Homeಮುಖಪುಟಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

- Advertisement -
- Advertisement -

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್, ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ 44 ಜನರನ್ನು ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ಪೆರಿಯಕುಪ್ಪಂನಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಆಸ್ಪತ್ರೆಯಾಗಿದೆ. ಅನಿಲ ಸೋರಿಕೆಯ ದುಷ್ಪರಿಣಾಮದಿಂದ ಜನರು ಬಳಲುತ್ತಿದ್ದರೂ ಆಸ್ಪತ್ರೆಯ ವೈದ್ಯರು ತರಾತುರಿಯಲ್ಲಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಪೆರಿಯಕುಪ್ಪಂನ ಹಲವಾರು ನಿವಾಸಿಗಳು ಆರೋಪಿಸಿದ್ದಾರೆ.

ಪೆರಿಯಕುಪ್ಪಂ ನಿವಾಸಿ ದೇಸರಾಣಿ ಈ ಕುರಿತು ಮಾತನಾಡಿದ್ದು, ನಾನು ಇನ್ನೂ ದುರಂತದಿಂದ ಚೇತರಿಸಿಕೊಂಡಿಲ್ಲ. ಡಿಸೆಂಬರ್ 26ರಂದು ರಾತ್ರಿ 11.40ರ ಸುಮಾರಿಗೆ ನನಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿದೆ. ನನ್ನ ಮಕ್ಕಳು ನನ್ನನ್ನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾನು ಮನೆಯಿಂದ ಹೊರಬಂದ ತಕ್ಷಣ ಪ್ರಜ್ಞೆ ತಪ್ಪಿದ್ದೆ. ನನ್ನನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ವೈದ್ಯರು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಆದರೆ ನಾನು ಉಸಿರಾಡಲು ಹೆಣಗಾಡುತ್ತಿದ್ದೆ. ನನಗೆ  ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆ ನಿರಾಕರಿಸಿದೆ. ಮನೆಗೆ ಬಂದ ನಂತರ  ನಾನು ವಾಂತಿ ಮಾಡಲು ಪ್ರಾರಂಭಿಸಿದೆ ಮತ್ತು ಮತ್ತೆ ಮೂರ್ಛೆ ಹೋದೆ. ಆದ್ದರಿಂದ ನನ್ನನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆಯವರಿಗೆ ಡಿಸ್ಚಾರ್ಜ್‌ ಮಾಡಲು ಏನು ಆತುರ? ಅನಿಲ ಸೋರಿಕೆಯ ಪರಿಣಾಮಗಳು ಕಡಿಮೆ ಎಂದು ತೋರಿಸಲು ಆಸ್ಪತ್ರೆಗೆ ನಮ್ಮನ್ನು ಬಿಡುಗಡೆ ಮಾಡಲು ಒತ್ತಡ ಹಾಕಲಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಪೆರಿಯಕುಪ್ಪಂ ಗ್ರಾಮದ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಸರಾಣಿ ಜೊತೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ಇತರ ಮೂವರನ್ನು ಸರಿಯಾಗಿ ಚಕಿತ್ಸೆ ನೀಡದೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.  ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆ ಸೇರಿದಂತೆ ಇತರ ಆಸ್ಪತ್ರೆಗಳಿಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕುಮಾರ್ ಅವರು ಆಕಾಶ್ ಆಸ್ಪತ್ರೆಗೆ ಭೇಟಿ ನೀಡಿ  ತಮ್ಮ ಗ್ರಾಮದಿಂದ ಆಸ್ಪತ್ರೆಗೆ ದಾಖಲಾಗಿರುವ 39 ಜನರ ವೈದ್ಯಕೀಯ ವರದಿಯನ್ನು ನೀಡುವಂತೆ ಕೇಳಿದ್ದರು. ಆದರೆ ಆಸ್ಪತ್ರೆ ವರದಿಯನ್ನು ಅಧ್ಯಯನ ಮಾಡಲಿದೆ ಎಂದು ನೀಡಿಲ್ಲ. ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಈಗ  ಅವರು ಏನು ಅಧ್ಯಯನ ಮಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಅವರು ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ನಾವು ಹೆದರುತ್ತಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾಸ್ ಸೋರಿಕೆ ಸಂತ್ರಸ್ತರಾದ ಸೆಲ್ಚಾ ಅವರು ಮಾತನಾಡಿದ್ದು, ಆಕಾಶ್ ಆಸ್ಪತ್ರೆ ಇನ್ನೂ ನನ್ನ ಸ್ಕ್ಯಾನ್ ಮತ್ತು ಎಕ್ಸ್-ರೇಗಳನ್ನು ಹಸ್ತಾಂತರಿಸಿಲ್ಲ. ಅವರು ನನಗೆ ಪ್ರಿಸ್ಕ್ರಿಪ್ಷನ್  ಮಾತ್ರ ನೀಡಿದ್ದಾರೆ. ನನಗೆ ಉಸಿರಾಡಲು  ಕಷ್ಟವಾಗುತ್ತಿದ್ದರಿಂದ ಬೇರೆ ವೈದ್ಯರನ್ನು ಸಂಪರ್ಕಿಸಲು ಬಯಸಿದ್ದೆವು. ನನ್ನ ಪತಿ ಸ್ಕ್ಯಾನ್ ಮತ್ತು ಎಕ್ಸ್-ರೇಯನ್ನು ಸಂಗ್ರಹಿಸಲು ಆಕಾಶ್ ಆಸ್ಪತ್ರೆಗೆ ತೆರಳಿದ್ದರು. ಅವರು ಮೂರು ದಿನಗಳಲ್ಲಿ ನೀಡುವುದಾಗಿ ನನ್ನ ಪತಿಗೆ ಹೇಳಿದ್ದರು, ಆದರೆ ಹತ್ತು ದಿನಗಳು ಕಳೆದರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 11.45ರ ಸುಮಾರಿಗೆ ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್‌ಸೀ ಪೈಪ್‌ಲೈನ್‌ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಬಳಿಕ ಕಾರ್ಮಿಕರು ಬಾಯಿ ಮಾತಿನ ಮೂಲಕ ನಿವಾಸಿಗಳನ್ನು ಎಚ್ಚರಿಸಿದರು, ನಂತರ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿದ್ದಾರೆ. ಹಲವರು ಉಸಿರಾಟದ ತೊಂದರೆ, ವಾಕರಿಕೆಯಿಂದ ಅಸ್ವಸ್ಥಗೊಂಡಿದ್ದರು.

ಇದನ್ನು ಓದಿ: ‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...