Homeಮುಖಪುಟ‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ': ವಿ.ಎಲ್.ನರಸಿಂಹಮೂರ್ತಿ

‘ಸಾಮಾಜಿಕ ನ್ಯಾಯದ ಸಾಧನ ಇಂಗ್ಲಿಷ್ ಕಲಿಕೆ’: ವಿ.ಎಲ್.ನರಸಿಂಹಮೂರ್ತಿ

ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ.

- Advertisement -
- Advertisement -

ಯಾವುದೇ ಭಾಷೆಯು ಆ ಭಾಷೆಯನ್ನಾಡುವ ಸಮುದಾಯದ ಅಭಿವೃದ್ಧಿಯ ಸಾಧನವಾಗಬೇಕೇ ಹೊರತು ಕೇವಲ ಸಮುದಾಯದ ಭಾವನಾತ್ಮಕವಾದ ಅಂಗವಾಗಿ ಉಳಿಯಬಾರದು. ನಮ್ಮ ರಾಜ್ಯದಲ್ಲಿ ಕನ್ನಡದ ಬಗೆಗಿನ ಭಾವನಾತ್ಮಕ ಒಲವಿನಿಂದಾಗಿ ಶಾಲಾ ಶಿಕ್ಷಣದಲ್ಲಿ ಇಂಗ್ಲಿಷ್ ಕಲಿಸುವುದರ ಕುರಿತು ಇವತ್ತಿಗೂ ಅಪಾರ ಗೊಂದಲವಿದೆ. ಕಳೆದ ಕೆಲವು ವರ್ಷಗಳಲ್ಲಿ ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಇಂಗ್ಲಿಷನ್ನು ಒಂದು ಭಾಷೆಯಾಗಿ ಕಲಿಸುವ ಮತ್ತು ಒಂದು ಸಾವಿರ ಇಂಗ್ಲಿಷ್ ಮಾಧ್ಯಮದ ಶಾಲೆಗಳನ್ನು ಪ್ರಾರಂಭಿಸುವ ನಿರ್ಧಾರಗಳನ್ನು ಸರ್ಕಾರಗಳು ಕೈಗೊಂಡ ತಕ್ಷಣ ಕನ್ನಡಪರ ಸಂಘಟನೆಗಳು ಮತ್ತು ಕನ್ನಡದ ಸಾಹಿತಿಗಳು ತೀವ್ರವಾದ ವಿರೋಧವನ್ನು ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದನ್ನು ಶುರುಮಾಡಿದರೆ ಕನ್ನಡವು ಒಂದು ಭಾಷೆಯಾಗಿ ಅಳಿಯುತ್ತದೆ ಎನ್ನುವುದು ಇವರ ವಾದ. ನಮ್ಮ ರಾಜ್ಯದಲ್ಲಿ ಗಣನೀಯ ಮಕ್ಕಳು ವ್ಯಾಸಂಗ ಮಾಡುತ್ತಿರುವ ಖಾಸಗಿ ಶಾಲೆಗಳು ಅಧಿಕೃತವಾಗಿ, ಕೆಲವು ಕಡೆ ಅನಧಿಕೃತವಾಗಿ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ನೀಡುತ್ತಿರುವುದನ್ನು ಇವರು ಗಂಭೀರವಾಗಿ ತೆಗೆದುಕೊಂಡ ಹಾಗೆ ಕಾಣುವುದಿಲ್ಲ.

ಸರ್ಕಾರಿ ಶಾಲೆಗಳನ್ನ ಕಬಳಿಸುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿವಾಣ ಹಾಕುವುದಕ್ಕಾಗಲೀ, ಕಡಿಮೆ ವಿದ್ಯಾರ್ಥಿಗಳಿದ್ದಾರೆ ಎನ್ನುವ ಕಾರಣ ನೀಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ, ವಿಲೀನಗೊಳಿಸುವ ಪ್ರಕ್ರಿಯೆಯನ್ನು ತಡೆಗಟ್ಟುವುದಕ್ಕಾಗಲೀ, ಅಷ್ಟೇ ಏಕೆ ಇರುವ ಸರ್ಕಾರಿ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿ, ಗುಣಮಟ್ಟ ಸುಧಾರಣೆಯ ಬಗ್ಗೆಯಾಗಲೀ ಯಾವತ್ತೂ ಧ್ವನಿ ಎತ್ತದವರು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದಕ್ಕೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಾರೆ.

