Homeಮುಖಪುಟಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

- Advertisement -
- Advertisement -

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್, ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ 44 ಜನರನ್ನು ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ಪೆರಿಯಕುಪ್ಪಂನಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಆಸ್ಪತ್ರೆಯಾಗಿದೆ. ಅನಿಲ ಸೋರಿಕೆಯ ದುಷ್ಪರಿಣಾಮದಿಂದ ಜನರು ಬಳಲುತ್ತಿದ್ದರೂ ಆಸ್ಪತ್ರೆಯ ವೈದ್ಯರು ತರಾತುರಿಯಲ್ಲಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಪೆರಿಯಕುಪ್ಪಂನ ಹಲವಾರು ನಿವಾಸಿಗಳು ಆರೋಪಿಸಿದ್ದಾರೆ.

ಪೆರಿಯಕುಪ್ಪಂ ನಿವಾಸಿ ದೇಸರಾಣಿ ಈ ಕುರಿತು ಮಾತನಾಡಿದ್ದು, ನಾನು ಇನ್ನೂ ದುರಂತದಿಂದ ಚೇತರಿಸಿಕೊಂಡಿಲ್ಲ. ಡಿಸೆಂಬರ್ 26ರಂದು ರಾತ್ರಿ 11.40ರ ಸುಮಾರಿಗೆ ನನಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿದೆ. ನನ್ನ ಮಕ್ಕಳು ನನ್ನನ್ನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾನು ಮನೆಯಿಂದ ಹೊರಬಂದ ತಕ್ಷಣ ಪ್ರಜ್ಞೆ ತಪ್ಪಿದ್ದೆ. ನನ್ನನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ವೈದ್ಯರು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಆದರೆ ನಾನು ಉಸಿರಾಡಲು ಹೆಣಗಾಡುತ್ತಿದ್ದೆ. ನನಗೆ  ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆ ನಿರಾಕರಿಸಿದೆ. ಮನೆಗೆ ಬಂದ ನಂತರ  ನಾನು ವಾಂತಿ ಮಾಡಲು ಪ್ರಾರಂಭಿಸಿದೆ ಮತ್ತು ಮತ್ತೆ ಮೂರ್ಛೆ ಹೋದೆ. ಆದ್ದರಿಂದ ನನ್ನನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆಯವರಿಗೆ ಡಿಸ್ಚಾರ್ಜ್‌ ಮಾಡಲು ಏನು ಆತುರ? ಅನಿಲ ಸೋರಿಕೆಯ ಪರಿಣಾಮಗಳು ಕಡಿಮೆ ಎಂದು ತೋರಿಸಲು ಆಸ್ಪತ್ರೆಗೆ ನಮ್ಮನ್ನು ಬಿಡುಗಡೆ ಮಾಡಲು ಒತ್ತಡ ಹಾಕಲಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಪೆರಿಯಕುಪ್ಪಂ ಗ್ರಾಮದ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಸರಾಣಿ ಜೊತೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ಇತರ ಮೂವರನ್ನು ಸರಿಯಾಗಿ ಚಕಿತ್ಸೆ ನೀಡದೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.  ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆ ಸೇರಿದಂತೆ ಇತರ ಆಸ್ಪತ್ರೆಗಳಿಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕುಮಾರ್ ಅವರು ಆಕಾಶ್ ಆಸ್ಪತ್ರೆಗೆ ಭೇಟಿ ನೀಡಿ  ತಮ್ಮ ಗ್ರಾಮದಿಂದ ಆಸ್ಪತ್ರೆಗೆ ದಾಖಲಾಗಿರುವ 39 ಜನರ ವೈದ್ಯಕೀಯ ವರದಿಯನ್ನು ನೀಡುವಂತೆ ಕೇಳಿದ್ದರು. ಆದರೆ ಆಸ್ಪತ್ರೆ ವರದಿಯನ್ನು ಅಧ್ಯಯನ ಮಾಡಲಿದೆ ಎಂದು ನೀಡಿಲ್ಲ. ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಈಗ  ಅವರು ಏನು ಅಧ್ಯಯನ ಮಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಅವರು ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ನಾವು ಹೆದರುತ್ತಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾಸ್ ಸೋರಿಕೆ ಸಂತ್ರಸ್ತರಾದ ಸೆಲ್ಚಾ ಅವರು ಮಾತನಾಡಿದ್ದು, ಆಕಾಶ್ ಆಸ್ಪತ್ರೆ ಇನ್ನೂ ನನ್ನ ಸ್ಕ್ಯಾನ್ ಮತ್ತು ಎಕ್ಸ್-ರೇಗಳನ್ನು ಹಸ್ತಾಂತರಿಸಿಲ್ಲ. ಅವರು ನನಗೆ ಪ್ರಿಸ್ಕ್ರಿಪ್ಷನ್  ಮಾತ್ರ ನೀಡಿದ್ದಾರೆ. ನನಗೆ ಉಸಿರಾಡಲು  ಕಷ್ಟವಾಗುತ್ತಿದ್ದರಿಂದ ಬೇರೆ ವೈದ್ಯರನ್ನು ಸಂಪರ್ಕಿಸಲು ಬಯಸಿದ್ದೆವು. ನನ್ನ ಪತಿ ಸ್ಕ್ಯಾನ್ ಮತ್ತು ಎಕ್ಸ್-ರೇಯನ್ನು ಸಂಗ್ರಹಿಸಲು ಆಕಾಶ್ ಆಸ್ಪತ್ರೆಗೆ ತೆರಳಿದ್ದರು. ಅವರು ಮೂರು ದಿನಗಳಲ್ಲಿ ನೀಡುವುದಾಗಿ ನನ್ನ ಪತಿಗೆ ಹೇಳಿದ್ದರು, ಆದರೆ ಹತ್ತು ದಿನಗಳು ಕಳೆದರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 11.45ರ ಸುಮಾರಿಗೆ ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್‌ಸೀ ಪೈಪ್‌ಲೈನ್‌ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಬಳಿಕ ಕಾರ್ಮಿಕರು ಬಾಯಿ ಮಾತಿನ ಮೂಲಕ ನಿವಾಸಿಗಳನ್ನು ಎಚ್ಚರಿಸಿದರು, ನಂತರ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿದ್ದಾರೆ. ಹಲವರು ಉಸಿರಾಟದ ತೊಂದರೆ, ವಾಕರಿಕೆಯಿಂದ ಅಸ್ವಸ್ಥಗೊಂಡಿದ್ದರು.

ಇದನ್ನು ಓದಿ: ‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...