Homeಮುಖಪುಟ‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ': ವಿ.ಎಲ್.ನರಸಿಂಹಮೂರ್ತಿ

‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ’: ವಿ.ಎಲ್.ನರಸಿಂಹಮೂರ್ತಿ

ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ.

- Advertisement -
- Advertisement -

ಯಾವುದೇ ಭಾಷೆಯು ಆ ಭಾಷೆಯನ್ನಾಡುವ ಸಮುದಾಯದ ಅಭಿವೃದ್ಧಿಯ ಸಾಧನವಾಗಬೇಕೇ ಹೊರತು ಕೇವಲ ಸಮುದಾಯದ ಭಾವನಾತ್ಮಕವಾದ ಅಂಗವಾಗಿ ಉಳಿಯಬಾರದು. ನಮ್ಮ ರಾಜ್ಯದಲ್ಲಿ ಕನ್ನಡದ ಬಗೆಗಿನ ಭಾವನಾತ್ಮಕ ಒಲವಿನಿಂದಾಗಿ ಶಾಲಾ ಶಿಕ್ಷಣದಲ್ಲಿ ಇಂಗ್ಲಿಷ್ ಕಲಿಸುವುದರ ಕುರಿತು ಇವತ್ತಿಗೂ ಅಪಾರ ಗೊಂದಲವಿದೆ. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸುವ ಮತ್ತು ಒಂದು ಸಾವಿರ ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಪ್ರಾರಂಭಿಸುವ ನಿರ್ಧಾರಗಳನ್ನು ಸರ್ಕಾರಗಳು ಕೈಗೊಂಡ ತಕ್ಷಣ ಕನ್ನಡಪರ ಸಂಘಟನೆಗಳು ಮತ್ತು ಕನ್ನಡದ ಸಾಹಿತಿಗಳು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದನ್ನು ಶುರುಮಾಡಿದರೆ ಕನ್ನಡವು ಒಂದು ಭಾಷೆಯಾಗಿ ಅಳಿಯುತ್ತದೆ ಎನ್ನುವುದು ಇವರ ವಾದ. ನಮ್ಮ ರಾಜ್ಯದಲ್ಲಿ ಗಣನೀಯ ಮಕ್ಕಳು ವ್ಯಾಸಂಗ ಮಾಡುತ್ತಿರುವ ಖಾಸಗಿ ಶಾಲೆಗಳು ಅಧಿಕೃತವಾಗಿ, ಕೆಲವು ಕಡೆ ಅನಧಿಕೃತವಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದನ್ನು ಇವರು ಗಂಭೀರವಾಗಿ ತೆಗೆದುಕೊಂಡ ಹಾಗೆ ಕಾಣುವುದಿಲ್ಲ.

ಸರ್ಕಾರಿ ಶಾಲೆಗಳನ್ನ ಕಬಳಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ ಹಾಕುವುದಕ್ಕಾಗಲೀ, ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎನ್ನುವ ಕಾರಣ ನೀಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ, ವಿಲೀನಗೊಳಿಸುವ ಪ್ರಕ್ರಿಯೆಯನ್ನು ತಡೆಗಟ್ಟುವುದಕ್ಕಾಗಲೀ, ಅಷ್ಟೇ ಏಕೆ ಇರುವ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿ, ಗುಣಮಟ್ಟ ಸುಧಾರಣೆಯ ಬಗ್ಗೆಯಾಗಲೀ ಯಾವತ್ತೂ ಧ್ವನಿ ಎತ್ತದವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಾರೆ.

ಬಾಲ್ಯದಲ್ಲಿ ಮಕ್ಕಳಲ್ಲಿ ಸಹಜವಾಗಿರುವ ‘ಲಿಂಗ್ವಿಸ್ಟಿಕ್ ಪ್ಲಾಸಿಸಿಟಿ'(ಭಾಷಾ ಕಲಿಕೆಯ ಸಾಮರ್ಥ್ಯ)ದಿಂದಾಗಿ ಮಕ್ಕಳು ನಾಲ್ಕು ಭಾಷೆಗಳನ್ನು ಸುಲಭವಾಗಿ ಕಲಿಯುತ್ತವೆ ಎನ್ನುವ ಅಂಶ ಸಂಶೋಧನೆಗಳಿಂದ ತಿಳಿದುಬಂದಿದ್ದರೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಇವರು ವಿರೋಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ.