ಬಾಲ್ಯದಲ್ಲಿ ಮಕ್ಕಳಲ್ಲಿ ಸಹಜವಾಗಿರುವ ‘ಲಿಂಗ್ವಿಸ್ಟಿಕ್ ಪ್ಲಾಸಿಸಿಟಿ'(ಭಾಷಾ ಕಲಿಕೆಯ ಸಾಮರ್ಥ್ಯ)ದಿಂದಾಗಿ ಮಕ್ಕಳು ನಾಲ್ಕು ಭಾಷೆಗಳನ್ನು ಸುಲಭವಾಗಿ ಕಲಿಯುತ್ತವೆ ಎನ್ನುವ ಅಂಶ ಸಂಶೋಧನೆಗಳಿಂದ ತಿಳಿದುಬಂದಿದ್ದರೂ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಇವರು ವಿರೋಧಿಸುವುದರಲ್ಲಿ ಯಾವುದೇ ಅರ್ಥವಿಲ್ಲ.

ಇವತ್ತು ಇಂಗ್ಲಿಷ್ ಕಲಿಕೆಯನ್ನು ಕೇವಲ ನಮ್ಮ ಭಾಷೆಯ ಅಳಿವು ಉಳಿವಿನ ಪ್ರಶ್ನೆಯಾಗಿ ಮಾತ್ರ ನೋಡದೆ ಅದಕ್ಕಿರುವ ಸಾಮಾಜಿಕ ಮುಖವನ್ನು ಗಮನಿಸಿದರೆ ಇಂಗ್ಲಿಷ್ ಕಲಿಕೆಯನ್ನು ವಿರೋಧಿಸುವವರ ಹಿಫೊಕ್ರಸಿಯನ್ನು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು. ಏಕೆಂದರೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಲ್ಲಿ ಬಹುತೇಕ ಮಕ್ಕಳು ದಲಿತ, ಹಿಂದುಳಿದ, ಅಲ್ಪಸಂಖ್ಯಾತರು ಮತ್ತು ಆದಿವಾಸಿ ಸಮುದಾಯಗಳ ಬಡ ಮಕ್ಕಳು. ಬಹುತೇಕ ಬಡತನ ರೇಖೆಗಿಂತ ಕೆಳಗಿರುವ ಈ ಜನ ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಲ್ಲಿ ಓದಿಸುವಷ್ಟು ಆರ್ಥಿಕವಾಗಿ ಶಕ್ತರಾಗಿರುವುದಿಲ್ಲ ಮತ್ತು ಮುಕ್ಕಾಲು ಭಾಗ ಖಾಸಗಿ ಶಾಲೆಗಳು ಕಳಪೆಯಾಗಿರುವುದರಿಂದ ಅಂತಹ ಶಾಲೆಗಳಗೆ ಅಪಾರ ಶುಲ್ಕ ತೆತ್ತು ಓದುವುದು ಕೂಡ ನಿರರ್ಥಕ. ಹಾಗಾಗಿ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲೆ ಇಂಗ್ಲಿಷ್ ಕಲಿಸುವುದು ಸೂಕ್ತ. ರಾಜ್ಯದ ಖಾಸಗಿ ಶಾಲೆಗಳಲ್ಲಿ ಓದುವ ಉಳ್ಳವರ ಮಕ್ಕಳು ಇಂಗ್ಲಿಷ್ ಮಾಧ್ಯಮದಲ್ಲಿ ಓದಿದರೆ ನಾಶವಾಗದ ಕನ್ನಡ ಈ ಬಡವರ ಮಕ್ಕಳು ಇಂಗ್ಲಿಷ್ ಓದಿದರೆ ಅದು ಹೇಗೆ ನಾಶವಾಗುತ್ತದೆ ಎನ್ನುವುದನ್ನ ತಮ್ಮ ಮಕ್ಕಳನ್ನು ಇಂಗ್ಲಿಷ್ ಮಾಧ್ಯಮದ ಶಾಲೆಗಳಿಗೆ ಸೇರಿಸಿ ತಾವು ಕನ್ನಡ ಶಾಲೆಗಳ ಉಳಿವಿಗೆ ಹೋರಾಡುವ ಹೋರಾಟಗಾರರು, ಸಾಹಿತಿಗಳನ್ನು ಕೇಳಬೇಕು! ಅಥವಾ ನಾಡು, ನುಡಿಯನ್ನು ಉಳಿಸುವ ಜವಾಬ್ದಾರಿಯನ್ನು ಸಮಾಜದ ದುರ್ಬಲ ವರ್ಗಗಳು ಮಾತ್ರ ಹೊರಬೇಕು ಎನ್ನುವುದು ಇವರ ವಾದವಿರಬಹುದೇ?

