Homeಅಂಕಣಗಳು`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?'

`ಹಾರಲೆ ಅಂದ್ರ ಹಾರೋದ ಬಿಟ್ಟು ಬರೇ ಓಡತದ ನೋಡ್ರಿ ಈ ಬೈಕು?’

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

- Advertisement -
- Advertisement -

ಈ ಹಳೆ ಮೈಸೂರು ಕಡೆ ಕೆಲಸ ಇರಲಾರದೆ ರಿಕಾಮಿ ಅಡ್ಡಾಡೋ ಹುಡುಗರಿಗೆ ಪಡ್ಡೆ ಹೈಕಳು ಅಂತಾರ. ಅದನ್ನ ಅಖಂಡ ಕರುನಾಡಿಗೆ ಗೊತ್ತಾಗೋ ಹಂಗ ಮಾಡಿದವರು ಯಾರಪಾ ಅಂದ್ರ ಪುರಾಣದ ಕಟ್ಟಿಯ ವಾಟಿಸ್ಸೆ ಮತ್ತು ಜುಮ್ಮಿ.

ಇಂತಹ ಪಡ್ಡೆ ಹೈಕಳುಗಳು, ಸುಮಾರು 80 ರ ದಶಕದಾಗ ಪ್ರೇಮಲೋಕ ಅಂತ ಒಂದು ಪಿಚ್ಛರು ಫುಲ್ ಫೇಮಸ್ ಮಾಡಿದ್ರು. ಅದು ಫೇಮಸ್ ಚಲನ ಚಿತ್ರ ನಿರ್ಮಾಪಕ ಎನ್ ವೀರಸ್ವಾಮಿ ಅವರ ಮಗ ರವಿ ಚಂದ್ರನ್ನ ಭಾರಿ ಫೇಮಸ್ ಮಾಡಿತು. ಅದು ‘ಗ್ರೀಸ್ ಟೂ’ ಅನ್ನೋ ಇಂಗ್ಲಿಷ್ ಚಿತ್ರದ ಕಾಪಿ ಅಂತ ನಮ್ಮೂರಿಂದ ಹುಬ್ಬಳ್ಳಿಗೆ ಹೋಗಿ ಪಿಚ್ಛರು ನೋಡಿ ಬಂದ ದೊಡ್ಡ ಹುಡುಗರೂ ಹೇಳಾಕ ಹತ್ತಿದ್ದರು. ನಮಗ ಅದು ಗೊತ್ತಾಗದ ಹೋಗಿ ನಾವು ಅದು ಕ್ರಿಸ್ಟೋ ಅನ್ನೋ ಪಿಚ್ಛರು ಅಂತ ತಪ್ಪು ತಪ್ಪು ಹೇಳತಿದ್ದಿವಿ.

ರವಿ ಅಣ್ಣಾ ಅವರು ತಮ್ಮ ಚಿತ್ರದ ಒರಿಜಿನಾಲಿಟಿ ಹಾಳಾಗಬಾರ್ದು ಅಂತ ಹೇಳಿ ಪ್ರೇಮ ಲೋಕದ `ಯಾರಿವನು ಈ ಮನ್ಮಥನು’ ಅನ್ನೋ ಹಾಡನ್ನು ಗ್ರೀಸು ಟೂ ಚಿತ್ರದ `ಹೂ ಈಸ್ ದ್ಯಾಟ ಗಾಯ್’ ಅನ್ನೋ ಹಾಡಿನ ಹಂಗನ ಚಿತ್ರೀಕರಣ ಮಾಡಿದ್ದರು. ಯಾರಿಗೂ ಯಾವ ಸಂದೇಹ ಇರಬಾರದು ಅಂತ ಅವರ ಉದ್ದೇಶ ಆಗಿತ್ತು ಅನ್ನೋದು ಆಮ್ಯಾಲೆ ಗೊತ್ತ ಆತು. ಅದರಾಗ ಆ ಹೀರೋ ಮೈಕೆಲ್ ಒಂದು ಬೈಕು ಹತ್ತಿಕೊಂಡ ಬಂದ ಪುಂಡರಿಗೆ ಹೊಡೀತಾನ, ಇದರಾಗ ರವಿಚಂದ್ರನ ಅವರು ಹಂಗ ತಮ್ಮ ಮಾರಿ ಮುಚ್ಚಿಕೊಂಡರೂ ಗೊತ್ತಾಗೋ ಹಂಗ ಮೇಕ್ ಅಪ್ ಮಾಡಿಕೊತಾನ. ಹುಡುಗಿಯರ ಮುಂದ ಗೂಂಡಾಗಳಿಗೆ ಹೊಡೀತಾನ. ಅದರಾಗ ಒಂದು ಸಾಲು ಬರತೇತಿ.

