Homeಮುಖಪುಟಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

ಎನ್ನೋರ್ ಅನಿಲ ಸೋರಿಕೆ ದುಷ್ಪರಿಣಾಮ ಮುಚ್ಚಿಡಲು ಯತ್ನ? ಸಂತ್ರಸ್ತರು ಹೇಳುವುದೇನು?

- Advertisement -
- Advertisement -

ತಮಿಳುನಾಡಿನ ಎನ್ನೂರಿನ ಕೋರಮಂಡಲ್ ಇಂಟರ್‌ನ್ಯಾಶನಲ್ ಲಿಮಿಟೆಡ್ (ಸಿಐಎಲ್)ನಲ್ಲಿ ಡಿಸೆಂಬರ್ 26ರ ರಾತ್ರಿ ಅಮೋನಿಯಾ ಗ್ಯಾಸ್ ಸೋರಿಕೆಯಾಗಿತ್ತು. ಸುಮಾರು 44 ಜನರು ಉಸಿರಾಟದ ತೊಂದರೆ, ವಾಕರಿಕೆ ಮತ್ತು ಮೂರ್ಛೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಘಟನೆಯ ಸಂತ್ರಸ್ತರು ಇದೀಗ ಖಾಸಗಿ ಆಸ್ಪತ್ರೆ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದು, ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳಲು ಕೂಡ ಸಮಯಾವಕಾಶ ನೀಡದೆ ತಮ್ಮನ್ನು ಡಿಸ್ಚಾರ್ಜ್‌ ಮಾಡಿ ಕಳುಹಿಸಿದ್ದಾರೆ. ನಾವು ಎಷ್ಟೇ ವಿನಂತಿ ಮಾಡಿದರೂ ಸ್ಕ್ಯಾನ್, ಎಕ್ಸ್-ರೇ ಮತ್ತು ಇತರ ಯಾವುದೇ ದಾಖೆಯನ್ನು ಹಸ್ತಾಂತರಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಅನಿಲ ಸೋರಿಕೆ ಸಂಭವಿಸಿದಾಗ 44 ಜನರನ್ನು ಆಕಾಶ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದು ಪೆರಿಯಕುಪ್ಪಂನಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಖಾಸಗಿ ಆಸ್ಪತ್ರೆಯಾಗಿದೆ. ಅನಿಲ ಸೋರಿಕೆಯ ದುಷ್ಪರಿಣಾಮದಿಂದ ಜನರು ಬಳಲುತ್ತಿದ್ದರೂ ಆಸ್ಪತ್ರೆಯ ವೈದ್ಯರು ತರಾತುರಿಯಲ್ಲಿ ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಪೆರಿಯಕುಪ್ಪಂನ ಹಲವಾರು ನಿವಾಸಿಗಳು ಆರೋಪಿಸಿದ್ದಾರೆ.

ಪೆರಿಯಕುಪ್ಪಂ ನಿವಾಸಿ ದೇಸರಾಣಿ ಈ ಕುರಿತು ಮಾತನಾಡಿದ್ದು, ನಾನು ಇನ್ನೂ ದುರಂತದಿಂದ ಚೇತರಿಸಿಕೊಂಡಿಲ್ಲ. ಡಿಸೆಂಬರ್ 26ರಂದು ರಾತ್ರಿ 11.40ರ ಸುಮಾರಿಗೆ ನನಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಉಂಟಾಗಿದೆ. ನನ್ನ ಮಕ್ಕಳು ನನ್ನನ್ನು ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದರು. ನಾನು ಮನೆಯಿಂದ ಹೊರಬಂದ ತಕ್ಷಣ ಪ್ರಜ್ಞೆ ತಪ್ಪಿದ್ದೆ. ನನ್ನನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಮೂರು ದಿನಗಳ ನಂತರ ವೈದ್ಯರು ಡಿಸ್ಚಾರ್ಜ್ ಮಾಡಿ ಕಳುಹಿಸಿದ್ದಾರೆ. ಆದರೆ ನಾನು ಉಸಿರಾಡಲು ಹೆಣಗಾಡುತ್ತಿದ್ದೆ. ನನಗೆ  ಚಿಕಿತ್ಸೆ ಮುಂದುವರಿಸಲು ಆಸ್ಪತ್ರೆ ನಿರಾಕರಿಸಿದೆ. ಮನೆಗೆ ಬಂದ ನಂತರ  ನಾನು ವಾಂತಿ ಮಾಡಲು ಪ್ರಾರಂಭಿಸಿದೆ ಮತ್ತು ಮತ್ತೆ ಮೂರ್ಛೆ ಹೋದೆ. ಆದ್ದರಿಂದ ನನ್ನನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಯಿತು. ಆಸ್ಪತ್ರೆಯವರಿಗೆ ಡಿಸ್ಚಾರ್ಜ್‌ ಮಾಡಲು ಏನು ಆತುರ? ಅನಿಲ ಸೋರಿಕೆಯ ಪರಿಣಾಮಗಳು ಕಡಿಮೆ ಎಂದು ತೋರಿಸಲು ಆಸ್ಪತ್ರೆಗೆ ನಮ್ಮನ್ನು ಬಿಡುಗಡೆ ಮಾಡಲು ಒತ್ತಡ ಹಾಕಲಾಗಿತ್ತಾ? ಎಂದು ಪ್ರಶ್ನಿಸಿದ್ದಾರೆ.