ಇನ್ನು ನಮ್ಮ ಇತಿಹಾಸವನ್ನು ನೋಡಿದರೆ ಶತಮಾನಗಳ ಕಾಲ ಈ ದೇಶದ ತಳ ಸಮುದಾಯಗಳು ಅಕ್ಷರ ಕಲಿಯುವಿಕೆಯಿಂದಲೇ ವಂಚಿತವಾಗಿದ್ದವು. ಇತಿಹಾಸದುದ್ದಕ್ಕೂ ತಾವು ಮಾತ್ರ ಅಕ್ಷರ ಕಲಿತು ದಲಿತರು, ಹಿಂದುಳಿದವರು, ಆದಿವಾಸಿಗಳನ್ನು ಶಿಕ್ಷಣ ವ್ಯವಸ್ಥೆಯಿಂದ ಸಂಪೂರ್ಣವಾಗಿ ದೂರ ಇಟ್ಟವರ ವ್ಯವಸ್ಥಿತವಾದ ಸಂಚಿಗೆ ಇವತ್ತು ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವ ಪ್ರಕ್ರಿಯೆ ಬಲಿಯಾಗುತ್ತಿದೆ. ಆಯಾ ಕಾಲಕ್ಕೆ ತಕ್ಕಂತೆ ಆಯಾ ಕಾಲದ ‘ಅಧಿಕಾರದ ಭಾಷೆ’ಯನ್ನು ವಶಪಡಿಸಿಕೊಳ್ಳುವ ವಿದ್ಯೆಯನ್ನು ಕರಗತಮಾಡಿಕೊಂಡಿರುವ ಈ ದೇಶದ ಮೇಲ್ವರ್ಗ ಮೊದಲು ಸಂಸ್ಕೃತ, ಆಮೇಲೆ ಪರ್ಷಿಯನ್, ಈಗ ಇಂಗ್ಲಿಷನ್ನು ತನ್ನ ಸ್ವತ್ತಾಗಿಸಿಕೊಂಡಿದೆ. ದಲಿತ, ಹಿಂದುಳಿದ ಮತ್ತು ಆದಿವಾಸಿ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆದರೆ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿರುವ ತಮ್ಮ ಪ್ರಾಬಲ್ಯವನ್ನು ಕಳೆದುಕೊಳ್ಳುವ ಭಯದಿಂದ ಈ ಮೇಲ್ವರ್ಗ ಸರ್ಕಾರಿ ಶಾಲೆಗಳು ಹಿಂದುಳಿದಿರುವಂತೆ ನೋಡಿಕೊಂಡು ಖಾಸಗಿ ಶಾಲೆಗಳನ್ನ ಬಲಪಡಿಸುತ್ತಿದೆ. ಆ ಮೂಲಕ ಸಮಾಜದ ಬಹುಸಂಖ್ಯಾತರಾಗಿರುವ ದಲಿತ, ಹಿಂದುಳಿದ, ಆದಿವಾಸಿ ಸಮುದಾಯಗಳು ಸೇರಿದಂತೆ ಎಲ್ಲ ಬಡವರನ್ನು ಅಭಿವೃದ್ಧಿಯಿಂದ ವಂಚಿತರನ್ನಾಗಿಸಲಾಗುತ್ತಿದೆ.