“ನೀ ಯಾರ ಅಂತ ಗೊತ್ತಿರದಾಗ ನೀ ಎಲ್ಲರಿಗೂ ಬೇಕು
ನೀನು ರಹಸ್ಯ ಆಗಿ ಇದ್ದಷ್ಟೂ ಭಾಳ ದೂರ ಹೋಗ್ತಿ
ನಿನ್ನ ಸುತ್ತ ಇರೋರೆಲ್ಲಾ ನೀ ಭಾಳ ದೊಡ್ಡ ಸ್ಟಾರ್ ಅಂತ ತಿಳ್ಕೊಂತಾರೂ..” ಈ ಸಾಲು ಭಾಷಾಂತರ ಮಾಡೋದು ಹಂಸಲೇಖ ಅವರು ಮರ್ತು ಬಿಟ್ಟಿದ್ದರು ಅಂತ ಕಾಣತೇತಿ.

ಈ ಸಾಲು ಈಗ ಯಾಕ ನೆನಪು ಆಗಾಕ ಹತ್ತೇತಿ ಅಂದ್ರ ನಮ್ಮ ಬೋಬಡೆ ಸಾಹೇಬರು ನಾಗಪುರದಾಗ ಒಬ್ಬ ಮರಿ ಪುಢಾರಿ ಅವರ ಮೋಟರ್ ಸೈಕಲ್ಲು ಮ್ಯಾಲೆ ಹತ್ತಿ ಒಂದ್ ರೌಂಡ್ ಹೋಗಿ ಬಂದಾರ. ಅದರ ಫೋಟೋ ತಗದು ಯಾರೋ ಸಮಾಜ ವಿರೋಧಿ ಮಾಧ್ಯಮದಾಗ ಹಾಕ್ಯಾರ.

ಅದು ಹಾರಲೆ ಡೇವಿಡ್ ಸನ್ ಬೈಕು. ಹಂಗ ಅಂತ ಅದರ ಮ್ಯಾಲೆ ಯಾರ ಕೂತು ಹಾರಲೇ ಅಂತ ಅಂದ್ರ ಅದು ಹಾರೋದಿಲ್ಲ. ಅದು ಬರೇ ನೆಲೆದ ಮ್ಯಾಲೆ ಓಡೋ ಗಾಡಿ. ಗ್ರೀಸು ಟೂ ದಾಗ ಉಪಯೋಗಿಸಿದ ಗಾಡಿ ಹೆಸರು ಹೋಂಡಾ ಎಳದಾಟ (ಸ್ಕರಾಂಬಲರ್). ರವಿಚಂದ್ರನ ಅವರು ಓಡಿಸಿದ್ದು, ಸುಜೂಕಿ ಅಂತ ಸ್ಟಿಕ್ಕರು ಹಚ್ಚಿದ ಯಮಹ ಅಂತ ಒಂದು ಊಹೆ. ಇರಲಿ.

ಆದರ ಈ ನಾಗಪುರದ ಗಾಡಿ ಐತೆಲ್ಲ, ಅದು ಅಂತಾ- ಇಂಥಾ ಬೈಕು ಅಲ್ಲ. ಅದರ ಬೆಲೆ ಸುಮಾರು ಐದು ಲಕ್ಷ ದಿಂದ 50 ಲಕ್ಷದ ವರೆಗೂ. ಇದು ಬರೀ ಒಂದು ಬೈಕ್ನ ಬೆಲೆ. ನೀವು ಬೈಕು ಶೋ ರೂಮಿನ ಬೆಲೆ ಅಂತ ಅಂದುಕೋಂಡೀರಿ, ಮತ್ತ.