ಇವತ್ತು ಇಂಗ್ಲಿಷ್ ಕಲಿಕೆಯನ್ನು ಕೇವಲ ನಮ್ಮ ಭಾಷೆಯ ಅಳಿವು ಉಳಿವಿನ ಪ್ರಶ್ನೆಯಾಗಿ ಮಾತ್ರ ನೋಡದೆ ಅದಕ್ಕಿರುವ ಸಾಮಾಜಿಕ ಮುಖವನ್ನು ಗಮನಿಸಿದರೆ ಇಂಗ್ಲಿಷ್ ಕಲಿಕೆಯನ್ನು ವಿರೋಧಿಸುವವರ ಹಿಫೊಕ್ರಸಿಯನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಏಕೆಂದರೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಬಹುತೇಕ ಮಕ್ಕಳು ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಮತ್ತು ಆದಿವಾಸಿ ಸಮುದಾಯಗಳ ಬಡ ಮಕ್ಕಳು. ಬಹುತೇಕ ಬಡತನ ರೇಖೆಗಿಂತ ಕೆಳಗಿರುವ ಈ ಜನ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುವಷ್ಟು ಆರ್ಥಿಕವಾಗಿ ಶಕ್ತರಾಗಿರುವುದಿಲ್ಲ ಮತ್ತು ಮುಕ್ಕಾಲು ಭಾಗ ಖಾಸಗಿ ಶಾಲೆಗಳು ಕಳಪೆಯಾಗಿರುವುದರಿಂದ ಅಂತಹ ಶಾಲೆಗಳಗೆ ಅಪಾರ ಶುಲ್ಕ ತೆತ್ತು ಓದುವುದು ಕೂಡ ನಿರರ್ಥಕ. ಹಾಗಾಗಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲೆ ಇಂಗ್ಲಿಷ್ ಕಲಿಸುವುದು ಸೂಕ್ತ. ರಾಜ್ಯದ ಖಾಸಗಿ ಶಾಲೆಗಳಲ್ಲಿ ಓದುವ ಉಳ್ಳವರ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೆ ನಾಶವಾಗದ ಕನ್ನಡ ಈ ಬಡವರ ಮಕ್ಕಳು ಇಂಗ್ಲಿಷ್ ಓದಿದರೆ ಅದು ಹೇಗೆ ನಾಶವಾಗುತ್ತದೆ ಎನ್ನುವುದನ್ನ ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳಿಗೆ ಸೇರಿಸಿ ತಾವು ಕನ್ನಡ ಶಾಲೆಗಳ ಉಳಿವಿಗೆ ಹೋರಾಡುವ ಹೋರಾಟಗಾರರು, ಸಾಹಿತಿಗಳನ್ನು ಕೇಳಬೇಕು! ಅಥವಾ ನಾಡು, ನುಡಿಯನ್ನು ಉಳಿಸುವ ಜವಾಬ್ದಾರಿಯನ್ನು ಸಮಾಜದ ದುರ್ಬಲ ವರ್ಗಗಳು ಮಾತ್ರ ಹೊರಬೇಕು ಎನ್ನುವುದು ಇವರ ವಾದವಿರಬಹುದೇ?

