Homeಮುಖಪುಟಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

- Advertisement -
- Advertisement -

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್, ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ 44 ಜನರನ್ನು ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ಪೆರಿಯಕುಪ್ಪಂನಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಆಸ್ಪತ್ರೆಯಾಗಿದೆ. ಅನಿಲ ಸೋರಿಕೆಯ ದುಷ್ಪರಿಣಾಮದಿಂದ ಜನರು ಬಳಲುತ್ತಿದ್ದರೂ ಆಸ್ಪತ್ರೆಯ ವೈದ್ಯರು ತರಾತುರಿಯಲ್ಲಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಪೆರಿಯಕುಪ್ಪಂನ ಹಲವಾರು ನಿವಾಸಿಗಳು ಆರೋಪಿಸಿದ್ದಾರೆ.

ಪೆರಿಯಕುಪ್ಪಂ ನಿವಾಸಿ ದೇಸರಾಣಿ ಈ ಕುರಿತು ಮಾತನಾಡಿದ್ದು, ನಾನು ಇನ್ನೂ ದುರಂತದಿಂದ ಚೇತರಿಸಿಕೊಂಡಿಲ್ಲ. ಡಿಸೆಂಬರ್ 26ರಂದು ರಾತ್ರಿ 11.40ರ ಸುಮಾರಿಗೆ ನನಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿದೆ. ನನ್ನ ಮಕ್ಕಳು ನನ್ನನ್ನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾನು ಮನೆಯಿಂದ ಹೊರಬಂದ ತಕ್ಷಣ ಪ್ರಜ್ಞೆ ತಪ್ಪಿದ್ದೆ. ನನ್ನನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ವೈದ್ಯರು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಆದರೆ ನಾನು ಉಸಿರಾಡಲು ಹೆಣಗಾಡುತ್ತಿದ್ದೆ. ನನಗೆ  ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆ ನಿರಾಕರಿಸಿದೆ. ಮನೆಗೆ ಬಂದ ನಂತರ  ನಾನು ವಾಂತಿ ಮಾಡಲು ಪ್ರಾರಂಭಿಸಿದೆ ಮತ್ತು ಮತ್ತೆ ಮೂರ್ಛೆ ಹೋದೆ. ಆದ್ದರಿಂದ ನನ್ನನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆಯವರಿಗೆ ಡಿಸ್ಚಾರ್ಜ್‌ ಮಾಡಲು ಏನು ಆತುರ? ಅನಿಲ ಸೋರಿಕೆಯ ಪರಿಣಾಮಗಳು ಕಡಿಮೆ ಎಂದು ತೋರಿಸಲು ಆಸ್ಪತ್ರೆಗೆ ನಮ್ಮನ್ನು ಬಿಡುಗಡೆ ಮಾಡಲು ಒತ್ತಡ ಹಾಕಲಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಪೆರಿಯಕುಪ್ಪಂ ಗ್ರಾಮದ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಸರಾಣಿ ಜೊತೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ಇತರ ಮೂವರನ್ನು ಸರಿಯಾಗಿ ಚಕಿತ್ಸೆ ನೀಡದೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.  ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆ ಸೇರಿದಂತೆ ಇತರ ಆಸ್ಪತ್ರೆಗಳಿಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕುಮಾರ್ ಅವರು ಆಕಾಶ್ ಆಸ್ಪತ್ರೆಗೆ ಭೇಟಿ ನೀಡಿ  ತಮ್ಮ ಗ್ರಾಮದಿಂದ ಆಸ್ಪತ್ರೆಗೆ ದಾಖಲಾಗಿರುವ 39 ಜನರ ವೈದ್ಯಕೀಯ ವರದಿಯನ್ನು ನೀಡುವಂತೆ ಕೇಳಿದ್ದರು. ಆದರೆ ಆಸ್ಪತ್ರೆ ವರದಿಯನ್ನು ಅಧ್ಯಯನ ಮಾಡಲಿದೆ ಎಂದು ನೀಡಿಲ್ಲ. ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಈಗ  ಅವರು ಏನು ಅಧ್ಯಯನ ಮಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಅವರು ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ನಾವು ಹೆದರುತ್ತಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾಸ್ ಸೋರಿಕೆ ಸಂತ್ರಸ್ತರಾದ ಸೆಲ್ಚಾ ಅವರು ಮಾತನಾಡಿದ್ದು, ಆಕಾಶ್ ಆಸ್ಪತ್ರೆ ಇನ್ನೂ ನನ್ನ ಸ್ಕ್ಯಾನ್ ಮತ್ತು ಎಕ್ಸ್-ರೇಗಳನ್ನು ಹಸ್ತಾಂತರಿಸಿಲ್ಲ. ಅವರು ನನಗೆ ಪ್ರಿಸ್ಕ್ರಿಪ್ಷನ್  ಮಾತ್ರ ನೀಡಿದ್ದಾರೆ. ನನಗೆ ಉಸಿರಾಡಲು  ಕಷ್ಟವಾಗುತ್ತಿದ್ದರಿಂದ ಬೇರೆ ವೈದ್ಯರನ್ನು ಸಂಪರ್ಕಿಸಲು ಬಯಸಿದ್ದೆವು. ನನ್ನ ಪತಿ ಸ್ಕ್ಯಾನ್ ಮತ್ತು ಎಕ್ಸ್-ರೇಯನ್ನು ಸಂಗ್ರಹಿಸಲು ಆಕಾಶ್ ಆಸ್ಪತ್ರೆಗೆ ತೆರಳಿದ್ದರು. ಅವರು ಮೂರು ದಿನಗಳಲ್ಲಿ ನೀಡುವುದಾಗಿ ನನ್ನ ಪತಿಗೆ ಹೇಳಿದ್ದರು, ಆದರೆ ಹತ್ತು ದಿನಗಳು ಕಳೆದರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 11.45ರ ಸುಮಾರಿಗೆ ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್‌ಸೀ ಪೈಪ್‌ಲೈನ್‌ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಬಳಿಕ ಕಾರ್ಮಿಕರು ಬಾಯಿ ಮಾತಿನ ಮೂಲಕ ನಿವಾಸಿಗಳನ್ನು ಎಚ್ಚರಿಸಿದರು, ನಂತರ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿದ್ದಾರೆ. ಹಲವರು ಉಸಿರಾಟದ ತೊಂದರೆ, ವಾಕರಿಕೆಯಿಂದ ಅಸ್ವಸ್ಥಗೊಂಡಿದ್ದರು.

ಇದನ್ನು ಓದಿ: ‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...