Homeಮುಖಪುಟಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡಲಿದ್ದಾರೆ: ಅಮಿತ್ ಶಾ

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡಲಿದ್ದಾರೆ: ಅಮಿತ್ ಶಾ

- Advertisement -
- Advertisement -

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ಶೀಘ್ರದಲ್ಲೇ ನಾಚಿಕೆಪಡುವಂತೆ ಆಗಲಿದ್ದು, ಅಂತಹ ಸಮಾಜ ಸೃಷ್ಟಿಯಾಗುವ ದಿನ ದೂರವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಹೇಳಿದ್ದಾರೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ. “ನಮ್ಮ ಸಂಸ್ಕೃತಿ, ನಮ್ಮ ಇತಿಹಾಸ ಮತ್ತು ನಮ್ಮ ಧರ್ಮವನ್ನು ವಿದೇಶಿ ಭಾಷೆಗಳಲ್ಲಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ. ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು

“ಆಧಿ-ಅಧುರಿ [ಅಪೂರ್ಣ] ಆಗಿರುವ ವಿದೇಶಿ ಭಾಷೆಗಳಿಂದ ಸಂಪೂರ್ಣ ಭಾರತವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ. ಅದು ಭಾರತೀಯತೆ, ಭಾರತೀಯ ಭಾಷೆಗಳೊಂದಿಗೆ ಮಾತ್ರ ಸಾಧ್ಯ” ಎಂದು ನವದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅಮಿತ್‌ ಶಾ ಹೇಳಿದ್ದಾರೆ ಎಂದು ವರದಿಯಾಗಿದೆ.

ಭಾರತೀಯ ಭಾಷೆಗಳನ್ನು “ನಮ್ಮ ಸಂಸ್ಕೃತಿಯ ರತ್ನಗಳು” ಎಂದು ಕರೆದ ಅವರು, ಅವುಗಳಿಲ್ಲದೆ, “ನಾವು ಭಾರತೀಯರಾಗುವುದನ್ನು ನಿಲ್ಲಿಸಿ ಬಿಡುತ್ತೇವೆ” ಎಂದು ಹೇಳಿದ್ದಾರೆ.

ಅಮಿತ್‌ ಶಾ ಅವರು ಜೂನ್ 6 ರಂದು ಭಾರತೀಯ ಭಾಷಾ ಅನುಭಾಗ್ ಅಥವಾ ಭಾರತೀಯ ಭಾಷಾ ವಿಭಾಗವನ್ನು ಪ್ರಾರಂಭಿಸಿದ್ದರು. ಈ ಉಪಕ್ರಮವು ಎಲ್ಲಾ ಭಾರತೀಯ ಭಾಷೆಗಳಿಗೆ ಸಂಘಟಿತ ವೇದಿಕೆಯನ್ನು ರಚಿಸುವ ಗುರಿಯನ್ನು ಹೊಂದಿದ್ದು, ಇದು “ಆಡಳಿತವನ್ನು ವಿದೇಶಿ ಭಾಷೆಗಳ ಪ್ರಭಾವದಿಂದ ಮುಕ್ತಗೊಳಿಸುವ” ಉದ್ದೇಶವನ್ನು ಹೊಂದಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯ ತ್ರಿಭಾಷಾ ಸೂತ್ರದ ಮೂಲಕ ಕೇಂದ್ರ ಸರ್ಕಾರವು ಹಿಂದಿಯನ್ನು ಹೇರುತ್ತಿದೆ ಎಂದು ಹಲವಾರು ರಾಜ್ಯ ಸರ್ಕಾರಗಳು ಮತ್ತು ಪ್ರಾದೇಶಿಕ ಪಕ್ಷಗಳು ಆರೋಪಿಸುತ್ತಿರುವ ಮಧ್ಯೆಯೆ ಗೃಹ ಸಚಿವ ಅಮಿತ್ ಶಾ ಈ ಹೇಳಿಕೆ ಗುರುವಾರ ನೀಡಿದ್ದಾರೆ.

ಮಂಗಳವಾರವಷ್ಟೆ, ಮಹಾರಾಷ್ಟ್ರ ಸರ್ಕಾರವು ಮರಾಠಿ ಮತ್ತು ಇಂಗ್ಲಿಷ್ ಮಾಧ್ಯಮ ಶಾಲೆಗಳಲ್ಲಿ 1 ರಿಂದ 5 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಹಿಂದಿಯನ್ನು “ಸಾಮಾನ್ಯವಾಗಿ” ಕಲಿಸುವ ಮೂರನೇ ಭಾಷೆ ಎಂದು ಆದೇಶ ಹೊರಡಿಸಿತ್ತು. ಮರಾಠಿ ಭಾಷಾ ಪರ ಹೋರಾಟಗಾರರು ಈ ಕ್ರಮವನ್ನು ಟೀಕಿಸಿದ್ದು, ಸರ್ಕಾರವು “ಹಿಂಬಾಗಿಲಿನ” ಮೂಲಕ ತ್ರಿಭಾಷಾ ಸೂತ್ರವನ್ನು ಮತ್ತೆ ಪರಿಚಯಿಸುತ್ತಿದೆ ಎಂದು ಆರೋಪಿಸಿದ್ದಾರೆ.

ತಮಿಳುನಾಡು ಮತ್ತು ಕರ್ನಾಟಕ ಕೂಡ ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆಗಳನ್ನು ಮಾಡುತ್ತಲೆ ಇವೆ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ತ್ರಿಭಾಷಾ ಸೂತ್ರವನ್ನು ತಮಿಳುನಾಡು ನಿರಂತರವಾಗಿ ವಿರೋಧಿಸಿತ್ತಿದೆ. ರಾಜ್ಯದಲ್ಲಿ ತಮಿಳು ಮತ್ತು ಇಂಗ್ಲಿಷ್ ಭಾಷೆಯನ್ನು ಮಾತ್ರ ವಿದ್ಯಾರ್ಥಿಗಳಿಗೆ ಕಲಿಸುವ ದಶಕಗಳಷ್ಟು ಹಳೆಯದಾದ ದ್ವಿಭಾಷಾ ನೀತಿಯನ್ನು ತಾನು ಬದಲಾಯಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  2 ಲಕ್ಷ ಇರಾಕಿಗಳ ಹತ್ಯೆ ಮಾಡಿದ್ದ ಅಮೆರಿಕ: ಈ ಯುದ್ಧದ ಇತಿಹಾಸ ಮರುಕಳಿಸದಿರಲಿ

2 ಲಕ್ಷ ಇರಾಕಿಗಳ ಹತ್ಯೆ ಮಾಡಿದ್ದ ಅಮೆರಿಕ: ಈ ಯುದ್ಧದ ಇತಿಹಾಸ ಮರುಕಳಿಸದಿರಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...