು, ಆದಿವಾಸಿಗಳನ್ನು ಶಿಕ್ಷಣ ವ್ಯವಸ್ಥೆಯಿಂದ ಸಂಪೂರ್ಣವಾಗಿ ದೂರ ಇಟ್ಟವರ ವ್ಯವಸ್ಥಿತವಾದ ಸಂಚಿಗೆ ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವ ಪ್ರಕ್ರಿಯೆ ಬಲಿಯಾಗುತ್ತಿದೆ. ಆಯಾ ಕಾಲಕ್ಕೆ ತಕ್ಕಂತೆ ಆಯಾ ಕಾಲದ ‘ಅಧಿಕಾರದ ಭಾಷೆ’ಯನ್ನು ವಶಪಡಿಸಿಕೊಳ್ಳುವ ವಿದ್ಯೆಯನ್ನು ಕರಗತಮಾಡಿಕೊಂಡಿರುವ ಈ ದೇಶದ ಮೇಲ್ವರ್ಗ ಮೊದಲು ಸಂಸ್ಕೃತ, ಆಮೇಲೆ ಪರ್ಷಿಯನ್, ಈಗ ಇಂಗ್ಲಿಷನ್ನು ತನ್ನ ಸ್ವತ್ತಾಗಿಸಿಕೊಂಡಿದೆ. ದಲಿತ, ಹಿಂದುಳಿದ ಮತ್ತು ಆದಿವಾಸಿ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿರುವ ತಮ್ಮ ಪ್ರಾಬಲ್ಯವನ್ನು ಕಳೆದುಕೊಳ್ಳುವ ಭಯದಿಂದ ಈ ಮೇಲ್ವರ್ಗ ಸರ್ಕಾರಿ ಶಾಲೆಗಳು ಹಿಂದುಳಿದಿರುವಂತೆ ನೋಡಿಕೊಂಡು ಖಾಸಗಿ ಶಾಲೆಗಳನ್ನ ಬಲಪಡಿಸುತ್ತಿದೆ. ಆ ಮೂಲಕ ಸಮಾಜದ ಬಹುಸಂಖ್ಯಾತರಾಗಿರುವ ದಲಿತ, ಹಿಂದುಳಿದ, ಆದಿವಾಸಿ ಸಮುದಾಯಗಳು ಸೇರಿದಂತೆ ಎಲ್ಲ ಬಡವರನ್ನು ಅಭಿವೃದ್ಧಿಯಿಂದ ವಂಚಿತರನ್ನಾಗಿಸಲಾಗುತ್ತಿದೆ.

ಇವತ್ತು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು, ವೃತ್ತಿಪರ ಶಿಕ್ಷಣ ಪಡೆಯಲು ಇಂಗ್ಲಿಷ್ ಅನಿವಾರ್ಯವಾಗಿದೆ. ಖಾಸಗೀ ಶಾಲೆಗಳಲ್ಲಿ ಓದಿಸುವ ಶಕ್ತಿಯಿಲ್ಲದ ಬಡವರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಿ ಖಾಸಗೀ ಶಾಲೆಗಳಲ್ಲಿ ಓದಿದ ಮಕ್ಕಳ ಜೊತೆ ಸ್ಪರ್ಧಿಸಲಾರದೆ ಎಷ್ಟೋ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಮಾತಾಡಲು ಬಾರದ ಎಷ್ಟೋ ಬುದ್ಧಿವಂತ ವಿದ್ಯಾರ್ಥಿಗಳು ಕೀಳರಿಮೆ ಅನುಭವಿಸುತ್ತಿದ್ದಾರೆ, ಖಿನ್ನತೆಗೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿನ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಕೋರ್ಸ್‍ಗಳನ್ನು ಓದುತ್ತಿರುವ ದಲಿತ, ಹಿಂದುಳಿದ, ಆದಿವಾಸಿ ಮಕ್ಕಳ ಸಂಖ್ಯೆ ತೀರಾ ಕಡಿಮೆ ಇದೆ ಮತ್ತು ಇಂತಹ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ತಳ ಸಮುದಾಯದ ಪ್ರತಿಭಾವಂತರನ್ನು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸನ್ನಿವೇಶವನ್ನು ಸೃಷ್ಟಿಸಲಾಗುತ್ತಿದೆ. ಇವತ್ತಿಗೂ ಮೇಲುಜಾತಿಗಳ ಹಿಡಿತದಲ್ಲಿರುವ ಸರ್ಕಾರದ ಉನ್ನತ ಹುದ್ದೆಗಳು, ಖಾಸಗಿ ವಲಯದ ಉದ್ಯೋಗಗಳನ್ನು ಪಡೆಯಬೇಕಾದರೆ ತಳ ಸಮುದಾಯಗಳಿಗೆ ಇಂಗ್ಲಿಷ್ ಶಿಕ್ಷಣದ ಅಗತ್ಯವಿದೆ. ಬರೀ ಉದ್ಯೋಗದ ದೃಷ್ಟಿಯಿಂದ ಮಾತ್ರವಲ್ಲದೆ ಜಗತ್ತಿನ ಜ್ಞಾನ ಪಡೆಯುವುದಕ್ಕೆ ಕೂಡ ಈ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆಯುವಂತಾಗಬೇಕಿದೆ. ಇಂಗ್ಲಿಷ್ ಕಲಿಯುವುದರ ಮೂಲಕ ಆತ್ಮವಿಶ್ವಾಸ ಬೆಳಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ಸೂಕ್ತ ತರಬೇತಿ ಪಡೆದ ಶಿಕ್ಷಕರು ಸಮರ್ಪಕವಾಗಿ ಇಂಗ್ಲಿಷ್ ಕಲಿಸುವುದನ್ನ ಬೆಂಬಲಿಸಬೇಕಿದೆ.