ಇವತ್ತು ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು, ವೃತ್ತಿಪರ ಶಿಕ್ಷಣ ಪಡೆಯಲು ಇಂಗ್ಲಿಷ್ ಅನಿವಾರ್ಯವಾಗಿದೆ. ಖಾಸಗೀ ಶಾಲೆಗಳಲ್ಲಿ ಓದಿಸುವ ಶಕ್ತಿಯಿಲ್ಲದ ಬಡವರ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಿ ಖಾಸಗೀ ಶಾಲೆಗಳಲ್ಲಿ ಓದಿದ ಮಕ್ಕಳ ಜೊತೆ ಸ್ಪರ್ಧಿಸಲಾರದೆ ಎಷ್ಟೋ ಅವಕಾಶಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಇಂಗ್ಲಿಷ್ ಭಾಷೆಯಲ್ಲಿ ಮಾತಾಡಲು ಬಾರದ ಎಷ್ಟೋ ಬುದ್ಧಿವಂತ ವಿದ್ಯಾರ್ಥಿಗಳು ಕೀಳರಿಮೆ ಅನುಭವಿಸುತ್ತಿದ್ದಾರೆ, ಖಿನ್ನತೆಗೆ ಒಳಗಾಗಿ ಜೀವ ಕಳೆದುಕೊಳ್ಳುತ್ತಿದ್ದಾರೆ. ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿನ ವಿಜ್ಞಾನ-ತಂತ್ರಜ್ಞಾನಕ್ಕೆ ಸಂಬಂಧಪಟ್ಟ ಕೋರ್ಸ್‍ಗಳನ್ನು ಓದುತ್ತಿರುವ ದಲಿತ, ಹಿಂದುಳಿದ, ಆದಿವಾಸಿ ಮಕ್ಕಳ ಸಂಖ್ಯೆ ತೀರಾ ಕಡಿಮೆ ಇದೆ ಮತ್ತು ಇಂತಹ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವ ತಳ ಸಮುದಾಯದ ಪ್ರತಿಭಾವಂತರನ್ನು ಆತ್ಮಹತ್ಯೆ ಮಾಡಿಕೊಳ್ಳುವಂತಹ ಸನ್ನಿವೇಶವನ್ನು ಸೃಷ್ಟಿಸಲಾಗುತ್ತಿದೆ. ಇವತ್ತಿಗೂ ಮೇಲುಜಾತಿಗಳ ಹಿಡಿತದಲ್ಲಿರುವ ಸರ್ಕಾರದ ಉನ್ನತ ಹುದ್ದೆಗಳು, ಖಾಸಗಿ ವಲಯದ ಉದ್ಯೋಗಗಳನ್ನು ಪಡೆಯಬೇಕಾದರೆ ತಳ ಸಮುದಾಯಗಳಿಗೆ ಇಂಗ್ಲಿಷ್ ಶಿಕ್ಷಣದ ಅಗತ್ಯವಿದೆ. ಬರೀ ಉದ್ಯೋಗದ ದೃಷ್ಟಿಯಿಂದ ಮಾತ್ರವಲ್ಲದೆ ಜಗತ್ತಿನ ಜ್ಞಾನ ಪಡೆಯುವುದಕ್ಕೆ ಕೂಡ ಈ ಸಮುದಾಯಗಳ ಮಕ್ಕಳು ಇಂಗ್ಲಿಷ್ ಶಿಕ್ಷಣ ಪಡೆಯುವಂತಾಗಬೇಕಿದೆ. ಇಂಗ್ಲಿಷ್ ಕಲಿಯುವುದರ ಮೂಲಕ ಆತ್ಮವಿಶ್ವಾಸ ಬೆಳಿಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ಸೂಕ್ತ ತರಬೇತಿ ಪಡೆದ ಶಿಕ್ಷಕರು ಸಮರ್ಪಕವಾಗಿ ಇಂಗ್ಲಿಷ್ ಕಲಿಸುವುದನ್ನ ಬೆಂಬಲಿಸಬೇಕಿದೆ.