ಪೆರಿಯಕುಪ್ಪಂ ಗ್ರಾಮದ ಕುಮಾರ್ ಅವರು ಈ ಬಗ್ಗೆ ಮಾತನಾಡಿದ್ದು, ದೇಸರಾಣಿ ಜೊತೆಗೆ 60 ವರ್ಷಕ್ಕಿಂತ ಮೇಲ್ಪಟ್ಟ ಇತರ ಮೂವರನ್ನು ಸರಿಯಾಗಿ ಚಕಿತ್ಸೆ ನೀಡದೆ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.  ಇದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಅವರು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆ ಸೇರಿದಂತೆ ಇತರ ಆಸ್ಪತ್ರೆಗಳಿಗೆ ಹೋಗಬೇಕಾಯಿತು ಎಂದು ಹೇಳಿದ್ದಾರೆ.

ಕುಮಾರ್ ಅವರು ಆಕಾಶ್ ಆಸ್ಪತ್ರೆಗೆ ಭೇಟಿ ನೀಡಿ  ತಮ್ಮ ಗ್ರಾಮದಿಂದ ಆಸ್ಪತ್ರೆಗೆ ದಾಖಲಾಗಿರುವ 39 ಜನರ ವೈದ್ಯಕೀಯ ವರದಿಯನ್ನು ನೀಡುವಂತೆ ಕೇಳಿದ್ದರು. ಆದರೆ ಆಸ್ಪತ್ರೆ ವರದಿಯನ್ನು ಅಧ್ಯಯನ ಮಾಡಲಿದೆ ಎಂದು ನೀಡಿಲ್ಲ. ರೋಗಿಗಳನ್ನು ಮನೆಗೆ ಕಳುಹಿಸಲಾಗಿದೆ. ಈಗ  ಅವರು ಏನು ಅಧ್ಯಯನ ಮಾಡುತ್ತಿದ್ದಾರೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ಅವರು ಏನನ್ನೋ ಮುಚ್ಚಿಡುತ್ತಿದ್ದಾರೆ ಎಂದು ನಾವು ಹೆದರುತ್ತಿದ್ದೇವೆ ಎಂದು ಹೇಳಿದ್ದಾರೆ.

ಗ್ಯಾಸ್ ಸೋರಿಕೆ ಸಂತ್ರಸ್ತರಾದ ಸೆಲ್ಚಾ ಅವರು ಮಾತನಾಡಿದ್ದು, ಆಕಾಶ್ ಆಸ್ಪತ್ರೆ ಇನ್ನೂ ನನ್ನ ಸ್ಕ್ಯಾನ್ ಮತ್ತು ಎಕ್ಸ್-ರೇಗಳನ್ನು ಹಸ್ತಾಂತರಿಸಿಲ್ಲ. ಅವರು ನನಗೆ ಪ್ರಿಸ್ಕ್ರಿಪ್ಷನ್  ಮಾತ್ರ ನೀಡಿದ್ದಾರೆ. ನನಗೆ ಉಸಿರಾಡಲು  ಕಷ್ಟವಾಗುತ್ತಿದ್ದರಿಂದ ಬೇರೆ ವೈದ್ಯರನ್ನು ಸಂಪರ್ಕಿಸಲು ಬಯಸಿದ್ದೆವು. ನನ್ನ ಪತಿ ಸ್ಕ್ಯಾನ್ ಮತ್ತು ಎಕ್ಸ್-ರೇಯನ್ನು ಸಂಗ್ರಹಿಸಲು ಆಕಾಶ್ ಆಸ್ಪತ್ರೆಗೆ ತೆರಳಿದ್ದರು. ಅವರು ಮೂರು ದಿನಗಳಲ್ಲಿ ನೀಡುವುದಾಗಿ ನನ್ನ ಪತಿಗೆ ಹೇಳಿದ್ದರು, ಆದರೆ ಹತ್ತು ದಿನಗಳು ಕಳೆದರು ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್ 26 ರಂದು ರಾತ್ರಿ 11.45ರ ಸುಮಾರಿಗೆ ಉತ್ತರ ಚೆನ್ನೈನ ಕಡಲತೀರದಲ್ಲಿರುವ ರಸಗೊಬ್ಬರ ತಯಾರಿಕಾ ಘಟಕಕ್ಕೆ ಜೋಡಿಸಲಾದ ಸಬ್‌ಸೀ ಪೈಪ್‌ಲೈನ್‌ನಿಂದ ಅಮೋನಿಯಾ ಅನಿಲ ಸೋರಿಕೆಯಾಗಿದೆ. ಬಳಿಕ ಕಾರ್ಮಿಕರು ಬಾಯಿ ಮಾತಿನ ಮೂಲಕ ನಿವಾಸಿಗಳನ್ನು ಎಚ್ಚರಿಸಿದರು, ನಂತರ ಜನರು ತಮ್ಮ ಮನೆಗಳನ್ನು ಖಾಲಿ ಮಾಡಿದ್ದಾರೆ. ಹಲವರು ಉಸಿರಾಟದ ತೊಂದರೆ, ವಾಕರಿಕೆಯಿಂದ ಅಸ್ವಸ್ಥಗೊಂಡಿದ್ದರು.

ಇದನ್ನು ಓದಿ: ‘ಅನ್ನಪೂರಣಿ’ ಸಿನಿಮಾವನ್ನು ತೆಗೆದುಹಾಕಿದ ನೆಟ್‌ಫ್ಲಿಕ್ಸ್ , ವಿಹೆಚ್‌ಪಿಗೆ ಕ್ಷಮಾಪನಾ ಪತ್ರ ಬರೆದ ಝೀ ಸ್ಟುಡಿಯೋ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...