ಒಂದು ಭಾಷೆಯನ್ನು ಉಳಿಸಿಕೊಳ್ಳುವುದು ಎಷ್ಟು ಮುಖ್ಯವೋ ಆ ಭಾಷೆಯನ್ನಾಡುವ ಜನರು ಉಳಿಯುವುದು ಕೂಡ ಅಷ್ಟೇ ಮುಖ್ಯ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದರಿಂದ ಕನ್ನಡ ಅಳಿಯುವುದಾದರೆ ಖಾಸಗಿ ಶಾಲೆಗಳು ಸೇರಿದಂತೆ ನಮ್ಮ ಇಡೀ ಶಿಕ್ಷಣ ವ್ಯವಸ್ಥೆ ಏಕರೂಪವಾದ ಸಮಾನ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಿ. ಅದಾಗದಿದ್ದರೇ ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ. ಈ ದೇಶದಲ್ಲಿ ಇಂಗ್ಲಿಷ್ ಕೇವಲ ಒಂದು ಜ್ಞಾನದ ಭಾಷೆಯಾಗಿ ಅಷ್ಟೇ ಅಲ್ಲದೆ ಸಾಮಾಜಿಕ ಅಸಮಾನತೆಯ ವಿಮೋಚನೆಯ ಅಸ್ತ್ರವಾಗಿ ಕೂಡ ದಲಿತ, ಹಿಂದುಳಿದ, ಆದಿವಾಸಿಗಳಿಗೆ ನೆರವಾಗಬಲ್ಲದು ಎನ್ನುವುದನ್ನ ಮಾತೃಭಾಷಾ ರಕ್ಷಕರು ಅರ್ಥಮಾಡಿಕೊಳ್ಳಲಿ.

  • ವಿ.ಎಲ್.ನರಸಿಂಹಮೂರ್ತಿ

(ಹೊಸ ತಲೆಮಾರಿನ ಚಿಂತಕ, ಖಾಸಗಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಂಗ್ಲಿಷ್ ಉಪನ್ಯಾಸಕರು)


ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾಯಿನುಡಿಯ/ ಮಾತೃಭಾಷೆಯ ಮಹತ್ವವನ್ನು ಅರಿತಿರುವ ರಾಜಕಾರಣಿಗಳು ಮತ್ತು ರಾಜಕಾರಣಿಗಳು ಹಾಗೂ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಣ ಸಂಸ್ಥೆಗಳ ಮಾಲೀಕರು ದುಡ್ಡು ಮಾಡುವ ದಂದೆಗಾಗಿ ಪರಭಾಷಾ ಇಂಗ್ಲೀಷ್ಗೆ ಆಡಳಿತ ಭಾಷೆ ಹಿಂದಿಗೆ ಶರಣಾಗಿದ್ದಾರೆ.

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...