ಇನ್ನು ನಮ್ಮ ಇತಿಹಾಸವನ್ನು ನೋಡಿದರೆ ಶತಮಾನಗಳ ಕಾಲ ಈ ದೇಶದ ತಳ ಸಮುದಾಯಗಳು ಅಕ್ಷರ ಕಲಿಯುವಿಕೆಯಿಂದಲೇ ವಂಚಿತವಾಗಿದ್ದವು. ಇತಿಹಾಸದುದ್ದಕ್ಕೂ ತಾವು ಮಾತ್ರ ಅಕ್ಷರ ಕಲಿತು ದಲಿತರು, ಹಿಂದುಳಿದವರು, ಆದಿವಾಸಿಗಳನ್ನು ಶಿಕ್ಷಣ ವ್ಯವಸ್ಥೆಯಿಂದ ಸಂಪೂರ್ಣವಾಗಿ ದೂರ ಇಟ್ಟವರ ವ್ಯವಸ್ಥಿತವಾದ ಸಂಚಿಗೆ ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವ ಪ್ರಕ್ರಿಯೆ ಬಲಿಯಾಗುತ್ತಿದೆ. ಆಯಾ ಕಾಲಕ್ಕೆ ತಕ್ಕಂತೆ ಆಯಾ ಕಾಲದ ‘ಅಧಿಕಾರದ ಭಾಷೆ’ಯನ್ನು ವಶಪಡಿಸಿಕೊಳ್ಳುವ ವಿದ್ಯೆಯನ್ನು ಕರಗತಮಾಡಿಕೊಂಡಿರುವ ಈ ದೇಶದ ಮೇಲ್ವರ್ಗ ಮೊದಲು ಸಂಸ್ಕೃತ, ಆಮೇಲೆ ಪರ್ಷಿಯನ್, ಈಗ ಇಂಗ್ಲಿಷನ್ನು ತನ್ನ ಸ್ವತ್ತಾಗಿಸಿಕೊಂಡಿದೆ. ದಲಿತ, ಹಿಂದುಳಿದ ಮತ್ತು ಆದಿವಾಸಿ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿರುವ ತಮ್ಮ ಪ್ರಾಬಲ್ಯವನ್ನು ಕಳೆದುಕೊಳ್ಳುವ ಭಯದಿಂದ ಈ ಮೇಲ್ವರ್ಗ ಸರ್ಕಾರಿ ಶಾಲೆಗಳು ಹಿಂದುಳಿದಿರುವಂತೆ ನೋಡಿಕೊಂಡು ಖಾಸಗಿ ಶಾಲೆಗಳನ್ನ ಬಲಪಡಿಸುತ್ತಿದೆ. ಆ ಮೂಲಕ ಸಮಾಜದ ಬಹುಸಂಖ್ಯಾತರಾಗಿರುವ ದಲಿತ, ಹಿಂದುಳಿದ, ಆದಿವಾಸಿ ಸಮುದಾಯಗಳು ಸೇರಿದಂತೆ ಎಲ್ಲ ಬಡವರನ್ನು ಅಭಿವೃದ್ಧಿಯಿಂದ ವಂಚಿತರನ್ನಾಗಿಸಲಾಗುತ್ತಿದೆ.

ಇವತ್ತು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು, ವೃತ್ತಿಪರ ಶಿಕ್ಷಣ ಪಡೆಯಲು ಇಂಗ್ಲಿಷ್ ಅನಿವಾರ್ಯವಾಗಿದೆ. ಖಾಸಗೀ ಶಾಲೆಗಳಲ್ಲಿ ಓದಿಸುವ ಶಕ್ತಿಯಿಲ್ಲದ ಬಡವರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಿ ಖಾಸಗೀ ಶಾಲೆಗಳಲ್ಲಿ ಓದಿದ ಮಕ್ಕಳ ಜೊತೆ ಸ್ಪರ್ಧಿಸಲಾರದೆ ಎಷ್ಟೋ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಮಾತಾಡಲು ಬಾರದ ಎಷ್ಟೋ ಬುದ್ಧಿವಂತ ವಿದ್ಯಾರ್ಥಿಗಳು ಕೀಳರಿಮೆ ಅನುಭವಿಸುತ್ತಿದ್ದಾರೆ, ಖಿನ್ನತೆಗೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿನ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಕೋರ್ಸ್‍ಗಳನ್ನು ಓದುತ್ತಿರುವ ದಲಿತ, ಹಿಂದುಳಿದ, ಆದಿವಾಸಿ ಮಕ್ಕಳ ಸಂಖ್ಯೆ ತೀರಾ ಕಡಿಮೆ ಇದೆ ಮತ್ತು ಇಂತಹ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ತಳ ಸಮುದಾಯದ ಪ್ರತಿಭಾವಂತರನ್ನು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸನ್ನಿವೇಶವನ್ನು ಸೃಷ್ಟಿಸಲಾಗುತ್ತಿದೆ. ಇವತ್ತಿಗೂ ಮೇಲುಜಾತಿಗಳ ಹಿಡಿತದಲ್ಲಿರುವ ಸರ್ಕಾರದ ಉನ್ನತ ಹುದ್ದೆಗಳು, ಖಾಸಗಿ ವಲಯದ ಉದ್ಯೋಗಗಳನ್ನು ಪಡೆಯಬೇಕಾದರೆ ತಳ ಸಮುದಾಯಗಳಿಗೆ ಇಂಗ್ಲಿಷ್ ಶಿಕ್ಷಣದ ಅಗತ್ಯವಿದೆ. ಬರೀ ಉದ್ಯೋಗದ ದೃಷ್ಟಿಯಿಂದ ಮಾತ್ರವಲ್ಲದೆ ಜಗತ್ತಿನ ಜ್ಞಾನ ಪಡೆಯುವುದಕ್ಕೆ ಕೂಡ ಈ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆಯುವಂತಾಗಬೇಕಿದೆ. ಇಂಗ್ಲಿಷ್ ಕಲಿಯುವುದರ ಮೂಲಕ ಆತ್ಮವಿಶ್ವಾಸ ಬೆಳಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ಸೂಕ್ತ ತರಬೇತಿ ಪಡೆದ ಶಿಕ್ಷಕರು ಸಮರ್ಪಕವಾಗಿ ಇಂಗ್ಲಿಷ್ ಕಲಿಸುವುದನ್ನ ಬೆಂಬಲಿಸಬೇಕಿದೆ.