ಒಂದು ಭಾಷೆಯನ್ನು ಉಳಿಸಿಕೊಳ್ಳುವುದು ಎಷ್ಟು ಮುಖ್ಯವೋ ಆ ಭಾಷೆಯನ್ನಾಡುವ ಜನರು ಉಳಿಯುವುದು ಕೂಡ ಅಷ್ಟೇ ಮುಖ್ಯ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಕಲಿಸುವುದರಿಂದ ಕನ್ನಡ ಅಳಿಯುವುದಾದರೆ ಖಾಸಗಿ ಶಾಲೆಗಳು ಸೇರಿದಂತೆ ನಮ್ಮ ಇಡೀ ಶಿಕ್ಷಣ ವ್ಯವಸ್ಥೆ ಏಕರೂಪವಾದ ಸಮಾನ ಶಿಕ್ಷಣ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲಿ. ಅದಾಗದಿದ್ದರೇ ಎಲ್ಲಿಯವರೆಗೂ ಸಮಾನ ಶಿಕ್ಷಣ ಜಾರಿಯಾಗುವುದಿಲ್ಲವೋ ಅಲ್ಲಿವರೆಗೆ ಎಲ್ಲ ಶಾಲೆಗಳಲ್ಲಿ ಇಂಗ್ಲಿಷ್ ಕಲಿಕೆಯನ್ನು ಜಾರಿಗೊಳಿಸಲಿ. ಈ ದೇಶದಲ್ಲಿ ಇಂಗ್ಲಿಷ್ ಕೇವಲ ಒಂದು ಜ್ಞಾನದ ಭಾಷೆಯಾಗಿ ಅಷ್ಟೇ ಅಲ್ಲದೆ ಸಾಮಾಜಿಕ ಅಸಮಾನತೆಯ ವಿಮೋಚನೆಯ ಅಸ್ತ್ರವಾಗಿ ಕೂಡ ದಲಿತ, ಹಿಂದುಳಿದ, ಆದಿವಾಸಿಗಳಿಗೆ ನೆರವಾಗಬಲ್ಲದು ಎನ್ನುವುದನ್ನ ಮಾತೃಭಾಷಾ ರಕ್ಷಕರು ಅರ್ಥಮಾಡಿಕೊಳ್ಳಲಿ.

  • ವಿ.ಎಲ್.ನರಸಿಂಹಮೂರ್ತಿ

(ಹೊಸ ತಲೆಮಾರಿನ ಚಿಂತಕ, ಖಾಸಗಿ ಪದವಿ ಪೂರ್ವ ಕಾಲೇಜೊಂದರಲ್ಲಿ ಇಂಗ್ಲಿಷ್ ಉಪನ್ಯಾಸಕರು)


ಇದನ್ನೂ ಓದಿ: ಮಗು ಕನಸು ಕಾಣುವ-ಚಿಂತಿಸುವ ಭಾಷೆಯಲ್ಲಿ ಶಿಕ್ಷಣ ನೀಡಬೇಕು ಎಂಬ ಹೋರಾಟದ ಸುತ್ತ..
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಾಯಿನುಡಿಯ/ ಮಾತೃಭಾಷೆಯ ಮಹತ್ವವನ್ನು ಅರಿತಿರುವ ರಾಜಕಾರಣಿಗಳು ಮತ್ತು ರಾಜಕಾರಣಿಗಳು ಹಾಗೂ ಖಾಸಗಿ ಶಾಲಾ ಕಾಲೇಜುಗಳ ಶಿಕ್ಷಣ ಸಂಸ್ಥೆಗಳ ಮಾಲೀಕರು ದುಡ್ಡು ಮಾಡುವ ದಂದೆಗಾಗಿ ಪರಭಾಷಾ ಇಂಗ್ಲೀಷ್ಗೆ ಆಡಳಿತ ಭಾಷೆ ಹಿಂದಿಗೆ ಶರಣಾಗಿದ್ದಾರೆ.

    ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...