Homeಮುಖಪುಟಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

- Advertisement -
- Advertisement -

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್, ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ 44 ಜನರನ್ನು ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ಪೆರಿಯಕುಪ್ಪಂನಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಆಸ್ಪತ್ರೆಯಾಗಿದೆ. ಅನಿಲ ಸೋರಿಕೆಯ ದುಷ್ಪರಿಣಾಮದಿಂದ ಜನರು ಬಳಲುತ್ತಿದ್ದರೂ ಆಸ್ಪತ್ರೆಯ ವೈದ್ಯರು ತರಾತುರಿಯಲ್ಲಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಪೆರಿಯಕುಪ್ಪಂನ ಹಲವಾರು ನಿವಾಸಿಗಳು ಆರೋಪಿಸಿದ್ದಾರೆ.

ಪೆರಿಯಕುಪ್ಪಂ ನಿವಾಸಿ ದೇಸರಾಣಿ ಈ ಕುರಿತು ಮಾತನಾಡಿದ್ದು, ನಾನು ಇನ್ನೂ ದುರಂತದಿಂದ ಚೇತರಿಸಿಕೊಂಡಿಲ್ಲ. ಡಿಸೆಂಬರ್ 26ರಂದು ರಾತ್ರಿ 11.40ರ ಸುಮಾರಿಗೆ ನನಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿದೆ. ನನ್ನ ಮಕ್ಕಳು ನನ್ನನ್ನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾನು ಮನೆಯಿಂದ ಹೊರಬಂದ ತಕ್ಷಣ ಪ್ರಜ್ಞೆ ತಪ್ಪಿದ್ದೆ. ನನ್ನನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ವೈದ್ಯರು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಆದರೆ ನಾನು ಉಸಿರಾಡಲು ಹೆಣಗಾಡುತ್ತಿದ್ದೆ. ನನಗೆ  ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆ ನಿರಾಕರಿಸಿದೆ. ಮನೆಗೆ ಬಂದ ನಂತರ  ನಾನು ವಾಂತಿ ಮಾಡಲು ಪ್ರಾರಂಭಿಸಿದೆ ಮತ್ತು ಮತ್ತೆ ಮೂರ್ಛೆ ಹೋದೆ. ಆದ್ದರಿಂದ ನನ್ನನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆಯವರಿಗೆ ಡಿಸ್ಚಾರ್ಜ್‌ ಮಾಡಲು ಏನು ಆತುರ? ಅನಿಲ ಸೋರಿಕೆಯ ಪರಿಣಾಮಗಳು ಕಡಿಮೆ ಎಂದು ತೋರಿಸಲು ಆಸ್ಪತ್ರೆಗೆ ನಮ್ಮನ್ನು ಬಿಡುಗಡೆ ಮಾಡಲು ಒತ್ತಡ ಹಾಕಲಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಪೆರಿಯಕುಪ್ಪಂ ಗ್ರಾಮದ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಸರಾಣಿ ಜೊತೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ಇತರ ಮೂವರನ್ನು ಸರಿಯಾಗಿ ಚಕಿತ್ಸೆ ನೀಡದೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.  ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆ ಸೇರಿದಂತೆ ಇತರ ಆಸ್ಪತ್ರೆಗಳಿಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕುಮಾರ್ ಅವರು ಆಕಾಶ್ ಆಸ್ಪತ್ರೆಗೆ ಭೇಟಿ ನೀಡಿ  ತಮ್ಮ ಗ್ರಾಮದಿಂದ ಆಸ್ಪತ್ರೆಗೆ ದಾಖಲಾಗಿರುವ 39 ಜನರ ವೈದ್ಯಕೀಯ ವರದಿಯನ್ನು ನೀಡುವಂತೆ ಕೇಳಿದ್ದರು. ಆದರೆ ಆಸ್ಪತ್ರೆ ವರದಿಯನ್ನು ಅಧ್ಯಯನ ಮಾಡಲಿದೆ ಎಂದು ನೀಡಿಲ್ಲ. ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಈಗ  ಅವರು ಏನು ಅಧ್ಯಯನ ಮಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಅವರು ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ನಾವು ಹೆದರುತ್ತಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾಸ್ ಸೋರಿಕೆ ಸಂತ್ರಸ್ತರಾದ ಸೆಲ್ಚಾ ಅವರು ಮಾತನಾಡಿದ್ದು, ಆಕಾಶ್ ಆಸ್ಪತ್ರೆ ಇನ್ನೂ ನನ್ನ ಸ್ಕ್ಯಾನ್ ಮತ್ತು ಎಕ್ಸ್-ರೇಗಳನ್ನು ಹಸ್ತಾಂತರಿಸಿಲ್ಲ. ಅವರು ನನಗೆ ಪ್ರಿಸ್ಕ್ರಿಪ್ಷನ್  ಮಾತ್ರ ನೀಡಿದ್ದಾರೆ. ನನಗೆ ಉಸಿರಾಡಲು  ಕಷ್ಟವಾಗುತ್ತಿದ್ದರಿಂದ ಬೇರೆ ವೈದ್ಯರನ್ನು ಸಂಪರ್ಕಿಸಲು ಬಯಸಿದ್ದೆವು. ನನ್ನ ಪತಿ ಸ್ಕ್ಯಾನ್ ಮತ್ತು ಎಕ್ಸ್-ರೇಯನ್ನು ಸಂಗ್ರಹಿಸಲು ಆಕಾಶ್ ಆಸ್ಪತ್ರೆಗೆ ತೆರಳಿದ್ದರು. ಅವರು ಮೂರು ದಿನಗಳಲ್ಲಿ ನೀಡುವುದಾಗಿ ನನ್ನ ಪತಿಗೆ ಹೇಳಿದ್ದರು, ಆದರೆ ಹತ್ತು ದಿನಗಳು ಕಳೆದರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 11.45ರ ಸುಮಾರಿಗೆ ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್‌ಸೀ ಪೈಪ್‌ಲೈನ್‌ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಬಳಿಕ ಕಾರ್ಮಿಕರು ಬಾಯಿ ಮಾತಿನ ಮೂಲಕ ನಿವಾಸಿಗಳನ್ನು ಎಚ್ಚರಿಸಿದರು, ನಂತರ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿದ್ದಾರೆ. ಹಲವರು ಉಸಿರಾಟದ ತೊಂದರೆ, ವಾಕರಿಕೆಯಿಂದ ಅಸ್ವಸ್ಥಗೊಂಡಿದ್ದರು.

ಇದನ್ನು ಓದಿ: ‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...