ಒಂದು ಭಾಷೆಯನ್ನು ಉಳಿಸಿಕೊಳ್ಳುವುದು ಎಷ್ಟು ಮುಖ್ಯವೋ ಆ ಭಾಷೆಯನ್ನಾಡುವ ಜನರು ಉಳಿಯುವುದು ಕೂಡ ಅಷ್ಟೇ ಮುಖ್ಯ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದರಿಂದ ಕನ್ನಡ ಅಳಿಯುವುದಾದರೆ ಖಾಸಗಿ ಶಾಲೆಗಳು ಸೇರಿದಂತೆ ನಮ್ಮ ಇಡೀ ಶಿಕ್ಷಣ ವ್ಯವಸ್ಥೆ ಏಕರೂಪವಾದ ಸಮಾನ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಿ. ಅದಾಗದಿದ್ದರೇ ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ. ಈ ದೇಶದಲ್ಲಿ ಇಂಗ್ಲಿಷ್ ಕೇವಲ ಒಂದು ಜ್ಞಾನದ ಭಾಷೆಯಾಗಿ ಅಷ್ಟೇ ಅಲ್ಲದೆ ಸಾಮಾಜಿಕ ಅಸಮಾನತೆಯ ವಿಮೋಚನೆಯ ಅಸ್ತ್ರವಾಗಿ ಕೂಡ ದಲಿತ, ಹಿಂದುಳಿದ, ಆದಿವಾಸಿಗಳಿಗೆ ನೆರವಾಗಬಲ್ಲದು ಎನ್ನುವುದನ್ನ ಮಾತೃಭಾಷಾ ರಕ್ಷಕರು ಅರ್ಥಮಾಡಿಕೊಳ್ಳಲಿ.

  • ವಿ.ಎಲ್.ನರಸಿಂಹಮೂರ್ತಿ

(ಹೊಸ ತಲೆಮಾರಿನ ಚಿಂತಕ, ಖಾಸಗಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಂಗ್ಲಿಷ್ ಉಪನ್ಯಾಸಕರು)


ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾಯಿನುಡಿಯ/ ಮಾತೃಭಾಷೆಯ ಮಹತ್ವವನ್ನು ಅರಿತಿರುವ ರಾಜಕಾರಣಿಗಳು ಮತ್ತು ರಾಜಕಾರಣಿಗಳು ಹಾಗೂ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಣ ಸಂಸ್ಥೆಗಳ ಮಾಲೀಕರು ದುಡ್ಡು ಮಾಡುವ ದಂದೆಗಾಗಿ ಪರಭಾಷಾ ಇಂಗ್ಲೀಷ್ಗೆ ಆಡಳಿತ ಭಾಷೆ ಹಿಂದಿಗೆ ಶರಣಾಗಿದ್ದಾರೆ.

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...