Homeಮುಖಪುಟಬಾನು ಮುಷ್ತಾಕ್ ಅವರ ಕೃತಿಯ ಅನುವಾದಕ್ಕೆ 'ಇಂಗ್ಲಿಷ್ ಪೆನ್' ಪ್ರಶಸ್ತಿ

ಬಾನು ಮುಷ್ತಾಕ್ ಅವರ ಕೃತಿಯ ಅನುವಾದಕ್ಕೆ ‘ಇಂಗ್ಲಿಷ್ ಪೆನ್’ ಪ್ರಶಸ್ತಿ

- Advertisement -
- Advertisement -

ಕನ್ನಡದ ಸಾಹಿತಿ ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕಥಾ ಸಂಕಲನದ ಇಂಗ್ಲಿಷ್ ಅನುವಾದಿತ ಪುಸ್ತಕಕ್ಕೆ ಪ್ರತಿಷ್ಠಿತ ‘ಇಂಗ್ಲಿಷ್ ಪೆನ್’ ಪ್ರಶಸ್ತಿ ಲಭಿಸಿದೆ.

ಹತ್ತು ಭಾಷೆಗಳಿಂದ ಇಂಗ್ಲಿಷ್‌ಗೆ ಅನುವಾದಗೊಂಡಿದ್ದ 16 ಕೃತಿಗಳಿಗೆ 2024ನೇ ಸಾಲಿನ ‘ಇಂಗ್ಲಿಷ್‌ ಪೆನ್‌’ ಪ್ರಶಸ್ತಿಯನ್ನು ಗುರುವಾರ ಪ್ರಕಟಿಸಲಾಗಿದೆ. ಈ ಪೈಕಿ, ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಆವೃತ್ತಿಗೆ ಪ್ರಶಸ್ತಿ ಲಭಿಸಿದೆ.

ಹತ್ತು ಭಾಷೆಗಳಿಂದ ಇಂಗ್ಲಿಷ್‌ಗೆ ಅನುವಾದಗೊಂಡಿದ್ದ 16 ಕೃತಿಗಳಿಗೆ 2024ನೇ ಸಾಲಿನ ‘ಇಂಗ್ಲಿಷ್‌ ಪೆನ್‌’ ಪ್ರಶಸ್ತಿಯನ್ನು ಗುರುವಾರ (ಜು.18) ಪ್ರಕಟಿಸಲಾಗಿದೆ. ಈ ಪೈಕಿ, ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಆವೃತ್ತಿಗೆ ಪ್ರಶಸ್ತಿ ಲಭಿಸಿದೆ.

ಬಾನು ಮುಷ್ತಾಕ್ ಅವರು ಕನ್ನಡದಲ್ಲಿ ರಚಿಸಿದ್ದ ಕೃತಿಯನ್ನು ಪತ್ರಕರ್ತೆ, ಲೇಖಕಿ ದೀಪಾ ಬಸ್ತಿ ಅವರು ‘ಹಸೀನಾ ಅಂಡ್ ಅದರ್ ಸ್ಟೋರೀಸ್’ ಎಂದು ಇಂಗ್ಲಿಷ್‌ ಭಾಷೆಗೆ ಅನುವಾದಿಸಿದ್ದರು. ಇದೀಗ, ಕೃತಿಯು ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಗೊಂಡು ‘ಇಂಗ್ಲಿಷ್ ಪೆನ್’ ಪ್ರಶಸ್ತಿ ಪಡೆದ ಮೊದಲ ಕೃತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

‘ಇಂಗ್ಲಿಷ್ ಪೆನ್’ ವಿಶ್ವದ ಪ್ರಸಿದ್ಧ ಮಾನವ ಹಕ್ಕು ಸಂಘಟನೆಗಳಲ್ಲಿ ಒಂದಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕಾಗಿ ಜಾಗತಿಕ ಮಟ್ಟದಲ್ಲಿ ಹೋರಾಟ ನಡೆಸುತ್ತಿದೆ. 90 ದೇಶಗಳಲ್ಲಿ 130 ಕೇಂದ್ರಗಳನ್ನು ಹೊಂದಿರುವ ‘ಇಂಗ್ಲಿಷ್ ಪೆನ್’ ಸಂಘಟನೆಯು ಪೆನ್ ಇಂಟರ್ ನ್ಯಾಷನಲ್ ಎಂಬ ಜಾಗತಿಕ ಲೇಖಕರ ಸಂಘವನ್ನು ಸ್ಥಾಪಿಸಿದೆ.

ಸಮಕಾಲೀನ ಮಹಿಳೆಯರು ಎದುರಿಸುವ ವಾಸ್ತವಗಳನ್ನು ಅಪರೂಪದ ಪ್ರತಿಭೆ ಹಾಗು ಕಲೆಯ ಮೂಲಕ ಬಾನು ಮುಷ್ತಾಕ್ ಅವರು ಅನಾವರಣಗೊಳಿಸಿದ್ದಾರೆ. ಅವರ ಕೃತಿಯಲ್ಲಿನ ಧ್ವನಿ, ಸಂದರ್ಭಗಳು ಹಾಗು ಅನುಭವವನ್ನು ದೀಪಾ ಬಸ್ತಿ ಅವರ ಅತ್ಯುತ್ತಮ ಅನುವಾದ ಭಾರತ ಹಾಗೂ ಜಾಗತಿಕ ಇಂಗ್ಲಿಷ್ ಓದುಗರಿಗೆ ತಲುಪಿಸಿದೆ ಎಂದು ಪೆನ್ ಪ್ರಶಸ್ತಿ ಸಮಿತಿ ಹೇಳಿದೆ.

ಇದನ್ನೂ ಓದಿ : ರೈತನಿಗೆ ಅವಮಾನ: ಏಳು ದಿನಗಳ ಕಾಲ ಜಿಟಿ ಮಾಲ್‌ ಮುಚ್ಚಿಸಲು ರಾಜ್ಯ ಸರ್ಕಾರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...