ಆ ಪಟ ನೋಡಿದ ನಮ್ಮ ಪ್ರಶಾಂತ್ ಭೂಷಣ ವಕೀಲ ಸಾಹೇಬರು “ನ್ಯಾಯಾಧೀಶರು ಅದವರು ಹಿಂಗೆಲ್ಲ ಯಾರದರ ಗಾಡಿ ಇಸಕೊಂಡು ಓಡಸಬಾರದು. ಅದರಾಗ ರಾಜಕೀಯ ವ್ಯಕ್ತಿಗಳ ಕಡೆ ಇಸಕೋಬಾರದು,” ಅಂತ ಟ್ವೀಟ್ ಮಾಡಿದರು.

ಅಲ್ಲಿಂದ ಶುರು ಆತು ಬೋಬಡೆ ಸಾಹೇಬರ ತಿರಸ್ಕಾರದ ಪ್ರಕರಣ. ಅವರು ಭೂಷಣ ಅವರ ಮ್ಯಾಲಿನ ಹಳೇ ನ್ಯಾಯನಿಂದನೆ ಪ್ರಕರಣ ಎಲ್ಲಾ ತೆಗಿಸಿದರು.

ಈ ನ್ಯಾಯಾಂಗನಿಂದನೆ ಅಂದ್ರ ಖರೆ ಏನು? ಅದಕ್ಕ ಕಂಟೆಮ್ಟ ಅಂತ ಅಂತಾರು.
ಇಂಗ್ಲಿಷ್ನ ಕಂಟೆಮ್ಟ ಅನ್ನೋ ಪದಕ್ಕ ತಿರಸ್ಕಾರ, ಅನಾದರ, ಅಗೌರವ, ನಿಂದನೆ ಅನ್ನೋ ಅರ್ಥ ಅದಾವು.

ಕಾನೂನುತಜ್ಞ ಹಾಲಸಬರಿ ಅವರ ಪ್ರಕಾರ, ನ್ಯಾಯನಿರ್ಣಯ ಪ್ರಕ್ರಿಯೆಗೆ ಅಡ್ಡಿ ಮಾಡೋ ಯಾವುದೇ ಲಿಖಿತ, ಅಥವಾ ಅಲಿಖಿತ ಶಬ್ದ, ನ್ಯಾಯಾಂಗನಿಂದನೆ ಅನ್ನಿಸಿಕೊಳ್ಳತದ.

ಇನ್ನೂ ಭಾರತೀಯ ವಕೀಲರ ಕಾಯಿದೆ ಪ್ರಕಾರ, “ಒಬ್ಬ ವ್ಯಕ್ತಿ – ಅವನು ಪ್ರಕರಣದ ಕಕ್ಷಿದಾರ ಇರಬಹುದು ಅಥವಾ ಹೊರಗಿನವ ಆಗಿರಬಹುದು, ಅವನು ನ್ಯಾಯಾಧೀಶನ ಅಧಿಕಾರ ಕುಗ್ಗಿಸುವಂತೆ ಅಥವಾ ಅವನು ಪ್ರಕರಣ ನಡೆಸೋ ರೀತಿಯ ಬಗ್ಗೆ ಅಪಹಾಸ್ಯ ಮಾಡಿದರೆ, ವಿನಾಕಾರಣ ಟೀಕೆ ಮಾಡಿದರೆ, ಸಾಕ್ಷಿಗಳು, ಇತರ ಕಕ್ಷಿದಾರರು ಹಾಗೂ ಇತರರು ಪ್ರಕರಣ ಮುಗಿಯುವ ಮುಂಚೆ ಅದರ ಬಗ್ಗೆ ತಪ್ಪು ತಿಳಿದುಕೊಳ್ಳುವ ಹಾಗೆ ಸಾರ್ವಜನಿಕರಲ್ಲಿ, ಮಾಧ್ಯಮದಲ್ಲಿ ದುರಭಿಪ್ರಾಯ ಮೂಡಿಸಿದರೆ, ನ್ಯಾಯದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದರೆ, ಸಬೂತುಗಳಿಲ್ಲದೇ ನ್ಯಾಯಾಲಯದಲ್ಲಿ ಹಗರಣ ಆಗಿದೆ ಎಂಬ ಸುಳ್ಳುಗಳನ್ನು ಹಬ್ಬಿಸಿದರೆ” ಅದು ನ್ಯಾಯಾಂಗ ನಿಂದನೆ.

