Homeಮುಖಪುಟಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

- Advertisement -
- Advertisement -

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್, ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ 44 ಜನರನ್ನು ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ಪೆರಿಯಕುಪ್ಪಂನಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಆಸ್ಪತ್ರೆಯಾಗಿದೆ. ಅನಿಲ ಸೋರಿಕೆಯ ದುಷ್ಪರಿಣಾಮದಿಂದ ಜನರು ಬಳಲುತ್ತಿದ್ದರೂ ಆಸ್ಪತ್ರೆಯ ವೈದ್ಯರು ತರಾತುರಿಯಲ್ಲಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಪೆರಿಯಕುಪ್ಪಂನ ಹಲವಾರು ನಿವಾಸಿಗಳು ಆರೋಪಿಸಿದ್ದಾರೆ.

ಪೆರಿಯಕುಪ್ಪಂ ನಿವಾಸಿ ದೇಸರಾಣಿ ಈ ಕುರಿತು ಮಾತನಾಡಿದ್ದು, ನಾನು ಇನ್ನೂ ದುರಂತದಿಂದ ಚೇತರಿಸಿಕೊಂಡಿಲ್ಲ. ಡಿಸೆಂಬರ್ 26ರಂದು ರಾತ್ರಿ 11.40ರ ಸುಮಾರಿಗೆ ನನಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿದೆ. ನನ್ನ ಮಕ್ಕಳು ನನ್ನನ್ನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾನು ಮನೆಯಿಂದ ಹೊರಬಂದ ತಕ್ಷಣ ಪ್ರಜ್ಞೆ ತಪ್ಪಿದ್ದೆ. ನನ್ನನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ವೈದ್ಯರು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಆದರೆ ನಾನು ಉಸಿರಾಡಲು ಹೆಣಗಾಡುತ್ತಿದ್ದೆ. ನನಗೆ  ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆ ನಿರಾಕರಿಸಿದೆ. ಮನೆಗೆ ಬಂದ ನಂತರ  ನಾನು ವಾಂತಿ ಮಾಡಲು ಪ್ರಾರಂಭಿಸಿದೆ ಮತ್ತು ಮತ್ತೆ ಮೂರ್ಛೆ ಹೋದೆ. ಆದ್ದರಿಂದ ನನ್ನನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆಯವರಿಗೆ ಡಿಸ್ಚಾರ್ಜ್‌ ಮಾಡಲು ಏನು ಆತುರ? ಅನಿಲ ಸೋರಿಕೆಯ ಪರಿಣಾಮಗಳು ಕಡಿಮೆ ಎಂದು ತೋರಿಸಲು ಆಸ್ಪತ್ರೆಗೆ ನಮ್ಮನ್ನು ಬಿಡುಗಡೆ ಮಾಡಲು ಒತ್ತಡ ಹಾಕಲಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಪೆರಿಯಕುಪ್ಪಂ ಗ್ರಾಮದ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಸರಾಣಿ ಜೊತೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ಇತರ ಮೂವರನ್ನು ಸರಿಯಾಗಿ ಚಕಿತ್ಸೆ ನೀಡದೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.  ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆ ಸೇರಿದಂತೆ ಇತರ ಆಸ್ಪತ್ರೆಗಳಿಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕುಮಾರ್ ಅವರು ಆಕಾಶ್ ಆಸ್ಪತ್ರೆಗೆ ಭೇಟಿ ನೀಡಿ  ತಮ್ಮ ಗ್ರಾಮದಿಂದ ಆಸ್ಪತ್ರೆಗೆ ದಾಖಲಾಗಿರುವ 39 ಜನರ ವೈದ್ಯಕೀಯ ವರದಿಯನ್ನು ನೀಡುವಂತೆ ಕೇಳಿದ್ದರು. ಆದರೆ ಆಸ್ಪತ್ರೆ ವರದಿಯನ್ನು ಅಧ್ಯಯನ ಮಾಡಲಿದೆ ಎಂದು ನೀಡಿಲ್ಲ. ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಈಗ  ಅವರು ಏನು ಅಧ್ಯಯನ ಮಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಅವರು ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ನಾವು ಹೆದರುತ್ತಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾಸ್ ಸೋರಿಕೆ ಸಂತ್ರಸ್ತರಾದ ಸೆಲ್ಚಾ ಅವರು ಮಾತನಾಡಿದ್ದು, ಆಕಾಶ್ ಆಸ್ಪತ್ರೆ ಇನ್ನೂ ನನ್ನ ಸ್ಕ್ಯಾನ್ ಮತ್ತು ಎಕ್ಸ್-ರೇಗಳನ್ನು ಹಸ್ತಾಂತರಿಸಿಲ್ಲ. ಅವರು ನನಗೆ ಪ್ರಿಸ್ಕ್ರಿಪ್ಷನ್  ಮಾತ್ರ ನೀಡಿದ್ದಾರೆ. ನನಗೆ ಉಸಿರಾಡಲು  ಕಷ್ಟವಾಗುತ್ತಿದ್ದರಿಂದ ಬೇರೆ ವೈದ್ಯರನ್ನು ಸಂಪರ್ಕಿಸಲು ಬಯಸಿದ್ದೆವು. ನನ್ನ ಪತಿ ಸ್ಕ್ಯಾನ್ ಮತ್ತು ಎಕ್ಸ್-ರೇಯನ್ನು ಸಂಗ್ರಹಿಸಲು ಆಕಾಶ್ ಆಸ್ಪತ್ರೆಗೆ ತೆರಳಿದ್ದರು. ಅವರು ಮೂರು ದಿನಗಳಲ್ಲಿ ನೀಡುವುದಾಗಿ ನನ್ನ ಪತಿಗೆ ಹೇಳಿದ್ದರು, ಆದರೆ ಹತ್ತು ದಿನಗಳು ಕಳೆದರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 11.45ರ ಸುಮಾರಿಗೆ ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್‌ಸೀ ಪೈಪ್‌ಲೈನ್‌ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಬಳಿಕ ಕಾರ್ಮಿಕರು ಬಾಯಿ ಮಾತಿನ ಮೂಲಕ ನಿವಾಸಿಗಳನ್ನು ಎಚ್ಚರಿಸಿದರು, ನಂತರ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿದ್ದಾರೆ. ಹಲವರು ಉಸಿರಾಟದ ತೊಂದರೆ, ವಾಕರಿಕೆಯಿಂದ ಅಸ್ವಸ್ಥಗೊಂಡಿದ್ದರು.

ಇದನ್ನು ಓದಿ: ‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...