ಆದರೆ, ರಾಜಕೀಯ ನಿರ್ಲಿಪ್ತತೆಯನ್ನು ಮೈಗೂಡಿಸಿಕೊಳ್ಳಬೇಕಾದ ನ್ಯಾಯಾಧೀಶರು ಪುಢಾರಿ ರಾಜಕಾರಣೀಯ ಬೈಕು ಇಸಿದುಕೊಂಡು ಒಂದು ರೌಂಡ್ ಹೊಡಿಯಬಾರದು ಅನ್ನೋ ಮಾತು ನ್ಯಾಯಾಂಗನಿಂದನೆ ಆಗತೇತಿ ಅಂತ ಎಲ್ಲೂ ಇಲ್ಲ. ಅಂತರರಾಷ್ಟ್ರೀಯ ಕಾನೂನುದಾಗೂ ಇಲ್ಲ, ಭಾರತದ ಕಾನೂನುದಾಗೂ ಇಲ್ಲ.

ಮಜಾ ಅಂದ್ರ ನ್ಯಾಯಾಧೀಶರು ಫೋಟೋ ತಗದವರಿಗೆ ಏನೂ ಅಂದಿಲ್ಲ. ಅದರ ಬಗ್ಗೆ ಟಿಪ್ಪಣಿ ಮಾಡಿದ ವಕೀಲರಿಗೆ ಮಾತ್ರ ಬರೋಬ್ಬರಿ ಬಿಗಿ ಹಚ್ಚಿದಾರು.

ಪ್ರಶಾಂತ್ ಭೂಷಣ ಅವರ ತಪ್ಪು ಇಲ್ಲ. ಇದರಿಂದ ನ್ಯಾಯಾಂಗ ನಿಂದನೆ ಆಗತದ ಅಂತ ಹೇಳ್ಲಿಕ್ಕೆ ಬರೋದಿಲ್ಲ, ಅಂತ ಹೇಳಿ ಹಿರಿಯ ವಕೀಲರಾದ ಮೋಹನ್ ಕಾತರಕಿ ಅವರೂ ಸೇರಿದಂತೆ ಅನೇಕರು ಹೇಳಿಕೆ ಕೊಟ್ಟಾರ.

ತಮ್ಮ ಕ್ರಿಯೆ- ಖಯಾಲಿಗಳನ್ನ ಜನರಿಗೆ ತೋರಿಸಿ ನಮ್ಮನ್ನ ನಗಿಪಾಟ್ಲಿಗೆ ಒಡ್ಡಿದರೂ ಅಂತ ನ್ಯಾಯಾಧೀಶರಿಗೆ ಅನ್ನಿಸಿರಬಹುದು. ಅವರಿಗೆ ಚೀನಾ ದೇಶದ ಒಂದು ಗಾದಿ ಮಾತು ನೆನಪು ಮಾಡಿಕೊಡೋಣ.

“ನೀವು ಮಾಡಿದ್ದು ಯಾರಿಗೂ ಗೊತ್ತು ಆಗಬಾರದು ಅಂತ ನಿಮಗ ಇದ್ದರ, ಅದನ್ನ ನೀವು ಮಾಡಾಕ ಹೋಗಬಾರದು”

ನಮ್ಮ ಘನ ಸರಕಾರ ಚೀನಾ ದೇಶದ ಮೊಬಾಯಿಲು ಯಾಪುಗಳ ಮ್ಯಾಲೆ ನಿರ್ಬಂಧ ಹೇರೇತಿ. ಅಲ್ಲಿನ ಗಾದಿ ಮಾತಿನ ಮ್ಯಾಲೆ ಏನು ನಿರ್ಬಂಧ ಇಲ್ಲಲ್ಲ!, ಅಲ್ಲವೇ, ಮನೋಲ್ಲಾಸಿನಿ?


ಇದನ್ನು ಓದಿ: ಸಿಡಿದೆದ್ದ ಆಶಾ ಕಾರ್ಯಕರ್ತೆಯರು: ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...